Homeಕರ್ನಾಟಕಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

- Advertisement -
- Advertisement -

ಇದುವರೆಗೆ ಸ್ಪಷ್ಟವಾಗಿರುವಂತೆ ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟು ಈ ರೀತಿ ಹೇಳಿದೆ.

1. ರಾಜೀನಾಮೆ ಅಂಗೀಕಾರದ ವಿಚಾರದಲ್ಲಿ ಸ್ಪೀಕರ್ ತೀರ್ಮಾನವೇ ಅಂತಿಮ.

2. ಅವರಿಗೆ ಸಮಯ ನಿಗದಿ ಮಾಡುವುದಿಲ್ಲ.

3. ಸದನದಲ್ಲಿ ವಿಶ್ವಾಸಮತ ಯಾಚನೆ ನಾಳೆ ಮುಂದುವರೆಯಬಹುದು.

4. ರಾಜೀನಾಮೆ ನೀಡಿರುವ ಶಾಸಕರು ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ.

ಇದರ ಅರ್ಥ ಏನು?

1. ರಾಜೀನಾಮೆ ಅಂಗೀಕಾರ ಮಾಡುತ್ತೇನೆ/ಮಾಡುವುದಿಲ್ಲ ಎಂದು ಸ್ಪೀಕರ್ ಹೇಳಿದ ನಂತರವೂ ಸುಪ್ರೀಂಕೋಟು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದೇನೂ ಇದರ ಅರ್ಥವಲ್ಲ. ಆದರೆ, ಇಂತಿಷ್ಟೇ ದಿನಗಳಲ್ಲಿ ಅಂಗೀಕರಿಸಿ ಎಂದೋ, ಈಗಲೇ ಅಂಗೀಕರಿಸಿ ಎಂದೋ ಸುಪ್ರೀಂಕೋರ್ಟು ಹೇಳಿಲ್ಲ. ತಾನು ಹೇಳಬಾರದು ಎಂಬ ಅರ್ಥವನ್ನು ಅದು ಹೊರಡಿಸಿದೆ.

2. ವಿಶ್ವಾಸಮತ ಯಾಚನೆ ನಾಳೆಯೇ ನಡೆಯಬೇಕೆಂದೂ ಸುಪ್ರೀಂಕೋರ್ಟು ಹೇಳಿಲ್ಲ.

3. ಸದರಿ ಶಾಸಕರು ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ ಎಂದ ಮೇಲೆ ವಿಪ್ ಅನ್ವಯವಾಗುವುದಿಲ್ಲ ಎಂದೇ ಆಗುತ್ತದೆ. ಇದು ವಿಪ್ ವಿಚಾರದಲ್ಲಿ ಹೊಸದೊಂದು ನಿಯಮಕ್ಕೆ ಅಥವಾ ನಿಯಮ ತಿದ್ದುಪಡಿಗೆ ದಾರಿ ಮಾಡಿಕೊಟ್ಟಿದೆ. ಇದು ಆಪರೇಷನ್ ಕಮಲ ಎಂಬ ಪಿಡುಗಿಗೆ ಮುಕ್ತ ಅವಕಾಶ ಕೊಡಲಿದೆ.

4. ಹಾಗಾಗಿ ನಾಳೆಯ ವಿಪ್ ಉಲ್ಲಂಘನೆಯ ಆಧಾರದ ಮೇಲೆ ಅನರ್ಹತೆ ವಿಷಯ ನಿರ್ಧಾರವಾಗುವುದಿಲ್ಲ.

ಇದರ ಪರಿಣಾಮವೇನು? ಸಾಮಾನ್ಯ ಸಂದರ್ಭದಲ್ಲಿ ಏನು ಸಾಧ್ಯತೆಗಳಿವೆ?

1. ನಾಳೆ ವಿಶ್ವಾಸಮತ ಯಾಚನೆ ಆರಂಭವಾಗುತ್ತದೆ, ಆದರೆ ಆ ಪ್ರಕ್ರಿಯೆ ನಾಳೆಯೇ ಮುಗಿದುಬಿಡುವುದಿಲ್ಲ.

2. ಈ ಮಧ್ಯೆ ಶಾಸಕರ ಅನರ್ಹತೆ ವಿಚಾರವನ್ನು ಸ್ಪೀಕರ್ ಕೈಗೆತ್ತಿಕೊಂಡು ಅವರನ್ನು ಅನರ್ಹಗೊಳಿಸಬಹುದು. ಇವರೆಲ್ಲರೂ ಗುಂಪುಗೂಡಿಯೇ ರಾಜೀನಾಮೆ ನೀಡಿ, ಗುಂಪಾಗಿಯೇ ಹೋಟೆಲ್‍ನಲ್ಲಿರುವುದು, ಬಿಜೆಪಿಯ ಜೊತೆ ಸಂಪರ್ಕದಲ್ಲಿರುವುದು, ಸರ್ಕಾರದ ಬಹುಮತ ಕುಸಿಯುವಂತೆ ಮಾಡಿ ಬಿಜೆಪಿ ಸರ್ಕಾರ ರಚಿಸಲು ಅನುವು ಮಾಡಿಕೊಡಲೇ ರಾಜೀನಾಮೆ ಕೊಟ್ಟಿರುವುದು ಸ್ಪಷ್ಟವಿರುವುದರಿಂದ ಅದೇ ಅನರ್ಹತೆಗೆ ದಾರಿ ಮಾಡಬಹುದು.

