Homeಅಂಕಣಗಳುಸರ್ವಾಧಿಕಾರದ ಕೆಲವು ಗುಣಲಕ್ಷಣಗಳು!

ಸರ್ವಾಧಿಕಾರದ ಕೆಲವು ಗುಣಲಕ್ಷಣಗಳು!

- Advertisement -
- Advertisement -

ನಿಖಿಲ್ ಕೊಲ್ಫೆ |
ಪ್ರಪಂಚದ ಆಗಿಹೋದ ಮತ್ತು ಈಗಿರುವ ಬಹುತೇಕ ಎಲ್ಲಾ ಸರ್ವಾಧಿಕಾರಿಗಳ ವೈಯಕ್ತಿಕ ಸ್ವಭಾವ ಹಾಗೂ ಗುಣಲಕ್ಷಣಗಳಲ್ಲಿ ಅನೇಕ ಸಾಮ್ಯಗಳಿವೆ. ಅವುಗಳಲ್ಲಿ ಮುಖ್ಯವಾದದ್ದೆಂದರೆ ನಾರ್ಸಿಸಿಸಮ್ ಅಂದರೆ ತಮ್ಮನ್ನೇ ತಾವು ಮೋಹಿಸುವ ಪ್ರವೃತ್ತಿ. ಗ್ರೀಕ್ ಪುರಾಣದಲ್ಲಿ ಬರುವ ನಾರ್ಸಿಸಸ್ ಒಬ್ಬ ಬೇಟೆಗಾರ. ಸುಂದರನಾಗಿದ್ದ ಆತ ಒಂದು ತಿಳಿಯಾದ ಕೊಳದಲ್ಲಿ ತನ್ನ ಮುಖವನ್ನು ನೋಡಿ ಪ್ರತಿಬಿಂಬದಲ್ಲಿ ಮೋಹಗೊಳ್ಳುತ್ತಾನೆ. ಸರ್ವಾಧಿಕಾರಿಗಳು ಅದೇ ರೀತಿ ವರ್ತಿಸುತ್ತಾರೆ.
ತಮ್ಮನ್ನು ತಾವು ಧೀರರು, ಬಲಶಾಲಿಗಳು, ಬುದ್ಧಿವಂತರು ಎಂದು ಬಿಂಬಿಸಲು ಬಯಸುತ್ತಾರೆ. ಇಡೀ ಪ್ರಪಂಚದಲ್ಲಿ ತಾನೇ ಅತ್ಯಂತ ಮುಖ್ಯ ವ್ಯಕ್ತಿ; ಅದು ತಮ್ಮ ಸುತ್ತಲೇ ತಿರುಗುತ್ತದೆ ಎಂಬ ಭ್ರಮೆ ಅವರಲ್ಲಿರುತ್ತದೆ. ಅವರು ಮಿಲಿಟರಿ ಸಮವಸ್ತ್ರ, ಅತ್ಯುತ್ತಮ ಸೂಟುಬೂಟು ಧರಿಸುತ್ತಾರೆ. ಸರಳತೆ ಅವರಲ್ಲಿಲ್ಲ!
ಇದಕ್ಕೆ ಹಲವಾರು ಉದಾಹರಣೆಗಳನ್ನು ಕೊಡಬಹುದು. ಅವರು ಯಾವತ್ತೂ ಎತ್ತರದ ವೇದಿಕೆಗಳಲ್ಲಿ ಇರುತ್ತಾರೆ. ಹಿಂದೆ ಅವರದ್ದೇ ಭಾರೀ ಚಿತ್ರಗಳಿರುತ್ತವೆ. ಮಾಧ್ಯಮಗಳಲ್ಲಿ ಅವರದ್ದೇ ವ್ಯಕ್ತಿಕೇಂದ್ರಿತ ಪ್ರಚಾರ ಇರುತ್ತದೆ. ಇರಾಕಿನಲ್ಲಿ ಸದ್ದಾಂ ಹುಸೇನ್ ಅಧಿಕಾರದಲ್ಲಿ ಇದ್ದಾಗ ಎಲ್ಲೆಲ್ಲೂ, ಸಾರ್ವಜನಿಕ ಸ್ಥಳಗಳಲ್ಲಿ ಅತನ ಪ್ರತಿಮೆಗಳು, ಭಾವಚಿತ್ರಗಳು, ಕಟೌಟುಗಳು ರಾರಾಜಿಸುತ್ತಿದ್ದವು. ದಿನಪತ್ರಿಕೆಗಳಲ್ಲಿ ಪ್ರತೀದಿನ ಮುಖಪುಟದಲ್ಲಿ ಆತನ ಫೋಟೋ ಕಡ್ಡಾಯ. ಟಿವಿ ರೇಡಿಯೋಗಳಲ್ಲಿ ಮೊದಲ ಸುದ್ದಿ ಅತನದ್ದೇ ಅಗಿರಬೇಕು. ಹಿಟ್ಲರ್ ಕೂಡಾ ಇದಕ್ಕೆ ಹೊರತಲ್ಲ!
