Homeಮುಖಪುಟ`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?' : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

`ಸುಪ್ರೀಂ ಕೋರ್ಟ್ ತಪ್ಪು ಮಾಡಬಾರದು ಅಂತೇನಿಲ್ಲವಲ್ಲ?’ : ಅಯೋಧ್ಯೆ ತೀರ್ಪಿಗೆ ಓವೈಸಿ ಅತೃಪ್ತಿ

- Advertisement -
- Advertisement -

ಅಯೋಧ್ಯೆ ತೀರ್ಪಿಗೆ ಸಂಬಂಧಪಟ್ಟಂತೆ ಹೈದ್ರಾಬಾದ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ ಪಕ್ಷದ ಸಂಸದ ಅಸೈದುದ್ದೀನ್ ಓವೈಸಿ “ಸುಪ್ರೀಂ ಕೋರ್ಟ್ ಸುಪ್ರೀಂ ಇರಬಹುದು. ಆದರೆ ಅದು ತಪ್ಪು ಮಾಡುವುದಿಲ್ಲ ಎಂದರ್ಥ ಅಲ್ಲವಲ್ಲ. ಈ ಮಾತನ್ನು ನಾನು ಹೇಳಿದ್ದಲ್ಲ. ಬಿಜೆಪಿ ಮತ್ತು ಸಂಘ ಪರಿವಾರಗಳು ಅಪಾರವಾಗಿ ಗೌರವಿಸುವ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಅವರು ಹೇಳಿದ್ದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಅಯೋಧ್ಯೆ ತೀರ್ಪು ನನಗೆ ಸಮಾಧಾನ ತಂದಿಲ್ಲ. ನಂಬಿಕೆಯ ಹೆಸರಲ್ಲಿ ವಾಸ್ತವಗಳ ಮೇಲೆ ಪ್ರತಿಷ್ಠಾಪಿಸಲ್ಪಟ್ಟ ತೀರ್ಪು ಇದು. 1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದವರಿಗೇ ಈಗ ಟ್ರಸ್ಟ್ ಮಾಡಿಕೊಂಡು ಮಂದಿರ ಕಟ್ಟಿ ಎಂಬ ಆದೇಶವನ್ನು ನ್ಯಾಯಾಲಯ ಕೊಟ್ಟಿದೆ. ಒಂದೊಮ್ಮೆ ಮಸೀದಿಯನ್ನು ಕೆಡವದೆ ಅದು ಸುಸ್ಥಿಯಲ್ಲೇ ಇದ್ದಿದ್ದರೆ ಆಗ ಏನು ತೀರ್ಪು ಕೊಡುತ್ತಿತ್ತು ನ್ಯಾಯಾಲಯ” ಎಂದವರು ಪ್ರಶ್ನಿಸಿದ್ದಾರೆ.

