Homeಅಂಕಣಗಳುಸಾಣೆಹಳ್ಳಿ ಶ್ರೀಗಳು ಸರಿಯಾದವರಿಗೆ ಪ್ರಶಸ್ತಿ ಕೊಡಿ ಎಂದರಲ್ಲಾ..

ಸಾಣೆಹಳ್ಳಿ ಶ್ರೀಗಳು ಸರಿಯಾದವರಿಗೆ ಪ್ರಶಸ್ತಿ ಕೊಡಿ ಎಂದರಲ್ಲಾ..

- Advertisement -
- Advertisement -

| ಯಾಹೂ |

ಹಾದರಕ್ಕೆ ಹುಟ್ಟಿದವರು ಯಾರಿಗೂ ಬೇಡವಾಗಿ ಅನಾಥಾಶ್ರಮ ಸೇರುವಂತೆ, ಅಡ್ನಾಡಿ ಕುಮಾರಣ್ಣನ ಕೊಟ್ಟಿಗೆಯಿಂದ ಕುಲಗೇಡಿ ಎಡೂರಪ್ಪನ ದೊಡ್ಡಿ ಸೇರಿದ್ದ ಅನರ್ಹ ಶಾಸಕರು ಈಗ ಎಡೂರಪ್ಪನಿಗೂ ಬೇಡವಾಗಿದ್ದಾರಂತಲ್ಲಾ. ಬಿಜೆಪಿ ಹುಟ್ಟಿದ ಕಾಲದಿಂದಲೂ ಅವುಗಳ ಹುಟ್ಟುಗುಣವೇನೆಂದರೆ, ನಂಬಿಸಿ ಮೋಸ ಮಾಡುವುದು. ನಿಮ್ಮ ಆಸ್ತಿ ನೋಡಿ ಹತ್ತಿರ ಬರುತ್ತವೆ. ಅದು ಖಾಲಿಯಾಗುತ್ತಿದ್ದಂತೆ ಜಾಗ ಖಾಲಿ ಮಾಡುತ್ತವೆ. ನಿಮ್ಮ ಖ್ಯಾತಿಯನ್ನು ನೋಡಿ ಹತ್ತಿರ ಬರುತ್ತವೆ. ಅಪಖ್ಯಾತಿ ಅಂಟಿಸಿ ಮಾಯವಾಗುತ್ತವೆ. ನಿಮ್ಮ ತುಂಬಿದ ಜೇಬನ್ನು ಗ್ರಹಿಸಿ ಜೊತೆಯಾಗುತ್ತವೆ. ಖಾಲಿ ಜೇಬಾದ ಕೂಡಲೇ ಮಾತು ಬಿಡುತ್ತವೆ. ಹಾದರ ಮಾಡುತ್ತವೆ ಪಾತಿವ್ರತ್ಯ ಬೋಧಿಸುತ್ತವೆ. ಭ್ರಷ್ಟ ಕೆಲಸ ಮಾಡುತ್ತಲೇ ಪ್ರಾಮಾಣಿಕತೆ ಬೋಧಿಸುತ್ತವೆ. ಪಾರ್ಟಿ ನಿಷ್ಠೆ ಬೋಧಿಸುತ್ತವೆ. ಬೇರೆ ಪಾರ್ಟಿಯಿಂದ ಬಾಡಿಗಳನ್ನ ಯಾಮಾರಿಸುತ್ತವೆ. ಈಗ ಸಂದಿಗ್ಧಕ್ಕೆ ಸಿಕ್ಕ ಇಂತಹ ಬಾಡಿಗಳು ಎಡೂರಪ್ಪನ ಮಾತಿಂದ ಯಕ್ಕ ಎದ್ದು ಹೋಗಲಿವೆಯಂತಲ್ಲಾ. ಎಡೂರಪ್ಪನ ಅಂತಹ ಮಾತೇನು ಎಂದರೆ, ಅನರ್ಹ ಶಾಸಕರಿಗೂ ನಮಗೂ ಯಾವ ಸಂಬಂಧವೂ ಇಲ್ಲ. ಅವರು ಎಲ್ಲಿಗಾದರೂ ಹೋಗಲಿ. ಯಾವ ಪಕ್ಷವನ್ನಾದರೂ ಸೇರಲಿ ಎಂಬುದಾಗಿದೆಯಲ್ಲ. ನಂಬಿಕೆದ್ರೋಹವೆಂದರೆ ಇದೇ ಅಲ್ಲವೆ, ಥೂತ್ತೇರಿ.

