Homeಮುಖಪುಟ`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?' : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?’ : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

- Advertisement -
- Advertisement -

ಅಯೋಧ್ಯೆ ತೀರ್ಪಿಗೆ ಸಂಬಂಧಪಟ್ಟಂತೆ ಹೈದ್ರಾಬಾದ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ ಪಕ್ಷದ ಸಂಸದ ಅಸೈದುದ್ದೀನ್ ಓವೈಸಿ “ಸುಪ್ರೀಂ ಕೋರ್ಟ್ ಸುಪ್ರೀಂ ಇರಬಹುದು. ಆದರೆ ಅದು ತಪ್ಪು ಮಾಡುವುದಿಲ್ಲ ಎಂದರ್ಥ ಅಲ್ಲವಲ್ಲ. ಈ ಮಾತನ್ನು ನಾನು ಹೇಳಿದ್ದಲ್ಲ. ಬಿಜೆಪಿ ಮತ್ತು ಸಂಘ ಪರಿವಾರಗಳು ಅಪಾರವಾಗಿ ಗೌರವಿಸುವ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಅವರು ಹೇಳಿದ್ದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಅಯೋಧ್ಯೆ ತೀರ್ಪು ನನಗೆ ಸಮಾಧಾನ ತಂದಿಲ್ಲ. ನಂಬಿಕೆಯ ಹೆಸರಲ್ಲಿ ವಾಸ್ತವಗಳ ಮೇಲೆ ಪ್ರತಿಷ್ಠಾಪಿಸಲ್ಪಟ್ಟ ತೀರ್ಪು ಇದು. 1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದವರಿಗೇ ಈಗ ಟ್ರಸ್ಟ್ ಮಾಡಿಕೊಂಡು ಮಂದಿರ ಕಟ್ಟಿ ಎಂಬ ಆದೇಶವನ್ನು ನ್ಯಾಯಾಲಯ ಕೊಟ್ಟಿದೆ. ಒಂದೊಮ್ಮೆ ಮಸೀದಿಯನ್ನು ಕೆಡವದೆ ಅದು ಸುಸ್ಥಿಯಲ್ಲೇ ಇದ್ದಿದ್ದರೆ ಆಗ ಏನು ತೀರ್ಪು ಕೊಡುತ್ತಿತ್ತು ನ್ಯಾಯಾಲಯ” ಎಂದವರು ಪ್ರಶ್ನಿಸಿದ್ದಾರೆ.

“ಮುಸ್ಲಿಂ ಲಾ ಬೋರ್ಡ್ ನ ಪ್ರತಿನಿಧಿಗಳು ಇಷ್ಟು ದಿನ ಸಮರ್ಥವಾಗಿ ನ್ಯಾಯಾಂಗ ಹೋರಾಟ ನಡೆಸಿದ್ದಾರೆ. ಹಿರಿಯ ನ್ಯಾಯವಾದಿಗಳಾದ ರಾಜೀವ್ ಧವನ್, ಜಫರ್ಯಾಬ್ ಜಿಲಾನಿ, ಮೀನಾಕ್ಷಿ ಅರೋರಾ ಮುಂತಾದವರ ಶ್ರಮವನ್ನು ನಾನು ಅಭಿನಂದಿಸುತ್ತೇನೆ. ಆದರೆ ನಮ್ಮ ಹೋರಾಟ ಇದ್ದದ್ದು ಜಾಗಕ್ಕಲ್ಲ. ಕಾನೂನುಬದ್ದ ಹಕ್ಕಿಗಾಗಿ. ಈಗ ನ್ಯಾಯಾಲಯ ಬೇರೆಡೆ ಮಸೀದಿ ನಿರ್ಮಿಸಲು ಐದು ಎಕರೆ ಜಮೀನು ಕೊಡಬೇಕೆಂದು ಹೇಳಿದೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಭಾರತೀಯ ಮುಸ್ಲಿಮರು ಬಡವರಿರಬಹುದು, ಹಲವು ಕಷ್ಟಗಳನ್ನು ಎದುರಿಸುತ್ತಿರಬಹುದು, ದೌರ್ಜನ್ಯಕ್ಕೂ ತುತ್ತಾಗಿರಬಹುದು. ಆದರೆ ಮಸೀದಿ ನಿರ್ಮಿಸಲಿ ಐದು ಎಕರೆ ಜಮೀನು ಕೊಳ್ಳಲಿಕ್ಕೆ ಆಗದಷ್ಟು ಪರಿಸ್ಥಿಯಲ್ಲಿಲ್ಲ. ಈಗಲೂ ನಾನು ಹೈದ್ರಾಬಾದ್ ಗಲ್ಲಿಯಲ್ಲಿ ಭಿಕ್ಷೆ ಎತ್ತುತ್ತಾ ಹೋದರೆ ಉತ್ತರ ಪ್ರದೇಶದಲ್ಲಿ ಐದು ಎಕರೆ ಜಮೀನು ಖರೀದಿಸುಷ್ಟು ಹಣ ಜಮೆಯಾಗುತ್ತೆ. ಆದರೆ ನಮ್ಮ ಹೋರಾಟವಿದ್ದುದ್ದು ಸಾಂವಿಧಾನಿಕ ಹಕ್ಕಿಗಾಗಿ. ನ್ಯಾಯಾಲಯ ಅದನ್ನು ಪರಿಗಣಿಸಿಲ್ಲ. ಹಾಗಾಗಿ ನನಗೆ ಈ ತೀರ್ಪು ಸಮಾಧಾನ ತಂದಿಲ್ಲ” ಎಂದಿದ್ದಾರೆ.

