Homeಅಂಕಣಗಳುಗಟ್ಟಿತನವಿಲ್ಲದ ಸೆಕ್ಯುಲರಿಸಂನಿಂದ ಸಮ್ಮಿಶ್ರ ಸರ್ಕಾರ ಪರ್ಯಾಯವಾಗಲಾರದು

ಗಟ್ಟಿತನವಿಲ್ಲದ ಸೆಕ್ಯುಲರಿಸಂನಿಂದ ಸಮ್ಮಿಶ್ರ ಸರ್ಕಾರ ಪರ್ಯಾಯವಾಗಲಾರದು

- Advertisement -
- Advertisement -

ಬೆಂಗಳೂರು ಸಮೀಪದ ಜಿಲ್ಲೆಯ ತಾಲೂಕು. ಆರೆಸ್ಸೆಸ್ ಮತ್ತು ಅದರ ಪರಿವಾರ ಅಲ್ಲಿ ಸಕ್ರಿಯವಾಗಿಲ್ಲ. ಬಿಜೆಪಿ ಎಂದೂ ಗೆದ್ದಿಲ್ಲ. ಮುಸ್ಲಿಮರು ಹೆಚ್ಚಲ್ಲದಿದ್ದರೂ ದೇಶದ ಸರಾಸರಿಯ ಪ್ರಮಾಣದಲ್ಲಿ ಅಲ್ಲೂ ಇದ್ದಾರೆ. ಟಿಪ್ಪು ಜಯಂತಿಯ ಕಾರ್ಯಕ್ರಮವನ್ನು ಆಯೋಜಿಸುವ ಮುನ್ನ ತಹಸೀಲ್ದಾರರು ಸಭೆ ಕರೆದಿದ್ದಾರೆ. ನಿಯಮಗಳ ಪ್ರಕಾರ ಅವರು ರಾಷ್ಟಿçÃಯ ಹಬ್ಬಗಳ ಸಮಿತಿಯ ಅಧ್ಯಕ್ಷರು. ಇಂತಹ ಎಲ್ಲಾ ಜಯಂತಿಗಳಲ್ಲೂ ಮಾಡುವಂತೆ, ಯಾರ ಜಯಂತಿಯನ್ನು ಆಚರಿಸಲಾಗುತ್ತದೋ, ಆ ವ್ಯಕ್ತಿಯು ಯಾವ ಜಾತಿ ಅಥವಾ ಧರ್ಮಕ್ಕೆ ಸೇರಿದವರೆಂದು ಹೇಳಲಾಗುತ್ತದೋ ಅವರನ್ನು ಹೆಚ್ಚಾಗಿ ಕರೆಯಲಾಯಿತು. ಹಾಗಾಗಿ ಮುಸ್ಲಿಮರೂ ಗಣನೀಯ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ತಹಸೀಲ್ದಾರರು ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಹೇಳಿದ್ದಿಷ್ಟು. ಒಂದು ಸಭಾಂಗಣದಲ್ಲಿ ಕಾರ್ಯಕ್ರಮ ಮಾಡೋಣ; ಮೆರವಣಿಗೆ ಮಾಡಲು ಅಥವಾ ಮೈದಾನದಲ್ಲಿ ಮಾಡಲು ಈ ಸಾರಿ ಅನುಮತಿ ನೀಡಬಾರದೆಂದು ಮೇಲಿನಿಂದ ಆದೇಶ ಬಂದಿದೆ. ಇದನ್ನು ಸಭೆಯಲ್ಲಿದ್ದ ಮುಸ್ಲಿಮರು ಒಪ್ಪಲಿಲ್ಲ. ‘ಬೇರೆ ಎಲ್ಲಾ ಜಯಂತಿಗಳಿಗಾದರೆ ಈ ರೀತಿ ಮೆರವಣಿಗೆ ಮಾಡಲು ಅವಕಾಶ ಕೊಡುತ್ತಿÃರಿ, ಟಿಪ್ಪು ಜಯಂತಿಗೆ ಏಕೆ ಕೊಡುವುದಿಲ್ಲ?’