Homeಅಂಕಣಗಳುಗಟ್ಟಿತನವಿಲ್ಲದ ಸೆಕ್ಯುಲರಿಸಂನಿಂದ ಸಮ್ಮಿಶ್ರ ಸರ್ಕಾರ ಪರ್ಯಾಯವಾಗಲಾರದು

ಗಟ್ಟಿತನವಿಲ್ಲದ ಸೆಕ್ಯುಲರಿಸಂನಿಂದ ಸಮ್ಮಿಶ್ರ ಸರ್ಕಾರ ಪರ್ಯಾಯವಾಗಲಾರದು

- Advertisement -
- Advertisement -

ಬೆಂಗಳೂರು ಸಮೀಪದ ಜಿಲ್ಲೆಯ ತಾಲೂಕು. ಆರೆಸ್ಸೆಸ್ ಮತ್ತು ಅದರ ಪರಿವಾರ ಅಲ್ಲಿ ಸಕ್ರಿಯವಾಗಿಲ್ಲ. ಬಿಜೆಪಿ ಎಂದೂ ಗೆದ್ದಿಲ್ಲ. ಮುಸ್ಲಿಮರು ಹೆಚ್ಚಲ್ಲದಿದ್ದರೂ ದೇಶದ ಸರಾಸರಿಯ ಪ್ರಮಾಣದಲ್ಲಿ ಅಲ್ಲೂ ಇದ್ದಾರೆ. ಟಿಪ್ಪು ಜಯಂತಿಯ ಕಾರ್ಯಕ್ರಮವನ್ನು ಆಯೋಜಿಸುವ ಮುನ್ನ ತಹಸೀಲ್ದಾರರು ಸಭೆ ಕರೆದಿದ್ದಾರೆ. ನಿಯಮಗಳ ಪ್ರಕಾರ ಅವರು ರಾಷ್ಟಿçÃಯ ಹಬ್ಬಗಳ ಸಮಿತಿಯ ಅಧ್ಯಕ್ಷರು. ಇಂತಹ ಎಲ್ಲಾ ಜಯಂತಿಗಳಲ್ಲೂ ಮಾಡುವಂತೆ, ಯಾರ ಜಯಂತಿಯನ್ನು ಆಚರಿಸಲಾಗುತ್ತದೋ, ಆ ವ್ಯಕ್ತಿಯು ಯಾವ ಜಾತಿ ಅಥವಾ ಧರ್ಮಕ್ಕೆ ಸೇರಿದವರೆಂದು ಹೇಳಲಾಗುತ್ತದೋ ಅವರನ್ನು ಹೆಚ್ಚಾಗಿ ಕರೆಯಲಾಯಿತು. ಹಾಗಾಗಿ ಮುಸ್ಲಿಮರೂ ಗಣನೀಯ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ತಹಸೀಲ್ದಾರರು ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಹೇಳಿದ್ದಿಷ್ಟು. ಒಂದು ಸಭಾಂಗಣದಲ್ಲಿ ಕಾರ್ಯಕ್ರಮ ಮಾಡೋಣ; ಮೆರವಣಿಗೆ ಮಾಡಲು ಅಥವಾ ಮೈದಾನದಲ್ಲಿ ಮಾಡಲು ಈ ಸಾರಿ ಅನುಮತಿ ನೀಡಬಾರದೆಂದು ಮೇಲಿನಿಂದ ಆದೇಶ ಬಂದಿದೆ. ಇದನ್ನು ಸಭೆಯಲ್ಲಿದ್ದ ಮುಸ್ಲಿಮರು ಒಪ್ಪಲಿಲ್ಲ. ‘ಬೇರೆ ಎಲ್ಲಾ ಜಯಂತಿಗಳಿಗಾದರೆ ಈ ರೀತಿ ಮೆರವಣಿಗೆ ಮಾಡಲು ಅವಕಾಶ ಕೊಡುತ್ತಿÃರಿ, ಟಿಪ್ಪು ಜಯಂತಿಗೆ ಏಕೆ ಕೊಡುವುದಿಲ್ಲ?’