Homeಕರ್ನಾಟಕಸುಮಲತಾ ಮಾಡಿದ 3 ದಾಖಲೆಗಳು

ಸುಮಲತಾ ಮಾಡಿದ 3 ದಾಖಲೆಗಳು

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು.

- Advertisement -
- Advertisement -

| ಬಿ. ಚಂದ್ರೇಗೌಡ |

ಚುನಾವಣೆ ನಂತರ ಅಭ್ಯರ್ಥಿಗಳು ಸತತ ಒಂದು ತಿಂಗಳು ಮತಪೆಟ್ಟಿಗೆಯೊಳಗೆ ಸಿಕ್ಕಿ ನರಳಿದ್ದು ಇದೇ ಮೊದಲಿರಬೇಕು. ಸಹಜವಾಗಿ, ಮತ ನೀಡಿದ ಕೆಲ ಮದ್ಯ ವ್ಯಸನಿ ಮತದಾರರು, ನಿದ್ರೆ ಬಾರದ ಕಾರಣ ನೀಡಿ ಸರಿಯಾಗಿ ಗುಂಡೇರಿಸತೊಡಗಿದರು. ಜೊತೆಯಲ್ಲಿದ್ದ ಮಂಜೇಗೌಡ ಒಳಗಿನ ಎಣ್ಣೆ ವ್ಯಯವಾದಂತೆ ಹೋಗಿ ಹೋಗಿ ತುಂಬಿಸಿಕೊಂಡು ಬರುತ್ತಿದ್ದ. ಹಾಗಾಗಿ ಕಣ್ಣು ಸದಾ ಕೆಂಪಗೆ ಉರಿಯತೊಡಗಿದ್ದವು. ಕೆಲವರಂತೂ ಇವುಳೆಲ್ಲಿದ್ದಳಯ್ಯ ಸುಮಲತ ಬಂದು ಯಲಕ್ಷನ್ನಿಗೆ ನಿಂತು ನಮ್ಮ ಸರೀಳನೆ ಹಾಳಾಗೋಯ್ತು ಎಂದು ಗೊಣಗಿದ್ದರು.”

ಈ ನಡುವೆ ಸುಮಲತ ಗೆಲ್ಲುವ ಬಗ್ಗೆ ಗೆಳೆಯನೊಬ್ಬ ಒಂದು ಲಕ್ಷ ಬೆಟ್ ಕಟ್ಟುವುದಾಗಿ ಘೋಷಣೆ ಮಾಡಿದ, ಯಾರೂ ಬರಲಿಲ್ಲ. ಅದನ್ನು ಐವತ್ತು ಸಾವಿರಕ್ಕೆ ಇಳಿಸಿದ ನಂತರ ಒಬ್ಬ ಬಂದ. ಆತ ಬರಲು ಕಾರಣವೇನೆಂದರೆ, ಈ ಮನೆ ಮುರುಕ ಟಿವಿಗಳು ಮತ್ತೆ ಸುಮಲತ ವಿಷಯ ತೆಗೆದುಕೊಂಡು ಕಾದಿದೆ ಮಂಡ್ಯಕ್ಕೆ ಅಚ್ಚರಿ ಫಲಿತಾಂಶ ಎಂದು ಬೊಗಳತೊಡಗಿದ್ದವು. ಕೊನೆಗೆ ನೆಕ್ ಟು ನೆಕ್ ಎಂದು ಬಿಕ್ಕ ತೊಡಗಿದವು. ಇದರಿಂದ ಸ್ಫೂರ್ತಿಗೊಂಡ ಜೂಜುಗಾರರು ಆತ್ಮವಿಶ್ವಾಸದಿಂದಲೇ ಐವತ್ತು ಸಾವಿರ ತಂದರು. ಅದೈವತ್ತು ಇದೈವತ್ತು ಒಟ್ಟು ಒಂದು ಲಕ್ಷವನ್ನು ಮೂರನೆ ವ್ಯಕ್ತಿ ಕೈಗಿತ್ತು, ಫಲಿತಾಂಶದ ದಿನ ಪಾರ್ಟಿ ಮಾಡಲು ಒಂದು ಸಾವಿರ ತೆಗೆದಿರಿಸಿ, ಆದಿನ ಮದ್ಯದಂಗಡಿ ಬಂದ್ ಆಗುವ ಅಪಾಯವನ್ನ ಗ್ರಹಿಸಿ ಕೂಡಲೇ ಒಂದು ಸಾವಿರಕ್ಕೆ ಎಂಸಿ ಬ್ರಾಂಡಿ ತಂದಿರಿಸಲು ಹೇಳಿದೆವು. ನಿಖಿಲ್ ಗೆಲ್ಲುವ ಬಗ್ಗೆ ಆತ್ಮವಿಶ್ವಾಸದಿಂದ ಮಾತನಾಡುವವರನ್ನು ಕಂಡು ದಿಗಿಲಾಯ್ತು, ಅವರ ಪ್ರಕಾರ ನೂರಾರು ಬೂತಿನಲ್ಲಿ ನಮ್ಮ ಏಜೆಂಟರೇ ಇರಲಿಲ್ಲ. ಜೊತೆಗೆ ಕುಮಾರಣ್ಣ ಕೆ.ಆರ್.ಎಸ್‍ನಲ್ಲಿ ಬೀಡುಬಿಟ್ಟು ಪುಡಿ ಜಾತಿ ಲೀಡರುಗಳನ್ನೆಲ್ಲಾ ಕೊಂಡಿದ್ದಾರಂತೆ, ಈ ಪೈಕಿ ಕುರುಬರ ಮತಗಳನ್ನ ಅಟ್ಟಿಕೊಂಡು ಬಂದು ಬೂತನ್ನ ತುಂಬಿಸುತ್ತೇನೆಂದು ಹೇಳಿದವನೊಬ್ಬನಿಗೆ ಕುಮಾರಣ್ಣ ಹತ್ತು ಲಕ್ಷ ಕೊಟ್ಟನೆಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಸಾಕ್ಷಿಯೊದಗಿಸುವಂತೆ ಇಪ್ಪತೈದು ಲಕ್ಷದ ಕಾರಿನಲ್ಲಿ ಬಂದ ಆತ ನಿಖಿಲ್‍ಗೆ ಓಟು ಮಾಡಿ ಎಂದು ಬೈಸಿಕೊಂಡು ಹೋಗಿದ್ದ.