ಬಿಜೆಪಿಗಳ ಆಮಿಷ ಮತ್ತು ಕುತಂತ್ರಗಳಿಗೆ ಬಗ್ಗದ ಡಿ.ಕೆ. ಶಿವಕುಮಾರ್ ಇಡಿ ಟ್ರೀಟ್‌ಮೆಂಟುಗಳಿಗೆ ಒಳಗಾಗಿ ಜೈಲುವಾಸ ಅನುಭವಿಸಿ ಬಂದಾಗ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಸಿಕ್ಕ ಭವ್ಯ ಸ್ವಾಗತ ನೋಡಿದ ಬಿಜೆಪಿಗಳು ಅಪರಾಧ ಮಾಡಿಬಂದವರನ್ನು ಹೀಗೆ ಸ್ವಾಗತಿಸುವುದೆ ಎಂದು ಉದ್ಘಾರ ತೆಗೆದವಲ್ಲಾ. ತಮ್ಮನ್ನು ತಾವು ಎಂದೂ ಬಗ್ಗಿ ನೋಡಿಕೊಳ್ಳದ ಚೆಡ್ಡಿಗಳು ತಮ್ಮವರು ಮಾಡಿದ ಎಲ್ಲ ಅಪರಾಧಗಳ ಸಮಯದಲ್ಲಿ ಪಟಾಕಿ ಹೊಡೆದು ಸಂಭ್ರಮಿಸಿವೆ. ಕೊಲೆಗಾರರು ಬಿಡುಗಡೆಯಾದಾಗ, ವಿಜಯೋತ್ಸವ ಆಚರಿಸಿವೆ. ಗಾಂಧಿ ಕೊಂದವನಿಗೆ ಗುಡಿ ಕಟ್ಟಲು ಹೊರಟಿವೆ. ಇದೆಲ್ಲಕ್ಕಿಂತಲೂ ಮುಖ್ಯವಾಗಿ ಜೈಲಿಗೆ ಹೋಗಿ ಬಂದ ಎಡೂರಪ್ಪನನ್ನು ಕಂಡ ಕೂಡಲೇ ಲಾಗಾ ಹೊಡೆದಿದ್ದವು. ಆಗ ಮನೆಗೆ ಬಂದ ಎಡೂರಪ್ಪನನ್ನ ನೋಡಿದ ಅವರ ಮೊಮ್ಮಗಳು ’ತಾತ ಜೈಲಿಂದ ಬಂತು ತಾತ ಜೈಲಿಂದ ಬಂತು’ ಎಂದು ಕೂಗಿಕೊಂಡಿತ್ತು. ಸಂಬಂಧಿಕರು ಸುಮ್ಮನಿರಿಸಲು ಯತ್ನಿಸಿದರೂ ಮಗು ಮುಗಿಲು ಮುಟ್ಟುವಂತೆ ಕೂಗುತ್ತ ಸಂಭ್ರಮಿಸಿತಂತಲ್ಲಾ ಥೂತ್ತೇರಿ.

