Homeಕರ್ನಾಟಕಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

- Advertisement -
- Advertisement -

| ರಾಜಲಕ್ಷ್ಮಿ ಅಂಕಲಗಿ |
ವಕೀಲರು, ಕರ್ನಾಟಕ ಹೈಕೋರ್ಟ್

ಬಹುಶಃ ಈ ಲೇಖನ ಪ್ರಕಟವಾಗುವಷ್ಟರಲ್ಲಿ ಕರ್ನಾಟಕದ ರಾಜಕೀಯದ ರಮ್ಮಿ ಆಟ ಒಂದು ಹಂತಕ್ಕೆ ಬಂದಿರುತ್ತದೆ. ಅದ್ಯಾಕೋ ‘ರಾಜಕೀಯ ದೊಂಬರಾಟ’ ಎಂದು ಕರೆದು, ಪ್ರಾಣ ಒತ್ತೆಯಿಟ್ಟು ಹೊಟ್ಟೆಪಾಡಿಗಾಗಿ ದೊಂಬರಾಟ ಮಾಡುವವರನ್ನು ಅವಮಾನಿಸಲು ಮನಸ್ಸು ಬರುತ್ತಿಲ್ಲ. ಕೆಲವೊಂದು ಟಿ.ವಿ ಚಾನೆಲ್‍ಗಳು ಹಾಗೂ ಪತ್ರಿಕೆಗಳು ಇವರನ್ನು ರೆಬೆಲ್ ನಾಯಕರು ಎಂದು ಕರೆದಾಗ ಆ ರೆಬೆಲ್ ಎಂಬ ಶಬ್ದಕ್ಕೇನಾದರೂ ಮಾತು ಬರುತ್ತಿದ್ದರೆ ಮಾನಹಾನಿ ಕೇಸು ಹಾಕುತ್ತಿತ್ತು. ಈ ಕೋಟ್ಯಾಧಿಪತಿ ಎಂಎಲ್‍ಎಗಳನ್ನು ಕುರಿಗಳಂತೆ ಕೂಡಿಹಾಕಿ ಕಾಯುತ್ತಿರುವುದನ್ನು ನೋಡಿದ ಜನ ಅಸಹ್ಯಪಡುವುದರ ಜೊತೆಗೆ ನೂರಾರು ಪ್ರಶ್ನೆ ಕೇಳುತ್ತಿದ್ದಾರೆ. ಅದ್ಯಾವ ಪ್ರಲೋಭನೆ ಅಥವಾ ಭಯ ಇವರನ್ನು ಹೀಗೆ ಮಾಡಲು ಪ್ರೇರೇಪಿಸಿರಬಹುದು ಎಂಬುದು ಗೂಢವಾಗಿದೆ. ಒಟ್ಟಿನಲ್ಲಿ ಒಂದು ದೇಶ ಒಂದು ಪಕ್ಷ ಎಂಬ ಸಿದ್ಧಾಂತ ತಂದು ವ್ಯವಸ್ಥಿತವಾಗಿ ವಿರೋಧ ಪಕ್ಷಗಳನ್ನು ನಿರ್ನಾಮಗೊಳಸಿ ಪ್ರಜಾತಂತ್ರವನ್ನು ಅಣುಕು ಯಂತ್ರವನ್ನಾಗಿ ಮಾಡುವ ಹುನ್ನಾರ ನಿಚ್ಚಳವಾಗಿದೆ.

ಸ್ವಾತಂತ್ರ್ಯನಂತರ ಈ ಪಕ್ಷಾಂತರ ಮಾಡುವ ಅವಕಾಶವಾದಿ ರಾಜಕಾರಣಿಗಳು ಹಾಗೂ ನಿರಂತರ ಅಸ್ಥಿರ ಸರ್ಕಾರಗಳು ಇವನ್ನು ಒಂದು ನಿಯಂತ್ರಣದಲ್ಲಿಡುವ ಉದ್ದೇಶದಿಂದ 1985ರಲ್ಲಿ ರಾಜೀವ್‍ಗಾಂಧಿ ಸರ್ಕಾರ ಸಂವಿಧಾನಿಕ ತಿದ್ದುಪಡಿ ಮಾಡುವ ಮೂಲಕ ಹತ್ತನೇ ಶೆಡ್ಯೂಲನ್ನು ಸೇರಿಸಿ ‘ಪಕ್ಷಾಂತರ ನಿಷೇಧ ಕಾಯ್ದೆ’ಯನ್ನು ಜಾರಿಗೆ ತಂದಿತು. ಅದರ ಉದ್ದೇಶ ನಿಚ್ಚಳವಾಗಿತ್ತು.
* ಸಂಸದರ ರಾಜಕೀಯ ಪಕ್ಷಾಂತರ ತಡೆಯುವುದು ಹಾಗೂ ಎರಡು ಕಾರಣಗಳಿಗಾಗಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವುದು.
* ಅಕಸ್ಮಾತ್ ಸದಸ್ಯರು ತಮ್ಮ ಇಚ್ಛೆಯಿಂದ ತಮ್ಮ ಪಕ್ಷದ ಸದಸ್ಯತ್ವವನ್ನು ಬಿಟ್ಟುಕೊಟ್ಟರೆ
* ಸಂಸದ ತನ್ನ ಪಕ್ಷದ ನಿರ್ದೇಶನಗಳನ್ನು ಉಲ್ಲಂಘಿಸಿ ಮತದಾನ ಮಾಡಿದರೆ

