Homeಅಂಕಣಗಳು`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ...

`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

- Advertisement -
- Advertisement -
  • ಗೌರಿ ಲಂಕೇಶ್
    ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ ಈ ದೇಶದ ಶೇ. 80ರಷ್ಟು ಮುಂದಿನ ಪ್ರಜೆಗಳ ಕನಸುಗಳನ್ನೇ ಹೊಸಕಿ ಹಾಕಿತು. ಶುಕ್ರವಾರ ನಮ್ಮ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಇನ್ನು ಮುಂದೆ ಶೋಷಿತ, ಹಿಂದುಳಿದ, ದಲಿತ, ಹಣ ಹೊಂದಿರದ ವರ್ಗಗಳಿಗೆ ಸೇರಿದ್ದ ಪ್ರತಿಭಾವಂತ ಯುವಕ-ಯುವತಿಯರಿಗೆ ವೃತ್ತಿ ಶಿಕ್ಷಣ ಪಡೆಯುವ ಅವಕಾಶವನ್ನೇ ನಿರಾಕರಿಸಿತು. ಎಲ್ಲರಿಗೂ ನ್ಯಾಯ ಒದಗಿಸಬೇಕಿರುವ ನ್ಯಾಯಾಲಯವೇ ಇನ್ನು ಮುಂದೆ ಖಾಸಗಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ‘ಸಾಮಾಜಿಕ ನ್ಯಾಯ’ ಒದಗಿಸಬೇಕೆಂಬ ಗೋಜಲುಗಳಿಲ್ಲದೆ ಸರ್ಕಾರದ ಹಸ್ತಕ್ಷೇಪವಿಲ್ಲದೆ, ಕಾರ್ಯ ನಿರ್ವಹಿಸಬಹುದು ಎಂದು ಫರ್ಮಾನು ಹೊರಡಿಸಿತು.
ಜಾಗತೀಕರಣ, ಖಾಸಗಿಕರಣ, ಉದಾರೀಕರಣ ಇಂದಿನ ಪರಿಸ್ಥಿತಿಯಲ್ಲಿ ಭಾರತದ ವಂಚಿತ ವರ್ಗಗಳಿಗೆ ನ್ಯಾಯ ಸಿಗಬೇಕೆಂದಿದ್ದರೆ ಖಾಸಗಿ ಕಂಪನಿಗಳಲ್ಲೂ ಮೀಸಲಾತಿ ಬೇಕೆಂಬ ಬೇಡಿಕೆ ಇರುವ ಸಂದರ್ಭದಲ್ಲಿ ನಮ್ಮ ಸರ್ವೋಚ್ಚ ನ್ಯಾಯಾಲಯವೇ ವೃತ್ತಿ ಶಿಕ್ಷಣದ ಬಾಗಿಲನ್ನು ಈ ವಂಚಿತ ವರ್ಗಗಳಿಗೆ ಮುಚ್ಚಿದೆ.
ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳು ‘ಸಾಮಾಜಿಕ ನ್ಯಾಯ’ದ ಯಾವ ಮಾನದಂಡವನ್ನು ಅನುಸರಿಸುವ ಅಗತ್ಯವಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯ, ತಮಗೆ ಬೇಕಾದವರಿಗೆ ಈ ಸಂಸ್ಥೆಗಳು ಪ್ರವೇಶ ನೀಡಬಹುದು ಎಂದಿದೆ. ಆದರೆ, ಈ ಪ್ರವೇಶಕ್ಕೆ ಗ್ರಾಮೀಣ, ಕನ್ನಡಿಗ, ದಲಿತ, ಹಿಂದುಳಿದ ಹಿನ್ನಲೆಯವರಿಗೆ ಯಾವುದೇ ಮೀಸಲಾತಿ ಇರುವುದಿಲ್ಲ ಅಷ್ಟೇ ಅಲ್ಲ, ಈ ಖಾಸಗಿ ವಿದ್ಯಾಸಂಸ್ಥೆಗಳು “ಡೊನೇಷನ್ ಪಡೆಯಬಾರದು, ಲಾಭ ಮಾಡಿಕೊಳ್ಳಬಾರದು” ಎಂದು ಹೇಳಿರುವ ನ್ಯಾಯಾಲಯ ಅವುಗಳು ತಮಗೆ ಸೂಕ್ತ ಎನಿಸಿದಷ್ಟು ಶುಲ್ಕ ವಿಧಿಸಹುದು ಎಂದೂ ಆದೇಶಿಸಿದೆ.
ಈ “ಸೂಕ್ತ” ಶುಲ್ಕ ಎಂದರೇನು?