ರಾಜ್ಯೋತ್ಸವದಂದು ಕೊಡಮಾಡುವ ಪ್ರಶಸ್ತಿಗಳನ್ನು ಫಲಾನುಭವಿಗಳು ಪಡೆದಾಗಿದೆ. ಇನ್ನೇನಿದ್ದರೂ ಸರಕಾರದ ಚೆಕ್ಕುಗಳು ಕ್ಯಾಷಾಗಬೇಕಷ್ಟೆ. ಇಂತಿರುವಾಗ ಸಾಣೇಹಳ್ಳಿಯ ಪಂಡಿತಾರಾಧ್ಯ ಶ್ರೀಗಳು ಪ್ರಶಸ್ತಿಗಳನ್ನ ಕೊಡುವಾಗ ವ್ಯಕ್ತಿಯ ನೈತಿಕ ಜೀವನ ಅಳೆದುಕೊಡಬೇಕೆಂದು ಹೇಳಿದ್ದಾರಲ್ಲಾ. ಈ ಮಾತಿನ ಜಾಡನ್ನ ಹಿಡಿದು ನೋಡಿದಾಗ, ಸಿದ್ಧರಾಮಯ್ಯನವರ ಸರಕಾರ ನೇಮಿಸಿದ ನಾಗಮೋಹನದಾಸ್ ರಚಿಸಿ ಕೊಟ್ಟ ಗೈಡ್‌ಲೈನಿನ ಗಡಿ ಮೀರಿದಂತೆ ಕಾಣುತ್ತಿದೆಯಲ್ಲಾ. ಇದಕ್ಕೆ ಸಾಕ್ಷಾಧಾರವಾಗಿ, ಆಯ್ಕೆ ಕಮಿಟಿಯಲ್ಲಿದ್ದ ನಿರುಪಮಾ ಎಂಬುವವರು ನಾನು ಹಗಲುರಾತ್ರಿ ಎಡೂರಪ್ಪನ ಮನೆಗೂ ಸಿ.ಟಿ. ರವಿ ಮನೆಗೂ ಓಡಾಡಿ ಐದು ಜನರಿಗೆ ಪ್ರಶಸ್ತಿ ಕೊಡಿಸಿದೆ ಎಂದಿದ್ದಾರಲ್ಲಾ. ನಿಜಕ್ಕೂ ಇದೊಂದು ಧೀರೋದಾತ್ತ ಸಾಹಸ. ಮುಖ್ಯಮಂತ್ರಿ, ಸಂಸ್ಕೃತಿ ಸಚಿವ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಕಮಿಟಿ ಮೀರಿ ಐದು ಜನರಿಗೆ ಪ್ರಶಸ್ತಿ ಕೊಡಿಸಿದ ನಿರುಪಮಾ ಖಂಡಿತ ನಿರುಪಯುಕ್ತ ಮಹಿಳೆಯಲ್ಲ. ಮುಂದಿನ ವರ್ಷ ಪ್ರಶಸ್ತಿ ಬೇಕಾದವರು ನಿರುಪಮಾನನ್ನು ಹಿಡಿದು ನಿಯತ್ತಿನಿಂದ ನೋಡಿಕೊಂಡರೆ, ನಿಮಗೂ ಪ್ರಶಸ್ತಿ ಗ್ಯಾರಂಟಿ ಎಂದು ಫಲಾನುಭವಿಗಳು ಹೇಳಿಲ್ಲವಂತಲ್ಲಾ, ಥೂತ್ತೇರಿ.

ತನಗೇನೇ ಇನ್ನೂ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿಲ್ಲ ಎಂದು ಪ್ರತಿಭಟಿಸಿದ ಸತ್ಯನಾರಾಯಣ ಎಂಬ ಆಸಾಮಿ, ಸರಕಾರಕ್ಕೆ ತರಾಟೆ ತೆಗೆದುಕೊಂಡಿದ್ದಲ್ಲದೆ, ಕೋರ್ಟಿಗೂ ಹೋಗಿದ್ದರಲ್ಲಾ. ಆ ಕಾರಣವಾಗಿ ನಾಗಮೋಹನ ದಾಸ್ ಕಮಿಟಿ ನೇಮಕವಾಗಿ ಪ್ರಶಸ್ತಿ ಸಂಖ್ಯೆ ರಾಜ್ಯೋತ್ಸವ ವರ್ಷದ ಸಂಖ್ಯೆಗೆ ಇಳಿದಿದ್ದು ಮತ್ತು ಅರವತ್ತು ವರ್ಷ ತುಂಬಿರಬೇಕೆಂಬ ನಿಯಮ ಬಂದಿದ್ದು. ಇದಿಲ್ಲದಿದ್ದರೆ, ಈ ಬಿಜೆಪಿಗಳು ಪ್ರತಿ ಜಿಲ್ಲೆಯ ಕನಿಷ್ಟ ಹತ್ತು ಚಡ್ಡಿಗಳಿಗೆ ಪ್ರಶಸ್ತಿ ಕೊಟ್ಟು ಗಬ್ಬೆಬ್ಬಿಸುತ್ತಿದ್ದರು. ಕಳೆದ ಬಾರಿ ಪ್ರಶಸ್ತಿ ವಿಜೇತರ ಪಟ್ಟಿ ತರಿಸಿಕೊಂಡ ಡಿ.ಕೆ. ಶಿವಕುಮಾರ್, ಅತ್ಯಂತ ಯೋಗ್ಯರಾದ ಹತ್ತು ಜನರನ್ನು ತೆಗೆದು ಬಿಸಾಡಿ, ತನ್ನ ಕಡೆಯ ಹತ್ತು ಹೆಸರನ್ನ ಸೇರಿಸಿ ಪ್ರಕಟಿಸಿದ್ದರು. ಇದರಲ್ಲಿ ರಸ್ತೆ ಮಾಡಿದವರು, ಡಿಕೆಶಿಗೆ ಪಾಠ ಹೇಳಿದವರು ಇದ್ದರು. ಈಗ ಸಿ.ಟಿ. ರವಿ ಇನ್ನೂ ಮುಂದೆಹೋಗಿ ತನಗೆ ಹೊಟೇಲಿನಲ್ಲಿ ರೂಮು ಕೊಟ್ಟವನಿಗೊಂದು ಪ್ರಶಸ್ತಿ ಕೊಟ್ಟಿದ್ದಾನಂತಲ್ಲ. ಮುಂದಿನ ವರ್ಷ ರವಿ ಹೆಂಡತಿಯನ್ನು ತುಂಬಾ ಸಮಾರಂಭಗಳಿಗೆ ಅತಿಥಿಯಾಗಿ ಕರೆದವನನ್ನು ಕರೆದು ರಾಜ್ಯೋತ್ಸವ ಪ್ರಶಸ್ತಿ ಕೊಡುವುದು ಗ್ಯಾರಂಟಿ ಎಂದು ಚಿಕ್ಕಮಗಳೂರು ಜನ ಚಿಕ್ಕದಾಗಿ ಬಾಯಿ ತೆರೆದು ದೊಡ್ಡದಾಗಿ ನಕ್ಕರಂತಲ್ಲಾ, ಥೂತ್ತೇರಿ.

