Homeಮುಖಪುಟ`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?' : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?’ : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

- Advertisement -
- Advertisement -

ಅಯೋಧ್ಯೆ ತೀರ್ಪಿಗೆ ಸಂಬಂಧಪಟ್ಟಂತೆ ಹೈದ್ರಾಬಾದ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ ಪಕ್ಷದ ಸಂಸದ ಅಸೈದುದ್ದೀನ್ ಓವೈಸಿ “ಸುಪ್ರೀಂ ಕೋರ್ಟ್ ಸುಪ್ರೀಂ ಇರಬಹುದು. ಆದರೆ ಅದು ತಪ್ಪು ಮಾಡುವುದಿಲ್ಲ ಎಂದರ್ಥ ಅಲ್ಲವಲ್ಲ. ಈ ಮಾತನ್ನು ನಾನು ಹೇಳಿದ್ದಲ್ಲ. ಬಿಜೆಪಿ ಮತ್ತು ಸಂಘ ಪರಿವಾರಗಳು ಅಪಾರವಾಗಿ ಗೌರವಿಸುವ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಅವರು ಹೇಳಿದ್ದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಅಯೋಧ್ಯೆ ತೀರ್ಪು ನನಗೆ ಸಮಾಧಾನ ತಂದಿಲ್ಲ. ನಂಬಿಕೆಯ ಹೆಸರಲ್ಲಿ ವಾಸ್ತವಗಳ ಮೇಲೆ ಪ್ರತಿಷ್ಠಾಪಿಸಲ್ಪಟ್ಟ ತೀರ್ಪು ಇದು. 1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದವರಿಗೇ ಈಗ ಟ್ರಸ್ಟ್ ಮಾಡಿಕೊಂಡು ಮಂದಿರ ಕಟ್ಟಿ ಎಂಬ ಆದೇಶವನ್ನು ನ್ಯಾಯಾಲಯ ಕೊಟ್ಟಿದೆ. ಒಂದೊಮ್ಮೆ ಮಸೀದಿಯನ್ನು ಕೆಡವದೆ ಅದು ಸುಸ್ಥಿಯಲ್ಲೇ ಇದ್ದಿದ್ದರೆ ಆಗ ಏನು ತೀರ್ಪು ಕೊಡುತ್ತಿತ್ತು ನ್ಯಾಯಾಲಯ” ಎಂದವರು ಪ್ರಶ್ನಿಸಿದ್ದಾರೆ.

“ಮುಸ್ಲಿಂ ಲಾ ಬೋರ್ಡ್ ನ ಪ್ರತಿನಿಧಿಗಳು ಇಷ್ಟು ದಿನ ಸಮರ್ಥವಾಗಿ ನ್ಯಾಯಾಂಗ ಹೋರಾಟ ನಡೆಸಿದ್ದಾರೆ. ಹಿರಿಯ ನ್ಯಾಯವಾದಿಗಳಾದ ರಾಜೀವ್ ಧವನ್, ಜಫರ್ಯಾಬ್ ಜಿಲಾನಿ, ಮೀನಾಕ್ಷಿ ಅರೋರಾ ಮುಂತಾದವರ ಶ್ರಮವನ್ನು ನಾನು ಅಭಿನಂದಿಸುತ್ತೇನೆ. ಆದರೆ ನಮ್ಮ ಹೋರಾಟ ಇದ್ದದ್ದು ಜಾಗಕ್ಕಲ್ಲ. ಕಾನೂನುಬದ್ದ ಹಕ್ಕಿಗಾಗಿ. ಈಗ ನ್ಯಾಯಾಲಯ ಬೇರೆಡೆ ಮಸೀದಿ ನಿರ್ಮಿಸಲು ಐದು ಎಕರೆ ಜಮೀನು ಕೊಡಬೇಕೆಂದು ಹೇಳಿದೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಭಾರತೀಯ ಮುಸ್ಲಿಮರು ಬಡವರಿರಬಹುದು, ಹಲವು ಕಷ್ಟಗಳನ್ನು ಎದುರಿಸುತ್ತಿರಬಹುದು, ದೌರ್ಜನ್ಯಕ್ಕೂ ತುತ್ತಾಗಿರಬಹುದು. ಆದರೆ ಮಸೀದಿ ನಿರ್ಮಿಸಲಿ ಐದು ಎಕರೆ ಜಮೀನು ಕೊಳ್ಳಲಿಕ್ಕೆ ಆಗದಷ್ಟು ಪರಿಸ್ಥಿಯಲ್ಲಿಲ್ಲ. ಈಗಲೂ ನಾನು ಹೈದ್ರಾಬಾದ್ ಗಲ್ಲಿಯಲ್ಲಿ ಭಿಕ್ಷೆ ಎತ್ತುತ್ತಾ ಹೋದರೆ ಉತ್ತರ ಪ್ರದೇಶದಲ್ಲಿ ಐದು ಎಕರೆ ಜಮೀನು ಖರೀದಿಸುಷ್ಟು ಹಣ ಜಮೆಯಾಗುತ್ತೆ. ಆದರೆ ನಮ್ಮ ಹೋರಾಟವಿದ್ದುದ್ದು ಸಾಂವಿಧಾನಿಕ ಹಕ್ಕಿಗಾಗಿ. ನ್ಯಾಯಾಲಯ ಅದನ್ನು ಪರಿಗಣಿಸಿಲ್ಲ. ಹಾಗಾಗಿ ನನಗೆ ಈ ತೀರ್ಪು ಸಮಾಧಾನ ತಂದಿಲ್ಲ” ಎಂದಿದ್ದಾರೆ.

