Homeರಾಜಕೀಯಕುರುಬ್ರು ವಿಶ್ವನಾಥನ ಹಿಂದೋದ್ರೆ?

ಕುರುಬ್ರು ವಿಶ್ವನಾಥನ ಹಿಂದೋದ್ರೆ?

- Advertisement -
- Advertisement -

ಕಾಲ ಎಂತೆಂತಹ ವಿಚಿತ್ರ ಸನ್ನಿವೇಶಗಳನ್ನು. ಸೃಷ್ಟಿ ಮಾಡುತ್ತದಲ್ಲವೆ! ಕಳೆದ ಚುನಾವಣೆಯಲ್ಲಿ ಅವರಪ್ಪನಾಣೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗೊಲ್ಲ ಎಂದು ಹೋದಲ್ಲಿಬಂದಲ್ಲಿ ಭಾಷಣ ಬಿಗಿದಿದ್ದ ಸಿದ್ದರಾಮಯ್ಯ, ಚುನಾವಣಾ ಫಲಿತಾಂಶ ಇನ್ನ ಬಾಕಿ ಇರುವಾಗಲೇ ಕುಮಾರಸ್ವಾಮಿ ಮನೆಯ ಕರೆಗಂಟೆ ಒತ್ತಿ ಕೈಕಟ್ಟಿ ನಿಂತಿದ್ದಾರಲ್ಲಾ. ಆಗ ಸಿದ್ದು ನಮ್ಮಪ್ಪನಾಣೆ ನೀನೇ ಮುಖ್ಯಮಂತ್ರಿ ಎನ್ನುವುದೊಂದು ಬಾಕಿ ಇತ್ತು. ಸಿದ್ದು ಸ್ಥಿತಿ ನೋಡಿ ನಗು ಅದುಮಿಕೊಂಡ ದೇವೇಗೌಡರು ಮಗ ಮುಖ್ಯಮಂತ್ರಿ ಯಾದರೂ ಬಿಡದೆ, ಸಿದ್ದು ಬಗೆಗಿನ ಸೇಡನ್ನು ಮುಂದುವರಿಸುವ ಸಲುವಾಗಿ, ವಿಶ್ವನಾಥನನ್ನೇ ಪಾರ್ಟಿ ಪ್ರೆಸಿಡೆಂಟು ಮಾಡಿಬಿಟ್ಟಿದ್ದಾರಲ್ಲಾ, ಈ ಬಗ್ಗೆ ಸಿದ್ದುವನ್ನು ಕೇಳಬೇಕೆಂದು ಫೋನ್ ಮಾಡಿದರೆ ರಿಂಗಾಯ್ತು.
ರಿಂಗ್‍ಠೋನ್ “ಕರಿಯ ಕಂಬಳಿ ಗದ್ದುಗೆ ಮಾಡಿ ವೀರದೊಳ್ಳತಂದಿರಿಸಿದರೊ, ವೀರದೊಳತಂದಿರಿಸಿದರೊ. ವಿಶ್ವನಾಥನ ಭಜಿಸಿದರೊ….. ಹಲೊ.
“ಯಾರು.”
“ನಾನು ಸಾರ್ ಯಾಹೂ.”
“ಏನ್ರಿ ಯಾಹೂ.”
“ಏನ್ ಸಾರ್ ಮುಖ್ಯಮಂತ್ರಿಯಾದಾಗ ನೋಡಕ್ಕೂ ಸಿಗಲಿಲ್ಲ, ಈಗ್ಲು ಸಿಗದಿ¯ವಲ್ಲ ಸಾರ್ ಅಷ್ಟು ಬಿಜಿನ.”
“ಅಂಗೇನಿಲ್ಲ ಹೇಳಿ.”
“ನಿಮ್ಮ ಸರಕಾರ ಸೋತಿದ್ದರ ಬಗ್ಗೆ ನೀವೇನೇಳ್ತಿರಿ ಸಾರ್.”
“ಜನ ಮೋಸ ಮಾಡಿದ್ರು.”
“ನಿಮ್ಮ ಭಾಗದ ತಪ್ಪುಗಳೇನಾದ್ರು ಇದ್ದವೆ?’’
“ಆಂಂ.’’
“ನೀವೇನಾರ ತೆಪ್ಪು ಮಾಡಿದ್ರ ಸಾರ್.”
