Homeರಾಜಕೀಯಕುರುಬ್ರು ವಿಶ್ವನಾಥನ ಹಿಂದೋದ್ರೆ?

ಕುರುಬ್ರು ವಿಶ್ವನಾಥನ ಹಿಂದೋದ್ರೆ?

- Advertisement -
- Advertisement -

ಕಾಲ ಎಂತೆಂತಹ ವಿಚಿತ್ರ ಸನ್ನಿವೇಶಗಳನ್ನು. ಸೃಷ್ಟಿ ಮಾಡುತ್ತದಲ್ಲವೆ! ಕಳೆದ ಚುನಾವಣೆಯಲ್ಲಿ ಅವರಪ್ಪನಾಣೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗೊಲ್ಲ ಎಂದು ಹೋದಲ್ಲಿಬಂದಲ್ಲಿ ಭಾಷಣ ಬಿಗಿದಿದ್ದ ಸಿದ್ದರಾಮಯ್ಯ, ಚುನಾವಣಾ ಫಲಿತಾಂಶ ಇನ್ನ ಬಾಕಿ ಇರುವಾಗಲೇ ಕುಮಾರಸ್ವಾಮಿ ಮನೆಯ ಕರೆಗಂಟೆ ಒತ್ತಿ ಕೈಕಟ್ಟಿ ನಿಂತಿದ್ದಾರಲ್ಲಾ. ಆಗ ಸಿದ್ದು ನಮ್ಮಪ್ಪನಾಣೆ ನೀನೇ ಮುಖ್ಯಮಂತ್ರಿ ಎನ್ನುವುದೊಂದು ಬಾಕಿ ಇತ್ತು. ಸಿದ್ದು ಸ್ಥಿತಿ ನೋಡಿ ನಗು ಅದುಮಿಕೊಂಡ ದೇವೇಗೌಡರು ಮಗ ಮುಖ್ಯಮಂತ್ರಿ ಯಾದರೂ ಬಿಡದೆ, ಸಿದ್ದು ಬಗೆಗಿನ ಸೇಡನ್ನು ಮುಂದುವರಿಸುವ ಸಲುವಾಗಿ, ವಿಶ್ವನಾಥನನ್ನೇ ಪಾರ್ಟಿ ಪ್ರೆಸಿಡೆಂಟು ಮಾಡಿಬಿಟ್ಟಿದ್ದಾರಲ್ಲಾ, ಈ ಬಗ್ಗೆ ಸಿದ್ದುವನ್ನು ಕೇಳಬೇಕೆಂದು ಫೋನ್ ಮಾಡಿದರೆ ರಿಂಗಾಯ್ತು.
ರಿಂಗ್‍ಠೋನ್ “ಕರಿಯ ಕಂಬಳಿ ಗದ್ದುಗೆ ಮಾಡಿ ವೀರದೊಳ್ಳತಂದಿರಿಸಿದರೊ, ವೀರದೊಳತಂದಿರಿಸಿದರೊ. ವಿಶ್ವನಾಥನ ಭಜಿಸಿದರೊ….. ಹಲೊ.
“ಯಾರು.”
“ನಾನು ಸಾರ್ ಯಾಹೂ.”
“ಏನ್ರಿ ಯಾಹೂ.”
“ಏನ್ ಸಾರ್ ಮುಖ್ಯಮಂತ್ರಿಯಾದಾಗ ನೋಡಕ್ಕೂ ಸಿಗಲಿಲ್ಲ, ಈಗ್ಲು ಸಿಗದಿ¯ವಲ್ಲ ಸಾರ್ ಅಷ್ಟು ಬಿಜಿನ.”
“ಅಂಗೇನಿಲ್ಲ ಹೇಳಿ.”
“ನಿಮ್ಮ ಸರಕಾರ ಸೋತಿದ್ದರ ಬಗ್ಗೆ ನೀವೇನೇಳ್ತಿರಿ ಸಾರ್.”
“ಜನ ಮೋಸ ಮಾಡಿದ್ರು.”
“ನಿಮ್ಮ ಭಾಗದ ತಪ್ಪುಗಳೇನಾದ್ರು ಇದ್ದವೆ?’’
“ಆಂಂ.’’
“ನೀವೇನಾರ ತೆಪ್ಪು ಮಾಡಿದ್ರ ಸಾರ್.”