ಕೆಲವು ಅಧ್ಯಯನಗಳ ಪ್ರಕಾರ ಸಾಮಾನ್ಯವಾಗಿ ಸರ್ವಾಧಿಕಾರಿಗಳು ವರ್ಚಸ್ವಿಗಳೂ, ಆತ್ಮವಿಶ್ವಾಸ ಹೊಂದಿರುವವರೂ ಆಗಿರುತ್ತಾರೆ. ಅವರು ಹಿಟ್ಲರ್‍ನಂತೆ ಉತ್ತಮ ಭಾಷಣಕಾರರಾಗಿರುತ್ತಾರೆ. ಅದರೆ, ಅವರ ಭಾಷಣಗಳಲ್ಲಿ ಹುರುಳಿರುವುದಿಲ್ಲ! ಅಡಿದ್ದನ್ನೇ ಭಾವನಾತ್ಮಕವಾಗಿ ಆಡಿ ಜನರನ್ನು ಉದ್ರೇಕಿಸುವಂತಿರುತ್ತವೆ. ಘೋಷಣೆಗಳೇ ಅವರ ಬಂಡವಾಳ. ಯಾವಾಗಲೂ ಭಾವನಾತ್ಮಕ ವಿಷಯಗಳನ್ನೇ ಕೆಣಕುತ್ತಾರೆ. ಸರ್ವಾಧಿಕಾರಿಗಳು ಸುಳ್ಳುಹೇಳುವುದರಲ್ಲಿ ನಿಷ್ಣಾತರಾಗಿರುತ್ತಾರೆ.
ಅವರು ಹೆಚ್ಚಾಗಿ ಉಗಾಂಡದ ಇದಿ ಅಮೀನನಂತೆ ಕ್ರೂರಿಗಳಾಗಿರುತ್ತಾರೆ. ಭಾವನಾತ್ಮಕ ಮಾತುಗಳನ್ನೇ ಆಡಿದರೂ ಅವರು ಮಾತ್ರ ಭಾವನಾತ್ಕಕವಾಗಿರುವುದಿಲ್ಲ. ಅವರು ಧೈರ್ಯಶಾಲಿಗಳ ಪೋಸು ಕೊಟ್ಟರೂ, ಕೆಲವರು ನಿಜವಾಗಿಯೂ ಧೈರ್ಯಶಾಲಿಗಳಾಗಿಯೇ ಇದ್ದರೂ, ಇನ್ನು ಕೆಲವರು ಸ್ವಭಾವತಃ ಪುಕ್ಕಲುಗಳಾಗಿರುತ್ತಾರೆ. ಯಾರಾದರೂ ತಮ್ಮನ್ನು ಕೊಲ್ಲಬಹುದು, ತಾನು ಅಧಿಕಾರ ಕಳೆದುಕೊಳ್ಳಬಹುದು ಎಂಬ ಭಯ ಅವರನ್ನು ಕಾಡುತ್ತಿರುತ್ತದೆ. ಅದಕ್ಕಾಗಿ ಸ್ವಲ್ಪ ಸಂಶಯ ಬಂದರೂ ವಿರೋಧಿಗಳನ್ನು ದಮನಿಸುತ್ತಾರೆ. ಲಿಬಿಯಾದ ಸರ್ವಾಧಿಕಾರಿಯಾಗಿದ್ದ ಮುಹಮ್ಮದ್ ಗಡ್ಡಾಫಿ ಹೆಚ್ಚಾಗಿ ರಾಜಧಾನಿ ಟ್ರಿಪೋಲಿಯಲ್ಲಿ ವಾಸವಿರದೆ, ಮರುಭೂಮಿಗಳ ಗುಪ್ತಸ್ಥಳಗಳ ಟೆಂಟ್ ಕ್ಯಾಂಪ್‍ಗಳಲ್ಲಿ ವಾಸವಿದ್ದುದನ್ನು ಗಮನಿಸಬಹುದು.
