Homeಅಂಕಣಗಳುಸಾಹಿತ್ಯ ಸಮ್ಮೇಳನದಾರಂಭ ಮತ್ತು ‘ಸುಮಂಗಲಿ’ಯರಿಂದ ಪೂರ್ಣಕುಂಭ!!

ಸಾಹಿತ್ಯ ಸಮ್ಮೇಳನದಾರಂಭ ಮತ್ತು ‘ಸುಮಂಗಲಿ’ಯರಿಂದ ಪೂರ್ಣಕುಂಭ!!

- Advertisement -
- Advertisement -

ಧಾರವಾಡದಲ್ಲಿ ನಡೆಯಲಿರುವ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದ ಆರಂಭಕ್ಕೆ, ಸಮ್ಮೇಳನಾಧ್ಯಕ್ಷರಿಗೆ ಸಾವಿರ ಮಂದಿ ‘ಸುಮಂಗಲಿ’ಯರಿಂದ ಪೂರ್ಣಕುಂಭ ಸ್ವಾಗತದ ವಿಚಾರ ಪತ್ರಿಕೆಗಳಲ್ಲಿ ಬರುತ್ತಿದ್ದಂತೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಿಶೇಷವಾಗಿ ಸಾಹಿತ್ಯ ಮತ್ತು ಶಿಕ್ಷಣದ ವಿಚಾರದಲ್ಲಿ ನಾಡಿಗೆ ಹೆಸರಾಗಿರುವ ಧಾರವಾಡದ ಚಿಂತಕಿಯರು (ಮತ್ತು ಚಿಂತಕರೂ ಕೂಡಾ) ಹಾಗೂ ರಾಜ್ಯದ ಇತರೆಡೆಗಳ ಪ್ರಗತಿಪರ ಹೋರಾಟಗಾರ್ತಿಯರು, ಬರಹಗಾರ್ತಿಯರು ತೀವ್ರವಾಗಿ ಈ ಪೂರ್ಣಕುಂಭ ಸ್ವಾಗತದ ಸಂಗತಿಯನ್ನು ವಿರೋಧಿಸಿದರು. “‘ಸುಮಂಗಲಿ’ಯರಿಂದ ಸ್ವಾಗತ ಎಂದರೆ ಹಾಗಾದರೆ ಅಮಂಗಲೆಯರು ಯಾರು?”, “ಪೂರ್ಣಕುಂಭದ ಸ್ವಾಗತಕ್ಕೆ ಅಲ್ಲಿ ನಡೆಯುತ್ತಿರುವುದು ಧಾರ್ಮಿಕ ಕಾರ್ಯಕ್ರಮವೋ ಸಾಹಿತ್ಯಿಕ ಕಾರ್ಯಕ್ರಮವೋ?”, “ಧಾರವಾಡದ ನೆಲಕ್ಕೆ ಬಂಡಾಯದ ಮೂಲಗುಣವಿದೆ, ಇಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ಇಂತಹ ಆಚರಣೆಗಳಿಗೆ ಹೇಗೆ ಅವಕಾಶ ನೀಡಲು ಸಾಧ್ಯ?” ಇವೇ ಮೊದಲಾದ ಪ್ರಶ್ನೆಗಳು ಧಾರವಾಡಿಗರು ಮತ್ತು ಇತರೆಡೆಗಳ ಸಾಹಿತ್ಯಪ್ರಿಯರಿಂದ ತೂರಿಬಂದವು. ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರನ್ನೇ ಗುರಿಯಾಗಿಸಿ ಆನ್‍ಲೈನ್ ಪತ್ರ ಚಳವಳಿಯೂ ನಡೆದು ಈ ವಿಷಯ ಗಂಭೀರ ತಿರುವು ಪಡೆದುಕೊಳ್ಳುವ ಲಕ್ಷಣ ಕಾಣಿಸಿತು. ಕನ್ನಡದ ಪತ್ರಿಕೆಗಳೂ ಕೂಡಾ ತಕ್ಷಣವೇ ಈ ವಿಚಾರಕ್ಕೆ ಸ್ಪಂದಿಸಿ ‘ಪೂರ್ಣಕುಂಭಕ್ಕೆ ವಿರೋಧ’ ಎಂಬ ಪತ್ರಗಳನ್ನು ಪ್ರಕಟಿಸಿದವು. ಒಟ್ಟಿನಲ್ಲಿ ಈ ಎಲ್ಲ ವಿರೋಧಗಳ ಬಿಸಿ ತಟ್ಟಿ ಕೊನೆಗೂ ಧಾರವಾಡ ಜಿಲ್ಲಾ ಸಾಹಿತ್ಯ ಪರಿಷತ್ತು ಈ ಆಚರಣೆಯಿಂದ ಹಿಂದೆ ಸರಿದಿದೆ. ಸಂಘಟಕರು ತಮ್ಮ ನಿರ್ಧಾರವನ್ನು ಸಮರ್ಥಿಸುವ ಅನೇಕ ವಾದಗಳನ್ನು ಮುಂದಿಟ್ಟರೂ ಕೂಡಾ ಅಂತಿಮವಾಗಿ ಪೂರ್ಣಕುಂಭದ ವಿಚಾರವನ್ನು ಕೈಬಿಡುವ ಹಾಗೆ ಕಾಣುತ್ತಿದೆ. ಇದು ಬಹಳ ಪ್ರಮುಖವಾದ ಬೆಳವಣಿಗೆ.
