Homeಕರ್ನಾಟಕಸುಮಲತಾ ಮಾಡಿದ 3 ದಾಖಲೆಗಳು

ಸುಮಲತಾ ಮಾಡಿದ 3 ದಾಖಲೆಗಳು

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು.

- Advertisement -
- Advertisement -

| ಬಿ. ಚಂದ್ರೇಗೌಡ |

ಚುನಾವಣೆ ನಂತರ ಅಭ್ಯರ್ಥಿಗಳು ಸತತ ಒಂದು ತಿಂಗಳು ಮತಪೆಟ್ಟಿಗೆಯೊಳಗೆ ಸಿಕ್ಕಿ ನರಳಿದ್ದು ಇದೇ ಮೊದಲಿರಬೇಕು. ಸಹಜವಾಗಿ, ಮತ ನೀಡಿದ ಕೆಲ ಮದ್ಯ ವ್ಯಸನಿ ಮತದಾರರು, ನಿದ್ರೆ ಬಾರದ ಕಾರಣ ನೀಡಿ ಸರಿಯಾಗಿ ಗುಂಡೇರಿಸತೊಡಗಿದರು. ಜೊತೆಯಲ್ಲಿದ್ದ ಮಂಜೇಗೌಡ ಒಳಗಿನ ಎಣ್ಣೆ ವ್ಯಯವಾದಂತೆ ಹೋಗಿ ಹೋಗಿ ತುಂಬಿಸಿಕೊಂಡು ಬರುತ್ತಿದ್ದ. ಹಾಗಾಗಿ ಕಣ್ಣು ಸದಾ ಕೆಂಪಗೆ ಉರಿಯತೊಡಗಿದ್ದವು. ಕೆಲವರಂತೂ ಇವುಳೆಲ್ಲಿದ್ದಳಯ್ಯ ಸುಮಲತ ಬಂದು ಯಲಕ್ಷನ್ನಿಗೆ ನಿಂತು ನಮ್ಮ ಸರೀಳನೆ ಹಾಳಾಗೋಯ್ತು ಎಂದು ಗೊಣಗಿದ್ದರು.”

ಈ ನಡುವೆ ಸುಮಲತ ಗೆಲ್ಲುವ ಬಗ್ಗೆ ಗೆಳೆಯನೊಬ್ಬ ಒಂದು ಲಕ್ಷ ಬೆಟ್ ಕಟ್ಟುವುದಾಗಿ ಘೋಷಣೆ ಮಾಡಿದ, ಯಾರೂ ಬರಲಿಲ್ಲ. ಅದನ್ನು ಐವತ್ತು ಸಾವಿರಕ್ಕೆ ಇಳಿಸಿದ ನಂತರ ಒಬ್ಬ ಬಂದ. ಆತ ಬರಲು ಕಾರಣವೇನೆಂದರೆ, ಈ ಮನೆ ಮುರುಕ ಟಿವಿಗಳು ಮತ್ತೆ ಸುಮಲತ ವಿಷಯ ತೆಗೆದುಕೊಂಡು ಕಾದಿದೆ ಮಂಡ್ಯಕ್ಕೆ ಅಚ್ಚರಿ ಫಲಿತಾಂಶ ಎಂದು ಬೊಗಳತೊಡಗಿದ್ದವು. ಕೊನೆಗೆ ನೆಕ್ ಟು ನೆಕ್ ಎಂದು ಬಿಕ್ಕ ತೊಡಗಿದವು. ಇದರಿಂದ ಸ್ಫೂರ್ತಿಗೊಂಡ ಜೂಜುಗಾರರು ಆತ್ಮವಿಶ್ವಾಸದಿಂದಲೇ ಐವತ್ತು ಸಾವಿರ ತಂದರು. ಅದೈವತ್ತು ಇದೈವತ್ತು ಒಟ್ಟು ಒಂದು ಲಕ್ಷವನ್ನು ಮೂರನೆ ವ್ಯಕ್ತಿ ಕೈಗಿತ್ತು, ಫಲಿತಾಂಶದ ದಿನ ಪಾರ್ಟಿ ಮಾಡಲು ಒಂದು ಸಾವಿರ ತೆಗೆದಿರಿಸಿ, ಆದಿನ ಮದ್ಯದಂಗಡಿ ಬಂದ್ ಆಗುವ ಅಪಾಯವನ್ನ ಗ್ರಹಿಸಿ ಕೂಡಲೇ ಒಂದು ಸಾವಿರಕ್ಕೆ ಎಂಸಿ ಬ್ರಾಂಡಿ ತಂದಿರಿಸಲು ಹೇಳಿದೆವು. ನಿಖಿಲ್ ಗೆಲ್ಲುವ ಬಗ್ಗೆ ಆತ್ಮವಿಶ್ವಾಸದಿಂದ ಮಾತನಾಡುವವರನ್ನು ಕಂಡು ದಿಗಿಲಾಯ್ತು, ಅವರ ಪ್ರಕಾರ ನೂರಾರು ಬೂತಿನಲ್ಲಿ ನಮ್ಮ ಏಜೆಂಟರೇ ಇರಲಿಲ್ಲ. ಜೊತೆಗೆ ಕುಮಾರಣ್ಣ ಕೆ.ಆರ್.ಎಸ್‍ನಲ್ಲಿ ಬೀಡುಬಿಟ್ಟು ಪುಡಿ ಜಾತಿ ಲೀಡರುಗಳನ್ನೆಲ್ಲಾ ಕೊಂಡಿದ್ದಾರಂತೆ, ಈ ಪೈಕಿ ಕುರುಬರ ಮತಗಳನ್ನ ಅಟ್ಟಿಕೊಂಡು ಬಂದು ಬೂತನ್ನ ತುಂಬಿಸುತ್ತೇನೆಂದು ಹೇಳಿದವನೊಬ್ಬನಿಗೆ ಕುಮಾರಣ್ಣ ಹತ್ತು ಲಕ್ಷ ಕೊಟ್ಟನೆಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಸಾಕ್ಷಿಯೊದಗಿಸುವಂತೆ ಇಪ್ಪತೈದು ಲಕ್ಷದ ಕಾರಿನಲ್ಲಿ ಬಂದ ಆತ ನಿಖಿಲ್‍ಗೆ ಓಟು ಮಾಡಿ ಎಂದು ಬೈಸಿಕೊಂಡು ಹೋಗಿದ್ದ.