ಸರ್ವಾಧಿಕಾರಿಗಳು ಆರಂಭದಲ್ಲಿ ಜನಪ್ರಿಯರೇ ಆಗಿರುತ್ತಾರೆ. ಹಿಂದಿನ ಆಡಳಿತಗಳ ವೈಫಲ್ಯಗಳಿಂದ ಅಸಮಾಧಾನ ಹೊಂದಿದ ಜನರು ಭವಿಷ್ಯದ ಆಶಾವಾದದಿಂದ ಇಂತವರನ್ನು ಬೆಂಬಲಿಸುತ್ತಾರೆ. ಅವರಾದರೋ ಹಿಂದಿನವರನ್ನು ನಿರಂತರ ದೂರುತ್ತಾ, ಎಲ್ಲದಕ್ಕೂ ಹಿಂದಿನವರೇ ಕಾರಣ ಎಂದು ನಂಬಿಸುತ್ತಾರೆ. ಇರಾಕಿನ ಸದ್ದಾಂ ಹುಸೇನ್ ಕೇವಲ ಸೇನೆಯ ಜನರಲ್ ಅಗಿದ್ದಾತ. 1979ರಲ್ಲಿ ಅಧ್ಯಕ್ಷ ಮಹಮ್ಮದ್ ಹಸನ್ ಅಲ್ ಬಖ್ರ್ ನಿಧನ ಹೊಂದಿದಾಗ ಜನರಲ್ಲಿ ಅಸಮಾಧಾನವಿತ್ತು. ಅದನ್ನೇ ಬಂಡವಾಳ ಮಾಡಿಕೊಂಡು ಸದ್ದಾಂ ಆದ್ಯಕ್ಷನಾದಾಗ, ಬಾತ್ ಪಕ್ಷ ಆತನನ್ನು ಬೆಂಬಲಿಸಿತ್ತು. ಜನರೂ ಖುಷಿಯನ್ನೇ ಪಟ್ಟಿದ್ದರು. ಅದಕ್ಕೆ ಅನುಗುಣವಾಗಿ ಸದ್ದಾಂ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡದ್ದೂ ಹೌದು.
ಹಿಟ್ಲರ್ ಕೂಡಾ ನೇರವಾಗಿ ಅಧಿಕಾರ ಕಸಿದುಕೊಂಡು ಸರ್ವಾಧಿಕಾರಿಯಾದವನಲ್ಲ. ಚುನಾವಣೆಯಲ್ಲಿ ಅವನ ಪಕ್ಷ ಎರಡನೇ ಸ್ಥಾನ ಗಳಿಸಿತ್ತು. ಆತನನ್ನು ಅಧ್ಯಕ್ಷ ಪೌಲ್ ವೊನ್ ಲಿಂಡೆನ್‍ಬರ್ಗ್ ಅವರು ಚಾನ್ಸಲರ್ ಆಗಿ ನೇಮಿಸಿದ್ದರು. ನಂತರ ಆತ ಅಧ್ಯಕ್ಷ ಮತ್ತು ಚಾನ್ಸಲರ್ ಎರಡೂ ಅಧಿಕಾರ ಇರುವ ಫ್ಯುರರ್ ಎಂದು ಘೋಷಿಸಿಕೊಂಡಾಗ ಬಹುತೇಕ ಜರ್ಮನರು ಅತ ವಿಶ್ವಗುರು ಆಗುವನೆಂದೇ ನಂಬಿ ಬೆಂಬಲಿಸಿದ್ದರು. ಯಾಕೆಂದರೆ, ಮೊದಲ ಮಹಾಯುದ್ಧದ ಸೋಲಿನಿಂದ ತತ್ತರಿಸಿತ್ತು. ಅರ್ಥಿಕತೆ ಹದಗೆಟ್ಟಿತ್ತು. ನಿರುದ್ಯೋಗ ತಾಂಡವವಾಡುತ್ತಿತ್ತು.