ವೆಂದು ಕೇಳಿದರು. ಕೇಳಿದ್ದರಲ್ಲಿ ತಪ್ಪೆÃನಿರಲಿಲ್ಲ. ಆದರೆ, ಈ ಸಾರಿ ತೀರ್ಮಾನ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿ ತಹಸೀಲ್ದಾರರು ಇರಲಿಲ್ಲ. ಇದು ಮೇಲಿನಿಂದ ಬಂದ ಆದೇಶವಾಗಿತ್ತು. ಅಲ್ಲಿಗೂ ಇನ್ನೊಂದು ಮಾತನ್ನು ಹೇಳಿದರು, ‘ಒಂದು ವೇಳೆ ಈ ಆದೇಶದಲ್ಲಿ ಬದಲಾವಣೆ ಬಂದು, ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಮೆರವಣಿಗೆ ಇತ್ಯಾದಿಗಳ ವಿಚಾರದಲ್ಲಿ ಸ್ಥಳೀಯವಾಗಿಯೇ ತೀರ್ಮಾನ ತೆಗೆದುಕೊಳ್ಳಬಹುದು ಎಂದಾದರೆ, ನಾವು ಖಂಡಿತವಾಗಿ ಅವಕಾಶ ಮಾಡಿಕೊಡುತ್ತೆÃವೆ’. ಸರ್ಕಲ್ ಇನ್ಸ್ಪೆಕ್ಟರ್ ಸಹಾ ದನಿಗೂಡಿಸಿದರು.
ಇದನ್ನು ಒಪ್ಪದ ಮುಸ್ಲಿಂ ಮುಖಂಡರು ಸಭಾತ್ಯಾಗ ಮಾಡಿದರಲ್ಲದೇ, ನಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲವೆಂದು ಹೇಳಿಯೇ ಹೋದರು. ಅಷ್ಟು ಹೊತ್ತಿಗೆ ಮಧ್ಯಮ ಪ್ರಮಾಣದ ಒಂದು ಸಭಾಂಗಣದಲ್ಲಿ ಕಾರ್ಯಕ್ರಮ ಮಾಡುವುದೆಂದು ತೀರ್ಮಾನವಾಗಿತ್ತು ಮತ್ತು ಭಾಷಣ ಮಾಡಲು ಭಾಷಣಕಾರರನ್ನೂ ನಿಗದಿ ಮಾಡಲಾಗಿತ್ತು. ಈ ಸದ್ಯ ಎಲ್ಲಾ ಮಹಾಪುರುಷರೂ, ಮಹಿಳೆಯರೂ ಆಯಾ ಜಾತಿ ಅಥವಾ ಧರ್ಮಕ್ಕೆ ಸೀಮಿತರು. ಹಾಗಾಗಿ ಜಾತ್ಯಸ್ಥರೇ ಕೈಬಿಟ್ಟ ಮೇಲೆ ಟಿಪ್ಪು ಅನಾಥ.