ಇದೆಲ್ಲಕ್ಕಿಂತ ನಮಗೆ ಇನ್ನ ದಿಗಿಲು ಹುಟ್ಟಿಸಿದ್ದು, ಸುಮಲತ ಗೆದ್ದು ಬಿಜೆಪಿ ಸೇರುತ್ತಾಳೆಂದು ಭಾವಿಸಿರುವ ಮುಸ್ಲಿಮರು ನಿಖಿಲನಿಗೆ ಓಟು ಮಾಡಿದ್ದಾರೆಂಬುದು, ಅಂತೂ ದಶದಿಕ್ಕಿನಿಂದ ನಮಗೆ ಅಶುಭ ಸುದ್ದಿಗಳೇ ಬರತೊಡಗಿದವು. ಇಂತಹ ಸಮಯದಲ್ಲಿ ನಾನು ಕೇವಲ ಐದು ಸಾವಿರ ಬೆಟ್ ಕಟ್ಟಿದ್ದೆ. ಚುನಾವಣೆ ಫಲಿತಾಂಶದ ವರೆಗೂ ನಾನು ಊರಲ್ಲೇ ಇದ್ದುಬಿಟ್ಟೆ. ಇಲ್ಲಿಗೆ ಪತ್ರಿಕೆಗಳು ಬರುವುದಿಲ್ಲ, ಹಾಗೆ ಟಿವಿ ನೋಡಿ ತಿಂಗಳ ಮೇಲಾಯ್ತು. ಹಳ್ಳಿಗಳು ಇನ್ನ ಉಳಿಸಿಕೊಂಡಿರುವ ಶಕ್ತಿಯಲ್ಲಿ ಪೇಪರ್, ಟಿವಿ ಬೇಕೆನಿಸುವುದಿಲ್ಲ. ಆದರೆ ಜನ ಸಮೂಹದ ಜೊತೆ ಮಾತನಾಡಲು ಸಾಧ್ಯವೇ ಇಲ್ಲ. ಬಾಯಿ ಬಿಟ್ಟರೆ ಸಾಕು ಮೊರೆಯುತ್ತಾರೆ. ಯಾರು ಏನನ್ನ ಕೇಳಿಸಿಕೊಳ್ಳುವುದಿಲ್ಲ. ನಮ್ಮ ಮನೆಯಲ್ಲೇ ಹೆಬ್ಬೆಟ್ಟಿನ ಸಹೋದರನೊಬ್ಬ ರಾಜಕಾರಣದ ಬಗ್ಗೆ ನನಗೇ ಹೇಳಲು ಬರುತ್ತಾನೆ. ಅವನ ಲೆಕ್ಕದಲ್ಲಿ ನಾನು ಕಿರಿಯ ಅವನು ಹಿರಿಯ ಅದಕ್ಕಾಗಿ ಕೇಳಿಸಿಕೊಳ್ಳಬೇಕಂತೆ!

