Homeಅಂಕಣಗಳುಸರ್ವಾಧಿಕಾರದ ಕೆಲವು ಗುಣಲಕ್ಷಣಗಳು!

ಸರ್ವಾಧಿಕಾರದ ಕೆಲವು ಗುಣಲಕ್ಷಣಗಳು!

- Advertisement -
- Advertisement -

ನಿಖಿಲ್ ಕೊಲ್ಫೆ |

ಪೊಳ್ಳು ರಾಷ್ಟ್ರೀಯತೆ ಮತ್ತು ಜನಪ್ರೀತಿಯಿಲ್ಲದ ಭೂಪಟ ಪ್ರೇಮ ಸರ್ವಾಧಿಕಾರದ ಒಂದು ಮುಖ್ಯ ಲಕ್ಷಣ. ಆಸ್ಟ್ರಿಯನ್ ಸಂಜಾತ ಅಡಾಲ್ಫ್ ಹಿಟ್ಲರ್ ಜರ್ಮನ್ ರಾಷ್ಟ್ರೀಯತೆ ಹೆಸರಿನಲ್ಲಿ ಜರ್ಮನಿಯಲ್ಲಿ ಅಧಿಕಾರ ಹಿಡಿದ. ಅವನ ಜರ್ಮನ್ ರಾಷ್ಟ್ರೀಯತೆಯಲ್ಲಿ ಯಹೂದಿಗಳಿಗೆ, ಜಿಪ್ಸಿಗಳಿಗೆ, ಪೋಲಿಷ್ ಸಂಜಾತರಿಗೆ, ಕರಿಯರು, ಮಿಶ್ರ ರಕ್ತದವರಿಗೆ ಸ್ಥಾನವಿರಲಿಲ್ಲ! ಶುದ್ಧರಕ್ತದವರೆಂದು ಅವನು ಭಾವಿಸಿದ್ದ ಅರ್ಯನ್ ಜನಾಂಗದವರಿಗೆ ಮಾತ್ರ ಸ್ಥಾನವಿತ್ತು.
ಅತ ಸುಳ್ಳು ದೇಶಪ್ರೇಮದ ಬೊಂಬಡ ಬಜಾಯಿಸಿದಾಗ ಎಲ್ಲರೂ ಅದಕ್ಕೆ ತಲೆದೂಗಿಸಿದರು. ಎಲ್ಲರೂ ದೇಶಕ್ಕಾಗಿ ಅದನ್ನು ತ್ಯಾಗ ಮಾಡಬೇಕು, ಇದನ್ನು ತ್ಯಾಗ ಮಾಡಬೇಕು ಎಂದು ಹೇಳಿದ. ಕೊನೆಗೆ ಜನರು ತಮ್ಮ ಸ್ವಾತಂತ್ರ್ಯವನ್ನು ತ್ಯಾಗ ಮಾಡಬೇಕಾಯಿತು.
ತನ್ನ ವಿಚಾರಗಳಿಗೆ ತಲೆಬಾಗುವವರು ಮಾತ್ರ. ದೇಶಪ್ರೇಮಿಗಳು, ಉಳಿದವರೆಲ್ಲ ದೇಶದ್ರೋಹಿಗಳೆಂದು ಆತನ ಭ್ರಮೆ. ಜನರನ್ನು ಪೋಲೆಂಡ್ ಸಹಿತ ನೆರೆಯ ದೇಶಗಳ ಮೇಲೆ ಎತ್ತಿಕಟ್ಟಿ ಆಕ್ರಮಣ ಮಾಡಿ ಜರ್ಮನಿಯನ್ನು ಭೂಪಟದಲ್ಲಿ ವಿಸ್ತರಿಸಿದ. ಅದರೆ, ಜನರದ್ದು ನಾಯಿಪಾಡಾಯಿತು.
ಇದೀಗ ಭಾರತದಲ್ಲಿ ದೇಶಪ್ರೇಮದ ಮತ್ತು ರಾಷ್ಟ್ರೀಯತೆಯ ಮಾತಾಗುತ್ತಿದೆ. ಈ ರಾಷ್ಟ್ರೀಯತೆಯಲ್ಲಿ ಮತೀಯ ಅಲ್ಪಸಂಖ್ಯಾತರಿಗೆ, ಹಿಂದುಳಿದವರಿಗೆ, ದಲಿತರಿಗೆ ಯಾವ ಸ್ಥಾನವಿದೆ? ರಾಷ್ಟ್ರೀಯತೆಯ ಹೆಸರಲ್ಲಿ ಮೇಲ್ಜಾತಿ ಪ್ರಾಬಲ್ಯ ಒಪ್ಪಿಕೊಳ್ಳಬೇಕೆ?