ವೆಂದು ಕೇಳಿದರು. ಕೇಳಿದ್ದರಲ್ಲಿ ತಪ್ಪೆÃನಿರಲಿಲ್ಲ. ಆದರೆ, ಈ ಸಾರಿ ತೀರ್ಮಾನ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿ ತಹಸೀಲ್ದಾರರು ಇರಲಿಲ್ಲ. ಇದು ಮೇಲಿನಿಂದ ಬಂದ ಆದೇಶವಾಗಿತ್ತು. ಅಲ್ಲಿಗೂ ಇನ್ನೊಂದು ಮಾತನ್ನು ಹೇಳಿದರು, ‘ಒಂದು ವೇಳೆ ಈ ಆದೇಶದಲ್ಲಿ ಬದಲಾವಣೆ ಬಂದು, ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಮೆರವಣಿಗೆ ಇತ್ಯಾದಿಗಳ ವಿಚಾರದಲ್ಲಿ ಸ್ಥಳೀಯವಾಗಿಯೇ ತೀರ್ಮಾನ ತೆಗೆದುಕೊಳ್ಳಬಹುದು ಎಂದಾದರೆ, ನಾವು ಖಂಡಿತವಾಗಿ ಅವಕಾಶ ಮಾಡಿಕೊಡುತ್ತೆÃವೆ’. ಸರ್ಕಲ್ ಇನ್ಸ್ಪೆಕ್ಟರ್ ಸಹಾ ದನಿಗೂಡಿಸಿದರು.
ಇದನ್ನು ಒಪ್ಪದ ಮುಸ್ಲಿಂ ಮುಖಂಡರು ಸಭಾತ್ಯಾಗ ಮಾಡಿದರಲ್ಲದೇ, ನಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲವೆಂದು ಹೇಳಿಯೇ ಹೋದರು. ಅಷ್ಟು ಹೊತ್ತಿಗೆ ಮಧ್ಯಮ ಪ್ರಮಾಣದ ಒಂದು ಸಭಾಂಗಣದಲ್ಲಿ ಕಾರ್ಯಕ್ರಮ ಮಾಡುವುದೆಂದು ತೀರ್ಮಾನವಾಗಿತ್ತು ಮತ್ತು ಭಾಷಣ ಮಾಡಲು ಭಾಷಣಕಾರರನ್ನೂ ನಿಗದಿ ಮಾಡಲಾಗಿತ್ತು. ಈ ಸದ್ಯ ಎಲ್ಲಾ ಮಹಾಪುರುಷರೂ, ಮಹಿಳೆಯರೂ ಆಯಾ ಜಾತಿ ಅಥವಾ ಧರ್ಮಕ್ಕೆ ಸೀಮಿತರು. ಹಾಗಾಗಿ ಜಾತ್ಯಸ್ಥರೇ ಕೈಬಿಟ್ಟ ಮೇಲೆ ಟಿಪ್ಪು ಅನಾಥ.