ಆ ತಾಲೂಕಿನ ಶಾಸಕರು ಸಚಿವರಾಗಿದ್ದರಿಂದ, ಅವರು ಜಿಲ್ಲಾ ಕೇಂದ್ರಕ್ಕೆ ಹೋದರು. ಹೀಗಾಗಿ ಅವರನ್ನು ನೋಡಲು ಅಥವಾ ಮೆಚ್ಚಿಸಲು ಬರಬಹುದಾದವರೂ ಕಾರ್ಯಕ್ರಮಕ್ಕೆ ಬರಲಿಲ್ಲ. ಅಲ್ಲಿನ ಸಂಘಪರಿವಾರದ ಗುಂಪೂ ದುರ್ಬಲವಾದ್ದರಿಂದ, ಗಲಭೆಯೆಬ್ಬಿಸಲು ಬರಬಹುದಾದವರೂ ಬರಲಿಲ್ಲ. ಕಾರ್ಯಕ್ರಮ ಆರಂಭದ ಸಮಯಕ್ಕೆ ಸಭಾಂಗಣದಲ್ಲಿ 30 ಜನರಿದ್ದರು. ತಹಸೀಲ್ದಾರರಿಗೆ ಪೀಕಲಾಟಕ್ಕಿಟ್ಟುಕೊಂಡಿತು. ಅವರು ಕ್ಷೆÃತ್ರ ಶಿಕ್ಷಣಾಧಿಕಾರಿಗಳನ್ನು ಕರೆದು, ಹತ್ತಿರದ ಯಾವುದಾದರೂ ಶಾಲೆಯಿಂದ ಮಕ್ಕಳನ್ನು ಕರೆಸಿರಿ ಎಂದರು. ಆದರೆ, ಅವರಿಗೆ ಹಿಂಜರಿಕೆ. ‘ಈ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳನ್ನು ಕರೆದಿದ್ದಾರೆ ಎಂದು ವಿವಾದವಾದರೆ?’ ಎಂಬುದು ಅವರ ಕಾರಣ. ಅಂದರೆ, ಟಿಪ್ಪು ಸುಲ್ತಾನ್ ನಾಡು ಕಂಡ ಹೆಮ್ಮೆಯ ದೊರೆ ಎಂದು ಪಠ್ಯಪುಸ್ತಕದಲ್ಲಿ ಇನ್ನೂ ಉಳಿದಿರಬಹುದಾದರೂ, ಸರ್ಕಾರವೇ ಟಿಪ್ಪು ಜಯಂತಿಯನ್ನು ಮಾಡುತ್ತಿದ್ದರೂ, ಮಕ್ಕಳನ್ನು ಕರೆದರೆ ‘ಇದು ಟಿಪ್ಪು ಜಯಂತಿ’ ಎನ್ನುವ ಕಾರಣಕ್ಕೆÃ ವಿವಾದವಾಗುತ್ತದೆಂಬುದು ಅವರ ಭಯ.
ಅಂತಿಮವಾಗಿ ಸಭಾಂಗಣದೊಳಗೆ ಒಂದಷ್ಟು ಜನ ಮುಸ್ಲಿಮರು ಬಂದರು. ಪುರಸಭೆಯ ಅಧ್ಯಕ್ಷ ಮುಸ್ಲಿಮರಾಗಿದ್ದುದರಿಂದ ಅವರು ಇದನ್ನು ಪ್ರತಿಷ್ಠೆಯ ಪ್ರಶ್ನೆಯನ್ನಾಗಿಸಿಕೊಂಡು ಕೆಲವರಾದರೂ ಬರಬೇಕೆಂದು ಶತಪ್ರಯತ್ನ ಹಾಕಿದ್ದರು! ಅಸಲು ಸಮಸ್ಯೆ ಏನಾಗಿತ್ತೆಂದರೆ, ಈ ಅಧ್ಯಕ್ಷರಿಗಿಂತ ಮುಂಚೆ ಅಧ್ಯಕ್ಷರಾಗಿದ್ದವರೂ ಮುಸ್ಲಿಮರೇ. ತನ್ನ ನಂತರ ಇನ್ನೊಬ್ಬ ನಾಯಕ ತನ್ನದೇ ಸಮುದಾಯದಲ್ಲಿ ಮೇಲೆ ಬಂದು, ಆತನ ವೇದಿಕೆಯ ಮೇಲೆ ವಿರಾಜಮಾನನಾಗಿರುವಾಗ ಆ ಕಾರ್ಯಕ್ರಮ ಯಶಸ್ವಿಯಾಗಬಾರದೆಂಬುದು ವಿರೋಧಕ್ಕೆ ಅಸಲೀ ಕಾರಣವಾಗಿತ್ತು. ಮೆರವಣಿಗೆ ಕೇವಲ ನೆಪವಾಗಿತ್ತು. ಹೊಸದಾಗಿ ಅಧ್ಯಕ್ಷರಾಗಿದ್ದ ವ್ಯಕ್ತಿಗಿಂತ ಪ್ರಭಾವಿಯಾಗಿದ್ದ ಹಿಂದಿನ ಅಧ್ಯಕ್ಷ ಮಿಕ್ಕವರನ್ನು ತಡೆದಿದ್ದರು!