ನಮ್ಮಲ್ಲಿಯೂ ದೇಶಕ್ಕಾಗಿ ತ್ಯಾಗ ಮಾಡಿ, ಸಬ್ಸಿಡಿ ತ್ಯಾಗಮಾಡಿ ಇತ್ಯಾದಿ ಹೇಳಲಾಗುತ್ತದೆ. ಗಗನಕ್ಕೇರಿದ ತೈಲ, ಅನಿಲ ಬೆಲೆಯೂ ದೇಶಕ್ಕಾಗಿ ಮಾಡುವ ತ್ಯಾಗವಂತೆ!
ಇಲ್ಲಿ ಕೂಡಾ ಪಾಕಿಸ್ತಾನ, ಬಾಂಗ್ಲ, ನೇಪಾಳ, ಶ್ರೀಲಂಕಾ, ಬರ್ಮಾ ಒಳಗೊಂಡಂತಹ ಅಖಂಡ ಭಾರತದ ಸಾಮ್ರಾಜ್ಯಶಾಹಿ ಕಲ್ಪನೆಗೆ ನೀರುಣಿಸಿ ಬೆಳೆಸುವವರು ಇನ್ನೂ ಇದ್ದಾರೆ. ಭೂಪಟ ಮತ್ತು ಜನಪ್ರೇಮದ ವ್ಯತ್ಯಾಸವನ್ನು, ನಿಜವಾದ ದೇಶಪ್ರೇಮವನ್ನು ಸರ್ವಾಧಿಕಾರಿ ಪ್ರವೃತ್ತಿಯು ಎಂದಿಗೂ ತಿಳಿದುಕೊಳ್ಳಲಾರದು.
ಗಿಲೀಟಿನ ಸುಳ್ಳು ಪ್ರಚಾರ ಸರ್ವಾಧಿಕಾರದ ಮುಖ್ಯ ಲಕ್ಷಣಗಳಲ್ಲಿ ಇನ್ನೊಂದು. ನಾಜಿ ಜರ್ಮನಿಯಲ್ಲಿ ಗೊಬೆಲ್ಸ್ ಅದರ ರೂವಾರಿಯಾಗಿದ್ದ. ಒಂದು ಸುಳ್ಳನ್ನು ಸಾವಿರ ಸಲ ಹೇಳಿದರೆ ಅದು ಸತ್ಯವಾಗುತ್ತದೆ ಎಂಬುದು ಅವನ ನಿಲುವಾಗಿತ್ತು. ಅಪಪ್ರಚಾರವು ಅವರ ಪ್ರಚಾರದ ಇನ್ನೊಂದು ಮುಖ.
ಇಂದು ಮಾಧ್ಯಮಗಳಲ್ಲಿ, ಸಾಮಾಜಿಕ ತಾಣಗಳಲ್ಲಿ ಹಸಿಹಸಿ ಸುಳ್ಳುಗಳನ್ನು ಉತ್ಪಾದಿಸುವ ಕಾರ್ಖಾನೆಗಳೇ ನಡೆಯುತ್ತಿವೆ. ಅವುಗಳನ್ನು ಕಾಸಿಗಾಗಿ ಶೇರ್ ಮಾಡುವವರ ಪಡೆಗಳಿವೆ. ವಿದ್ವೇಷದ, ಅವಹೇಳನೆಯ ವೈಯುಕ್ತಿಕ ನಿಂದನೆಯ, ಅಶ್ಲೀಲವಾದ ಬೆದರಿಕೆಯ ಸಂದೇಶಗಳು ಸ್ವಯಂಘೋಷಿತ ಸಂಸ್ಕೃತಿಯ ರಕ್ಷಕರಿಂದ ಬರುತ್ತಿರುವುದು ಬರೇ ಕಾಕತಾಳೀಯ. ಅಗಿರಲಾರದು!