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು. ಒಂಚೂರು ನಿಖಿಲ್ ಮುಂದೆ ಹೋದ ಸುದ್ದಿಯಿಂದ ಅವನ ಅಭಿಮಾನಿಗಳು ಅವನಂತೆಯೇ ಆಡತೊಡಗಿದರು. ಒಂದಿಷ್ಟು ಆತಂಕವಾಯ್ತು, ನಮ್ಮ ನಾಗಮಂಗಲ ಕ್ಷೇತ್ರದಲ್ಲಿ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ಗೆ ನಲವತ್ತೇಳು ಸಾವಿರ ಲೀಡು ಬಂದಿತ್ತು ಅದನ್ನ ಹತ್ತಿಕ್ಕಿ ಕನಿಷ್ಟ ಹತ್ತು ಸಾವಿರ ನಿಖಿಲ್ ಲೀಡ್ ಬರಬಹುದೆಂಬುದು ನಮ್ಮ ಲೆಕ್ಕಾಚಾರವಾಗಿತ್ತು. ಅದು ನಿಜವಾಯ್ತು. ಇದು ಬಿಟ್ಟರೆ ಜಿಲ್ಲೆಯ ಇನ್ನಾವ ತಾಲ್ಲೂಕು ಜೆಡಿಎಸ್‍ಗೆ ಲೀಡ್ ಕೊಡಲಿಲ್ಲ. ನಮ್ಮೂರಿಗೆ ಸುಮಲತ ಲಕ್ಷ ಲೀಡ್‍ನಲ್ಲಿ ಗೆದ್ದಳು ಎಂಬ ಸುದ್ದಿ ತಲುಪಿದಾಗ, ಜನ ಊರ ಮುಂದಿದ್ದರು. ಅದೇ ಸಮಯಕ್ಕೆ ಮಳೆ ಆರಂಭವಾಯ್ತು, ಜನ ಮಳೆಯಲ್ಲೇ ಕುಣಿಯತೊಡಗಿದರು. ಅದು ರಂಗದ ಕುಣಿತ, ತಮ್ಮಟೆ ಚಿಕ್ಕಣ್ಣ ಮಾಯಪ್ಪ ಇವರೆಲ್ಲಾ ತಮಟೆ ಬಡಿಯತೊಡಗಿದಂತೆ ಒಂದು ಗಂಟೆ ಸುರಿದ ಮಳೆಯಲ್ಲಿ ಹೊಸ ತಲೆಮಾರಿನ ಹುಡುಗರು ಕುಣಿಯತೊಡಗಿದರು. ಆಶ್ಚರ್ಯವೆಂದರೆ, ಈ ಕುಣಿತದ ಸಂಭ್ರಮ ನೋಡಲಾಗದ ನಿಖಿಲ್ ಕಡೆಯವರೂ ಬಂದು ಕುಣಿಯತೊಡಗಿದರು. ಈ ಸಮ್ಮಿಲನಕ್ಕೆ ಜನ ಹರ್ಷೋದ್ಘಾರ ಮಾಡಿ ಸೀಟಿ ಹೊಡೆದರು. ವಾಸ್ತವವಾಗಿ ದೇವೇಗೌಡ ಮತ್ತು ಕುಮಾರಸ್ವಮಿಯನ್ನು ಬೆಂಬಲಿಸಿದ್ದವರು ಸ್ವಾಭಿಮಾನ ಕಳೆದುಕೊಂಡವರಂತೆ ಮುಖರಹಿತರಾಗಿದ್ದರು. ಈಗ ಅವರ ಸಂಭ್ರಮ ನೋಡಿದರೆ ಅವರಿಗೂ ಸುಮಲತ ಗೆಲ್ಲಬೇಕಿತ್ತೇನೋ ಅನ್ನಿಸುತ್ತದೆ.

ಇದೇನೆ ಆದರು ಸುಮಲತ ಮೂರು ದಾಖಲೆ ಮಾಡಿದ್ದಾರೆ. ಅದೇನೆಂದರೆ 1. ಮಂಡ್ಯದಿಂದ ಆಯ್ಕೆಯಾದ ಮೊದಲ ಪಕ್ಷೇತರ ಅಭ್ಯರ್ಥಿ. 2. ರಾಜ್ಯದ ಕಳೆದ 52 ವರ್ಷದಲ್ಲಿ ಮೊದಲ ಬಾರಿಗೆ ಸ್ವತಂತ್ರವಾಗಿ ಆಯ್ಕೆಯಾದ ಮಹಿಳಾ ಅಭ್ಯರ್ಥಿ. 3. ದೇಶದ ಮಹಿಳಾ ಪಕ್ಷೇತರ ಸದಸ್ಯೆ. ಇರಲಿ ನನ್ನ ಜೊತೆ ಬೆಟ್ ಕಟ್ಟಿದ್ದವನು ಪತ್ತೆಯಿಲ್ಲ. ನಾನು ಊರಿಂದ ಬಂದ ಮೇಲೆ ಊರಿಗೆ ಬಂದಿರಬಹುದು. ನಮ್ಮ ಸ್ವಾಭಿಮಾನ ಗೆದ್ದಿತಲ್ಲ ಅಷ್ಟೇ ಸಾಕು.

ಇದನ್ನು ಓದಿರಿ ಮಂಡ್ಯದಲ್ಲಿ ನಾ ಕಂಡದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...