Homeಕರ್ನಾಟಕಸುಮಲತಾ ಮಾಡಿದ 3 ದಾಖಲೆಗಳು

ಸುಮಲತಾ ಮಾಡಿದ 3 ದಾಖಲೆಗಳು

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು.

- Advertisement -
- Advertisement -

| ಬಿ. ಚಂದ್ರೇಗೌಡ |

ಚುನಾವಣೆ ನಂತರ ಅಭ್ಯರ್ಥಿಗಳು ಸತತ ಒಂದು ತಿಂಗಳು ಮತಪೆಟ್ಟಿಗೆಯೊಳಗೆ ಸಿಕ್ಕಿ ನರಳಿದ್ದು ಇದೇ ಮೊದಲಿರಬೇಕು. ಸಹಜವಾಗಿ, ಮತ ನೀಡಿದ ಕೆಲ ಮದ್ಯ ವ್ಯಸನಿ ಮತದಾರರು, ನಿದ್ರೆ ಬಾರದ ಕಾರಣ ನೀಡಿ ಸರಿಯಾಗಿ ಗುಂಡೇರಿಸತೊಡಗಿದರು. ಜೊತೆಯಲ್ಲಿದ್ದ ಮಂಜೇಗೌಡ ಒಳಗಿನ ಎಣ್ಣೆ ವ್ಯಯವಾದಂತೆ ಹೋಗಿ ಹೋಗಿ ತುಂಬಿಸಿಕೊಂಡು ಬರುತ್ತಿದ್ದ. ಹಾಗಾಗಿ ಕಣ್ಣು ಸದಾ ಕೆಂಪಗೆ ಉರಿಯತೊಡಗಿದ್ದವು. ಕೆಲವರಂತೂ ಇವುಳೆಲ್ಲಿದ್ದಳಯ್ಯ ಸುಮಲತ ಬಂದು ಯಲಕ್ಷನ್ನಿಗೆ ನಿಂತು ನಮ್ಮ ಸರೀಳನೆ ಹಾಳಾಗೋಯ್ತು ಎಂದು ಗೊಣಗಿದ್ದರು.”

ಈ ನಡುವೆ ಸುಮಲತ ಗೆಲ್ಲುವ ಬಗ್ಗೆ ಗೆಳೆಯನೊಬ್ಬ ಒಂದು ಲಕ್ಷ ಬೆಟ್ ಕಟ್ಟುವುದಾಗಿ ಘೋಷಣೆ ಮಾಡಿದ, ಯಾರೂ ಬರಲಿಲ್ಲ. ಅದನ್ನು ಐವತ್ತು ಸಾವಿರಕ್ಕೆ ಇಳಿಸಿದ ನಂತರ ಒಬ್ಬ ಬಂದ. ಆತ ಬರಲು ಕಾರಣವೇನೆಂದರೆ, ಈ ಮನೆ ಮುರುಕ ಟಿವಿಗಳು ಮತ್ತೆ ಸುಮಲತ ವಿಷಯ ತೆಗೆದುಕೊಂಡು ಕಾದಿದೆ ಮಂಡ್ಯಕ್ಕೆ ಅಚ್ಚರಿ ಫಲಿತಾಂಶ ಎಂದು ಬೊಗಳತೊಡಗಿದ್ದವು. ಕೊನೆಗೆ ನೆಕ್ ಟು ನೆಕ್ ಎಂದು ಬಿಕ್ಕ ತೊಡಗಿದವು. ಇದರಿಂದ ಸ್ಫೂರ್ತಿಗೊಂಡ ಜೂಜುಗಾರರು ಆತ್ಮವಿಶ್ವಾಸದಿಂದಲೇ ಐವತ್ತು ಸಾವಿರ ತಂದರು. ಅದೈವತ್ತು ಇದೈವತ್ತು ಒಟ್ಟು ಒಂದು ಲಕ್ಷವನ್ನು ಮೂರನೆ ವ್ಯಕ್ತಿ ಕೈಗಿತ್ತು, ಫಲಿತಾಂಶದ ದಿನ ಪಾರ್ಟಿ ಮಾಡಲು ಒಂದು ಸಾವಿರ ತೆಗೆದಿರಿಸಿ, ಆದಿನ ಮದ್ಯದಂಗಡಿ ಬಂದ್ ಆಗುವ ಅಪಾಯವನ್ನ ಗ್ರಹಿಸಿ ಕೂಡಲೇ ಒಂದು ಸಾವಿರಕ್ಕೆ ಎಂಸಿ ಬ್ರಾಂಡಿ ತಂದಿರಿಸಲು ಹೇಳಿದೆವು. ನಿಖಿಲ್ ಗೆಲ್ಲುವ ಬಗ್ಗೆ ಆತ್ಮವಿಶ್ವಾಸದಿಂದ ಮಾತನಾಡುವವರನ್ನು ಕಂಡು ದಿಗಿಲಾಯ್ತು, ಅವರ ಪ್ರಕಾರ ನೂರಾರು ಬೂತಿನಲ್ಲಿ ನಮ್ಮ ಏಜೆಂಟರೇ ಇರಲಿಲ್ಲ. ಜೊತೆಗೆ ಕುಮಾರಣ್ಣ ಕೆ.ಆರ್.ಎಸ್‍ನಲ್ಲಿ ಬೀಡುಬಿಟ್ಟು ಪುಡಿ ಜಾತಿ ಲೀಡರುಗಳನ್ನೆಲ್ಲಾ ಕೊಂಡಿದ್ದಾರಂತೆ, ಈ ಪೈಕಿ ಕುರುಬರ ಮತಗಳನ್ನ ಅಟ್ಟಿಕೊಂಡು ಬಂದು ಬೂತನ್ನ ತುಂಬಿಸುತ್ತೇನೆಂದು ಹೇಳಿದವನೊಬ್ಬನಿಗೆ ಕುಮಾರಣ್ಣ ಹತ್ತು ಲಕ್ಷ ಕೊಟ್ಟನೆಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಸಾಕ್ಷಿಯೊದಗಿಸುವಂತೆ ಇಪ್ಪತೈದು ಲಕ್ಷದ ಕಾರಿನಲ್ಲಿ ಬಂದ ಆತ ನಿಖಿಲ್‍ಗೆ ಓಟು ಮಾಡಿ ಎಂದು ಬೈಸಿಕೊಂಡು ಹೋಗಿದ್ದ.