ಎಲ್ಲಾ ಸರ್ವಾಧಿಕಾರಿಗಳು ತಮಗೆ ಯಾವುದೇ ವಿರೋಧ ಇರಬಾರದೆಂದು ಬಯಸುತ್ತಾರೆ. ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ಅವರಿಗೆ ನಂಬಿಕೆಯೇ ಇರುವುದಿಲ್ಲ. ಸಂಸತ್ತಿನಂತಹ ಯಾವುದೇ ಚುನಾಯಿತ ನಿಯಂತ್ರಕ ಸಂಸ್ಥೆಯನ್ನು ಅವರು ಕಡೆಗಣಿಸುತ್ತಾರೆ. ಅಂತಹ ಸಂಸ್ಥೆಗಳಲ್ಲಿ ತಮ್ಮ ಭಟ್ಟಂಗಿಗಳೇ ಆಯಕಟ್ಟಿನ ಸ್ಥಾನಗಳಲ್ಲಿ ಇರುವಂತೆ ನೋಡಿಕೊಳ್ಳುತ್ತಾರೆ. ಹಿಟ್ಲರ್ ಕೂಡಾ ಜರ್ಮನ್ ಸಂಸತ್ತನ್ನು ವಿಸರ್ಜಿಸಿದ್ದ. ತನ್ನ ಸುತ್ತ ಗೊಬೆಲ್ಸ್, ಹಿಮ್ಲರ್ ಮುಂತಾದ ಭಟ್ಟಂಗಿಗಳನ್ನು ಇಟ್ಟುಕೊಂಡಿದ್ದ.
ಒಂದು ಸರಕಾರ ನಡೆಯಲು ಹಲವಾರು ಸಂಸ್ಥೆಗಳು ಇರಲೇಬೇಕಾಗುತ್ತದೆ. ಬ್ಯಾಂಕಿಂಗ್, ಕೈಗಾರಿಕೆ, ಕೃಷಿ, ಅರೋಗ್ಯ, ಗೃಹ, ರಕ್ಷಣೆ ಹೀಗೆ ಆಡಳಿತ ಯಂತ್ರವನ್ನು ಮುನ್ನಡೆಸಲು ಅಧಿಕಾರಶಾಹಿ ಇದ್ದೇ ಇರುತ್ತದೆ. ಹೆಸರಿಗಾದರೂ ಚುನಾವಣೆಗಳು ನಡೆಯಬೇಕು. ಕೆಲವು ದೇಶಗಳಲ್ಲಿ ನಕಲಿ ಚುನಾವಣೆಗಳೇ ನಡೆಯುತ್ತವೆ. ಈ ಹೊತ್ತಿನಲ್ಲಿ ಯುಎಸ್‍ಎಯಲ್ಲಿ ಭಾರತದ ರಾಯಭಾರಿಯಾಗಿದ್ದ ಹಿರಿಯ ರಾಜತಾಂತ್ರಿಕ ಅಬಿದ್ ಹುಸೇನ್ ಅವರು ಕೆಲವರ್ಷಗಳ ಹಿಂದೆ ಸಮಾರಂಭವೊಂದರಲ್ಲಿ ಆಫ್ರಿಕಾದ ದೇಶವೊಂದರಲ್ಲಿ ನಡೆಯುವ ಚುನಾವಣೆಗಳ ಕುರಿತು ಉದಾಹರಣೆಯಾಗಿ ಹೇಳಿದ ಜೋಕೊಂದು ನೆನಪಿಗೆ ಬರುತ್ತದೆ.