‘ಪೂರ್ಣಕುಂಭದ ಸ್ವಾಗತ ನಡೆಯುತ್ತಿರುವುದು ಇದೇ ಮೊದಲ ಸಲವಲ್ಲ; ಈ ಹಿಂದೆಯೂ ನಡೆಯುತ್ತಾ ಬಂದಿದೆ; ಪ್ರೊ.ಬರಗೂರು ರಾಮಚಂದ್ರಪ್ಪ, ಪ್ರೊ.ಚಂದ್ರಶೇಖರ್ ಪಾಟೀಲ್‍ರಂತಹ ಬಂಡಾಯದ ಸಾಹಿತಿಗಳ ಅಧ್ಯಕ್ಷತೆಯಲ್ಲೂ ಕೂಡಾ ಇಂತಹವೆಲ್ಲ ನಡೆದಿದ್ದವು. ಆದರೆ ಈ ಬಾರಿ ಮಾತ್ರ ವಿರೋಧ ಯಾಕೋ ಅರ್ಥವಾಗುತ್ತಿಲ್ಲ’ ಎಂಬಂತೆ ಸಾಹಿತ್ಯ ಪರಿಷತ್ತು ಸಮರ್ಥನೆ ಕೊಟ್ಟುಕೊಂಡಿದೆ. ಈ ಹಿಂದೆ ಒಂದು ವೇಳೆ ಇಂತಹವು ನಡೆದದ್ದು ನಿಜವಾದರೆ ಅದೂ ಕೂಡಾ ಖಂಡನಾರ್ಹ. ಆದರೆ, ಹಿಂದೆ ನಡೆದಿತ್ತು; ಪ್ರಗತಿಪರರೇ ಇದ್ದಾಗ ನಡೆದಿತ್ತು ಎಂಬುದರ ಅರ್ಥ ಈಗಲೂ ನಡೆಯಲಿ ಎಂಬುದಂತೂ ಆಗಬಾರದು. ಈ ಬಾರಿ ವಿರೋಧ ಬಂದಿದೆ, ವಿರೋಧ ಸಕಾರಣವಾದುದಾಗಿದೆ. ಆದ್ದರಿಂದ ಇಂತಹ ಆಚರಣೆ ನಿಲ್ಲಬೇಕು, ಈ ಬಾರಿ ಮಾತ್ರವಲ್ಲ ಮುಂದೆಯೂ ನಡೆಯಬಾರದು ಎಂಬುದಂತೂ ಖಚಿತ.