ಆ ತಾಲೂಕಿನ ಶಾಸಕರು ಸಚಿವರಾಗಿದ್ದರಿಂದ, ಅವರು ಜಿಲ್ಲಾ ಕೇಂದ್ರಕ್ಕೆ ಹೋದರು. ಹೀಗಾಗಿ ಅವರನ್ನು ನೋಡಲು ಅಥವಾ ಮೆಚ್ಚಿಸಲು ಬರಬಹುದಾದವರೂ ಕಾರ್ಯಕ್ರಮಕ್ಕೆ ಬರಲಿಲ್ಲ. ಅಲ್ಲಿನ ಸಂಘಪರಿವಾರದ ಗುಂಪೂ ದುರ್ಬಲವಾದ್ದರಿಂದ, ಗಲಭೆಯೆಬ್ಬಿಸಲು ಬರಬಹುದಾದವರೂ ಬರಲಿಲ್ಲ. ಕಾರ್ಯಕ್ರಮ ಆರಂಭದ ಸಮಯಕ್ಕೆ ಸಭಾಂಗಣದಲ್ಲಿ 30 ಜನರಿದ್ದರು. ತಹಸೀಲ್ದಾರರಿಗೆ ಪೀಕಲಾಟಕ್ಕಿಟ್ಟುಕೊಂಡಿತು. ಅವರು ಕ್ಷೆÃತ್ರ ಶಿಕ್ಷಣಾಧಿಕಾರಿಗಳನ್ನು ಕರೆದು, ಹತ್ತಿರದ ಯಾವುದಾದರೂ ಶಾಲೆಯಿಂದ ಮಕ್ಕಳನ್ನು ಕರೆಸಿರಿ ಎಂದರು. ಆದರೆ, ಅವರಿಗೆ ಹಿಂಜರಿಕೆ. ‘ಈ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳನ್ನು ಕರೆದಿದ್ದಾರೆ ಎಂದು ವಿವಾದವಾದರೆ?’ ಎಂಬುದು ಅವರ ಕಾರಣ. ಅಂದರೆ, ಟಿಪ್ಪು ಸುಲ್ತಾನ್ ನಾಡು ಕಂಡ ಹೆಮ್ಮೆಯ ದೊರೆ ಎಂದು ಪಠ್ಯಪುಸ್ತಕದಲ್ಲಿ ಇನ್ನೂ ಉಳಿದಿರಬಹುದಾದರೂ, ಸರ್ಕಾರವೇ ಟಿಪ್ಪು ಜಯಂತಿಯನ್ನು ಮಾಡುತ್ತಿದ್ದರೂ, ಮಕ್ಕಳನ್ನು ಕರೆದರೆ ‘ಇದು ಟಿಪ್ಪು ಜಯಂತಿ’ ಎನ್ನುವ ಕಾರಣಕ್ಕೆÃ ವಿವಾದವಾಗುತ್ತದೆಂಬುದು ಅವರ ಭಯ.
ಅಂತಿಮವಾಗಿ ಸಭಾಂಗಣದೊಳಗೆ ಒಂದಷ್ಟು ಜನ ಮುಸ್ಲಿಮರು ಬಂದರು. ಪುರಸಭೆಯ ಅಧ್ಯಕ್ಷ ಮುಸ್ಲಿಮರಾಗಿದ್ದುದರಿಂದ ಅವರು ಇದನ್ನು ಪ್ರತಿಷ್ಠೆಯ ಪ್ರಶ್ನೆಯನ್ನಾಗಿಸಿಕೊಂಡು ಕೆಲವರಾದರೂ ಬರಬೇಕೆಂದು ಶತಪ್ರಯತ್ನ ಹಾಕಿದ್ದರು! ಅಸಲು ಸಮಸ್ಯೆ ಏನಾಗಿತ್ತೆಂದರೆ, ಈ ಅಧ್ಯಕ್ಷರಿಗಿಂತ ಮುಂಚೆ ಅಧ್ಯಕ್ಷರಾಗಿದ್ದವರೂ ಮುಸ್ಲಿಮರೇ. ತನ್ನ ನಂತರ ಇನ್ನೊಬ್ಬ ನಾಯಕ ತನ್ನದೇ ಸಮುದಾಯದಲ್ಲಿ ಮೇಲೆ ಬಂದು, ಆತನ ವೇದಿಕೆಯ ಮೇಲೆ ವಿರಾಜಮಾನನಾಗಿರುವಾಗ ಆ ಕಾರ್ಯಕ್ರಮ ಯಶಸ್ವಿಯಾಗಬಾರದೆಂಬುದು ವಿರೋಧಕ್ಕೆ ಅಸಲೀ ಕಾರಣವಾಗಿತ್ತು. ಮೆರವಣಿಗೆ ಕೇವಲ ನೆಪವಾಗಿತ್ತು. ಹೊಸದಾಗಿ ಅಧ್ಯಕ್ಷರಾಗಿದ್ದ ವ್ಯಕ್ತಿಗಿಂತ ಪ್ರಭಾವಿಯಾಗಿದ್ದ ಹಿಂದಿನ ಅಧ್ಯಕ್ಷ ಮಿಕ್ಕವರನ್ನು ತಡೆದಿದ್ದರು!