ಇದೆಲ್ಲಕ್ಕಿಂತ ನಮಗೆ ಇನ್ನ ದಿಗಿಲು ಹುಟ್ಟಿಸಿದ್ದು, ಸುಮಲತ ಗೆದ್ದು ಬಿಜೆಪಿ ಸೇರುತ್ತಾಳೆಂದು ಭಾವಿಸಿರುವ ಮುಸ್ಲಿಮರು ನಿಖಿಲನಿಗೆ ಓಟು ಮಾಡಿದ್ದಾರೆಂಬುದು, ಅಂತೂ ದಶದಿಕ್ಕಿನಿಂದ ನಮಗೆ ಅಶುಭ ಸುದ್ದಿಗಳೇ ಬರತೊಡಗಿದವು. ಇಂತಹ ಸಮಯದಲ್ಲಿ ನಾನು ಕೇವಲ ಐದು ಸಾವಿರ ಬೆಟ್ ಕಟ್ಟಿದ್ದೆ. ಚುನಾವಣೆ ಫಲಿತಾಂಶದ ವರೆಗೂ ನಾನು ಊರಲ್ಲೇ ಇದ್ದುಬಿಟ್ಟೆ. ಇಲ್ಲಿಗೆ ಪತ್ರಿಕೆಗಳು ಬರುವುದಿಲ್ಲ, ಹಾಗೆ ಟಿವಿ ನೋಡಿ ತಿಂಗಳ ಮೇಲಾಯ್ತು. ಹಳ್ಳಿಗಳು ಇನ್ನ ಉಳಿಸಿಕೊಂಡಿರುವ ಶಕ್ತಿಯಲ್ಲಿ ಪೇಪರ್, ಟಿವಿ ಬೇಕೆನಿಸುವುದಿಲ್ಲ. ಆದರೆ ಜನ ಸಮೂಹದ ಜೊತೆ ಮಾತನಾಡಲು ಸಾಧ್ಯವೇ ಇಲ್ಲ. ಬಾಯಿ ಬಿಟ್ಟರೆ ಸಾಕು ಮೊರೆಯುತ್ತಾರೆ. ಯಾರು ಏನನ್ನ ಕೇಳಿಸಿಕೊಳ್ಳುವುದಿಲ್ಲ. ನಮ್ಮ ಮನೆಯಲ್ಲೇ ಹೆಬ್ಬೆಟ್ಟಿನ ಸಹೋದರನೊಬ್ಬ ರಾಜಕಾರಣದ ಬಗ್ಗೆ ನನಗೇ ಹೇಳಲು ಬರುತ್ತಾನೆ. ಅವನ ಲೆಕ್ಕದಲ್ಲಿ ನಾನು ಕಿರಿಯ ಅವನು ಹಿರಿಯ ಅದಕ್ಕಾಗಿ ಕೇಳಿಸಿಕೊಳ್ಳಬೇಕಂತೆ!