ಇಲ್ಲಿ ಪಕ್ಷದ ಸದಸ್ಯತ್ವವನ್ನು ತೊರೆಯುವುದನ್ನು ರಾಜೀನಾಮೆ ಯೊಂದಿಗೆ ಹೋಲಿಸಲು ಬರುವುದಿಲ್ಲ. ಅವೆರಡೂ ಬೇರೆಯದು. ಆದರೆ ಇದನ್ನು ಹೊರತುಪಡಿಸಿಯೂ ಸಂಸದರ ನಡತೆಯನ್ನು ನೋಡಿ ಸ್ಪೀಕರ್ ತನ್ನ ವಿವೇಚನೆಯನ್ನು ಬಳಸಿ ಅಂತಹ ನಡೆಯನ್ನು ಪಕ್ಷ ವಿರೋಧಿ ಎಂದು ಪರಿಗಣಿಸಿದರೆ ಅವರ ಸದಸ್ಯತ್ವವನ್ನು ರದ್ದುಗೊಳಿಸಬಹುದು. ಆದರೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಕೇವಲ ಶಿಸ್ತಿನ ಹೆಸರಿನಲ್ಲಿ ಯಾರ ಅಭಿಪ್ರಾಯಗಳನ್ನೂ ಕಟ್ಟಿಹಾಕಲು ಆಗದು. ಆದ್ದರಿಂದಲೇ ಕಾಯ್ದೆಯಲ್ಲಿ ಭಿನ್ನಾಭಿಪ್ರಾಯಗಳನ್ನೂ ಪರಿಗಣಿಸಿ ಅದಕ್ಕೆ ದಾರಿಯನ್ನು ಒದಗಿಸಲಾಗಿದೆ. ಅಕಸ್ಮಾತ್ ಒಂದು ರಾಜಕೀಯ ಪಕ್ಷದ 2/3ರಷ್ಟು ಸದಸ್ಯರು ಒಟ್ಟಾರೆಯಾಗಿ ಪಕ್ಷತೊರೆದು ಮತ್ತೊಂದು ಪಕ್ಷದೊಂದಿಗೆ ವಿಲೀನ ಹೊಂದಲು ಅವಕಾಶ ಮಾಡಿಕೊಡಲಾಗಿದೆ. ‘ಸ್ಪೀಕರ್ ತನ್ನ ವಿವೇಚನೆ ಬಳಸಿ’ ಎಂದ ಕೂಡಲೇ ಅವರ ತೀರ್ಮಾನದ ಬಗ್ಗೆ ಪರ ವಿರೋಧ ನಿಲುವುಗಳು ಬರುವುದಕ್ಕೆ ಪ್ರಾರಂಭಿಸುತ್ತವೆ. ಒಂದು ಸಾಂವಿಧಾನಿಕ ಹುದ್ದೆ ಅಲಂಕರಿಸಿದ ಮೇಲೆ ತಮ್ಮ ಮಾತೃ ಪಕ್ಷವನ್ನು ಮರೆತು ನಿಷ್ಪಕ್ಷವಾಗಿ ನಡೆದುಕೊಂಡ ಉದಾಹರಣೆಗಳು ವಿರಳವಾಗಿರುವಾಗ ಈ ಸಂಶಯಗಳು ಸಹಜ. ಹಾಗಾದರೆ ಸ್ಪೀಕರ್ ವಿವೇಚನೆ ಸರಿಯೋ ತಪ್ಪೋ ಎಂದು ತೀರ್ಮಾನಿಸುವ ಅಧಿಕಾರ ಯಾರಿಗೆ ಇದೆ ಎಂಬ ಪ್ರಶ್ನೆ ಸಹಜ. ಈ ವಿಷಯಕ್ಕೆ ಕುರಿತಂತೆ ಸುಪ್ರೀಂಕೋರ್ಟ್ ಆಗಾಗ ನೀಡಿದ ತೀರ್ಮಾನಗಳ ಮುಖಾಂತರ ಇದು ಸ್ಪೀಕರ್ ಅವರಿಗೆ ಮಾತ್ರ ಸೇರಿದ ವಿಚಾರ ಎಂದು ಸಾರಿ ಹೇಳಿದೆ. ಆದರೆ ಸ್ಪೀಕರ್ ತಮ್ಮ ಕಾರಣಗಳನ್ನು ಸರಿಯಾಗಿ ವಿವರಿಸಬೇಕು.

