Homeಅಂಕಣಗಳು`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ...

`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

- Advertisement -
- Advertisement -
  • ಗೌರಿ ಲಂಕೇಶ್
    ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ ಈ ದೇಶದ ಶೇ. 80ರಷ್ಟು ಮುಂದಿನ ಪ್ರಜೆಗಳ ಕನಸುಗಳನ್ನೇ ಹೊಸಕಿ ಹಾಕಿತು. ಶುಕ್ರವಾರ ನಮ್ಮ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಇನ್ನು ಮುಂದೆ ಶೋಷಿತ, ಹಿಂದುಳಿದ, ದಲಿತ, ಹಣ ಹೊಂದಿರದ ವರ್ಗಗಳಿಗೆ ಸೇರಿದ್ದ ಪ್ರತಿಭಾವಂತ ಯುವಕ-ಯುವತಿಯರಿಗೆ ವೃತ್ತಿ ಶಿಕ್ಷಣ ಪಡೆಯುವ ಅವಕಾಶವನ್ನೇ ನಿರಾಕರಿಸಿತು. ಎಲ್ಲರಿಗೂ ನ್ಯಾಯ ಒದಗಿಸಬೇಕಿರುವ ನ್ಯಾಯಾಲಯವೇ ಇನ್ನು ಮುಂದೆ ಖಾಸಗಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ‘ಸಾಮಾಜಿಕ ನ್ಯಾಯ’ ಒದಗಿಸಬೇಕೆಂಬ ಗೋಜಲುಗಳಿಲ್ಲದೆ ಸರ್ಕಾರದ ಹಸ್ತಕ್ಷೇಪವಿಲ್ಲದೆ, ಕಾರ್ಯ ನಿರ್ವಹಿಸಬಹುದು ಎಂದು ಫರ್ಮಾನು ಹೊರಡಿಸಿತು.
ಜಾಗತೀಕರಣ, ಖಾಸಗಿಕರಣ, ಉದಾರೀಕರಣ ಇಂದಿನ ಪರಿಸ್ಥಿತಿಯಲ್ಲಿ ಭಾರತದ ವಂಚಿತ ವರ್ಗಗಳಿಗೆ ನ್ಯಾಯ ಸಿಗಬೇಕೆಂದಿದ್ದರೆ ಖಾಸಗಿ ಕಂಪನಿಗಳಲ್ಲೂ ಮೀಸಲಾತಿ ಬೇಕೆಂಬ ಬೇಡಿಕೆ ಇರುವ ಸಂದರ್ಭದಲ್ಲಿ ನಮ್ಮ ಸರ್ವೋಚ್ಚ ನ್ಯಾಯಾಲಯವೇ ವೃತ್ತಿ ಶಿಕ್ಷಣದ ಬಾಗಿಲನ್ನು ಈ ವಂಚಿತ ವರ್ಗಗಳಿಗೆ ಮುಚ್ಚಿದೆ.
ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳು ‘ಸಾಮಾಜಿಕ ನ್ಯಾಯ’ದ ಯಾವ ಮಾನದಂಡವನ್ನು ಅನುಸರಿಸುವ ಅಗತ್ಯವಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯ, ತಮಗೆ ಬೇಕಾದವರಿಗೆ ಈ ಸಂಸ್ಥೆಗಳು ಪ್ರವೇಶ ನೀಡಬಹುದು ಎಂದಿದೆ. ಆದರೆ, ಈ ಪ್ರವೇಶಕ್ಕೆ ಗ್ರಾಮೀಣ, ಕನ್ನಡಿಗ, ದಲಿತ, ಹಿಂದುಳಿದ ಹಿನ್ನಲೆಯವರಿಗೆ ಯಾವುದೇ ಮೀಸಲಾತಿ ಇರುವುದಿಲ್ಲ ಅಷ್ಟೇ ಅಲ್ಲ, ಈ ಖಾಸಗಿ ವಿದ್ಯಾಸಂಸ್ಥೆಗಳು “ಡೊನೇಷನ್ ಪಡೆಯಬಾರದು, ಲಾಭ ಮಾಡಿಕೊಳ್ಳಬಾರದು” ಎಂದು ಹೇಳಿರುವ ನ್ಯಾಯಾಲಯ ಅವುಗಳು ತಮಗೆ ಸೂಕ್ತ ಎನಿಸಿದಷ್ಟು ಶುಲ್ಕ ವಿಧಿಸಹುದು ಎಂದೂ ಆದೇಶಿಸಿದೆ.
ಈ “ಸೂಕ್ತ” ಶುಲ್ಕ ಎಂದರೇನು?