ಒಬ್ಬ ವ್ಯಕ್ತಿ ಅಧ್ಯಕ್ಷರ ವಿರುದ್ಧವಾಗಿ ಮತ ಚಲಾಯಿಸಿ ಮನೆಗೆ ಬರುತ್ತಾನೆ. ಹೆಂಡತಿ ಕೇಳಿದಾಗ ತಾನು ವಿರುದ್ಧ ಮತ ಚಲಾಯಿಸಿದ ವಿಷಯ ಹೇಳುತ್ತಾನೆ. ಆಕೆ ಕಂಗಾಲಾಗುತ್ತಾಳೆ. “ನಿಮಗೆ ಬುದ್ದಿ ಇಲ್ಲವೆ?! ನೀವು ವಿರುದ್ಧ ಮತ ಚಲಾಯಿಸಿದ್ದು, ಸರಕಾರಕ್ಕೆ ಗೊತ್ತಾಗುತ್ತದೆ. ನಾಳೆ ನೀವು ಕೆಲಸ ಕಳಕೊಳ್ಳಬಹುದು. ಜೈಲಿಗೂ ಹೋಗಬಹುದು. ನಮ್ಮ ಮಗನಿಗೆ ಆಡಳಿತ ಪಕ್ಷದ ಗೂಂಡಾಗಳು ಹೊಡೆಯಬಹುದು. ಮಗಳನ್ನು ಅತ್ಯಾಚಾರ ಮಾಡಲೂಬಹುದು. ಈಗಲೇ ಹೋಗಿ ಮತ ಬದಲಿಸಿ ಬನ್ನಿ!” ಎಂದು ಅಂಗಲಾಚುತ್ತಾಳೆ. ಅತನಿಗೆ ಸರಿಯೆನಿಸಿ ಮತಗಟ್ಟೆಗೆ ದೌಡಾಯಿಸಿ ಅಧಿಕಾರಿಗಳಲ್ಲಿ ಹೇಳುತ್ತಾನೆ- “ಸ್ವಾಮಿ ನಾನು ತಪ್ಪಾಗಿ ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದ್ದೇನೆ. ಅದನ್ನು ಅವರ ಪರವಾಗಿ ಸರಿಪಡಿಸಬೇಕು”. ಅಗ ಅಧಿಕಾರಿಗಳು ಹೇಳುತ್ತಾರೆ- “ ನಿನಗೇನೂ ಭಯ ಬೇಡ. ನಾವು ಈಗಾಗಲೇ ನಿನ್ನ ಮತವನ್ನು ಅಧ್ಯಕ್ಷರ ಪರ ತಿದ್ದಿ ಆಗಿದೆ!” ನಮ್ಮಲ್ಲೂ ಇಲೆಕ್ಟ್ರಾನಿಕ್ ಮತಯಂತ್ರದ ಬಗ್ಗೆ ಹಲವರಿಗೆ ಆತಂಕ ಇರುವುದು ಯಾಕೆ ಎಂದು ಅರ್ಥವಾಯಿತೆ!?
ಈ ಕಾರಣದಿಂದಾಗಿ ಸರ್ವಾಧಿಕಾರಿಗಳು ಯಾವತ್ತೂ ಅಯಕಟ್ಟಿನ ಸ್ಥಾನಗಳಲ್ಲಿ ತಮ್ಮವರನ್ನೇ ನೇಮಿಸಲು ಯತ್ನಿಸುತ್ತಾರೆ. ಅವರು ಭಟ್ಟಂಗಿಗಳು, ಎದುರಾಡದ ಕೈಗೊಂಬೆಗಳೇ ಅಗಿರುತ್ತಾರೆ. ಎದುರಾಡಿದರೆ ರಾಜೀನಾಮೆ ಕೊಡಬೇಕಾದೀತು! ಈ ಕಾರಣದಿಂದಲೇ ಸರ್ವಾಧಿಕಾರಿಯ ತಪ್ಪನ್ನು ಯಾರೂ ಬೆಟ್ಟುಮಾಡಲು ಹೋಗುವುದಿಲ್ಲ- ತನ್ನ ತಪ್ಪುಗಳನ್ನು ತಿಳಿದುಕೊಳ್ಳದ ಆತ ದೇಶವನ್ನೇ ವಿನಾಶಕ್ಕೆ ತಳ್ಳಿ ತಾನೂ ನಾಶವಾಗುವ ತನಕ!
