Homeರಾಜಕೀಯಕುರುಬ್ರು ವಿಶ್ವನಾಥನ ಹಿಂದೋದ್ರೆ?

ಕುರುಬ್ರು ವಿಶ್ವನಾಥನ ಹಿಂದೋದ್ರೆ?

- Advertisement -
- Advertisement -

ಕಾಲ ಎಂತೆಂತಹ ವಿಚಿತ್ರ ಸನ್ನಿವೇಶಗಳನ್ನು. ಸೃಷ್ಟಿ ಮಾಡುತ್ತದಲ್ಲವೆ! ಕಳೆದ ಚುನಾವಣೆಯಲ್ಲಿ ಅವರಪ್ಪನಾಣೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗೊಲ್ಲ ಎಂದು ಹೋದಲ್ಲಿಬಂದಲ್ಲಿ ಭಾಷಣ ಬಿಗಿದಿದ್ದ ಸಿದ್ದರಾಮಯ್ಯ, ಚುನಾವಣಾ ಫಲಿತಾಂಶ ಇನ್ನ ಬಾಕಿ ಇರುವಾಗಲೇ ಕುಮಾರಸ್ವಾಮಿ ಮನೆಯ ಕರೆಗಂಟೆ ಒತ್ತಿ ಕೈಕಟ್ಟಿ ನಿಂತಿದ್ದಾರಲ್ಲಾ. ಆಗ ಸಿದ್ದು ನಮ್ಮಪ್ಪನಾಣೆ ನೀನೇ ಮುಖ್ಯಮಂತ್ರಿ ಎನ್ನುವುದೊಂದು ಬಾಕಿ ಇತ್ತು. ಸಿದ್ದು ಸ್ಥಿತಿ ನೋಡಿ ನಗು ಅದುಮಿಕೊಂಡ ದೇವೇಗೌಡರು ಮಗ ಮುಖ್ಯಮಂತ್ರಿ ಯಾದರೂ ಬಿಡದೆ, ಸಿದ್ದು ಬಗೆಗಿನ ಸೇಡನ್ನು ಮುಂದುವರಿಸುವ ಸಲುವಾಗಿ, ವಿಶ್ವನಾಥನನ್ನೇ ಪಾರ್ಟಿ ಪ್ರೆಸಿಡೆಂಟು ಮಾಡಿಬಿಟ್ಟಿದ್ದಾರಲ್ಲಾ, ಈ ಬಗ್ಗೆ ಸಿದ್ದುವನ್ನು ಕೇಳಬೇಕೆಂದು ಫೋನ್ ಮಾಡಿದರೆ ರಿಂಗಾಯ್ತು.
ರಿಂಗ್‍ಠೋನ್ “ಕರಿಯ ಕಂಬಳಿ ಗದ್ದುಗೆ ಮಾಡಿ ವೀರದೊಳ್ಳತಂದಿರಿಸಿದರೊ, ವೀರದೊಳತಂದಿರಿಸಿದರೊ. ವಿಶ್ವನಾಥನ ಭಜಿಸಿದರೊ….. ಹಲೊ.
“ಯಾರು.”
“ನಾನು ಸಾರ್ ಯಾಹೂ.”
“ಏನ್ರಿ ಯಾಹೂ.”
“ಏನ್ ಸಾರ್ ಮುಖ್ಯಮಂತ್ರಿಯಾದಾಗ ನೋಡಕ್ಕೂ ಸಿಗಲಿಲ್ಲ, ಈಗ್ಲು ಸಿಗದಿ¯ವಲ್ಲ ಸಾರ್ ಅಷ್ಟು ಬಿಜಿನ.”
“ಅಂಗೇನಿಲ್ಲ ಹೇಳಿ.”
“ನಿಮ್ಮ ಸರಕಾರ ಸೋತಿದ್ದರ ಬಗ್ಗೆ ನೀವೇನೇಳ್ತಿರಿ ಸಾರ್.”
“ಜನ ಮೋಸ ಮಾಡಿದ್ರು.”
“ನಿಮ್ಮ ಭಾಗದ ತಪ್ಪುಗಳೇನಾದ್ರು ಇದ್ದವೆ?’’
“ಆಂಂ.’’
“ನೀವೇನಾರ ತೆಪ್ಪು ಮಾಡಿದ್ರ ಸಾರ್.”