ಈ ಕಾಯ್ದೆ ಬಂದ ನಂತರ ಸಣ್ಣಪ್ರಮಾಣದ ಪಕ್ಷಾಂತರ ಹಾಗೂ ರಾಜಕೀಯ ಅಸ್ಥಿರತೆಗಳು ಕಡಿಮೆ ಆಗಿವೆಯಾದರೂ ಸಾಮೂಹಿಕ ಗುಳೆ ನಿಂತಿಲ್ಲ. ಈ ನಿಟ್ಟಿನಲ್ಲಿ ನೋಡಿದರೆ ಕಾಯ್ದೆಯು ಸಫಲತೆ ಕಂಡಿದೆ ಎನ್ನಬಹುದು.

ಸುಪ್ರೀಂ ಕೋರ್ಟ್ ಸದಸ್ಯರ ಸದಸ್ಯತ್ವ ಅಮಾನ್ಯಗೊಳಿಸುವ ವಿಷಯಗಳಲ್ಲಿ ಬಹುತೇಕ ನಿರ್ಲಿಪ್ತ ಧೋರಣೆ ಹೊಂದಿದೆ. ಇನ್ನು ಕೆಲವು ಸಲ ಕೆಲವೊಂದು ನಿರ್ದೇಶನಗಳನ್ನು ಮಾತ್ರ ನೀಡಿ ತೀರ್ಪು ನೀಡುವುದರಿಂದ ಹೊರಗುಳಿದಿದೆ. ಇದು ಸಂವಿಧಾನ ಬದ್ಧವಾದ ನಡೆಯೂ ಹೌದು. ಏಕೆಂದರೆ ಸಂವಿಧಾನದಲ್ಲಿ ಸ್ಪೀಕರ್ ಅವರ ಅಧಿಕಾರ ಹಾಗೂ ಕಾರ್ಯವ್ಯಾಪ್ತಿಯನ್ನು ನಿರ್ದಿಷ್ಟವಾಗಿ ವಿವರಿಸಿದಾಗ ಆ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂಬ ಕೋರ್ಟಿನ ನಿಲುವು ಸರಿ. ಆದರೆ ಸುಪ್ರೀಕೋರ್ಟ್‍ನ ಮುಂದೆ ಆಗಾಗ್ಗೆ ಅನೇಕ ದ್ವಂದ್ವಗಳು ಎದುರಾಗುತ್ತಿರುತ್ತವೆ.

ತಮಿಳುನಾಡಿನ ಎಐಡಿಎಂಕೆಯ ಇ.ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲಿಸಲು ನಿರಾಕರಿಸಿದ 18 ಸದಸ್ಯರನ್ನು ರಾಜ್ಯಪಾಲರು ಅಮಾನ್ಯ ಮಾಡಿದಾಗ ಆ ವಿಷಯ ಹೈಕೋರ್ಟಿನ ಮುಂದೆ ಬಂತು. ಆಗ ಕೋರ್ಟು, ಒಂದು ಪಕ್ಷದ ನಾಯಕನೆಂದರೆ ಅವನೊಬ್ಬ ವ್ಯಕ್ತಿ ಮಾತ್ರವೇ ಅಥವಾ ಅವನೇ ಪಕ್ಷವೇ? ಎಂಬ ಪ್ರಶ್ನೆ ಎತ್ತಿತ್ತು. ಇನ್ನು ಕೇವಲ ತಮ್ಮ ಪಕ್ಷದ ಕಾರ್ಯವೈಖರಿಯನ್ನು ಪ್ರಶ್ನಿಸಿದ ಮಾತ್ರಕ್ಕೆ ಅವನನ್ನು ಶಿಸ್ತಿನ ಹೆಸರಿನಲ್ಲಿ ಅಮಾನ್ಯ ಮಾಡುವುದು ಎಷ್ಟು ಸರಿ? ಈ ಪ್ರಶ್ನೆಗಳು ನೈಜವಾದರೂ ನಾವು ದಿನನಿತ್ಯ ನೋಡುವ ಈ ಪಕ್ಷಾಂತರಿಗಳಿಗೆ ಇವು ಅನ್ವಯಿಸುತ್ತವಾ ಎಂಬುದು ಬಹುದೊಡ್ಡ ಪ್ರಶ್ನೆ.

ಬಹುಶಃ ಸೈದ್ಧಾಂತಿಕ ಕಾರಣಗಳಿಗಾಗಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿ ಹೊರನಡೆದ, ಇಲ್ಲವೇ ರಾಜೀನಾಮೆ ನೀಡಿದ ರಾಜಕಾರಣಿಗಳನ್ನು ಈಗ ಸಿನಿಮಾಗಳಲ್ಲಿ ಮಾತ್ರ ನೋಡಬಹುದು.

ನಮಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲ ಬಿಡುತ್ತಿಲ್ಲ ಎಂದು ಎಂಎಲ್‍ಎಗಳು ನೆಪ ಹೇಳುವಾಗ ‘ಯಾರ ಅಭಿವೃದ್ಧಿ’ ಎಂದು ಜನ ಮಾತಾಡುವುದು ಸರಿಯಾಗೇ ಇದೆ. ಮುಲಾಯಂ ಸಿಂಗ್ ಪಕ್ಷದ ಸದಸ್ಯನೊಂದಿಗೆ ಸೇರಿ 2007ರಲ್ಲಿ ಮಾಯಾವತಿ ಸರ್ಕಾರದ ವಿರುದ್ಧ ಕೆಲ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಬಿಎಸ್‍ಪಿ ಸರ್ಕಾರವನ್ನು ವಜಾಗೊಳಿಸುವಂತೆ ಕೇಳಿದಾಗ ಅಂಥ ಸದಸ್ಯರನ್ನು ಪಕ್ಷದಿಂದ ಹೊರಹಾಕಲಾಯಿತು. ಆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‍ಗೆ ಸದಸ್ಯರು ಹೋದಾಗ ‘ಅವರ ನಡೆ ಐಚ್ಛಿಕವಾಗಿ ಪಕ್ಷದ ಸದಸ್ಯತ್ವವನ್ನು ತೊರೆದಿದ್ದಕ್ಕೆ ಸಮ’ ಎಂದು ಹೇಳಿ ಕೋರ್ಟು ರಾಜ್ಯಪಾಲರ ತೀರ್ಪನ್ನು ಎತ್ತಿ ಹಿಡಿದಿತ್ತು. ಆದರೆ 2011ರಲ್ಲಿ ಬಿ.ಎಸ್.ಯಡಿಯೂರಪ್ಪ ಕೇಸಿನಲ್ಲಿ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಅನೇಕರ ಸದಸ್ಯತ್ವ ಅಮಾನ್ಯ ಮಾಡಿದ ರಾಜ್ಯಪಾಲರ ತೀರ್ಪನ್ನು ತಳ್ಳಿಹಾಕಿತ್ತು. ಹಾಗೆ ಮಾಡುವಾಗ ಪಕ್ಷದಲ್ಲಿನ ಸ್ವಜನಪಕ್ಷಪಾತ, ದುರಾಡಳಿತ ಯಾವುದನ್ನು ಅವರು ನಿರಾಕರಿಸದೆ ಇದ್ದುದರಿಂದ ಪ್ರತಿಕೂಲ ಅನುಮಾನ (adverse inference) ವ್ಯಕ್ತಪಡಿಸಿ ತೀರ್ಮಾನ ಕೈಗೊಂಡಿತ್ತು. ಇನ್ನು ಮುಖ್ಯವಾಗಿ 2/3 ಸದಸ್ಯರು ಒಂದು ಪಕ್ಷ ತೊರೆದು ಮತ್ತೊಂದು ಪಕ್ಷದೊಂದಿಗೆ ವಿಲೀನ ಹೊಂದಿದಾಗ ಅದು ಪಕ್ಷದ ತೀರ್ಮಾನವಾಗಿರದೆ ಕೇವಲ ಹೊರನಡೆದ ಸದಸ್ಯರ ತೀರ್ಮಾನ ಮಾತ್ರ ಆದಾಗ ಅದನ್ನು ಪಕ್ಷದ ವಿಲೀನ ಎನ್ನಲು ಬರುವುದಿಲ್ಲ. ಅದು ಕೇವಲ ಆ ಸದಸ್ಯರ ವಿಲೀನ ಮಾತ್ರ. ಹಾಗಿದ್ದಾಗ ಇಂತಹ ಸನ್ನಿವೇಶವನ್ನು ಹೇಗೆ ಅರ್ಥೈಸುತ್ತಾರೆ ಎಂಬುದು ಕೂಡ ಒಂದು ದ್ವಂದ್ವವೇ.

ಒಂದು ಸ್ಥಿರತೆ ಹಾಗೂ ಶಿಸ್ತು ತರಲು ಜಾರಿಗೆ ಬಂದ ಈ ಕಾಯ್ದೆ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ ಎಂಬುದು ಜನರ ಎದುರಿಗೆ ಇದೆ. ಒಟ್ಟಿನಲ್ಲಿ ಈ ರಾಜಕೀಯ ರಮ್ಮಿ ಆಟದಲ್ಲಿ ಆಗಬಹುದಾದ ಸಂಯೋಜನೆಗಳಿಗೆ ಅಂತ್ಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...