3. ಅದೇನೇ ಇದ್ದರೂ ಇಂದಲ್ಲಾ ನಾಳೆ ಸರ್ಕಾರದ ಬಹುಮತ ಕುಸಿಯುತ್ತದೆ. ಶಾಸಕರು ಅನರ್ಹರಾಗುತ್ತಾರೆ, ಇಲ್ಲವೇ ರಾಜೀನಾಮೆ ಅಂಗೀಕಾರವಾಗುತ್ತದೆ. ಇವೆಲ್ಲದರ ಲಾಭ ಬಿಜೆಪಿಗೆ ಆಗುತ್ತದೆ. ಏಕೆಂದರೆ ಅವರು ಸರ್ಕಾರ ರಚಿಸುತ್ತಾರೆ. ರಾಜೀನಾಮೆ ಕೊಟ್ಟಿರುವ ಎಲ್ಲಾ ಶಾಸಕರಿಗೂ ಪಕ್ಷದ ಟಿಕೆಟ್ ನೀಡಲೇಬೇಕೆಂದೂ ಇಲ್ಲ. ಉಪಚುನಾವಣೆಯಲ್ಲಿ 6 ಜನ ಶಾಸಕರು ಗೆದ್ದು ಬಂದರೂ ಪೂರ್ಣ ವಿಧಾನಸಭೆಯಲ್ಲೂ ಸರಳ ಬಹುಮತ ದೊರೆಯುತ್ತದೆ.

4. ಅನರ್ಹಗೊಳಿಸುವುದರಿಂದ ಶಾಸಕರ ರಾಜಕೀಯ ಬದುಕಿನಲ್ಲಿ ಕಪ್ಪು ಚುಕ್ಕೆ. ಆದರೆ, ಹಾಗೆಂದು ಅವರಾಗಲೀ ಮಾಧ್ಯಮಗಳಾಗಲೀ ಭಾವಿಸುವುದಿಲ್ಲವಾದ್ದರಿಂದ ಜನರೂ ಭಾವಿಸದಂತೆ ಮಾಡಲಾಗುತ್ತದೆ. ಭ್ರಷ್ಟಾಚಾರ ಇತ್ಯಾದಿಗಳ ಕಾರಣದಿಂದ ಅನರ್ಹಗೊಳ್ಳುವವರು 6 ವರ್ಷಗಳ ಕಾಲ ಸ್ಪರ್ಧಿಸದಂತೆ ನಿಯಮವಿದೆ. ಆದರೆ, ತಮಿಳುನಾಡಿನಲ್ಲಿ ಪಕ್ಷಾಂತರದ ಕಾರಣಕ್ಕಾಗಿ ಅನರ್ಹಗೊಂಡವರು ಮತ್ತೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಹೇಳಿತ್ತು!

ಆಶ್ಚರ್ಯಕರ ಸಾಧ್ಯತೆಗಳು

1. ಕೆಲವು ಶಾಸಕರು ತಮ್ಮ ಮಾತೃಪಕ್ಷಗಳಿಗೆ ಮರಳಿ ಬರುವುದರ ಮೂಲಕ ಇನ್ನಷ್ಟು ಕಾಲ ಸಮ್ಮಿಶ್ರ ಸರ್ಕಾರ ಉಳಿದುಕೊಳ್ಳಬಹುದು.

2. ವಿಶ್ವಾಸಮತ ಯಾಚನೆಯನ್ನೇ ಅನಿರ್ದಿಷ್ಟಾವಧಿಗೆ ಮುಂದೂಡುವುದು. ಇದು ಬಿಜೆಪಿ ಮತ್ತು ಸಮ್ಮಿಶ್ರ ಪಕ್ಷಗಳ ನಡುವೆ ಮಾತ್ರವಲ್ಲದೇ, ರಾಜ್ಯಪಾಲರು ವರ್ಸಸ್ ಸ್ಪೀಕರ್ ಸಂಘರ್ಷಕ್ಕೂ ದಾರಿ ಮಾಡಿಕೊಡಬಹುದು, ಆಗ ಸುಪ್ರೀಂಕೋರ್ಟ್ ಸಹಾ ಮಧ್ಯಪ್ರವೇಶಿಸಬಹುದು.

3. ಈಗಲೇ ಕುಮಾರಸ್ವಾಮಿಯವರು ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಡುವುದು.

ಅದೇನೇ ಇದ್ದರೂ, ಅನೈತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುವ ಮೂಲಕ (ಆಪರೇಷನ್ ಕಮಲ) ಬೇರೆ ಪಕ್ಷವನ್ನು ಸೇರುವುದಕ್ಕೆ ಸುಪ್ರೀಂಕೋರ್ಟಿನ ತೀರ್ಪಿನಿಂದ ಅವಕಾಶ ಸಿಕ್ಕಿದಂತಾಗಿದೆ. ಇದನ್ನು ಕೌಂಟರ್ ಮಾಡುವ ಬೇರೇನಾದರೂ ಅಸ್ತ್ರ ಸ್ಪೀಕರ್ ಬಳಿ ಇದೆಯೇ ನೋಡಬೇಕು. ಎಲ್ಲಕ್ಕಿಂತ ದುರಂತದ ವಿಚಾರವೆಂದರೆ ಮಾಧ್ಯಮಗಳು ಅನೈತಿಕ ರಾಜಕಾರಣದ ಪರವಾಗಿ ನಿಂತಿರುವುದು ಮತ್ತು ಜನಸಾಮಾನ್ಯರು ಮೂಕವಾಗಿರುವುದು. ಇದರಲ್ಲಿ ಏನಾದರೂ ಬದಲಾವಣೆಗಳು ಬರುತ್ತದಾ ಎಂಬುದನ್ನೂ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...