ಹಾಗೆ ನೋಡಿದರೆ ಸಾಣೆಹಳ್ಳಿ ಶ್ರೀಗಳು ಹೇಳಿದ್ದಕ್ಕೆ ಸಾಕ್ಷಾಧಾರಗಳು ದಾವಣಗೆರೆ ಜಿಲ್ಲೆಯಲ್ಲೇ ಸಿಗುತ್ತದಂತಲ್ಲಾ. ದಾವಣಗೆರೆ ಜಿಲ್ಲೆಯ ಚನ್ನಪ್ಪನವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭ್ಯವಾಗಿದೆ. ಸದಾ ಸಮಾಜ ಸೇವೆಗಾಗಿ ದುಡಿಯುವ ಚನ್ನಪ್ಪನವರಿಗೆ ರಾಜ್ಯೋತ್ಸವ ಪ್ರಶಸ್ತಿ ಎಂದೊ ಹುಡುಕಿಕೊಂಡು ಬರಬೇಕಿತ್ತು. ಈ ಚೆನ್ನಪ್ಪನವರ ಸಮಾಜ ಸೇವೆಯಲ್ಲಿ ಪ್ರಶಸ್ತಿಗೆ ಯೋಗ್ಯವಾದ ಸಾಧನೆಯಾವುದೆಂದರೆ, ಯಾರದ್ದೊ ಮನೆಯಲ್ಲಿ ಸಂತಾನಭಾಗ್ಯವಿಲ್ಲ. ಆಗ ಹೋರಿ ಕರುವಿನಂತೆ ಓಡಾಡುತ್ತಿದ್ದ ಚನ್ನಪ್ಪನನ್ನು ಕರೆದ ಅಜ್ಜಿ ’ಚನ್ನಪ್ಪ ನನ್ನ ಮೊಮ್ಮಗಳಿಗೆ ಮಗು ಇಲ್ಲ ಕಣಪ್ಪ. ಅದರ ಹೊಟ್ಟೇಲಿ ಯಂತದಾರ ಹುಳ ನೋಡಿ ಸಾಯಬೇಕು ಅನ್ನಿಸಿದೆ. ಮಾಡಿಕೊಡಪ್ಪ’ ಎಂದಿತಂತೆ. ಕರಗಿಹೋದ ಚನ್ನಪ್ಪ ನಮ್ಮ ಎಸ್ಸೆಲ್ ಭೈರಪ್ಪ ಹೇಳಿದಂತಹ ನಿಯೋಗ ಸಾಧನೆಯಿಂದ ಅಜ್ಜಿ ಮನೆ ವಂಶ ಬೆಳೆಸಿದರಂತೆ. ಇದನ್ನು ನಾವು ಚನ್ನಪ್ಪನವರ ಆತ್ಮಕತೆಯಿಂದ ತೆಗೆದು ದಾಖಲಿಸುತ್ತಿದ್ದೇವೆಯೇ ಹೊರತು, ನಮ್ಮ ಕಿಡಿಗೇಡಿತನದಿಂದಲ್ಲ. ಅಂತೂ ಚಡ್ಡಿಗಳು ಹಂಚುವ ಪ್ರಶಸ್ತಿಗಳು ಚೆಡ್ಡಿ ಸಮಸ್ಯೆಯನ್ನು ಪರಿಗಣಿಸುತ್ತಿವೆಯಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...