ನಮ್ಮ ಸಂವಿಧಾನವು ಶಿಕ್ಷಣದಲ್ಲಿ ಹಾಗೂ ಉದ್ಯೋಗ ಅವಕಾಶಗಳಲ್ಲಿ ವರ್ಗ, ಜಾತಿ, ಲಿಂಗ ಆಧಾರಿತ ತಾರತಮ್ಯಗಳನ್ನು ನಿವಾರಿಸುವಂತೆ ಯೋಜನೆಗಳನ್ನು ರೂಪಿಸಬೇಕೆಂದು ಸರ್ಕಾರಕ್ಕೆ ಆದೇಶಿಸುತ್ತದೆ. ಅದೇ ರೀತಿ ದೇಶದ ಸಂಪನ್ಮೂಲಗಳೂ ಎಲ್ಲರಿಗೆ ಸಿಗುವಂತಾಂಗಬೇಕು ಎಂದು ಹೇಳುತ್ತದೆ. ಆದ್ದರಿಂದಲೇ ಅತ್ಯಂತ ದಮನಿತ ಪಂಗಡ ಹಾಗೂ ಸಮುದಾಯಗಳಿಗೆ ವಿಶೇಷ ಮೀಸಲಾತಿ ನೀಡಲಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಮೋಹಿನಿ ಜೈನ್ ಪ್ರಕರಣದಲ್ಲಿ “ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆ ಸರ್ಕಾರದಿಂದ ಮಾನ್ಯತೆ ಪಡೆದ ಕೂಡಲೇ ಆ ಸಂಸ್ಥೆಗೆ ಸರ್ಕಾರಕ್ಕಿರುವ ಸಾಮಾಜಿಕ ಜವಾಬ್ದಾರಿಗಳೂ ಅನ್ವಯಿಸುತ್ತದೆ” ಎಂದು 90ರ ದಶಕದಲ್ಲಿ ಸರ್ವೋಚ್ಛ ನ್ಯಾಯಲಯ ಹೇಳಿತ್ತು. ಹಾಗೆಯೇ 1993ರ ಉನ್ನಿ ಕೃಷ್ಣನ್ ಪ್ರಕರಣದಲ್ಲಿ “ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒಂದು ವ್ಯಾಪಾರವಾಗಿ ನಡೆಸಲು ಸಂವಿಧಾನದಲ್ಲಿ ಮಾನ್ಯತೆ ಇಲ್ಲ” ಎಂದೂ ಹೇಳಿತ್ತು.
ಆದರೆ ಈಗ, ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ನ್ಯಾಯ ನೀತಿಯನ್ನು ಅನುಸರಿಸಬೇಕಿಲ್ಲ, ತಮಗೆ ಸೂಕ್ತವೆನಿಸುವಷ್ಟು ಶುಲ್ಕವನ್ನು ವಿಧಿಸಬಹುದು ಎಂದು ಅದೇ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಒಂದು ರೀತಿಯಲ್ಲಿ ಇದೇ ನ್ಯಾಯಾಲಯ ಖಿಒಂ ಪೈ ಪ್ರಕರಣದಲ್ಲಿ “ಶಿಕ್ಷಣವನ್ನು ವ್ಯವಹಾರವಾಗಿ ನಡೆಸಬಹುದು; ಸರ್ಕಾರ ಮೂಗು ತೂರಿಸಬಾರದು” ಎಂದು 2002ರಲ್ಲಿ ನೀಡಿದ್ದ ತೀರ್ಪಿನ ಮುಂದುವರಿದ ಭಾಗದಂತಿದೆ. ಈ ತೀರ್ಪು ನಮ್ಮ ಸಂವಿಧಾನದಲ್ಲಿರುವ ಆಶಯಗಳಿಗೆ ಎಷ್ಟು ಹತ್ತಿರವಾಗಿದೆ ಎಂದು ಯಾರೂ ಬೇಕಾದರೂ ತೀರ್ಮಾನಿಸಬಹುದು.
ಇನ್ನು ಮೆರಿಟ್ ಆಧಾರದ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶವನ್ನು ತೀರ್ಮಾನಿಸಬಹುದು ಎಂದು ಹೇಳಿದೆ. ಮೊದಲನೆಯದಾಗಿ ಈ ‘ಮೆರಿಟ್’ ಎಂಬುದನ್ನೇ ತೀರ್ಮಾನಿಸುವುದು ಯಾವ ಮಾನದಂಡದಿಂದ? ಜಾತಿ, ವರ್ಗ, ನಗರ-ಗ್ರಾಮೀಣ, ಉಳ್ಳವರು-ಉಳ್ಳದಿರುವವರು ಹೀಗೆ ಹಲವಾರು ಅಂತರಗಳು ನಮ್ಮ ಸಮಾಜದಲ್ಲಿರುವಾಗ, ಇಲ್ಲಿ ಐeveಟ Pಟಚಿಥಿiಟಿg ಈieಟಜ ಎಂಬುದೇ ಇಲ್ಲದಿರುವಾಗ, ಈ ‘ಮೆರಿಟ್’ ಅನ್ನು ನಿರ್ಧರಿಸುವುದು ಹೇಗೆ? ಇದನ್ನೆಲ್ಲಾ ಚಿಂತಿಸುತ್ತಾ ಹೋದಂತೆ, ನಿಜವಾಗಲೂ ಇಂದಿನ ಸಮಾಜದಲ್ಲಿ ನಮ್ಮ ಲಕ್ಷಾಂತರ ಪ್ರತಿಭಾವಂತ ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಭವಿಷ್ಯವೇ ಇಲ್ಲದಂತಾಗಿದೆ,
ಇದು ಯಾವ ನ್ಯಾಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...