Homeಮುಖಪುಟಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

ಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

- Advertisement -
- Advertisement -

ಅನುವಾದ – ದಿನೇಶ್ ಕೆ.ಎನ್ |

ವಾಸ್ತವ ಅಂಕಿ ಅಂಶ ಕೊಡದೆ, ದತ್ತಾಂಶ ತಿದ್ದುಪಡಿ ಮಾಡಲು ಮುಂದಾದ ಮೋದಿ ಸರ್ಕಾರ

ಅಂಕಿ ಅಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಸರ್ಕಾರವು ರಾಜಕೀಯ ಹಸ್ತಕ್ಷೇಪ ಮಾಡುತ್ತಿರುವುದನ್ನು ವಿರೋಧಿಸಿ, ಅವುಗಳ ಸಾಂಸ್ಥಿಕ ಸ್ವಾತಂತ್ರ್ಯವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಜಗತ್ತಿನ 108 ಅರ್ಥಶಾಸ್ತ್ರಜ್ಞರು, ಸಾಮಾಜಿಕ ವಿಜ್ಞಾನಿಗಳು ದನಿ ಎತ್ತಿದ್ದಾರೆ. ಜಿಡಿಪಿ ದರ ಪರಿಕ್ಷರಣೆ ಮತ್ತು ಎನ್.ಎಸ್.ಎಸ್.ಓ ಡಾಟಾ ತಿದ್ದುಪಡಿ ವಿವಾದದ ಹಿನ್ನೆಲೆಯಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವು ಆಯಾಮಗಲ್ಲಿ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದಲ್ಲಿ ಸಮಗ್ರ, ನಂಬಿಕಾರ್ಹವಾದ ಮಾಹಿತಿ ಒದಗಿಸುವ ಕಾರಣಕ್ಕಾಗಿಯೇ ಭಾರತೀಯ ಸಾಂಖ್ಯಿಕ ಸಂಸ್ಥೆಗಳು ದೊಡ್ಡಮಟ್ಟದ ಖ್ಯಾತಿಯನ್ನು ಪಡೆದಿದ್ದವು. ಈ ಹಿಂದೆ ಕೆಲವೊಮ್ಮೆ ಅವರ ಅಂದಾಜುಗಳ ಗುಣಮಟ್ಟದಲ್ಲಿ ಟೀಕೆಗಳು ಬಂದಿದ್ದರೂ, ನಿರ್ಣಯ ತಗೆದುಕೊಳ್ಳುವಾಗ ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿರಲಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ತಮಗೆ ಅನಾನುಕೂಲವಾಗಲಿದೆ ಎಂಬ ಕಾರಣಕ್ಕಾಗಿಯೇ ಡಾಟಾವನ್ನು ತಡೆಯಿಡಿಯುವ/ನಿಗ್ರಹಿಸುವ ಪ್ರವೃತ್ತಿಯನ್ನು ವಿರೋಧಿಸಬೇಕಿದೆ. ಜೊತೆಗೆ ಸಮಗ್ರತೆಯಿಂದ ಎಲ್ಲಾ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವ ರೀತಿಯಲ್ಲಿ ಸಾರ್ವಜನಿಕ ಸಾಂಖ್ಯಿಕ ಸಂಸ್ಥೆಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಸರ್ಕಾರವನ್ನು ಒತ್ತಾಯಿಸಲು ವೃತ್ತಿಪರ ಅರ್ಥಶಾಸ್ತ್ರಜ್ಞರು, ಸಂಖ್ಯಾತಜ್ಞರು ಮತ್ತು ಸ್ವತಂತ್ರ ಸಂಶೋಧಕರು ಒಟ್ಟಾಗಿ ದನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ.

