Homeಮುಖಪುಟಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

ಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

- Advertisement -
- Advertisement -

ಅನುವಾದ – ದಿನೇಶ್ ಕೆ.ಎನ್ |

ವಾಸ್ತವ ಅಂಕಿ ಅಂಶ ಕೊಡದೆ, ದತ್ತಾಂಶ ತಿದ್ದುಪಡಿ ಮಾಡಲು ಮುಂದಾದ ಮೋದಿ ಸರ್ಕಾರ

ಅಂಕಿ ಅಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಸರ್ಕಾರವು ರಾಜಕೀಯ ಹಸ್ತಕ್ಷೇಪ ಮಾಡುತ್ತಿರುವುದನ್ನು ವಿರೋಧಿಸಿ, ಅವುಗಳ ಸಾಂಸ್ಥಿಕ ಸ್ವಾತಂತ್ರ್ಯವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಜಗತ್ತಿನ 108 ಅರ್ಥಶಾಸ್ತ್ರಜ್ಞರು, ಸಾಮಾಜಿಕ ವಿಜ್ಞಾನಿಗಳು ದನಿ ಎತ್ತಿದ್ದಾರೆ. ಜಿಡಿಪಿ ದರ ಪರಿಕ್ಷರಣೆ ಮತ್ತು ಎನ್.ಎಸ್.ಎಸ್.ಓ ಡಾಟಾ ತಿದ್ದುಪಡಿ ವಿವಾದದ ಹಿನ್ನೆಲೆಯಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವು ಆಯಾಮಗಲ್ಲಿ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದಲ್ಲಿ ಸಮಗ್ರ, ನಂಬಿಕಾರ್ಹವಾದ ಮಾಹಿತಿ ಒದಗಿಸುವ ಕಾರಣಕ್ಕಾಗಿಯೇ ಭಾರತೀಯ ಸಾಂಖ್ಯಿಕ ಸಂಸ್ಥೆಗಳು ದೊಡ್ಡಮಟ್ಟದ ಖ್ಯಾತಿಯನ್ನು ಪಡೆದಿದ್ದವು. ಈ ಹಿಂದೆ ಕೆಲವೊಮ್ಮೆ ಅವರ ಅಂದಾಜುಗಳ ಗುಣಮಟ್ಟದಲ್ಲಿ ಟೀಕೆಗಳು ಬಂದಿದ್ದರೂ, ನಿರ್ಣಯ ತಗೆದುಕೊಳ್ಳುವಾಗ ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿರಲಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ತಮಗೆ ಅನಾನುಕೂಲವಾಗಲಿದೆ ಎಂಬ ಕಾರಣಕ್ಕಾಗಿಯೇ ಡಾಟಾವನ್ನು ತಡೆಯಿಡಿಯುವ/ನಿಗ್ರಹಿಸುವ ಪ್ರವೃತ್ತಿಯನ್ನು ವಿರೋಧಿಸಬೇಕಿದೆ. ಜೊತೆಗೆ ಸಮಗ್ರತೆಯಿಂದ ಎಲ್ಲಾ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವ ರೀತಿಯಲ್ಲಿ ಸಾರ್ವಜನಿಕ ಸಾಂಖ್ಯಿಕ ಸಂಸ್ಥೆಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಸರ್ಕಾರವನ್ನು ಒತ್ತಾಯಿಸಲು ವೃತ್ತಿಪರ ಅರ್ಥಶಾಸ್ತ್ರಜ್ಞರು, ಸಂಖ್ಯಾತಜ್ಞರು ಮತ್ತು ಸ್ವತಂತ್ರ ಸಂಶೋಧಕರು ಒಟ್ಟಾಗಿ ದನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ.