ಇಂದು ಟಿಪ್ಪು ಸುಲ್ತಾನರ ಜಯಂತಿ ಹೀಗೂ ನಡೆಯುತ್ತಿದೆ. ನಾಡಿಗೆ ನಾಡೇ ಹೆಮ್ಮೆ ಪಡಬೇಕಿದ್ದ ಧೀಮಂತ ಆಡಳಿತಗಾರನೊಬ್ಬನನ್ನು, ಒಂದು ಜಾತಿಗೆ ಅಥವಾ ಧರ್ಮಕ್ಕೆ ಸೀಮಿತಗೊಳಿಸುವುದು. ಆ ಕಾರಣಕ್ಕೆÃ ಜಯಂತಿಯನ್ನು ಆಚರಿಸುವುದು ಅಥವಾ ವಿರೋಧಿಸುವುದು. ತಮ್ಮದೇ ಸ್ವಂತ ಹಿತಾಸಕ್ತಿಯು ಮುಂದೆ ಬರುವುದಾದಲ್ಲಿ, ಆ ಜಾತಿಯವರೂ ಕಾರ್ಯಕ್ರಮಕ್ಕೆ ತಿರಸ್ಕಾರ ತೋರುವುದು ಇದು ವಿದ್ಯಮಾನ.
ಇದಕ್ಕೆ ಸ್ವತಃ ಮುಖ್ಯಮಂತ್ರಿಯವರೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಮೊದಲು ಯಾವುದೇ ಕಾರಣ ನೀಡದೇ, ರಾಜ್ಯ ಮಟ್ಟದ ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲೂ ತಮ್ಮ ಹೆಸರಿಲ್ಲದಂತೆ ಗೈರುಹಾಜರಿಯ ತೀರ್ಮಾನ ಘೋಷಿಸಿದ್ದರು. ನಂತರ ಇದೊಂದು ಸುದ್ದಿಯಾದಾಗ ಅನಾರೋಗ್ಯದ ಸ್ಪಷ್ಟಿÃಕರಣ ಕೊಟ್ಟರು. ಇದಲ್ಲದೇ ವಾಲ್ಮಿÃಕಿ ಜಯಂತಿ ಕಾರ್ಯಕ್ರಮಕ್ಕೂ ಹೋಗಿರಲಿಲ್ಲ, ಈಗ ಹೋದರೆ ಬೇರೆ ಅರ್ಥ ಬರುತ್ತದೆಂಬ ಸುದ್ದಿಯನ್ನೂ ತೇಲಿಬಿಡಲಾಯಿತು. ಇದೇ ಮುಖ್ಯಮಂತ್ರಿಯವರು ಕೆಂಪೇಗೌಡ ಜಯಂತಿ ಸರ್ಕಾರದ ವತಿಯಿಂದ ಆದಾಗ ಬೆಂಗಳೂರಿನಲ್ಲೂ (ಜೂನ್ 27) ಭಾಗವಹಿಸಿದ್ದರು, (ಆಗಸ್ಟ್ 11ರಂದು) ಒಕ್ಕಲಿಗರ ಸಂಘದಿಂದ ಚಿಕ್ಕಬಳ್ಳಾಪುರದಲ್ಲಿ ನಡೆದಾಗಲೂ ಭಾಗವಹಿಸಿದ್ದರು.