“ನಾನೇನು ಮಾಡಿದೇ.”
“ ಮೊದಲನೆದಾಗಿ ನಿಮ್ಮ ಪ್ರತಿ ಭಾಷಣದಲ್ಲಿ ಎಡೂರಪ್ಪನ ಜೈಲಿನ ವಿಷಯ ಪ್ರಸ್ತಾಪ ಮಾಡಿದ್ರಿ? ಜನ ಚಪ್ಪಾಳೆ ತಟ್ಟಿದ್ರು, ಆದ್ರೆ ಲಿಂಗಾಯಿತ್ರು ಎಡೂರಪ್ಪನ ಹಿಂದೆ ಒಗ್ಗಟ್ಟಾದ್ರು. ಆಮೇಲೆ ಕುಮಾರಸ್ವಾಮಿಯ ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ್ಲ ಅಂದ್ರಿ. ಅದ್ಯಂಗಾಗಲ್ಲ ನೋಡನ ಅಂತ ಒಕ್ಕಲಿಗರೆಲ್ಲ ಒಂದಾದ್ರು. ಅಂತೂ ನಿಮ್ಮ ಭಾಷಣನೆ ಜಾತಿಜನ ಒಟ್ಟು ಮಾಡ್ತು. ಇದೇ ಕಾರಣ ಸೋಲಿಗೆ ಅಂತ ನಮ್ಮ ಲೆಕ್ಕಾಚಾರ.”
“ಈಗಾಯ್ತಲ್ಲ ಬುಡ್ರಿ ಆ ಸುದ್ದಿ ತಗಂಡೇನು.”
“ವಿಶ್ಲೇಷಣೆ ಮಾಡ್ಬೇಕಲ್ಲವಾ ಸಾರ್.”
“ಈಗ ಮಾಡಿ ಏನು ಪ್ರಯೋಜನ.”
“ಮುಂದೆ ರಾಜಕಾರಣ ಮಾಡೋರಿಗೆ ಒಂದು ಅನುಭವ ಆಗುತ್ತೆ ಸಾರ್.”
“ಆ….”
“ಅಷ್ಟೊಂದು ಹಟದ ಅಗತ್ಯ ಇರಲಿಲ್ಲ, ಆ ಮುಸ್ಲಿಮರು ಏನು ಕೇಳ್ತಾರೆ ಅದನ್ನ ಮಾತ್ರ ಕೊಡಬೇಕು. ಅದು ಬುಟ್ಟು ಏನೇನೋ ಕೊಡಕೋದ್ರೆ ಅದವುರಿಗೂ ಬೇಕಿರಲಿಲ್ಲ. ಬೇರೆ ಜನಗಳೂ ಅದನ್ನ ಸಯಿಸದಿಲ್ಲ ಸಾರ್.”
“ಸಯಿಸದಿಲ್ಲ ಅಂತ ನಾವು ಮಾಡದನ್ನ ಬಿಡಬಾರ್ದು, ಅಧಿಕಾರ ಸಿಕ್ಕಿದಾಗ ದುರ್ಬಲರಿಗೆ ಸಹಾಯ ಮಾಡ್ಳೇಬೇಕು.”
“ನಿಮ್ಮ ಸಹಾಯ ಸಾಲಮನ್ನಾ, ಬಿಟ್ಟಿ ಅನ್ನ, ಹಲವಾರು ಭಾಗ್ಯ, ಸರಕಾರಿ ಕವರ್iಜಾರಿಗಳ ಸಂಬಳ ಏರಿಸಿ, ದಲಿತ್ರ ಸಾಲ ಮನ್ನ ಮಾಡಿದ್ರೂ ಜನ ಕೈ ಹಿಡಿಲಿಲ್ಲವಲ್ಲ. ಇದರ ಕಾರಣ ಗೊತ್ತಾಯ್ತಾ ಸಾರ್.”
“ಇಲ್ಲ ಹೇಳಿ.”
