Homeಮುಖಪುಟಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

ಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

- Advertisement -
- Advertisement -

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಸುದ್ದಿಯೊಂದು ಹರಿದಾಡುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಖರ್ಗೆಯವರ ಖಾಸಾ ಶಿಷ್ಯರೂ ಆಗಿರುವ ಶರಣಪ್ರಕಾಶ್ ಪಾಟೀಲ್ ಅವರು ಈ ಸಾಧ್ಯತೆಯನ್ನು ತಳ್ಳಿಹಾಕಿದ್ದಾರಾದರೂ ಹಲವು ಕಾಂಗ್ರೆಸ್ಸಿಗರೇ ಆ ಸಾಧ್ಯತೆಯನ್ನು ಬಲವಾಗಿ ನಂಬಿದ್ದಾರೆ. ಇದರ ಹಿಂದಿನ ಲಾಜಿಕ್ಕು ಈ ಸಾಧ್ಯತೆಗೆ ಪುಷ್ಠಿ ನೀಡುತ್ತಿವೆ.

ಮೊದಲನೆಯದಾಗಿ, ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಬೇಕಿರುವುದು ಕಾಂಗ್ರೆಸ್‍ಗೆ ಜೀವನ್ಮರಣದ ಪ್ರಶ್ನೆ. ಹಾಗಾಗಿ, ಗೆಲ್ಲಲೇಬೇಕು ಎಂಬ ಅನಿವಾರ್ಯತೆ ಇದ್ದುದರಿಂದ ಪಕ್ಷದಲ್ಲಿ ಗೆಲ್ಲುವವರು ಯಾರೇ ಇದ್ದರೂ ಸರಿ ತಂದು ಚುನಾವಣೆಗೆ ನಿಲ್ಲಿಸಬೇಕೆಂದು ಹೈಕಮಾಂಡ್ ಯೋಚಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆಯವರು ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತಾರೆ ಎಂಬುದು ಸಾಮಾನ್ಯ ಜ್ಞಾನ.

ಎರಡನೆಯದಾಗಿ, ಮಲ್ಲಿಕಾರ್ಜುನ ಖರ್ಗೆಯವರ ಮಗ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈ ಬಾರಿ ಚಿತ್ತಾಪುರ ಕ್ಷೇತ್ರದಿಂದ ಗೆಲ್ಲುವುದು ಕಷ್ಟ ಎಂಬ ಅಭಿಪ್ರಾಯವಿದೆ. ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ವಿಶ್ವಾಸವನ್ನು ಜ್ಯೂನಿಯರ್ ಖರ್ಗೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ, ಚಿತ್ತಾಪುರ ಕ್ಷೇತ್ರದಿಂದ ತಾವೇ ನಿಂತರೆ ಈ ಎಲ್ಲಾ ಅಸಮಾಧಾನಗಳು ಇರುವುದಿಲ್ಲ. ಪಕ್ಷದ ಹಿರಿಯ, ಕಿರಿಯ ನಾಯಕರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ತಮ್ಮನ್ನು ಗೆಲ್ಲಿಸುತ್ತಾರೆ ಎಂಬ ಭರವಸೆ ಸೀನಿಯರ್ ಖರ್ಗೆಗೂ ಇದೆ.

ಮೂರನೆಯದಾಗಿ, ಒಂದು ವೇಳೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಜೆಡಿಎಸ್ ಬೆಂಬಲದೊಂದಿಗೆ ಸರ್ಕಾರ ರಚಿಸುವ ಅನಿವಾರ್ಯತೆ ಕಾಂಗ್ರೆಸ್ಸಿಗೆ ಬಂದರೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಲು ದೇವೇಗೌಡರಾಗಲೀ, ಕುಮಾರಸ್ವಾಮಿಯವರಾಗಲಿ. ಸುತರಾಂ ಒಪ್ಪುವುದಿಲ್ಲ. ಅಂಥಾ ಸನ್ನಿವೇಶದಲ್ಲಿ ಖರ್ಗೆಯವರು ಮುಂಚೂಣಿಯಲ್ಲಿದ್ದರೆ ಉಭಯರಿಗೂ ಅನುಕೂಲ. ಹೀಗಾದರೆ ಒಂದೆಡೆ ದೇವೇಗೌಡರನ್ನೂ ತೃಪ್ತಿಪಡಿಸಿದಂತಾಗುತ್ತದೆ, ದಲಿತ ಮುಖ್ಯಮಂತ್ರಿಯ ಬಹುದಿನದ ಬೇಡಿಕೆಯನ್ನು ಈಡೇರಿಸಿ ದಲಿತರ ನಡುವಿನ ಬೇಸ್ ಗಟ್ಟಿಗೊಳಿಸಿದಂತಾಗುತ್ತದೆ.

