Homeಅಂಕಣಗಳುಗಟ್ಟಿತನವಿಲ್ಲದ ಸೆಕ್ಯುಲರಿಸಂನಿಂದ ಸಮ್ಮಿಶ್ರ ಸರ್ಕಾರ ಪರ್ಯಾಯವಾಗಲಾರದು

ಗಟ್ಟಿತನವಿಲ್ಲದ ಸೆಕ್ಯುಲರಿಸಂನಿಂದ ಸಮ್ಮಿಶ್ರ ಸರ್ಕಾರ ಪರ್ಯಾಯವಾಗಲಾರದು

- Advertisement -
- Advertisement -

ಬೆಂಗಳೂರು ಸಮೀಪದ ಜಿಲ್ಲೆಯ ತಾಲೂಕು. ಆರೆಸ್ಸೆಸ್ ಮತ್ತು ಅದರ ಪರಿವಾರ ಅಲ್ಲಿ ಸಕ್ರಿಯವಾಗಿಲ್ಲ. ಬಿಜೆಪಿ ಎಂದೂ ಗೆದ್ದಿಲ್ಲ. ಮುಸ್ಲಿಮರು ಹೆಚ್ಚಲ್ಲದಿದ್ದರೂ ದೇಶದ ಸರಾಸರಿಯ ಪ್ರಮಾಣದಲ್ಲಿ ಅಲ್ಲೂ ಇದ್ದಾರೆ. ಟಿಪ್ಪು ಜಯಂತಿಯ ಕಾರ್ಯಕ್ರಮವನ್ನು ಆಯೋಜಿಸುವ ಮುನ್ನ ತಹಸೀಲ್ದಾರರು ಸಭೆ ಕರೆದಿದ್ದಾರೆ. ನಿಯಮಗಳ ಪ್ರಕಾರ ಅವರು ರಾಷ್ಟಿçÃಯ ಹಬ್ಬಗಳ ಸಮಿತಿಯ ಅಧ್ಯಕ್ಷರು. ಇಂತಹ ಎಲ್ಲಾ ಜಯಂತಿಗಳಲ್ಲೂ ಮಾಡುವಂತೆ, ಯಾರ ಜಯಂತಿಯನ್ನು ಆಚರಿಸಲಾಗುತ್ತದೋ, ಆ ವ್ಯಕ್ತಿಯು ಯಾವ ಜಾತಿ ಅಥವಾ ಧರ್ಮಕ್ಕೆ ಸೇರಿದವರೆಂದು ಹೇಳಲಾಗುತ್ತದೋ ಅವರನ್ನು ಹೆಚ್ಚಾಗಿ ಕರೆಯಲಾಯಿತು. ಹಾಗಾಗಿ ಮುಸ್ಲಿಮರೂ ಗಣನೀಯ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ತಹಸೀಲ್ದಾರರು ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಹೇಳಿದ್ದಿಷ್ಟು. ಒಂದು ಸಭಾಂಗಣದಲ್ಲಿ ಕಾರ್ಯಕ್ರಮ ಮಾಡೋಣ; ಮೆರವಣಿಗೆ ಮಾಡಲು ಅಥವಾ ಮೈದಾನದಲ್ಲಿ ಮಾಡಲು ಈ ಸಾರಿ ಅನುಮತಿ ನೀಡಬಾರದೆಂದು ಮೇಲಿನಿಂದ ಆದೇಶ ಬಂದಿದೆ. ಇದನ್ನು ಸಭೆಯಲ್ಲಿದ್ದ ಮುಸ್ಲಿಮರು ಒಪ್ಪಲಿಲ್ಲ. ‘ಬೇರೆ ಎಲ್ಲಾ ಜಯಂತಿಗಳಿಗಾದರೆ ಈ ರೀತಿ ಮೆರವಣಿಗೆ ಮಾಡಲು ಅವಕಾಶ ಕೊಡುತ್ತಿÃರಿ, ಟಿಪ್ಪು ಜಯಂತಿಗೆ ಏಕೆ ಕೊಡುವುದಿಲ್ಲ?’