ಇಂದು ಟಿಪ್ಪು ಸುಲ್ತಾನರ ಜಯಂತಿ ಹೀಗೂ ನಡೆಯುತ್ತಿದೆ. ನಾಡಿಗೆ ನಾಡೇ ಹೆಮ್ಮೆ ಪಡಬೇಕಿದ್ದ ಧೀಮಂತ ಆಡಳಿತಗಾರನೊಬ್ಬನನ್ನು, ಒಂದು ಜಾತಿಗೆ ಅಥವಾ ಧರ್ಮಕ್ಕೆ ಸೀಮಿತಗೊಳಿಸುವುದು. ಆ ಕಾರಣಕ್ಕೆÃ ಜಯಂತಿಯನ್ನು ಆಚರಿಸುವುದು ಅಥವಾ ವಿರೋಧಿಸುವುದು. ತಮ್ಮದೇ ಸ್ವಂತ ಹಿತಾಸಕ್ತಿಯು ಮುಂದೆ ಬರುವುದಾದಲ್ಲಿ, ಆ ಜಾತಿಯವರೂ ಕಾರ್ಯಕ್ರಮಕ್ಕೆ ತಿರಸ್ಕಾರ ತೋರುವುದು ಇದು ವಿದ್ಯಮಾನ.
ಇದಕ್ಕೆ ಸ್ವತಃ ಮುಖ್ಯಮಂತ್ರಿಯವರೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಮೊದಲು ಯಾವುದೇ ಕಾರಣ ನೀಡದೇ, ರಾಜ್ಯ ಮಟ್ಟದ ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲೂ ತಮ್ಮ ಹೆಸರಿಲ್ಲದಂತೆ ಗೈರುಹಾಜರಿಯ ತೀರ್ಮಾನ ಘೋಷಿಸಿದ್ದರು. ನಂತರ ಇದೊಂದು ಸುದ್ದಿಯಾದಾಗ ಅನಾರೋಗ್ಯದ ಸ್ಪಷ್ಟಿÃಕರಣ ಕೊಟ್ಟರು. ಇದಲ್ಲದೇ ವಾಲ್ಮಿÃಕಿ ಜಯಂತಿ ಕಾರ್ಯಕ್ರಮಕ್ಕೂ ಹೋಗಿರಲಿಲ್ಲ, ಈಗ ಹೋದರೆ ಬೇರೆ ಅರ್ಥ ಬರುತ್ತದೆಂಬ ಸುದ್ದಿಯನ್ನೂ ತೇಲಿಬಿಡಲಾಯಿತು. ಇದೇ ಮುಖ್ಯಮಂತ್ರಿಯವರು ಕೆಂಪೇಗೌಡ ಜಯಂತಿ ಸರ್ಕಾರದ ವತಿಯಿಂದ ಆದಾಗ ಬೆಂಗಳೂರಿನಲ್ಲೂ (ಜೂನ್ 27) ಭಾಗವಹಿಸಿದ್ದರು, (ಆಗಸ್ಟ್ 11ರಂದು) ಒಕ್ಕಲಿಗರ ಸಂಘದಿಂದ ಚಿಕ್ಕಬಳ್ಳಾಪುರದಲ್ಲಿ ನಡೆದಾಗಲೂ ಭಾಗವಹಿಸಿದ್ದರು.