“ನಾನೇನು ಮಾಡಿದೇ.”
“ ಮೊದಲನೆದಾಗಿ ನಿಮ್ಮ ಪ್ರತಿ ಭಾಷಣದಲ್ಲಿ ಎಡೂರಪ್ಪನ ಜೈಲಿನ ವಿಷಯ ಪ್ರಸ್ತಾಪ ಮಾಡಿದ್ರಿ? ಜನ ಚಪ್ಪಾಳೆ ತಟ್ಟಿದ್ರು, ಆದ್ರೆ ಲಿಂಗಾಯಿತ್ರು ಎಡೂರಪ್ಪನ ಹಿಂದೆ ಒಗ್ಗಟ್ಟಾದ್ರು. ಆಮೇಲೆ ಕುಮಾರಸ್ವಾಮಿಯ ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ್ಲ ಅಂದ್ರಿ. ಅದ್ಯಂಗಾಗಲ್ಲ ನೋಡನ ಅಂತ ಒಕ್ಕಲಿಗರೆಲ್ಲ ಒಂದಾದ್ರು. ಅಂತೂ ನಿಮ್ಮ ಭಾಷಣನೆ ಜಾತಿಜನ ಒಟ್ಟು ಮಾಡ್ತು. ಇದೇ ಕಾರಣ ಸೋಲಿಗೆ ಅಂತ ನಮ್ಮ ಲೆಕ್ಕಾಚಾರ.”
“ಈಗಾಯ್ತಲ್ಲ ಬುಡ್ರಿ ಆ ಸುದ್ದಿ ತಗಂಡೇನು.”
“ವಿಶ್ಲೇಷಣೆ ಮಾಡ್ಬೇಕಲ್ಲವಾ ಸಾರ್.”
“ಈಗ ಮಾಡಿ ಏನು ಪ್ರಯೋಜನ.”
“ಮುಂದೆ ರಾಜಕಾರಣ ಮಾಡೋರಿಗೆ ಒಂದು ಅನುಭವ ಆಗುತ್ತೆ ಸಾರ್.”
“ಆ….”
“ಅಷ್ಟೊಂದು ಹಟದ ಅಗತ್ಯ ಇರಲಿಲ್ಲ, ಆ ಮುಸ್ಲಿಮರು ಏನು ಕೇಳ್ತಾರೆ ಅದನ್ನ ಮಾತ್ರ ಕೊಡಬೇಕು. ಅದು ಬುಟ್ಟು ಏನೇನೋ ಕೊಡಕೋದ್ರೆ ಅದವುರಿಗೂ ಬೇಕಿರಲಿಲ್ಲ. ಬೇರೆ ಜನಗಳೂ ಅದನ್ನ ಸಯಿಸದಿಲ್ಲ ಸಾರ್.”
“ಸಯಿಸದಿಲ್ಲ ಅಂತ ನಾವು ಮಾಡದನ್ನ ಬಿಡಬಾರ್ದು, ಅಧಿಕಾರ ಸಿಕ್ಕಿದಾಗ ದುರ್ಬಲರಿಗೆ ಸಹಾಯ ಮಾಡ್ಳೇಬೇಕು.”
“ನಿಮ್ಮ ಸಹಾಯ ಸಾಲಮನ್ನಾ, ಬಿಟ್ಟಿ ಅನ್ನ, ಹಲವಾರು ಭಾಗ್ಯ, ಸರಕಾರಿ ಕವರ್iಜಾರಿಗಳ ಸಂಬಳ ಏರಿಸಿ, ದಲಿತ್ರ ಸಾಲ ಮನ್ನ ಮಾಡಿದ್ರೂ ಜನ ಕೈ ಹಿಡಿಲಿಲ್ಲವಲ್ಲ. ಇದರ ಕಾರಣ ಗೊತ್ತಾಯ್ತಾ ಸಾರ್.”
“ಇಲ್ಲ ಹೇಳಿ.”