ದೇಶದ ಇಂದಿನ ಸ್ಥಿತಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ಭಾಗವಹಿಸದೇ ಇದ್ದರೆ ಅದು ಯಾವ ಸಂದೇಶ ಕೊಡುತ್ತದೆಂಬುದು ಅವರಿಗೆ ಗೊತ್ತಿಲ್ಲದೇ ಏನಿಲ್ಲ. ಅಂತಹದೊಂದು ಸಂದೇಶ ಹೋಗಲಿ ಎಂಬ ಬಯಕೆಯೂ ಅವರದ್ದಿರಬಹುದು. ಇದು ಕೇವಲ ಜೆಡಿಎಸ್‌ನ ಸಮಸ್ಯೆಯಲ್ಲ. ಕಾಂಗ್ರೆಸ್ ನಾಯಕರಲ್ಲಿ ಟಿಪ್ಪು ಸುಲ್ತಾನರ ಮಹತ್ವವನ್ನು ಅರಿತು ಅದನ್ನು ಸಮರ್ಥಿಸಿಕೊಳ್ಳಬಲ್ಲವರು ಬಹಳ ಕಡಿಮೆ. ಹೇಗೂ ಮುಸ್ಲಿಮರು ತಮಗೇ ಓಟು ಹಾಕುತ್ತಾರೆಂಬ ಭಾವನೆ ಅವರದ್ದಿದ್ದರೆ, ಬಹುಶಃ ಇನ್ನು ಮುಂದೆ ಮುಸ್ಲಿಮರು ತಮಗೆ ಓಟು ಹಾಕಲಾರರು ಎಂದು ಜೆಡಿಎಸ್ ಭಾವಿಸಿದಂತಿದೆ. ಟಿಪ್ಪು ಕುರಿತು ಸಂಘಪರಿವಾರದ ಫೇಕ್ ಸ್ಟೊÃರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದಾಗ, ಬಹುಶಃ ಟಿಪ್ಪು ಸುಲ್ತಾನ್ ಆ ರೀತಿಯೂ ಇದ್ದಿರಬಹುದು ಎಂದು ಕಾಂಗ್ರೆಸ್ ನಾಯಕರಲ್ಲಿ ಹಲವರು ಭಾವಿಸಿರಲಿಕ್ಕೂ ಸಾಕು. ಇಂತಹ ಎಡಬಿಡಂಗಿತನವನ್ನು ಕಾಂಗ್ರೆಸ್ – ಜೆಡಿಎಸ್ ನಾಯಕರು ತೊರೆಯುವವರೆಗೂ ಅವರು ಬಿಜೆಪಿಗೆ ಸರಿಯಾದ ಪರ್ಯಾಯವಾಗಲು ಸಾಧ್ಯವೇ ಇಲ್ಲ.
ಇಂತಹುದೇ ಇನ್ನೊಂದು ಸುದ್ದಿ ಈ ವಾರ ಬೆಳಕಿಗೆ ಬಂದಿದೆ. ಗೌರಿ ಲಂಕೇಶರ ಹತ್ಯೆಯ ತನಿಖೆ ನಡೆಸುತ್ತಿದ್ದ ಎಸ್‌ಐಟಿಗೆ ಆದ ಖರ್ಚಿನ ಬಾಕಿಯನ್ನು ಸರ್ಕಾರವಿನ್ನೂ ಪಾವತಿ ಮಾಡಿಲ್ಲವೆಂದು ವರದಿಯಾಗಿದೆ. ಬಹುಶಃ ಹಣ ಪಾವತಿಯಾಗಿಲ್ಲವೆಂಬ ಕಾರಣಕ್ಕೆ ಪೊಲೀಸ್ ಇಲಾಖೆಯು ತನಿಖೆಯನ್ನೆÃನೂ ನಿಲ್ಲಿಸುವುದಿಲ್ಲ ಅಥವಾ ಬೇರೆ ದಿಕ್ಕಿಗೆ ಹೋಗುವುದಿಲ್ಲ. ಆದರೆ, ಪರಿಣಾಮಕಾರಿಯಾಗಿ ಕೆಲಸ ಮಾಡಲು ಅಡಚಣೆಯಾಗುವುದರಲ್ಲಂತೂ ಸಂದೇಹವಿಲ್ಲ. ಈ ಕುರಿತ ಸತ್ಯಾಸತ್ಯತೆಯನ್ನು ಸರ್ಕಾರ, ಇಲಾಖೆ ಜನರ ಮುಂದಿಡಬೇಕು. ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...