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು. ಒಂಚೂರು ನಿಖಿಲ್ ಮುಂದೆ ಹೋದ ಸುದ್ದಿಯಿಂದ ಅವನ ಅಭಿಮಾನಿಗಳು ಅವನಂತೆಯೇ ಆಡತೊಡಗಿದರು. ಒಂದಿಷ್ಟು ಆತಂಕವಾಯ್ತು, ನಮ್ಮ ನಾಗಮಂಗಲ ಕ್ಷೇತ್ರದಲ್ಲಿ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ಗೆ ನಲವತ್ತೇಳು ಸಾವಿರ ಲೀಡು ಬಂದಿತ್ತು ಅದನ್ನ ಹತ್ತಿಕ್ಕಿ ಕನಿಷ್ಟ ಹತ್ತು ಸಾವಿರ ನಿಖಿಲ್ ಲೀಡ್ ಬರಬಹುದೆಂಬುದು ನಮ್ಮ ಲೆಕ್ಕಾಚಾರವಾಗಿತ್ತು. ಅದು ನಿಜವಾಯ್ತು. ಇದು ಬಿಟ್ಟರೆ ಜಿಲ್ಲೆಯ ಇನ್ನಾವ ತಾಲ್ಲೂಕು ಜೆಡಿಎಸ್‍ಗೆ ಲೀಡ್ ಕೊಡಲಿಲ್ಲ. ನಮ್ಮೂರಿಗೆ ಸುಮಲತ ಲಕ್ಷ ಲೀಡ್‍ನಲ್ಲಿ ಗೆದ್ದಳು ಎಂಬ ಸುದ್ದಿ ತಲುಪಿದಾಗ, ಜನ ಊರ ಮುಂದಿದ್ದರು. ಅದೇ ಸಮಯಕ್ಕೆ ಮಳೆ ಆರಂಭವಾಯ್ತು, ಜನ ಮಳೆಯಲ್ಲೇ ಕುಣಿಯತೊಡಗಿದರು. ಅದು ರಂಗದ ಕುಣಿತ, ತಮ್ಮಟೆ ಚಿಕ್ಕಣ್ಣ ಮಾಯಪ್ಪ ಇವರೆಲ್ಲಾ ತಮಟೆ ಬಡಿಯತೊಡಗಿದಂತೆ ಒಂದು ಗಂಟೆ ಸುರಿದ ಮಳೆಯಲ್ಲಿ ಹೊಸ ತಲೆಮಾರಿನ ಹುಡುಗರು ಕುಣಿಯತೊಡಗಿದರು. ಆಶ್ಚರ್ಯವೆಂದರೆ, ಈ ಕುಣಿತದ ಸಂಭ್ರಮ ನೋಡಲಾಗದ ನಿಖಿಲ್ ಕಡೆಯವರೂ ಬಂದು ಕುಣಿಯತೊಡಗಿದರು. ಈ ಸಮ್ಮಿಲನಕ್ಕೆ ಜನ ಹರ್ಷೋದ್ಘಾರ ಮಾಡಿ ಸೀಟಿ ಹೊಡೆದರು. ವಾಸ್ತವವಾಗಿ ದೇವೇಗೌಡ ಮತ್ತು ಕುಮಾರಸ್ವಮಿಯನ್ನು ಬೆಂಬಲಿಸಿದ್ದವರು ಸ್ವಾಭಿಮಾನ ಕಳೆದುಕೊಂಡವರಂತೆ ಮುಖರಹಿತರಾಗಿದ್ದರು. ಈಗ ಅವರ ಸಂಭ್ರಮ ನೋಡಿದರೆ ಅವರಿಗೂ ಸುಮಲತ ಗೆಲ್ಲಬೇಕಿತ್ತೇನೋ ಅನ್ನಿಸುತ್ತದೆ.

ಇದೇನೆ ಆದರು ಸುಮಲತ ಮೂರು ದಾಖಲೆ ಮಾಡಿದ್ದಾರೆ. ಅದೇನೆಂದರೆ 1. ಮಂಡ್ಯದಿಂದ ಆಯ್ಕೆಯಾದ ಮೊದಲ ಪಕ್ಷೇತರ ಅಭ್ಯರ್ಥಿ. 2. ರಾಜ್ಯದ ಕಳೆದ 52 ವರ್ಷದಲ್ಲಿ ಮೊದಲ ಬಾರಿಗೆ ಸ್ವತಂತ್ರವಾಗಿ ಆಯ್ಕೆಯಾದ ಮಹಿಳಾ ಅಭ್ಯರ್ಥಿ. 3. ದೇಶದ ಮಹಿಳಾ ಪಕ್ಷೇತರ ಸದಸ್ಯೆ. ಇರಲಿ ನನ್ನ ಜೊತೆ ಬೆಟ್ ಕಟ್ಟಿದ್ದವನು ಪತ್ತೆಯಿಲ್ಲ. ನಾನು ಊರಿಂದ ಬಂದ ಮೇಲೆ ಊರಿಗೆ ಬಂದಿರಬಹುದು. ನಮ್ಮ ಸ್ವಾಭಿಮಾನ ಗೆದ್ದಿತಲ್ಲ ಅಷ್ಟೇ ಸಾಕು.

ಇದನ್ನು ಓದಿರಿ ಮಂಡ್ಯದಲ್ಲಿ ನಾ ಕಂಡದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...