ನಮ್ಮ ಸಂವಿಧಾನವು ಶಿಕ್ಷಣದಲ್ಲಿ ಹಾಗೂ ಉದ್ಯೋಗ ಅವಕಾಶಗಳಲ್ಲಿ ವರ್ಗ, ಜಾತಿ, ಲಿಂಗ ಆಧಾರಿತ ತಾರತಮ್ಯಗಳನ್ನು ನಿವಾರಿಸುವಂತೆ ಯೋಜನೆಗಳನ್ನು ರೂಪಿಸಬೇಕೆಂದು ಸರ್ಕಾರಕ್ಕೆ ಆದೇಶಿಸುತ್ತದೆ. ಅದೇ ರೀತಿ ದೇಶದ ಸಂಪನ್ಮೂಲಗಳೂ ಎಲ್ಲರಿಗೆ ಸಿಗುವಂತಾಂಗಬೇಕು ಎಂದು ಹೇಳುತ್ತದೆ. ಆದ್ದರಿಂದಲೇ ಅತ್ಯಂತ ದಮನಿತ ಪಂಗಡ ಹಾಗೂ ಸಮುದಾಯಗಳಿಗೆ ವಿಶೇಷ ಮೀಸಲಾತಿ ನೀಡಲಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಮೋಹಿನಿ ಜೈನ್ ಪ್ರಕರಣದಲ್ಲಿ “ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆ ಸರ್ಕಾರದಿಂದ ಮಾನ್ಯತೆ ಪಡೆದ ಕೂಡಲೇ ಆ ಸಂಸ್ಥೆಗೆ ಸರ್ಕಾರಕ್ಕಿರುವ ಸಾಮಾಜಿಕ ಜವಾಬ್ದಾರಿಗಳೂ ಅನ್ವಯಿಸುತ್ತದೆ” ಎಂದು 90ರ ದಶಕದಲ್ಲಿ ಸರ್ವೋಚ್ಛ ನ್ಯಾಯಲಯ ಹೇಳಿತ್ತು. ಹಾಗೆಯೇ 1993ರ ಉನ್ನಿ ಕೃಷ್ಣನ್ ಪ್ರಕರಣದಲ್ಲಿ “ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒಂದು ವ್ಯಾಪಾರವಾಗಿ ನಡೆಸಲು ಸಂವಿಧಾನದಲ್ಲಿ ಮಾನ್ಯತೆ ಇಲ್ಲ” ಎಂದೂ ಹೇಳಿತ್ತು.
ಆದರೆ ಈಗ, ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ನ್ಯಾಯ ನೀತಿಯನ್ನು ಅನುಸರಿಸಬೇಕಿಲ್ಲ, ತಮಗೆ ಸೂಕ್ತವೆನಿಸುವಷ್ಟು ಶುಲ್ಕವನ್ನು ವಿಧಿಸಬಹುದು ಎಂದು ಅದೇ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಒಂದು ರೀತಿಯಲ್ಲಿ ಇದೇ ನ್ಯಾಯಾಲಯ ಖಿಒಂ ಪೈ ಪ್ರಕರಣದಲ್ಲಿ “ಶಿಕ್ಷಣವನ್ನು ವ್ಯವಹಾರವಾಗಿ ನಡೆಸಬಹುದು; ಸರ್ಕಾರ ಮೂಗು ತೂರಿಸಬಾರದು” ಎಂದು 2002ರಲ್ಲಿ ನೀಡಿದ್ದ ತೀರ್ಪಿನ ಮುಂದುವರಿದ ಭಾಗದಂತಿದೆ. ಈ ತೀರ್ಪು ನಮ್ಮ ಸಂವಿಧಾನದಲ್ಲಿರುವ ಆಶಯಗಳಿಗೆ ಎಷ್ಟು ಹತ್ತಿರವಾಗಿದೆ ಎಂದು ಯಾರೂ ಬೇಕಾದರೂ ತೀರ್ಮಾನಿಸಬಹುದು.
ಇನ್ನು ಮೆರಿಟ್ ಆಧಾರದ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶವನ್ನು ತೀರ್ಮಾನಿಸಬಹುದು ಎಂದು ಹೇಳಿದೆ. ಮೊದಲನೆಯದಾಗಿ ಈ ‘ಮೆರಿಟ್’ ಎಂಬುದನ್ನೇ ತೀರ್ಮಾನಿಸುವುದು ಯಾವ ಮಾನದಂಡದಿಂದ? ಜಾತಿ, ವರ್ಗ, ನಗರ-ಗ್ರಾಮೀಣ, ಉಳ್ಳವರು-ಉಳ್ಳದಿರುವವರು ಹೀಗೆ ಹಲವಾರು ಅಂತರಗಳು ನಮ್ಮ ಸಮಾಜದಲ್ಲಿರುವಾಗ, ಇಲ್ಲಿ ಐeveಟ Pಟಚಿಥಿiಟಿg ಈieಟಜ ಎಂಬುದೇ ಇಲ್ಲದಿರುವಾಗ, ಈ ‘ಮೆರಿಟ್’ ಅನ್ನು ನಿರ್ಧರಿಸುವುದು ಹೇಗೆ? ಇದನ್ನೆಲ್ಲಾ ಚಿಂತಿಸುತ್ತಾ ಹೋದಂತೆ, ನಿಜವಾಗಲೂ ಇಂದಿನ ಸಮಾಜದಲ್ಲಿ ನಮ್ಮ ಲಕ್ಷಾಂತರ ಪ್ರತಿಭಾವಂತ ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಭವಿಷ್ಯವೇ ಇಲ್ಲದಂತಾಗಿದೆ,
ಇದು ಯಾವ ನ್ಯಾಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....