ಇತ್ತೀಚಿನ ದಿನಗಳಲ್ಲಿ ಇಂತಹ ಹಲವಾರು ಆಚರಣೆಗಳು ಸದ್ದಿಲ್ಲದೆ ನುಸುಳುತ್ತಾ ಸಾರ್ವಜನಿಕ ಸಭೆ ಸಮಾರಂಭಗಳ ಭಾಗವಾಗುತ್ತಿರುವುದು ಸಹಜವೆಂಬಂತೆ ನಡೆಯುತ್ತಿದೆ. ಈ ಸಾಹಿತ್ಯ ಸಮ್ಮೇಳನದ ಪೂರ್ಣಕುಂಭದ ವಿಚಾರಕ್ಕೆ ಬಂದ ಸಮರ್ಥನೆಗಳನ್ನು ಗಮನಿಸಿದರೂ ಇದು ಸ್ಪಷ್ಟವಾಗುತ್ತದೆ. ಈ ಹಿಂದೆ ನಡೆದಿತ್ತೆಂಬುದಷ್ಟೇ ಅಲ್ಲ, ಇದು ನಮ್ಮ ದೇಶದ ಸಂಸ್ಕøತಿ, ಅದನ್ನು ಆಚರಿಸಿದರೆ ತಪ್ಪೇನಿದೆ ಎಂಬರ್ಥದಲ್ಲಿ ಹಲವಾರು ಪ್ರತಿಕ್ರಿಯೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು. ಅದರಲ್ಲೂ ಮಹಿಳಾ ಚಿಂತಕಿಯರು ಯಾರು ಇದನ್ನೆಲ್ಲ ವಿರೋಧಿಸುತ್ತಿದ್ದರೋ, ಅವರುಗಳನ್ನು ಸಂಸ್ಕøತಿ ವಿರೋಧಿಗಳೆಂಬಂತೆ ಪರೋಕ್ಷವಾಗಿ ದೂಷಿಸುವ ಕೆಲಸವೂ ನಡೆಯಿತು. ಇದು ನಿಜಕ್ಕೂ ಈ ದೇಶದ ಸಾಮಾನ್ಯ ಸಂಪ್ರದಾಯಕ್ಕೆ ವಿರುದ್ಧವಾದುದೆಂಬುದು ಹೆಚ್ಚು ಮುನ್ನೆಲೆಗೆ ಬರಲಿಲ್ಲ. ಸಾರ್ವಜನಿಕ ಕಾರ್ಯಕ್ರಮವೊಂದು ಧರ್ಮ ನಿರಪೇಕ್ಷವಾಗಿರಬೇಕು ಹಾಗೂ ತನ್ನ ಮೂಲ ಆಶಯಕ್ಕೆ ಪೂರಕವಾದ ರೀತಿಯಲ್ಲಿ ನಡೆಯಬೇಕು ಎಂಬುದು ಭಾರತದಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ಚಾಲ್ತಿಯಲ್ಲಿರುವ ಸಂಪ್ರದಾಯ ಹಾಗೂ ಈ ದೇಶದ ಸಾಮಾನ್ಯ ಜ್ಞಾನ. ಅಸಂಖ್ಯಾತ ಧರ್ಮಗಳಿರುವ ಈ ದೇಶದಲ್ಲಿ ಸೌಹಾರ್ದತೆ ಉಳಿಯಬೇಕಾದರೆ ಪಾಲಿಸಲೇಬೇಕಾದ ಮೂಲಭೂತ ಸಂಗತಿಗಳಲ್ಲಿ ಇದೂ ಒಂದು. ಆದರೆ, ಈ ಸಾಮಾನ್ಯ ಜ್ಞಾನವನ್ನು ಮೀರುವ ರೀತಿಯಲ್ಲಿ ಸಾಂಸ್ಕøತಿಕ ಹೇರಿಕೆಯ ವಾತಾವರಣ ಬಲಿಯುತ್ತಿರುವುದು ಆತಂಕದ ಸಂಗತಿ. ಆದ್ದರಿಂದಲೇ, ಈ ಹಿಂದೆ ಅಷ್ಟು ಚರ್ಚೆಗೆ ಗ್ರಾಸವಾಗದಿದ್ದ ಪೂರ್ಣಕುಂಭದಂತಹ ವಿಚಾರಗಳು ಶಾಂತಿ ಸೌಹಾರ್ದತೆ ಬಯಸುವವರು ಈ ವಾತಾವರಣದಲ್ಲಿ ಹೆಚ್ಚು ಎಚ್ಚರಿಕೆಯ ನೋಟ ಹೊಂದುತ್ತಿರುವುದರಿಂದ ಕಂಡುಬಂದಿರಲೂ ಬಹುದು.
ಇಲ್ಲೊಂದು ವೈರುಧ್ಯವಿರುವುದನ್ನೂ ಗಮನಿಸಬೇಕು. ಒಂದೆಡೆ, ಕನ್ನಡದ ಸಾಹಿತ್ಯ ಲೋಕ ಹೆಚ್ಚು ಸಂವೇದನಾಶೀಲವಾದುದು, ಜಾತ್ಯತೀತವಾದುದು ಮತ್ತು ಜನಪರ ಕಾಳಜಿಗಳಿಗೆ ಬೇಗ ತನ್ನನ್ನು ತಾನು ಒಗ್ಗಿಸಿಕೊಂಡಂಥದ್ದು ಎಂಬ ಒಂದು ವಿಚಾರ. ಅದೇ ಸಮಯದಲ್ಲಿ ಮತ್ತೊಂದೆಡೆ ಈ ದೇಶದ ಸಾಂಸ್ಕøತಿಕ ಸಾಮಾಜಿಕ ಇತಿಹಾಸವು ಅನೇಕಾನೇಕ ತಾರತಮ್ಯ, ವಿರೋಧಾಭಾಸ ಮತ್ತು ಶ್ರೇಣೀಕರಣಗಳನ್ನು ಹೊಂದಿ, ಅವುಗಳನ್ನು ಆಚರಿಸುತ್ತಾ, ವಿರೋಧ ಬಂದಾಗೆಲ್ಲ ಎತ್ತಿಹಿಡಿದು ಬಲವಾಗಿ ಸಮರ್ಥಿಸುತ್ತಾ ಬಂದಿರುವಂಥದ್ದು. ಆದ್ದರಿಂದಲೇ ಸಾಹಿತ್ಯದ ಹೆಸರಿನಲ್ಲಿ ನಡೆಯುವ ಕಾಯಕ್ರಮಗಳೂ ಎಷ್ಟೋ ಬಾರಿ ಇಂತಹ ಶ್ರೇಣೀಕರಣ ಅಥವಾ ಅಸೂಕ್ಷ್ಮತೆಗಳನ್ನು ಪ್ರದರ್ಶಿಸುವಂತಿರುತ್ತವೆ. ಆಳ್ವಾಸ್ ನುಡಿಸಿರಿಯಲ್ಲಿ ಸಮ್ಮೇಳನಾಧ್ಯಕ್ಷರನ್ನು ಬೋವಿ ಸಮುದಾಯದ ಪುರುಷರು ಪಲ್ಲಕ್ಕಿಯಲ್ಲಿ ಹೊತ್ತು ತರುತ್ತಿದ್ದ ಆಚರಣೆ ನೆನೆಯಬಹುದು. ಆದ್ದರಿಂದ, ಎಲ್ಲ ಬಗೆಯ ತಾರತಮ್ಯದ ಆಚರಣೆಗಳಿಂದ ಮುಕ್ತಿ ಬಯಸುವ ವಿಚಾರವಂತರು ಸದಾ ಎಚ್ಚರದಲ್ಲೇ ಇರಬೇಕಾಗುವ, ಸ್ವಲ್ಪ ಮೈಮರೆತರೂ ಇಂತಹ ಅನೇಕ ಆಚರಣೆಗಳು ಸಹಜವೆಂಬಂತೆ ಒಳತೂರುವ ಸನ್ನಿವೇಶವೇ ಇಂದೂ ಇದೆ (ಅಥವಾ ಈ ಅಪಾಯ ಹಿಂದಿಗಿಂತಲೂ ಇಂದು ಹೆಚ್ಚಾಗಿದೆ) ಎಂಬ ವಾಸ್ತವವನ್ನು ಮರೆಯಲು ಸಾಧ್ಯವಿಲ್ಲ! ಕೆಲವೊಮ್ಮೆ ಸ್ವಲ್ಪ ಅತಿ ಎನ್ನಿಸಿದರೂ, ಇಂತಹವನ್ನು ವಿರೋಧಿಸಬೇಕಾದ್ದು ಇಂದು ಅನಿವಾರ್ಯವೂ ಕೂಡಾ.
ಆದ್ದರಿಂದ, ‘ಸಮ್ಮೇಳನದ ಸರ್ವಾಧ್ಯಕ್ಷರಿಗೆ ಸುಮಂಗಲಿಯರಿಂದ ಪೂರ್ಣಕುಂಭ ಸ್ವಾಗತ’ದ ಆಚರಣೆಯನ್ನು ಬಹಳ ಬೇಗ ಗಮನಿಸಿ, ತಕ್ಷಣವೇ ಕಾರ್ಯಪ್ರವೃತ್ತರಾಗಿ ತಮ್ಮ ಸಕಾಲಿಕ ಮಧ್ಯಪ್ರವೇಶದಿಂದ ಅದನ್ನು ನಿಲ್ಲಿಸಲು ಪ್ರಯತ್ನಿಸಿದ ಕನ್ನಡದ ಎಚ್ಚೆತ್ತ ಮಹಿಳೆಯರನ್ನು ‘ನ್ಯಾಯಪಥ’ ಅಭಿನಂದಿಸುತ್ತದೆ. ಇಂತಹ ಎಚ್ಚರ ಇಂದಿನ ತುರ್ತು. ಆದ್ದರಿಂದ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...