ಗಾಂಧಿ ಪದತಲದಲ್ಲಿ ಯುವಕ ಮೋದಿ, ಭೋಸರ ಪಕ್ಕದಲ್ಲಿ ವಂದನೆ ಸ್ವೀಕರಿಸುತ್ತಿರುವ ಮೋದಿ, ಭಗತ್ ಸಿಂಗ್‍ಗೆ ಜೈಲಿನಲ್ಲಿ ಮನೆಯೂಟ ನೀಡುತ್ತಿರುವ ಮೋದಿ ಇತ್ಯಾದಿಯಾಗಿ ನಾಜಿಗಳೇ ನಾಚುವಂತಹ ಫೊಟೋಷಾಪ್ ಸುಳ್ಳುಗಳನ್ನು ಹರಿದುಬಿಡಲಾಗುತ್ತದೆ. 1950ರಲ್ಲಿ ಅತ ಹುಟ್ಟಿದಾಗ ಅವರೆಲ್ಲಾ ಮಣ್ಣಲ್ಲಿ ಲೀನವಾಗಿಹೋಗಿದ್ದರೆಂಬ ಸ್ಪಷ್ಟ ಸತ್ಯವೂ ಗೋಚರವಾಗದ ಮುಗ್ಧ ಜನರು ಅವುಗಳನ್ನು ನಂಬುತ್ತಾರೆ. ಇದುವೇ ಗೋಬೆಲ್ಸ್ ತಂತ್ರ.
ಪ್ರಧಾನಿಯವರ ಸೆಲ್ಫಿಗಳಲ್ಲಿ ವ್ಯಕ್ತವಾಗುವ ಸೆಲ್ಫ್ ಮೋಹ ಗಾಬರಿ ಹುಟ್ಟಿಸುತ್ತದೆ. ಅವರು ಲಕ್ಷಾಂತರ ಟ್ವೀಟ್‍ಗಳಿಗೆ ಸ್ವತಃ ಪ್ರತಿಕ್ರಿಯಿಸುತ್ತಾರೆಂದು ನಂಬುವ ಮೂರ್ಖರೂ ಇದ್ದಾರೆ. ಇದು ಸಾಧ್ಯವೆ, ಮತ್ತೆ ಅವರು ಕೆಲಸ ಮಾಡುವುದು ಯಾವಾಗ, ಅವರ ಗಡಿಯಾರದಲ್ಲಿ ದಿನಕ್ಕೆ 48 ಗಂಟೆಗಳಿವೆಯೇ ಎಂದು ಯಾರೂ ಪ್ರಶ್ನೆ ಮಾಡಲು ಹೋಗುವುದಿಲ್ಲ. ಇಂತಹ ಕುರುಡು ನಂಬಿಕೆ, ವ್ಯಕ್ತಿ ವೈಭವೀಕರಣವೇ ಸರ್ವಾಧಿಕಾರಕ್ಕೆ ಮೆಟ್ಟಿಲು.
ಎಲ್ಲಾ ಸರ್ವಾಧಿಕಾರಿಗಳು ಹಿಂದಿನ ಆಡಳಿತವನ್ನು ದೂರಿ ಅಭಿವೃದ್ಧಿಯ ಮಂತ್ರವನ್ನು ಜಪಿಸಿದ್ದಾರೆ. ಹಿಟ್ಲರ್ ಮತ್ತು ಇಟಲಿಯ ಸರ್ವಾಧಿಕಾರಿ ಬೆನಿಟೊ ಮುಸೊಲಿನಿಯಂತವರೂ ಹಿಂದೆ ಬಿದ್ದಿರಲಿಲ್ಲ. ತಮ್ಮ ತಮ್ಮ ದೇಶಗಳನ್ನು ಸಮೃದ್ಧಿಯ ಶಿಖರಕ್ಕೆ ಕೊಂಡೊಯ್ಯುವ ಭರವಸೆ ನೀಡಿ ವಿನಾಶದ ಪಾತಾಳಕ್ಕೆ ತಳ್ಳಿದರು. ಜನಕೇಂದ್ರಿತವಲ್ಲದ ಮತ್ತು ಮಿಲಿಟರಿ ಯಂತ್ರವನ್ನು ಬಲಪಡಿಸುವ ಕೈಗಾರಿಕೀಕರಣ ಅದಾಗಿತ್ತು. ಹೊಸ ರೀತಿಯ ಬಂದೂಕುಗಳು, ಫಿರಂಗಿಗಳು, ಟ್ಯಾಂಕ್‍ಗಳು, ಯುದ್ಧ ವಿಮಾನಗಳು, ಹಡಗುಗಳು, ಜಲಾಂರ್ಗಾಮಿಗಳು, ಸೋನಾರ್, ರಾಡಾರ್ ತಂತ್ರಜ್ಞಾನಗಳು ಅಭಿವೃದ್ಧಿ ಹೊಂದಿ ವಿನಾಶದ ಸಲಕರಣೆಗಳು ಭಾರೀ ಪ್ರಮಾಣದಲ್ಲಿ ನಿರ್ಮಾಣವಾದವು. ಇಂದು ಮಧ್ಯಮ ವರ್ಗದ, ಅದರಲ್ಲೂ ಯುವಕರ ನೆಚ್ಚಿನ ಶೋಕಿಗಳಾಗಿರುವ ಮೋಟಾರ್ ಬೈಕ್ ನಿರ್ಮಾಣವಾದದ್ದು ಜರ್ಮನಿಯಲ್ಲಿ! ಸ್ಕೂಟರ್ ನಿರ್ಮಾಣವಾದದ್ದು ಇಟಲಿಯಲ್ಲಿ! ಅದೂ ಯುದ್ಧದ ಉದ್ದೇಶಕ್ಕಾಗಿ.