2016-17 ರ ಅನಾಣ್ಯೀಕರಗೊಂಡ ವರ್ಷದಲ್ಲಿ ಸಿಎಸ್‍ಓ( ಕೇಂದ್ರೀಯ ಅಂಕಿಅಂಶಗಳ ಕಛೇರಿ) ಜಿಡಿಪಿ ಬೆಳವಣಿಗೆ ದರವನ್ನು 1.1% ರಷ್ಟು ಹೆಚ್ಚಳ ಮಾಡುವ ಮೂಲಕ 8.2% ರಷ್ಟು ಸಾಧಿಸಲಾಗಿದ್ದು ಈ ದಶಕದಲ್ಲೇ ಹೆಚ್ಚಿನಷ್ಟು ಬೆಳವಣಿಗೆ ಆಗಿದೆ ಎಂದು ಹೇಳಿತ್ತು. ಆದರೆ ಜಗತ್ತಿನ ಹಲವು ಅರ್ಥಶಾಸ್ತ್ರಜ್ಞರು ಇದಕ್ಕೆ ದಾಖಲೆ ಸಮೇತ ಭಿನ್ನಮತ ವ್ಯಕ್ತಪಡಿಸಿದ್ದರು. ಅದೇ ರೀತಿಯಲ್ಲಿ ಎನ್‍ಎಸ್‍ಎಸ್‍ಓ ನಡೆಸುವ ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯನ್ನು ನಿಷ್ಕ್ರಿಯಗೊಳಿಸಿದ್ದಲ್ಲದೇ 2017-18ರ ಸಾಲಿನ ವರದಿಯನ್ನು ಸಹ ಸರ್ಕಾರ ತಡೆಹಿಡಿದಿದೆ. ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಂಕಿಅಂಶಗಳ ಆಯೋಗದ ಅಧ್ಯಕ್ಷರಾಗಿದ್ದ ಪಿ.ಸಿ ಮೋಹನನ್ ಮತ್ತು ಜೆ.ವಿ ಮೀನಾಕ್ಷಿರವರು ರಾಜೀನಾಮೆ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು.

ದೇಶದ ಒಳಗಿನ ವಿಷಯಗಳ ವಿಷಯದಲ್ಲಿ ತಲೆಹಾಕಿ ಮೋದಿ ಸ್ವಾಯುತ್ತತೆಯನ್ನು, ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಲ್ಲದೇ ಈಗ ಅಂಕಿ ಅಂಶಗಳ ವಿಚಾರಕ್ಕೂ ಕೈ ಹಾಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜಾಕಲು ಮುಂದಾಗಿದ್ದಾರೆ. ಈಗ ಭಾರತದ ಅಪಾಯಕಾರಿ ಬೆಳವಣಿಗೆಗಳ ವಿರುದ್ಧದ ಜಂಟಿ ಹೇಳಿಕೆ ಹೊರಡಿಸಿರುವ ಅರ್ಥಶಾಸ್ತ್ರಜ್ಞರಲ್ಲಿ ಐಐಎಂ-ಎ ನ ರಾಕೇಶ್ ಬಸಂತ್, ಮೆಸಾಚುಯೇಟ್ಸ್ ವಿ.ವಿಯ ಜೇಮ್ಸ್ ಬಾಯ್ಸೆ, ಹಾರ್ವಡ್ ವಿ.ವಿಯ ಎಮಿಲಿ ಬ್ರೆಜ, ದೆಹಲಿ ವಿ.ವಿ ಸತೀಶ್ ದೇಶಪಾಂಡೆ, ಯುನಿವರ್ಸಿಟ್ ಆಫ್ ಬ್ರಿಟಿಷ್ ಕೊಲಂಬಿಯಾದ ಪೇಟ್ರೀಕ್ ಫ್ರಾನ್ಸಿಸ್, ಮುಂಬೈನ ಟಿಸ್ಸ್‍ನ ಆರ್ ರಾಮ್‍ಕುಮಾರ್, ಐಐಎಂ-ಬಿಯ ಹೇಮಾ ಸ್ವಾಮಿನಾಥನ್ ಮತ್ತು ಜೆ.ಎನ್.ಯುನ ರೋಹಿತ್ ಅಜಾದ್‍ರವರು ಸಹಿ ಹಾಕಿದ ಪ್ರಮುಖರಾಗಿದ್ದಾರೆ.

ಸುಪ್ರೀಂ ಕೋರ್ಟ್‍ನ ಜಡ್ಜ್‍ಗಳು ಬಂದು ದೇಶ ಅಪಾಯದಲ್ಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದರು. ಸಿಬಿಐ ಅಧಿಕಾರಿಗಳು ರಾಜಿನಾಮೇ ಕೊಟ್ಟರು. ಆರ್‍ಬಿಐ ತನ್ನ ಅನುಮತಿ ನೀಡದೆಯೂ ಸಹ ಮೋದಿ ನೋಟು ರದ್ಧತಿ ಘೋಷಿಸಿದರು. ಈಗ ಅರ್ಥಶಾಸ್ತ್ರಜ್ಞರು ಮೋದಿ ಆಡಳಿತದಲ್ಲಿ ಎಲ್ಲವೂ ಸರಿಇಲ್ಲ ಎನ್ನುತ್ತಿದ್ದಾರೆ ಮಾತ್ರವಲ್ಲ ಇದರ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡುತ್ತಿದ್ದಾರೆ ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ದೇಶದ ಪರಿಸ್ಥಿತಿಯನ್ನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...