ರಾಜಕೀಯದಲ್ಲಿ ಅಸಾಧ್ಯ ಎಂಬುದು ಯಾವುದೂ ಇಲ್ಲ. ಖರ್ಗೆ ಮತ್ತು ಹೈಕಮಾಂಡ್ ನಡೆಯ ಮೇಲೆ ಈ ರಾಜಕೀಯ ಲೆಕ್ಕಾಚಾರ ನಿಂತಿದೆ ಎನ್ನಲಾಗಿದೆ.

ಈ ಲೆಕ್ಕಾಚಾರ ಒಂದೆಡೆಯಾದರೆ, ಖರ್ಗೆಯವರ ಮಗನ ರಾಜಕೀಯ ಭವಿಷ್ಯವೇನು ಎಂಬುದು ಮತ್ತೊಂದು ಜಟಿಲ ಪ್ರಶ್ನೆ. ಅದಕ್ಕೂ ಒಂದು ಪರ್ಯಾಯ ಯೋಜನೆ ಸಿದ್ಧವಾಗಿದೆ. ಅದು ಗುಲ್ಬರ್ಗಾ ಗ್ರಾಮೀಣ ಕ್ಷೇತ್ರ. ಅದೂ ಕೂಡ ಚಿತ್ತಾಪುರದಂತೆಯೇ ಎಸ್‍ಸಿ ಮೀಸಲು ಕ್ಷೇತ್ರ. ಅಲ್ಲಿ ಕಳೆದ ಬಾರಿ ಬಿಜೆಪಿ, ಕೆಜೆಪಿ ಪಕ್ಷಗಳ ಮತವಿಭಜನೆಯಿಂದಾಗಿ ಕಾಂಗ್ರೆಸ್ಸಿನ ರಾಮಕೃಷ್ಣ ಗೆದ್ದಿದ್ದರು. ಅವರಿಗೆ ವಯಸ್ಸಾಗಿದೆ, ಆರೋಗ್ಯವೂ ಸರಿಯಿಲ್ಲ. ಅವರು ಈ ಬಾರಿ ಚುನಾವಣಾ ಕಣದಲ್ಲೂ ಇಲ್ಲ. ಅವರ ಮಗ ಟಿಕೆಟ್ ಆಕಾಂಕ್ಷಿಯಾಗಿದ್ದರೂ ತಂದೆಗಿದ್ದ ಜನಬೆಂಬಲ ಮಗನಿಗಿಲ್ಲ. ಹೀಗಾಗಿ, ಪ್ರಿಯಾಂಕ ಖರ್ಗೆಯನ್ನು ಅಲ್ಲಿಗೆ ತಂದರೆ ಅವರು ಒಮ್ಮತದ ಅಭ್ಯರ್ಥಿಯಾಗಿಬಿಡುತ್ತಾರೆ. ಅಲ್ಲಿ ಬಿಜೆಪಿ, ಕೆಜೆಪಿ ಒಂದಾಗಿದ್ದರೂ ಮೂವರು ಟಿಕೆಟ್ ಆಕಾಂಕ್ಷಿಗಳು ಪರಸ್ಪರ ಪೈಪೋಟಿಯ ಹಿನ್ನೆಲೆಯಲ್ಲಿ ಖರ್ಗೆ ಪುತ್ರನ ಹಾದಿ ಸುಗಮವಾಗಲಿದೆ. ರೇವುನಾಯಕ ಬೆಳಮಗಿಗೆ ಟಿಕೆಟ್ ಖಾತರಿಯಾಗಲಿದ್ದು ಉಳಿದವರು ಬಂಡಾಯವೇಳುವ ಸಾಧ್ಯತೆಯಿದೆ. ಬಿಜೆಪಿಯ ಈ ಬಂಡಾಯವನ್ನು ಉಪಯೋಗಿಸಿಕೊಳ್ಳುವುದಕ್ಕೂ ಪ್ರಿಯಾಂಕ್ ಖರ್ಗೆ ಸ್ಪರ್ಧೆ ಕಾಂಗ್ರೆಸ್ಸಿಗೆ ನೆರವಾಗಲಿದೆಯೆಂಬ ಲೆಕ್ಕಾಚಾರ ಚಾಲ್ತಿಯಲ್ಲಿದೆ. ರಾಜಕಾರಣದ ಒಳಸುಳಿಗಳೇ ಹೀಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...