ಇದೆಲ್ಲಕ್ಕಿಂತ ನಮಗೆ ಇನ್ನ ದಿಗಿಲು ಹುಟ್ಟಿಸಿದ್ದು, ಸುಮಲತ ಗೆದ್ದು ಬಿಜೆಪಿ ಸೇರುತ್ತಾಳೆಂದು ಭಾವಿಸಿರುವ ಮುಸ್ಲಿಮರು ನಿಖಿಲನಿಗೆ ಓಟು ಮಾಡಿದ್ದಾರೆಂಬುದು, ಅಂತೂ ದಶದಿಕ್ಕಿನಿಂದ ನಮಗೆ ಅಶುಭ ಸುದ್ದಿಗಳೇ ಬರತೊಡಗಿದವು. ಇಂತಹ ಸಮಯದಲ್ಲಿ ನಾನು ಕೇವಲ ಐದು ಸಾವಿರ ಬೆಟ್ ಕಟ್ಟಿದ್ದೆ. ಚುನಾವಣೆ ಫಲಿತಾಂಶದ ವರೆಗೂ ನಾನು ಊರಲ್ಲೇ ಇದ್ದುಬಿಟ್ಟೆ. ಇಲ್ಲಿಗೆ ಪತ್ರಿಕೆಗಳು ಬರುವುದಿಲ್ಲ, ಹಾಗೆ ಟಿವಿ ನೋಡಿ ತಿಂಗಳ ಮೇಲಾಯ್ತು. ಹಳ್ಳಿಗಳು ಇನ್ನ ಉಳಿಸಿಕೊಂಡಿರುವ ಶಕ್ತಿಯಲ್ಲಿ ಪೇಪರ್, ಟಿವಿ ಬೇಕೆನಿಸುವುದಿಲ್ಲ. ಆದರೆ ಜನ ಸಮೂಹದ ಜೊತೆ ಮಾತನಾಡಲು ಸಾಧ್ಯವೇ ಇಲ್ಲ. ಬಾಯಿ ಬಿಟ್ಟರೆ ಸಾಕು ಮೊರೆಯುತ್ತಾರೆ. ಯಾರು ಏನನ್ನ ಕೇಳಿಸಿಕೊಳ್ಳುವುದಿಲ್ಲ. ನಮ್ಮ ಮನೆಯಲ್ಲೇ ಹೆಬ್ಬೆಟ್ಟಿನ ಸಹೋದರನೊಬ್ಬ ರಾಜಕಾರಣದ ಬಗ್ಗೆ ನನಗೇ ಹೇಳಲು ಬರುತ್ತಾನೆ. ಅವನ ಲೆಕ್ಕದಲ್ಲಿ ನಾನು ಕಿರಿಯ ಅವನು ಹಿರಿಯ ಅದಕ್ಕಾಗಿ ಕೇಳಿಸಿಕೊಳ್ಳಬೇಕಂತೆ!