“ತೀರ್ಪು ಮರು ಪರಿಶೀಲನೆ ಅರ್ಜಿ ಸಲ್ಲಿಸುವುದು ಬಿಡುವುದು, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯರಿಗೆ ಬಿಟ್ಟ ತೀರ್ಮಾನ. ಆದರೆ ನನ್ನನ್ನು ಕೇಳುವುದಾದರೆ ಐದು ಎಕರೆ ಜಮೀನಿನ ಆಫರನ್ನು ನಾವು ತಿರಸ್ಕರಿಸಬೇಕು. ನಮಗೆ ಸಂವಿಧಾನದ ಮೇಲೆ ಈಗಲೂ ಅಪಾರ ಗೌರವವಿದೆ. ಆದರೆ ಸಮಸ್ತ ಭಾರತೀಯರು, ಹಿಂದೂಗಳು ಮತ್ತು ಮುಸ್ಲೀಮರು, ಒಂದು ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇವತ್ತು ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಅಧಿಕೃತತೆ ಪಡೆಯಲಿದೆ. ಈಗಾಗಲೇ ಹಲವು ಪ್ರಾರ್ಥನಾ ಸ್ಥಳಗಳನ್ನು ಧರ್ಮದ ಹೆಸರಲ್ಲಿ ಆಕ್ರಮಿಸಿಕೊಂಡು ಕೋಮುಸಂಘರ್ಷ ಸೃಷ್ಟಿಲು ಸಂಘಿಗಳು ಹುನ್ನಾರ ನಡೆಸಿದ್ದಾರೆ. ಈ ತೀರ್ಪಿನಿಂದ ಅವರಿಗೆ ಇನ್ನಷ್ಟು ಒತ್ತಾಸೆ ಸಿಕ್ಕಂತಾಗಿ ವಿಪರೀತಕ್ಕೆ ಹೋಗುತ್ತಾರೆ. ಆಗ ಅಲ್ಲಿನ ನ್ಯಾಯಾಲಯಗಳು ಈ ತೀರ್ಪನ್ನೆ ಆಧಾರವಾಗಿಟ್ಟುಕೊಂಡು ಆದೇಶ ನೀಡಬೇಕಾಗುತ್ತದೆ. ಇದು ಈ ದೇಶದ ಜಾತ್ಯತೀತ, ಸೌಹಾರ್ದತೆಯ ಪರಂಪರೆಗೆ ಪೂರಕವಾಗುವಂತದ್ದಲ್ಲ” ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...