ಸರ್ವಾಧಿಕಾರದಲ್ಲಿ ನ್ಯಾಯಾಂಗ ವ್ಯವಸ್ಥೆಯ ಅಧಿಕಾರಗಳನ್ನು ಮೊಟಕುಗೊಳಿಸಲಾಗುತ್ತದೆ. ನ್ಯಾಯಾಧೀಶ ಹುದ್ದೆಗಳಿಗೂ ಕೈಗೊಂಬೆಗಳನ್ನೇ ಹಿಂಬಾಗಿಲಿನಿಂದ ನುಸುಳಿಸುವ ಪ್ರಯತ್ನಗಳು ನಡೆಯುತ್ತವೆ. ತೀರ್ಪುಗಳು ವಿವಾದಾತ್ಮಕವಾಗಿ ಇದ್ದರೂ ಪ್ರಶ್ನಿಸುವಂತಿಲ್ಲ. ತೀರ್ಪುಗಳು ಪ್ರತಿಕೂಲವಾಗಿದ್ದಾಗ ನ್ಯಾಯಾಲಯಗಳನ್ನೇ ಧಿಕ್ಕರಿಸುವ, ಅಷ್ಟೇ ಏಕೆ ಸಂವಿಧಾನಗಳನ್ನೇ, ಧಿಕ್ಕರಿಸುವ ಪ್ರವೃತ್ತಿ ಅಧಿಕಾರಸ್ಥರ ಕೃಪಾಕಟಾಕ್ಷದಿಂದಲೇ ಬೆಳೆಯುತ್ತದೆ.
ಇನ್ನೊಂದು ಪ್ರವೃತ್ತಿ ಎಂದರೆ, ಸೇನೆ ಮತ್ತು ಪೊಲೀಸ್ ವ್ಯವಸ್ಥೆಯಲ್ಲಿ ಹಸ್ತಕ್ಷೇಪ. ಯಾವುದೇ ಸರ್ವಾಧಿಕಾರ ಅವುಗಳನ್ನು ನಿಯಂತ್ರಿಸದೇ ಉಳಿಯುವುದು ಕಷ್ಟ. ಒಂದು ದೇಶಕ್ಕಾಗಿ ಹೋರಾಡಬೇಕಾದ ಸೇನೆಯು ಒಬ್ಬ ವ್ಯಕ್ತಿ ಅಥವಾ ಸರಕಾರಕ್ಕಾಗಿ ಹೋರಾಡುತ್ತಿದೆ ಎಂಬಂತೆ ಬಿಂಬಿಸುವುದು! ಸೈನ್ಯದ ಸಾಧನೆಗಳನ್ನು ತನ್ನ ಸಾಧನೆ ಎಂದು ಕೊಚ್ಚಿಕೊಳ್ಳುವುದು!
ಕಳೆದ ಸಂಚಿಕೆಗಳಲ್ಲಿ ಮತ್ತು ಇಲ್ಲಿ ಕೇವಲ ಪರಿಚಯಾತ್ಮಕವಾಗಿ ವಿವರಿಸಲಾದ ಗುಣಲಕ್ಷಣಗಳನ್ನು ಮುಂದೆ ಒಂದೊಂದಾಗಿ ಸೂಕ್ಷ್ಮವಾಗಿ ಮತ್ತು ಉದಾಹರಣೆ ಸಹಿತ ಪರಿಶೀಲಿಸುವ ಮೊದಲು ಮತ್ತಷ್ಟು ಗುಣ ಲಕ್ಷಣಗಳನ್ನು ಮುಂದಿನ ಸಂಚಿಕೆಯಲ್ಲಿ ನೋಡೋಣ.
ಅದೇ ಹೊತ್ತಿಗೆ ಈ ಗುಣಲಕ್ಷಣಗಳು ನಮ್ಮಲ್ಲಿಯೂ ಕಾಣುತ್ತಿವೆಯೇ ಎಂಬುದನ್ನು ಓದುಗರು ಪರಿಶೀಲಿಸಬೇಕು. ಒಂದುವೇಳೆ ಅದು ಹೌದಾದಲ್ಲಿ ನಾವು ತಕ್ಷಣ ಎಚ್ಚರಗೊಳ್ಳಬೇಕಾದ ಅಗತ್ಯವಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...