ದೇಶದ ಇಂದಿನ ಸ್ಥಿತಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ಭಾಗವಹಿಸದೇ ಇದ್ದರೆ ಅದು ಯಾವ ಸಂದೇಶ ಕೊಡುತ್ತದೆಂಬುದು ಅವರಿಗೆ ಗೊತ್ತಿಲ್ಲದೇ ಏನಿಲ್ಲ. ಅಂತಹದೊಂದು ಸಂದೇಶ ಹೋಗಲಿ ಎಂಬ ಬಯಕೆಯೂ ಅವರದ್ದಿರಬಹುದು. ಇದು ಕೇವಲ ಜೆಡಿಎಸ್‌ನ ಸಮಸ್ಯೆಯಲ್ಲ. ಕಾಂಗ್ರೆಸ್ ನಾಯಕರಲ್ಲಿ ಟಿಪ್ಪು ಸುಲ್ತಾನರ ಮಹತ್ವವನ್ನು ಅರಿತು ಅದನ್ನು ಸಮರ್ಥಿಸಿಕೊಳ್ಳಬಲ್ಲವರು ಬಹಳ ಕಡಿಮೆ. ಹೇಗೂ ಮುಸ್ಲಿಮರು ತಮಗೇ ಓಟು ಹಾಕುತ್ತಾರೆಂಬ ಭಾವನೆ ಅವರದ್ದಿದ್ದರೆ, ಬಹುಶಃ ಇನ್ನು ಮುಂದೆ ಮುಸ್ಲಿಮರು ತಮಗೆ ಓಟು ಹಾಕಲಾರರು ಎಂದು ಜೆಡಿಎಸ್ ಭಾವಿಸಿದಂತಿದೆ. ಟಿಪ್ಪು ಕುರಿತು ಸಂಘಪರಿವಾರದ ಫೇಕ್ ಸ್ಟೊÃರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದಾಗ, ಬಹುಶಃ ಟಿಪ್ಪು ಸುಲ್ತಾನ್ ಆ ರೀತಿಯೂ ಇದ್ದಿರಬಹುದು ಎಂದು ಕಾಂಗ್ರೆಸ್ ನಾಯಕರಲ್ಲಿ ಹಲವರು ಭಾವಿಸಿರಲಿಕ್ಕೂ ಸಾಕು. ಇಂತಹ ಎಡಬಿಡಂಗಿತನವನ್ನು ಕಾಂಗ್ರೆಸ್ – ಜೆಡಿಎಸ್ ನಾಯಕರು ತೊರೆಯುವವರೆಗೂ ಅವರು ಬಿಜೆಪಿಗೆ ಸರಿಯಾದ ಪರ್ಯಾಯವಾಗಲು ಸಾಧ್ಯವೇ ಇಲ್ಲ.
ಇಂತಹುದೇ ಇನ್ನೊಂದು ಸುದ್ದಿ ಈ ವಾರ ಬೆಳಕಿಗೆ ಬಂದಿದೆ. ಗೌರಿ ಲಂಕೇಶರ ಹತ್ಯೆಯ ತನಿಖೆ ನಡೆಸುತ್ತಿದ್ದ ಎಸ್‌ಐಟಿಗೆ ಆದ ಖರ್ಚಿನ ಬಾಕಿಯನ್ನು ಸರ್ಕಾರವಿನ್ನೂ ಪಾವತಿ ಮಾಡಿಲ್ಲವೆಂದು ವರದಿಯಾಗಿದೆ. ಬಹುಶಃ ಹಣ ಪಾವತಿಯಾಗಿಲ್ಲವೆಂಬ ಕಾರಣಕ್ಕೆ ಪೊಲೀಸ್ ಇಲಾಖೆಯು ತನಿಖೆಯನ್ನೆÃನೂ ನಿಲ್ಲಿಸುವುದಿಲ್ಲ ಅಥವಾ ಬೇರೆ ದಿಕ್ಕಿಗೆ ಹೋಗುವುದಿಲ್ಲ. ಆದರೆ, ಪರಿಣಾಮಕಾರಿಯಾಗಿ ಕೆಲಸ ಮಾಡಲು ಅಡಚಣೆಯಾಗುವುದರಲ್ಲಂತೂ ಸಂದೇಹವಿಲ್ಲ. ಈ ಕುರಿತ ಸತ್ಯಾಸತ್ಯತೆಯನ್ನು ಸರ್ಕಾರ, ಇಲಾಖೆ ಜನರ ಮುಂದಿಡಬೇಕು. ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...