“ತೀರ್ಪು ಮರು ಪರಿಶೀಲನೆ ಅರ್ಜಿ ಸಲ್ಲಿಸುವುದು ಬಿಡುವುದು, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯರಿಗೆ ಬಿಟ್ಟ ತೀರ್ಮಾನ. ಆದರೆ ನನ್ನನ್ನು ಕೇಳುವುದಾದರೆ ಐದು ಎಕರೆ ಜಮೀನಿನ ಆಫರನ್ನು ನಾವು ತಿರಸ್ಕರಿಸಬೇಕು. ನಮಗೆ ಸಂವಿಧಾನದ ಮೇಲೆ ಈಗಲೂ ಅಪಾರ ಗೌರವವಿದೆ. ಆದರೆ ಸಮಸ್ತ ಭಾರತೀಯರು, ಹಿಂದೂಗಳು ಮತ್ತು ಮುಸ್ಲೀಮರು, ಒಂದು ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇವತ್ತು ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಅಧಿಕೃತತೆ ಪಡೆಯಲಿದೆ. ಈಗಾಗಲೇ ಹಲವು ಪ್ರಾರ್ಥನಾ ಸ್ಥಳಗಳನ್ನು ಧರ್ಮದ ಹೆಸರಲ್ಲಿ ಆಕ್ರಮಿಸಿಕೊಂಡು ಕೋಮುಸಂಘರ್ಷ ಸೃಷ್ಟಿಲು ಸಂಘಿಗಳು ಹುನ್ನಾರ ನಡೆಸಿದ್ದಾರೆ. ಈ ತೀರ್ಪಿನಿಂದ ಅವರಿಗೆ ಇನ್ನಷ್ಟು ಒತ್ತಾಸೆ ಸಿಕ್ಕಂತಾಗಿ ವಿಪರೀತಕ್ಕೆ ಹೋಗುತ್ತಾರೆ. ಆಗ ಅಲ್ಲಿನ ನ್ಯಾಯಾಲಯಗಳು ಈ ತೀರ್ಪನ್ನೆ ಆಧಾರವಾಗಿಟ್ಟುಕೊಂಡು ಆದೇಶ ನೀಡಬೇಕಾಗುತ್ತದೆ. ಇದು ಈ ದೇಶದ ಜಾತ್ಯತೀತ, ಸೌಹಾರ್ದತೆಯ ಪರಂಪರೆಗೆ ಪೂರಕವಾಗುವಂತದ್ದಲ್ಲ” ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...