“ಜನ ಜಾತ್ಯಂದ್ರಾದಾಗ ಏನು ಕೊಟ್ರೂ ಜಾತಿ ಮಕ್ಕಳಾಗೇ ವರ್ತುಸ್ತಾರೆ, ಜೊತೆಗೆ ನೀವು ತಿರಗ ನಾನೇ ಮುಖ್ಯಮಂತ್ರಿ ಅಂದ್ರೆ ಅದು ರಿವರ್ಸಾಯ್ತು. ದಲಿತ ಮುಖ್ಯಮಂತ್ರಿ ಬೇಡಿಕೆ ಇಟ್ಟಿದ್ದ ಜನ ಹಗಲುರಾತ್ರಿ ಓಡಾಡಿ ಬಿಜೆಪಿಗೆ ಓಟು ಮಾಡಿಸಿದ್ರು ಗೊತ್ತಾ.”
“ಹೋಗ್ಲಿಬುಡಿ.”
“ಬುಡದಲ್ಲ ಸಾರ್, ಅಧಿಕಾರದ ಅಂತ್ಯದಲ್ಲಿ ಯಲ್ಲಾರಿಗೂ ಅಹಂಕಾರ ಬತ್ತದೆ, ನಿಮಿಗೊಂಚೂರು ಜಾಸ್ತಿನೆ ಬಂತು.”
“ನಾನೇನು ಮಾಡಿದೆ.”
“ನಿಮ್ಮನ್ನ ಕಾಂಗ್ರೆಸಿಗೆ ಕರೆತಂದ ವಿಶ್ವನಾಥನ್ನ ಕಾಸಿಗಿಂತ ಕಡೆಮಾಡಿದ್ರಿ, ನೀವು ಗೆಲ್ಲಲಿ ಅಂತ ಓಡಾಡಿದ ರೇವಣಸಿದ್ದಯ್ಯನ್ನ ಐದೊರ್ಸ ಎಲ್ಯವುರೆ ಅಂತ ನೋಡಲಿಲ್ಲ, ಚಾಮುಂಡೇಶ್ವರಿಗಾರ ಟಿಕೆಟ್ ಕೊಡಬವುದಿತ್ತು. ಅಂಗೇ ನೋಡಿದ್ರೆ ಕಾಂಗ್ರೆಸ್ ಸೋಲಿನ ದೊಡ್ಡಪಾಲು ನಿಮ್ಮದೆ ಸಾರ್.”
“ಸೋತಾಯ್ತಲ್ಲ ಬುಡಿ.”
“ಇನ್ನೋಂದು ವಿಷಯ ಸಾರ್.”
“ಏನು.”
“ದೇವೇಗೌಡ್ರು ವಿಶ್ವನಾಥನ್ನ ಜೆಡಿಎಸ್ ಪಾರ್ಟಿ ಪ್ರೆಸಿಡೆಂಟ್ ಮಾಡ್ಯವುರೇ.”
“ಮಾಡ್ಲಿ ಬುಡ್ರಿ.”
“ಅದರಿಂದ ನಿಮಗೇನು ಬೇಜಾರಾಗಿಲ್ವೇ.”
“ಬೇಜಾರ್ಯಾಕೆ, ನಾನು ಜೆಡಿಎಸ್ ಅಧ್ಯಕ್ಷ ಆಗಿದ್ದೆ, ನನ್ನ ಹುಟ್ಟುಹಬ್ಬದ ದಿನವೇ ದೇವೇಗೌಡ ನನ್ನನ್ನ ತಗದು ಆ ತಿಪ್ಪಣ್ಣನ್ನ ಪ್ರೆಸಿಡೆಂಟ್ ಮಾಡಿದ್ರು, ಅವುರು ಪಾರ್ಟಿ ಬುಟ್ಟು ಬಿಜೆಪಿಗೋದ್ರು, ಅಂಗೆ ಒಂದಿನ ಈ ಅಪ್ಪ ಮಕ್ಕಳಿಗೆ ಬೇಜಾರಾದ್ರೆ ವಿಶ್ವನಾಥನ್ನ ತೆಗೆದಾಕ್ತರೆ. ಆದ್ರಿಂದ ವಿಶ್ವನಾಥ ನನ್ನ ಎದುರಾಳಿನೂ ಅಲ್ಲ, ಸ್ಪರ್ಧಿನೂ ಅಲ್ಲ.”
“ಕುರುಬ್ರು ವಿಶ್ವನಾಥನ ಹಿಂದೋದ್ರೆ.”
“ಹೋಗ್ಲಿ ಬುಡ್ರಿ ನಂಗೇನು.”
“ಥೂತ್ತೇರಿ.”

-ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...