ನಮ್ಮಲ್ಲಿಯೂ ಯುದ್ಧಾಸ್ತ್ರಗಳ ಖಾಸಗಿ ನಿರ್ಮಾಣಕ್ಕೆ ಚಾಲನೆ ದೊರಕಿದೆ. ರಾಫೆಲ್ ಯುದ್ಧ ವಿಮಾನಗಳ ನಿರ್ಮಾಣ ಗುತ್ತಿಗೆ ಸಾರ್ವಜನಿಕ ವಲಯದ ಅನುಭವಿ ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್‍ಗೆ ಸಿಗದೇ ಅನುಭವವೇ ಇಲ್ಲದ ಅಂಬಾನಿಯ ಹೊಸ ಕಂಪೆನಿಯ ಪಾಲಾಗಿದೆ. ಡ್ರೋನ್ ನಿರ್ಮಾಣದ ಗುತ್ತಿಗೆಯದ್ದೂ ಅದೇ ಕತೆ! ಅಂಬಾನಿ, ಅದಾನಿ ಮುಂತಾದ ಆಗರ್ಭ ಶ್ರೀಮಂತರ ಬೃಹತ್ ಉದ್ದಿಮೆಗಳಿಗೆ ಲಾಭ ಮಾಡಿಕೊಡುವುದರಿಂದ ಸಾಮಾನ್ಯ ಜನರ ಅಭಿವೃದ್ಧಿ ಅಗುವುದು ಹೇಗೆ? ಬಂಡವಾಳ ಹೂಡಿಕೆಯ ಲಾಭ ಕೇವಲ ಉದ್ದಿಮೆಗಳಿಗೆ, ರಾಜಕೀಯ ಪಕ್ಷಗಳ ನಿಧಿಗೆ, ರಾಜಕಾರಣಿಗಳ ಜೇಬಿಗೆ ತಲುಪಿದರೆ ಸಾಕೆ? ರಕ್ಷಣಾ ವಲಯದಂತಹ ಸೂಕ್ಷ್ಮ ಕ್ಷೇತ್ರಗಳನ್ನೂ ಖಾಸಗಿ ಬಂಡವಾಳಗಾರರಿಗೆ ಬಿಟ್ಟುಕೊಡುತ್ತಿರುವುದು ಅಪಾಯಕಾರಿ ನಡೆ. ವಿಕೇಂದ್ರೀಕೃತವಾದ ಜನಪರ ಅಭಿವೃದ್ಧಿಗೆ ತಿಲಾಂಜಲಿ ಬಿಟ್ಟು, ದೊಡ್ಡ ಕೈಗಾರಿಕೆಗಳಿಗೆ ಭೂಮಿ ಒದಗಿಸಿಕೊಡುವ ರಿಯಲ್ ಎಸ್ಟೇಟ್ ದಂಧೆಗೆ ಇಳಿದು, ಅದಕ್ಕೆ ಅನುಕೂಲಕರವಾದ ರೈತವಿರೋಧಿ ಭೂಸ್ವಾಧೀನ ಕಾಯಿದೆಯನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬುದು ಅಪಾಯದ ಗಂಟೆಯನ್ನು ಮೊಳಗಿಸುತ್ತಿದೆಯೆ?
ಜನಾಂಗ ಜನಾಂಗಗಳನ್ನೇ ನಿರ್ನಾಮ ಮಾಡಿದ ಸರ್ವಾಧಿಕಾರಗಳೆಲ್ಲವೂ ಮೊದಲಿಗೆ ಎಲ್ಲರನ್ನು ಜೊತೆಗೊಯ್ಯುವ ಮಾತಾಡಿವೆ!