2016-17 ರ ಅನಾಣ್ಯೀಕರಗೊಂಡ ವರ್ಷದಲ್ಲಿ ಸಿಎಸ್‍ಓ( ಕೇಂದ್ರೀಯ ಅಂಕಿಅಂಶಗಳ ಕಛೇರಿ) ಜಿಡಿಪಿ ಬೆಳವಣಿಗೆ ದರವನ್ನು 1.1% ರಷ್ಟು ಹೆಚ್ಚಳ ಮಾಡುವ ಮೂಲಕ 8.2% ರಷ್ಟು ಸಾಧಿಸಲಾಗಿದ್ದು ಈ ದಶಕದಲ್ಲೇ ಹೆಚ್ಚಿನಷ್ಟು ಬೆಳವಣಿಗೆ ಆಗಿದೆ ಎಂದು ಹೇಳಿತ್ತು. ಆದರೆ ಜಗತ್ತಿನ ಹಲವು ಅರ್ಥಶಾಸ್ತ್ರಜ್ಞರು ಇದಕ್ಕೆ ದಾಖಲೆ ಸಮೇತ ಭಿನ್ನಮತ ವ್ಯಕ್ತಪಡಿಸಿದ್ದರು. ಅದೇ ರೀತಿಯಲ್ಲಿ ಎನ್‍ಎಸ್‍ಎಸ್‍ಓ ನಡೆಸುವ ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯನ್ನು ನಿಷ್ಕ್ರಿಯಗೊಳಿಸಿದ್ದಲ್ಲದೇ 2017-18ರ ಸಾಲಿನ ವರದಿಯನ್ನು ಸಹ ಸರ್ಕಾರ ತಡೆಹಿಡಿದಿದೆ. ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಂಕಿಅಂಶಗಳ ಆಯೋಗದ ಅಧ್ಯಕ್ಷರಾಗಿದ್ದ ಪಿ.ಸಿ ಮೋಹನನ್ ಮತ್ತು ಜೆ.ವಿ ಮೀನಾಕ್ಷಿರವರು ರಾಜೀನಾಮೆ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು.

ದೇಶದ ಒಳಗಿನ ವಿಷಯಗಳ ವಿಷಯದಲ್ಲಿ ತಲೆಹಾಕಿ ಮೋದಿ ಸ್ವಾಯುತ್ತತೆಯನ್ನು, ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಲ್ಲದೇ ಈಗ ಅಂಕಿ ಅಂಶಗಳ ವಿಚಾರಕ್ಕೂ ಕೈ ಹಾಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜಾಕಲು ಮುಂದಾಗಿದ್ದಾರೆ. ಈಗ ಭಾರತದ ಅಪಾಯಕಾರಿ ಬೆಳವಣಿಗೆಗಳ ವಿರುದ್ಧದ ಜಂಟಿ ಹೇಳಿಕೆ ಹೊರಡಿಸಿರುವ ಅರ್ಥಶಾಸ್ತ್ರಜ್ಞರಲ್ಲಿ ಐಐಎಂ-ಎ ನ ರಾಕೇಶ್ ಬಸಂತ್, ಮೆಸಾಚುಯೇಟ್ಸ್ ವಿ.ವಿಯ ಜೇಮ್ಸ್ ಬಾಯ್ಸೆ, ಹಾರ್ವಡ್ ವಿ.ವಿಯ ಎಮಿಲಿ ಬ್ರೆಜ, ದೆಹಲಿ ವಿ.ವಿ ಸತೀಶ್ ದೇಶಪಾಂಡೆ, ಯುನಿವರ್ಸಿಟ್ ಆಫ್ ಬ್ರಿಟಿಷ್ ಕೊಲಂಬಿಯಾದ ಪೇಟ್ರೀಕ್ ಫ್ರಾನ್ಸಿಸ್, ಮುಂಬೈನ ಟಿಸ್ಸ್‍ನ ಆರ್ ರಾಮ್‍ಕುಮಾರ್, ಐಐಎಂ-ಬಿಯ ಹೇಮಾ ಸ್ವಾಮಿನಾಥನ್ ಮತ್ತು ಜೆ.ಎನ್.ಯುನ ರೋಹಿತ್ ಅಜಾದ್‍ರವರು ಸಹಿ ಹಾಕಿದ ಪ್ರಮುಖರಾಗಿದ್ದಾರೆ.

ಸುಪ್ರೀಂ ಕೋರ್ಟ್‍ನ ಜಡ್ಜ್‍ಗಳು ಬಂದು ದೇಶ ಅಪಾಯದಲ್ಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದರು. ಸಿಬಿಐ ಅಧಿಕಾರಿಗಳು ರಾಜಿನಾಮೇ ಕೊಟ್ಟರು. ಆರ್‍ಬಿಐ ತನ್ನ ಅನುಮತಿ ನೀಡದೆಯೂ ಸಹ ಮೋದಿ ನೋಟು ರದ್ಧತಿ ಘೋಷಿಸಿದರು. ಈಗ ಅರ್ಥಶಾಸ್ತ್ರಜ್ಞರು ಮೋದಿ ಆಡಳಿತದಲ್ಲಿ ಎಲ್ಲವೂ ಸರಿಇಲ್ಲ ಎನ್ನುತ್ತಿದ್ದಾರೆ ಮಾತ್ರವಲ್ಲ ಇದರ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡುತ್ತಿದ್ದಾರೆ ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ದೇಶದ ಪರಿಸ್ಥಿತಿಯನ್ನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...