“ಜನ ಜಾತ್ಯಂದ್ರಾದಾಗ ಏನು ಕೊಟ್ರೂ ಜಾತಿ ಮಕ್ಕಳಾಗೇ ವರ್ತುಸ್ತಾರೆ, ಜೊತೆಗೆ ನೀವು ತಿರಗ ನಾನೇ ಮುಖ್ಯಮಂತ್ರಿ ಅಂದ್ರೆ ಅದು ರಿವರ್ಸಾಯ್ತು. ದಲಿತ ಮುಖ್ಯಮಂತ್ರಿ ಬೇಡಿಕೆ ಇಟ್ಟಿದ್ದ ಜನ ಹಗಲುರಾತ್ರಿ ಓಡಾಡಿ ಬಿಜೆಪಿಗೆ ಓಟು ಮಾಡಿಸಿದ್ರು ಗೊತ್ತಾ.”
“ಹೋಗ್ಲಿಬುಡಿ.”
“ಬುಡದಲ್ಲ ಸಾರ್, ಅಧಿಕಾರದ ಅಂತ್ಯದಲ್ಲಿ ಯಲ್ಲಾರಿಗೂ ಅಹಂಕಾರ ಬತ್ತದೆ, ನಿಮಿಗೊಂಚೂರು ಜಾಸ್ತಿನೆ ಬಂತು.”
“ನಾನೇನು ಮಾಡಿದೆ.”
“ನಿಮ್ಮನ್ನ ಕಾಂಗ್ರೆಸಿಗೆ ಕರೆತಂದ ವಿಶ್ವನಾಥನ್ನ ಕಾಸಿಗಿಂತ ಕಡೆಮಾಡಿದ್ರಿ, ನೀವು ಗೆಲ್ಲಲಿ ಅಂತ ಓಡಾಡಿದ ರೇವಣಸಿದ್ದಯ್ಯನ್ನ ಐದೊರ್ಸ ಎಲ್ಯವುರೆ ಅಂತ ನೋಡಲಿಲ್ಲ, ಚಾಮುಂಡೇಶ್ವರಿಗಾರ ಟಿಕೆಟ್ ಕೊಡಬವುದಿತ್ತು. ಅಂಗೇ ನೋಡಿದ್ರೆ ಕಾಂಗ್ರೆಸ್ ಸೋಲಿನ ದೊಡ್ಡಪಾಲು ನಿಮ್ಮದೆ ಸಾರ್.”
“ಸೋತಾಯ್ತಲ್ಲ ಬುಡಿ.”
“ಇನ್ನೋಂದು ವಿಷಯ ಸಾರ್.”
“ಏನು.”
“ದೇವೇಗೌಡ್ರು ವಿಶ್ವನಾಥನ್ನ ಜೆಡಿಎಸ್ ಪಾರ್ಟಿ ಪ್ರೆಸಿಡೆಂಟ್ ಮಾಡ್ಯವುರೇ.”
“ಮಾಡ್ಲಿ ಬುಡ್ರಿ.”
“ಅದರಿಂದ ನಿಮಗೇನು ಬೇಜಾರಾಗಿಲ್ವೇ.”
“ಬೇಜಾರ್ಯಾಕೆ, ನಾನು ಜೆಡಿಎಸ್ ಅಧ್ಯಕ್ಷ ಆಗಿದ್ದೆ, ನನ್ನ ಹುಟ್ಟುಹಬ್ಬದ ದಿನವೇ ದೇವೇಗೌಡ ನನ್ನನ್ನ ತಗದು ಆ ತಿಪ್ಪಣ್ಣನ್ನ ಪ್ರೆಸಿಡೆಂಟ್ ಮಾಡಿದ್ರು, ಅವುರು ಪಾರ್ಟಿ ಬುಟ್ಟು ಬಿಜೆಪಿಗೋದ್ರು, ಅಂಗೆ ಒಂದಿನ ಈ ಅಪ್ಪ ಮಕ್ಕಳಿಗೆ ಬೇಜಾರಾದ್ರೆ ವಿಶ್ವನಾಥನ್ನ ತೆಗೆದಾಕ್ತರೆ. ಆದ್ರಿಂದ ವಿಶ್ವನಾಥ ನನ್ನ ಎದುರಾಳಿನೂ ಅಲ್ಲ, ಸ್ಪರ್ಧಿನೂ ಅಲ್ಲ.”
“ಕುರುಬ್ರು ವಿಶ್ವನಾಥನ ಹಿಂದೋದ್ರೆ.”
“ಹೋಗ್ಲಿ ಬುಡ್ರಿ ನಂಗೇನು.”
“ಥೂತ್ತೇರಿ.”

-ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...