ಲಕ್ಷಾಂತರ ಯಹೂದಿಗಳನ್ನು ಯಾತನಾ ಶಿಬಿರಗಳಿಗೆ ತಳ್ಳಿ ಅಮಾನವೀಯವಾಗಿ ಮುಗಿಸಿದ ಹಿಟ್ಲರ್‍ಗೆ ಆರಂಭದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಿಡಿತಹೊಂದಿದ್ದ ಯಹೂದಿಗಳು ಬೇಕಾಗಿದ್ದರು. ಅವನು ಅದಕ್ಕಾಗಿ ಅವರನ್ನು ಓಲೈಸಿದ್ದ ಕೂಡಾ. ಅತನ ಸರಕಾರ ಅವರಿಂದ ಬೇಕಾಬಿಟ್ಟಿ ಸಾಲ ಎತ್ತಿದ್ದ. ನಂತರ ಕೈಯೆತ್ತಿ ಅವರ ವಿರುದ್ಧ ಮುಗಿಬಿದ್ದಿದ್ದ.
ನಮ್ಮಲ್ಲಿಯೂ ಇಂತಹ ಮಾತುಗಳು ಕೇಳಿಬರುತ್ತಿವೆ. ಅದರೆ, ವ್ಯವಸ್ಥಿತವಾಗಿ ಸಂಕುಚಿತವಾದ, ಗಂಭೀರವಾದ ದಾಳಿಗಳು ನಿರಂತರವಾಗಿ ಬುದ್ಧಿಜೀವಿಗಳ ಮೇಲೆ, ದಲಿತರು, ಅಲ್ಪಸಂಖ್ಯಾತರ ಮೇಲೆ ನಡೆದುಕೊಂಡುಬಂದಿವೆ. ದನ ಸಾಗಾಟ, ಕಾಲಮೇಲೆ ಕಾಲುಹಾಕಿದ್ದು, ಕುದುರೆಯ ಮೇಲೆ ಕುಳಿತದ್ದು ಮುಂತಾದ ಕ್ಷುಲ್ಲಕ ಕಾರಣಗಳಿಗೆ ಮಾತ್ರವಲ್ಲ, ಕಾರಣವೇ ಇಲ್ಲದೇ ದಾಳಿಗಳು, ಕೊಲೆಗಳು, ಅತ್ಯಾಚಾರಗಳು ನಡೆದಿವೆ. ಜೊತೆಗೆ ಪ್ರತೀಕಾರ ಕೃತ್ಯಗಳೂ ಕೆಲವೊಮ್ಮೆ ನಡೆದಿವೆ. ತಾವು ಸಂತರೆಂದು ಹೇಳಿಕೊಳ್ಳುವವರು, ಸಂಸದರು ಕೂಡಾ ಕೊಚ್ಚಿ, ಕೊಲ್ಲಿ, ಬೆಂಕಿಹಚ್ಚಿ, ತಲೆಕಡಿಯಿರಿ, ದೇಶದಿಂದ ಓಡಿಸಿ ಇತ್ಯಾದಿ ಪ್ರಚೋದನಾತ್ಮಕ ಭಾಷೆಯಲ್ಲಿ ಎಗ್ಗಿಲ್ಲದೇ ಮಾತನಾಡುತ್ತಿದ್ದಾರೆ. ಎಲ್ಲರನ್ನೂ ಜೊತೆಗೊಯ್ಯುತ್ತೇವೆ ಎಂದು ಹೇಳುವವರು ಮಾತ್ರ ಇವುಗಳನ್ನು ಖಂಡಿಸದೇ, ಕ್ರಮ ಕೈಗೊಳ್ಳದೆ ಮೌನ ಅನುಮತಿ ನೀಡುತ್ತಿರುವಂತಿದೆ.
ಇದಲ್ಲದೇ ಸಂವಿಧಾನವನ್ನು ಬದಲಾಯಿಸುವ ಮಾತೂ ಕೇಳಿಬರುತ್ತಿದೆ. ಈ ಎಲ್ಲಾ ವಿಷಯಗಳನ್ನು ಮುಂದೆ ವಿವರವಾಗಿ ಚರ್ಚಿಸೋಣ. ಇದು ಕೇವಲ ಪರಿಚಯ ಮಾತ್ರ. ಭಾರತದಂತಹ ವೈವಿಧ್ಯಮಯ ವಿಶಾಲ ಜನಭರಿತ ದೇಶದಲ್ಲಿ ಸರ್ವಾಧಿಕಾರ ತರುವುದು ಸುಲಭದ ಕೆಲಸವೇನಲ್ಲ! ಹಿಂದೆ ಇಂದಿರಾಗಾಂಧಿಯವರ ಕಾಲದಲ್ಲಿ ಇಂತಹ ಪ್ರಯತ್ನ ನಡೆದಿತ್ತು ಮತ್ತು ಅದನ್ನು ಜನತೆಯ ಹೋರಾಟ ವಿಫಲಗೊಳಿಸಿತು ಎಂಬುದನ್ನು
ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...