“ನಾನೇನು ಮಾಡಿದೇ.”
“ ಮೊದಲನೆದಾಗಿ ನಿಮ್ಮ ಪ್ರತಿ ಭಾಷಣದಲ್ಲಿ ಎಡೂರಪ್ಪನ ಜೈಲಿನ ವಿಷಯ ಪ್ರಸ್ತಾಪ ಮಾಡಿದ್ರಿ? ಜನ ಚಪ್ಪಾಳೆ ತಟ್ಟಿದ್ರು, ಆದ್ರೆ ಲಿಂಗಾಯಿತ್ರು ಎಡೂರಪ್ಪನ ಹಿಂದೆ ಒಗ್ಗಟ್ಟಾದ್ರು. ಆಮೇಲೆ ಕುಮಾರಸ್ವಾಮಿಯ ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ್ಲ ಅಂದ್ರಿ. ಅದ್ಯಂಗಾಗಲ್ಲ ನೋಡನ ಅಂತ ಒಕ್ಕಲಿಗರೆಲ್ಲ ಒಂದಾದ್ರು. ಅಂತೂ ನಿಮ್ಮ ಭಾಷಣನೆ ಜಾತಿಜನ ಒಟ್ಟು ಮಾಡ್ತು. ಇದೇ ಕಾರಣ ಸೋಲಿಗೆ ಅಂತ ನಮ್ಮ ಲೆಕ್ಕಾಚಾರ.”
“ಈಗಾಯ್ತಲ್ಲ ಬುಡ್ರಿ ಆ ಸುದ್ದಿ ತಗಂಡೇನು.”
“ವಿಶ್ಲೇಷಣೆ ಮಾಡ್ಬೇಕಲ್ಲವಾ ಸಾರ್.”
“ಈಗ ಮಾಡಿ ಏನು ಪ್ರಯೋಜನ.”
“ಮುಂದೆ ರಾಜಕಾರಣ ಮಾಡೋರಿಗೆ ಒಂದು ಅನುಭವ ಆಗುತ್ತೆ ಸಾರ್.”
“ಆ….”
“ಅಷ್ಟೊಂದು ಹಟದ ಅಗತ್ಯ ಇರಲಿಲ್ಲ, ಆ ಮುಸ್ಲಿಮರು ಏನು ಕೇಳ್ತಾರೆ ಅದನ್ನ ಮಾತ್ರ ಕೊಡಬೇಕು. ಅದು ಬುಟ್ಟು ಏನೇನೋ ಕೊಡಕೋದ್ರೆ ಅದವುರಿಗೂ ಬೇಕಿರಲಿಲ್ಲ. ಬೇರೆ ಜನಗಳೂ ಅದನ್ನ ಸಯಿಸದಿಲ್ಲ ಸಾರ್.”
“ಸಯಿಸದಿಲ್ಲ ಅಂತ ನಾವು ಮಾಡದನ್ನ ಬಿಡಬಾರ್ದು, ಅಧಿಕಾರ ಸಿಕ್ಕಿದಾಗ ದುರ್ಬಲರಿಗೆ ಸಹಾಯ ಮಾಡ್ಳೇಬೇಕು.”
“ನಿಮ್ಮ ಸಹಾಯ ಸಾಲಮನ್ನಾ, ಬಿಟ್ಟಿ ಅನ್ನ, ಹಲವಾರು ಭಾಗ್ಯ, ಸರಕಾರಿ ಕವರ್iಜಾರಿಗಳ ಸಂಬಳ ಏರಿಸಿ, ದಲಿತ್ರ ಸಾಲ ಮನ್ನ ಮಾಡಿದ್ರೂ ಜನ ಕೈ ಹಿಡಿಲಿಲ್ಲವಲ್ಲ. ಇದರ ಕಾರಣ ಗೊತ್ತಾಯ್ತಾ ಸಾರ್.”
“ಇಲ್ಲ ಹೇಳಿ.”