ವೆಂದು ಕೇಳಿದರು. ಕೇಳಿದ್ದರಲ್ಲಿ ತಪ್ಪೆÃನಿರಲಿಲ್ಲ. ಆದರೆ, ಈ ಸಾರಿ ತೀರ್ಮಾನ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿ ತಹಸೀಲ್ದಾರರು ಇರಲಿಲ್ಲ. ಇದು ಮೇಲಿನಿಂದ ಬಂದ ಆದೇಶವಾಗಿತ್ತು. ಅಲ್ಲಿಗೂ ಇನ್ನೊಂದು ಮಾತನ್ನು ಹೇಳಿದರು, ‘ಒಂದು ವೇಳೆ ಈ ಆದೇಶದಲ್ಲಿ ಬದಲಾವಣೆ ಬಂದು, ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಮೆರವಣಿಗೆ ಇತ್ಯಾದಿಗಳ ವಿಚಾರದಲ್ಲಿ ಸ್ಥಳೀಯವಾಗಿಯೇ ತೀರ್ಮಾನ ತೆಗೆದುಕೊಳ್ಳಬಹುದು ಎಂದಾದರೆ, ನಾವು ಖಂಡಿತವಾಗಿ ಅವಕಾಶ ಮಾಡಿಕೊಡುತ್ತೆÃವೆ’. ಸರ್ಕಲ್ ಇನ್ಸ್ಪೆಕ್ಟರ್ ಸಹಾ ದನಿಗೂಡಿಸಿದರು.
ಇದನ್ನು ಒಪ್ಪದ ಮುಸ್ಲಿಂ ಮುಖಂಡರು ಸಭಾತ್ಯಾಗ ಮಾಡಿದರಲ್ಲದೇ, ನಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲವೆಂದು ಹೇಳಿಯೇ ಹೋದರು. ಅಷ್ಟು ಹೊತ್ತಿಗೆ ಮಧ್ಯಮ ಪ್ರಮಾಣದ ಒಂದು ಸಭಾಂಗಣದಲ್ಲಿ ಕಾರ್ಯಕ್ರಮ ಮಾಡುವುದೆಂದು ತೀರ್ಮಾನವಾಗಿತ್ತು ಮತ್ತು ಭಾಷಣ ಮಾಡಲು ಭಾಷಣಕಾರರನ್ನೂ ನಿಗದಿ ಮಾಡಲಾಗಿತ್ತು. ಈ ಸದ್ಯ ಎಲ್ಲಾ ಮಹಾಪುರುಷರೂ, ಮಹಿಳೆಯರೂ ಆಯಾ ಜಾತಿ ಅಥವಾ ಧರ್ಮಕ್ಕೆ ಸೀಮಿತರು. ಹಾಗಾಗಿ ಜಾತ್ಯಸ್ಥರೇ ಕೈಬಿಟ್ಟ ಮೇಲೆ ಟಿಪ್ಪು ಅನಾಥ.
ಆ ತಾಲೂಕಿನ ಶಾಸಕರು ಸಚಿವರಾಗಿದ್ದರಿಂದ, ಅವರು ಜಿಲ್ಲಾ ಕೇಂದ್ರಕ್ಕೆ ಹೋದರು. ಹೀಗಾಗಿ ಅವರನ್ನು ನೋಡಲು ಅಥವಾ ಮೆಚ್ಚಿಸಲು ಬರಬಹುದಾದವರೂ ಕಾರ್ಯಕ್ರಮಕ್ಕೆ ಬರಲಿಲ್ಲ. ಅಲ್ಲಿನ ಸಂಘಪರಿವಾರದ ಗುಂಪೂ ದುರ್ಬಲವಾದ್ದರಿಂದ, ಗಲಭೆಯೆಬ್ಬಿಸಲು ಬರಬಹುದಾದವರೂ ಬರಲಿಲ್ಲ. ಕಾರ್ಯಕ್ರಮ ಆರಂಭದ ಸಮಯಕ್ಕೆ ಸಭಾಂಗಣದಲ್ಲಿ 30 ಜನರಿದ್ದರು. ತಹಸೀಲ್ದಾರರಿಗೆ ಪೀಕಲಾಟಕ್ಕಿಟ್ಟುಕೊಂಡಿತು. ಅವರು ಕ್ಷೆÃತ್ರ ಶಿಕ್ಷಣಾಧಿಕಾರಿಗಳನ್ನು ಕರೆದು, ಹತ್ತಿರದ ಯಾವುದಾದರೂ ಶಾಲೆಯಿಂದ ಮಕ್ಕಳನ್ನು ಕರೆಸಿರಿ ಎಂದರು. ಆದರೆ, ಅವರಿಗೆ ಹಿಂಜರಿಕೆ. ‘ಈ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳನ್ನು ಕರೆದಿದ್ದಾರೆ ಎಂದು ವಿವಾದವಾದರೆ?’ ಎಂಬುದು ಅವರ ಕಾರಣ. ಅಂದರೆ, ಟಿಪ್ಪು ಸುಲ್ತಾನ್ ನಾಡು ಕಂಡ ಹೆಮ್ಮೆಯ ದೊರೆ ಎಂದು ಪಠ್ಯಪುಸ್ತಕದಲ್ಲಿ ಇನ್ನೂ ಉಳಿದಿರಬಹುದಾದರೂ, ಸರ್ಕಾರವೇ ಟಿಪ್ಪು ಜಯಂತಿಯನ್ನು ಮಾಡುತ್ತಿದ್ದರೂ, ಮಕ್ಕಳನ್ನು ಕರೆದರೆ ‘ಇದು ಟಿಪ್ಪು ಜಯಂತಿ’ ಎನ್ನುವ ಕಾರಣಕ್ಕೆÃ ವಿವಾದವಾಗುತ್ತದೆಂಬುದು ಅವರ ಭಯ.
ಅಂತಿಮವಾಗಿ ಸಭಾಂಗಣದೊಳಗೆ ಒಂದಷ್ಟು ಜನ ಮುಸ್ಲಿಮರು ಬಂದರು. ಪುರಸಭೆಯ ಅಧ್ಯಕ್ಷ ಮುಸ್ಲಿಮರಾಗಿದ್ದುದರಿಂದ ಅವರು ಇದನ್ನು ಪ್ರತಿಷ್ಠೆಯ ಪ್ರಶ್ನೆಯನ್ನಾಗಿಸಿಕೊಂಡು ಕೆಲವರಾದರೂ ಬರಬೇಕೆಂದು ಶತಪ್ರಯತ್ನ ಹಾಕಿದ್ದರು! ಅಸಲು ಸಮಸ್ಯೆ ಏನಾಗಿತ್ತೆಂದರೆ, ಈ ಅಧ್ಯಕ್ಷರಿಗಿಂತ ಮುಂಚೆ ಅಧ್ಯಕ್ಷರಾಗಿದ್ದವರೂ ಮುಸ್ಲಿಮರೇ. ತನ್ನ ನಂತರ ಇನ್ನೊಬ್ಬ ನಾಯಕ ತನ್ನದೇ ಸಮುದಾಯದಲ್ಲಿ ಮೇಲೆ ಬಂದು, ಆತನ ವೇದಿಕೆಯ ಮೇಲೆ ವಿರಾಜಮಾನನಾಗಿರುವಾಗ ಆ ಕಾರ್ಯಕ್ರಮ ಯಶಸ್ವಿಯಾಗಬಾರದೆಂಬುದು ವಿರೋಧಕ್ಕೆ ಅಸಲೀ ಕಾರಣವಾಗಿತ್ತು. ಮೆರವಣಿಗೆ ಕೇವಲ ನೆಪವಾಗಿತ್ತು. ಹೊಸದಾಗಿ ಅಧ್ಯಕ್ಷರಾಗಿದ್ದ ವ್ಯಕ್ತಿಗಿಂತ ಪ್ರಭಾವಿಯಾಗಿದ್ದ ಹಿಂದಿನ ಅಧ್ಯಕ್ಷ ಮಿಕ್ಕವರನ್ನು ತಡೆದಿದ್ದರು!