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು. ಒಂಚೂರು ನಿಖಿಲ್ ಮುಂದೆ ಹೋದ ಸುದ್ದಿಯಿಂದ ಅವನ ಅಭಿಮಾನಿಗಳು ಅವನಂತೆಯೇ ಆಡತೊಡಗಿದರು. ಒಂದಿಷ್ಟು ಆತಂಕವಾಯ್ತು, ನಮ್ಮ ನಾಗಮಂಗಲ ಕ್ಷೇತ್ರದಲ್ಲಿ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ಗೆ ನಲವತ್ತೇಳು ಸಾವಿರ ಲೀಡು ಬಂದಿತ್ತು ಅದನ್ನ ಹತ್ತಿಕ್ಕಿ ಕನಿಷ್ಟ ಹತ್ತು ಸಾವಿರ ನಿಖಿಲ್ ಲೀಡ್ ಬರಬಹುದೆಂಬುದು ನಮ್ಮ ಲೆಕ್ಕಾಚಾರವಾಗಿತ್ತು. ಅದು ನಿಜವಾಯ್ತು. ಇದು ಬಿಟ್ಟರೆ ಜಿಲ್ಲೆಯ ಇನ್ನಾವ ತಾಲ್ಲೂಕು ಜೆಡಿಎಸ್‍ಗೆ ಲೀಡ್ ಕೊಡಲಿಲ್ಲ. ನಮ್ಮೂರಿಗೆ ಸುಮಲತ ಲಕ್ಷ ಲೀಡ್‍ನಲ್ಲಿ ಗೆದ್ದಳು ಎಂಬ ಸುದ್ದಿ ತಲುಪಿದಾಗ, ಜನ ಊರ ಮುಂದಿದ್ದರು. ಅದೇ ಸಮಯಕ್ಕೆ ಮಳೆ ಆರಂಭವಾಯ್ತು, ಜನ ಮಳೆಯಲ್ಲೇ ಕುಣಿಯತೊಡಗಿದರು. ಅದು ರಂಗದ ಕುಣಿತ, ತಮ್ಮಟೆ ಚಿಕ್ಕಣ್ಣ ಮಾಯಪ್ಪ ಇವರೆಲ್ಲಾ ತಮಟೆ ಬಡಿಯತೊಡಗಿದಂತೆ ಒಂದು ಗಂಟೆ ಸುರಿದ ಮಳೆಯಲ್ಲಿ ಹೊಸ ತಲೆಮಾರಿನ ಹುಡುಗರು ಕುಣಿಯತೊಡಗಿದರು. ಆಶ್ಚರ್ಯವೆಂದರೆ, ಈ ಕುಣಿತದ ಸಂಭ್ರಮ ನೋಡಲಾಗದ ನಿಖಿಲ್ ಕಡೆಯವರೂ ಬಂದು ಕುಣಿಯತೊಡಗಿದರು. ಈ ಸಮ್ಮಿಲನಕ್ಕೆ ಜನ ಹರ್ಷೋದ್ಘಾರ ಮಾಡಿ ಸೀಟಿ ಹೊಡೆದರು. ವಾಸ್ತವವಾಗಿ ದೇವೇಗೌಡ ಮತ್ತು ಕುಮಾರಸ್ವಮಿಯನ್ನು ಬೆಂಬಲಿಸಿದ್ದವರು ಸ್ವಾಭಿಮಾನ ಕಳೆದುಕೊಂಡವರಂತೆ ಮುಖರಹಿತರಾಗಿದ್ದರು. ಈಗ ಅವರ ಸಂಭ್ರಮ ನೋಡಿದರೆ ಅವರಿಗೂ ಸುಮಲತ ಗೆಲ್ಲಬೇಕಿತ್ತೇನೋ ಅನ್ನಿಸುತ್ತದೆ.

ಇದೇನೆ ಆದರು ಸುಮಲತ ಮೂರು ದಾಖಲೆ ಮಾಡಿದ್ದಾರೆ. ಅದೇನೆಂದರೆ 1. ಮಂಡ್ಯದಿಂದ ಆಯ್ಕೆಯಾದ ಮೊದಲ ಪಕ್ಷೇತರ ಅಭ್ಯರ್ಥಿ. 2. ರಾಜ್ಯದ ಕಳೆದ 52 ವರ್ಷದಲ್ಲಿ ಮೊದಲ ಬಾರಿಗೆ ಸ್ವತಂತ್ರವಾಗಿ ಆಯ್ಕೆಯಾದ ಮಹಿಳಾ ಅಭ್ಯರ್ಥಿ. 3. ದೇಶದ ಮಹಿಳಾ ಪಕ್ಷೇತರ ಸದಸ್ಯೆ. ಇರಲಿ ನನ್ನ ಜೊತೆ ಬೆಟ್ ಕಟ್ಟಿದ್ದವನು ಪತ್ತೆಯಿಲ್ಲ. ನಾನು ಊರಿಂದ ಬಂದ ಮೇಲೆ ಊರಿಗೆ ಬಂದಿರಬಹುದು. ನಮ್ಮ ಸ್ವಾಭಿಮಾನ ಗೆದ್ದಿತಲ್ಲ ಅಷ್ಟೇ ಸಾಕು.

ಇದನ್ನು ಓದಿರಿ ಮಂಡ್ಯದಲ್ಲಿ ನಾ ಕಂಡದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...