“ಜನ ಜಾತ್ಯಂದ್ರಾದಾಗ ಏನು ಕೊಟ್ರೂ ಜಾತಿ ಮಕ್ಕಳಾಗೇ ವರ್ತುಸ್ತಾರೆ, ಜೊತೆಗೆ ನೀವು ತಿರಗ ನಾನೇ ಮುಖ್ಯಮಂತ್ರಿ ಅಂದ್ರೆ ಅದು ರಿವರ್ಸಾಯ್ತು. ದಲಿತ ಮುಖ್ಯಮಂತ್ರಿ ಬೇಡಿಕೆ ಇಟ್ಟಿದ್ದ ಜನ ಹಗಲುರಾತ್ರಿ ಓಡಾಡಿ ಬಿಜೆಪಿಗೆ ಓಟು ಮಾಡಿಸಿದ್ರು ಗೊತ್ತಾ.”
“ಹೋಗ್ಲಿಬುಡಿ.”
“ಬುಡದಲ್ಲ ಸಾರ್, ಅಧಿಕಾರದ ಅಂತ್ಯದಲ್ಲಿ ಯಲ್ಲಾರಿಗೂ ಅಹಂಕಾರ ಬತ್ತದೆ, ನಿಮಿಗೊಂಚೂರು ಜಾಸ್ತಿನೆ ಬಂತು.”
“ನಾನೇನು ಮಾಡಿದೆ.”
“ನಿಮ್ಮನ್ನ ಕಾಂಗ್ರೆಸಿಗೆ ಕರೆತಂದ ವಿಶ್ವನಾಥನ್ನ ಕಾಸಿಗಿಂತ ಕಡೆಮಾಡಿದ್ರಿ, ನೀವು ಗೆಲ್ಲಲಿ ಅಂತ ಓಡಾಡಿದ ರೇವಣಸಿದ್ದಯ್ಯನ್ನ ಐದೊರ್ಸ ಎಲ್ಯವುರೆ ಅಂತ ನೋಡಲಿಲ್ಲ, ಚಾಮುಂಡೇಶ್ವರಿಗಾರ ಟಿಕೆಟ್ ಕೊಡಬವುದಿತ್ತು. ಅಂಗೇ ನೋಡಿದ್ರೆ ಕಾಂಗ್ರೆಸ್ ಸೋಲಿನ ದೊಡ್ಡಪಾಲು ನಿಮ್ಮದೆ ಸಾರ್.”
“ಸೋತಾಯ್ತಲ್ಲ ಬುಡಿ.”
“ಇನ್ನೋಂದು ವಿಷಯ ಸಾರ್.”
“ಏನು.”
“ದೇವೇಗೌಡ್ರು ವಿಶ್ವನಾಥನ್ನ ಜೆಡಿಎಸ್ ಪಾರ್ಟಿ ಪ್ರೆಸಿಡೆಂಟ್ ಮಾಡ್ಯವುರೇ.”
“ಮಾಡ್ಲಿ ಬುಡ್ರಿ.”
“ಅದರಿಂದ ನಿಮಗೇನು ಬೇಜಾರಾಗಿಲ್ವೇ.”
“ಬೇಜಾರ್ಯಾಕೆ, ನಾನು ಜೆಡಿಎಸ್ ಅಧ್ಯಕ್ಷ ಆಗಿದ್ದೆ, ನನ್ನ ಹುಟ್ಟುಹಬ್ಬದ ದಿನವೇ ದೇವೇಗೌಡ ನನ್ನನ್ನ ತಗದು ಆ ತಿಪ್ಪಣ್ಣನ್ನ ಪ್ರೆಸಿಡೆಂಟ್ ಮಾಡಿದ್ರು, ಅವುರು ಪಾರ್ಟಿ ಬುಟ್ಟು ಬಿಜೆಪಿಗೋದ್ರು, ಅಂಗೆ ಒಂದಿನ ಈ ಅಪ್ಪ ಮಕ್ಕಳಿಗೆ ಬೇಜಾರಾದ್ರೆ ವಿಶ್ವನಾಥನ್ನ ತೆಗೆದಾಕ್ತರೆ. ಆದ್ರಿಂದ ವಿಶ್ವನಾಥ ನನ್ನ ಎದುರಾಳಿನೂ ಅಲ್ಲ, ಸ್ಪರ್ಧಿನೂ ಅಲ್ಲ.”
“ಕುರುಬ್ರು ವಿಶ್ವನಾಥನ ಹಿಂದೋದ್ರೆ.”
“ಹೋಗ್ಲಿ ಬುಡ್ರಿ ನಂಗೇನು.”
“ಥೂತ್ತೇರಿ.”

-ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...