“ಮುಸ್ಲಿಂ ಲಾ ಬೋರ್ಡ್ ನ ಪ್ರತಿನಿಧಿಗಳು ಇಷ್ಟು ದಿನ ಸಮರ್ಥವಾಗಿ ನ್ಯಾಯಾಂಗ ಹೋರಾಟ ನಡೆಸಿದ್ದಾರೆ. ಹಿರಿಯ ನ್ಯಾಯವಾದಿಗಳಾದ ರಾಜೀವ್ ಧವನ್, ಜಫರ್ಯಾಬ್ ಜಿಲಾನಿ, ಮೀನಾಕ್ಷಿ ಅರೋರಾ ಮುಂತಾದವರ ಶ್ರಮವನ್ನು ನಾನು ಅಭಿನಂದಿಸುತ್ತೇನೆ. ಆದರೆ ನಮ್ಮ ಹೋರಾಟ ಇದ್ದದ್ದು ಜಾಗಕ್ಕಲ್ಲ. ಕಾನೂನುಬದ್ದ ಹಕ್ಕಿಗಾಗಿ. ಈಗ ನ್ಯಾಯಾಲಯ ಬೇರೆಡೆ ಮಸೀದಿ ನಿರ್ಮಿಸಲು ಐದು ಎಕರೆ ಜಮೀನು ಕೊಡಬೇಕೆಂದು ಹೇಳಿದೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಭಾರತೀಯ ಮುಸ್ಲಿಮರು ಬಡವರಿರಬಹುದು, ಹಲವು ಕಷ್ಟಗಳನ್ನು ಎದುರಿಸುತ್ತಿರಬಹುದು, ದೌರ್ಜನ್ಯಕ್ಕೂ ತುತ್ತಾಗಿರಬಹುದು. ಆದರೆ ಮಸೀದಿ ನಿರ್ಮಿಸಲಿ ಐದು ಎಕರೆ ಜಮೀನು ಕೊಳ್ಳಲಿಕ್ಕೆ ಆಗದಷ್ಟು ಪರಿಸ್ಥಿಯಲ್ಲಿಲ್ಲ. ಈಗಲೂ ನಾನು ಹೈದ್ರಾಬಾದ್ ಗಲ್ಲಿಯಲ್ಲಿ ಭಿಕ್ಷೆ ಎತ್ತುತ್ತಾ ಹೋದರೆ ಉತ್ತರ ಪ್ರದೇಶದಲ್ಲಿ ಐದು ಎಕರೆ ಜಮೀನು ಖರೀದಿಸುಷ್ಟು ಹಣ ಜಮೆಯಾಗುತ್ತೆ. ಆದರೆ ನಮ್ಮ ಹೋರಾಟವಿದ್ದುದ್ದು ಸಾಂವಿಧಾನಿಕ ಹಕ್ಕಿಗಾಗಿ. ನ್ಯಾಯಾಲಯ ಅದನ್ನು ಪರಿಗಣಿಸಿಲ್ಲ. ಹಾಗಾಗಿ ನನಗೆ ಈ ತೀರ್ಪು ಸಮಾಧಾನ ತಂದಿಲ್ಲ” ಎಂದಿದ್ದಾರೆ.

“ತೀರ್ಪು ಮರು ಪರಿಶೀಲನೆ ಅರ್ಜಿ ಸಲ್ಲಿಸುವುದು ಬಿಡುವುದು, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯರಿಗೆ ಬಿಟ್ಟ ತೀರ್ಮಾನ. ಆದರೆ ನನ್ನನ್ನು ಕೇಳುವುದಾದರೆ ಐದು ಎಕರೆ ಜಮೀನಿನ ಆಫರನ್ನು ನಾವು ತಿರಸ್ಕರಿಸಬೇಕು. ನಮಗೆ ಸಂವಿಧಾನದ ಮೇಲೆ ಈಗಲೂ ಅಪಾರ ಗೌರವವಿದೆ. ಆದರೆ ಸಮಸ್ತ ಭಾರತೀಯರು, ಹಿಂದೂಗಳು ಮತ್ತು ಮುಸ್ಲೀಮರು, ಒಂದು ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇವತ್ತು ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಅಧಿಕೃತತೆ ಪಡೆಯಲಿದೆ. ಈಗಾಗಲೇ ಹಲವು ಪ್ರಾರ್ಥನಾ ಸ್ಥಳಗಳನ್ನು ಧರ್ಮದ ಹೆಸರಲ್ಲಿ ಆಕ್ರಮಿಸಿಕೊಂಡು ಕೋಮುಸಂಘರ್ಷ ಸೃಷ್ಟಿಲು ಸಂಘಿಗಳು ಹುನ್ನಾರ ನಡೆಸಿದ್ದಾರೆ. ಈ ತೀರ್ಪಿನಿಂದ ಅವರಿಗೆ ಇನ್ನಷ್ಟು ಒತ್ತಾಸೆ ಸಿಕ್ಕಂತಾಗಿ ವಿಪರೀತಕ್ಕೆ ಹೋಗುತ್ತಾರೆ. ಆಗ ಅಲ್ಲಿನ ನ್ಯಾಯಾಲಯಗಳು ಈ ತೀರ್ಪನ್ನೆ ಆಧಾರವಾಗಿಟ್ಟುಕೊಂಡು ಆದೇಶ ನೀಡಬೇಕಾಗುತ್ತದೆ. ಇದು ಈ ದೇಶದ ಜಾತ್ಯತೀತ, ಸೌಹಾರ್ದತೆಯ ಪರಂಪರೆಗೆ ಪೂರಕವಾಗುವಂತದ್ದಲ್ಲ” ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...