ಇಂದು ಟಿಪ್ಪು ಸುಲ್ತಾನರ ಜಯಂತಿ ಹೀಗೂ ನಡೆಯುತ್ತಿದೆ. ನಾಡಿಗೆ ನಾಡೇ ಹೆಮ್ಮೆ ಪಡಬೇಕಿದ್ದ ಧೀಮಂತ ಆಡಳಿತಗಾರನೊಬ್ಬನನ್ನು, ಒಂದು ಜಾತಿಗೆ ಅಥವಾ ಧರ್ಮಕ್ಕೆ ಸೀಮಿತಗೊಳಿಸುವುದು. ಆ ಕಾರಣಕ್ಕೆÃ ಜಯಂತಿಯನ್ನು ಆಚರಿಸುವುದು ಅಥವಾ ವಿರೋಧಿಸುವುದು. ತಮ್ಮದೇ ಸ್ವಂತ ಹಿತಾಸಕ್ತಿಯು ಮುಂದೆ ಬರುವುದಾದಲ್ಲಿ, ಆ ಜಾತಿಯವರೂ ಕಾರ್ಯಕ್ರಮಕ್ಕೆ ತಿರಸ್ಕಾರ ತೋರುವುದು ಇದು ವಿದ್ಯಮಾನ.
ಇದಕ್ಕೆ ಸ್ವತಃ ಮುಖ್ಯಮಂತ್ರಿಯವರೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಮೊದಲು ಯಾವುದೇ ಕಾರಣ ನೀಡದೇ, ರಾಜ್ಯ ಮಟ್ಟದ ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲೂ ತಮ್ಮ ಹೆಸರಿಲ್ಲದಂತೆ ಗೈರುಹಾಜರಿಯ ತೀರ್ಮಾನ ಘೋಷಿಸಿದ್ದರು. ನಂತರ ಇದೊಂದು ಸುದ್ದಿಯಾದಾಗ ಅನಾರೋಗ್ಯದ ಸ್ಪಷ್ಟಿÃಕರಣ ಕೊಟ್ಟರು. ಇದಲ್ಲದೇ ವಾಲ್ಮಿÃಕಿ ಜಯಂತಿ ಕಾರ್ಯಕ್ರಮಕ್ಕೂ ಹೋಗಿರಲಿಲ್ಲ, ಈಗ ಹೋದರೆ ಬೇರೆ ಅರ್ಥ ಬರುತ್ತದೆಂಬ ಸುದ್ದಿಯನ್ನೂ ತೇಲಿಬಿಡಲಾಯಿತು. ಇದೇ ಮುಖ್ಯಮಂತ್ರಿಯವರು ಕೆಂಪೇಗೌಡ ಜಯಂತಿ ಸರ್ಕಾರದ ವತಿಯಿಂದ ಆದಾಗ ಬೆಂಗಳೂರಿನಲ್ಲೂ (ಜೂನ್ 27) ಭಾಗವಹಿಸಿದ್ದರು, (ಆಗಸ್ಟ್ 11ರಂದು) ಒಕ್ಕಲಿಗರ ಸಂಘದಿಂದ ಚಿಕ್ಕಬಳ್ಳಾಪುರದಲ್ಲಿ ನಡೆದಾಗಲೂ ಭಾಗವಹಿಸಿದ್ದರು.
ದೇಶದ ಇಂದಿನ ಸ್ಥಿತಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ಭಾಗವಹಿಸದೇ ಇದ್ದರೆ ಅದು ಯಾವ ಸಂದೇಶ ಕೊಡುತ್ತದೆಂಬುದು ಅವರಿಗೆ ಗೊತ್ತಿಲ್ಲದೇ ಏನಿಲ್ಲ. ಅಂತಹದೊಂದು ಸಂದೇಶ ಹೋಗಲಿ ಎಂಬ ಬಯಕೆಯೂ ಅವರದ್ದಿರಬಹುದು. ಇದು ಕೇವಲ ಜೆಡಿಎಸ್‌ನ ಸಮಸ್ಯೆಯಲ್ಲ. ಕಾಂಗ್ರೆಸ್ ನಾಯಕರಲ್ಲಿ ಟಿಪ್ಪು ಸುಲ್ತಾನರ ಮಹತ್ವವನ್ನು ಅರಿತು ಅದನ್ನು ಸಮರ್ಥಿಸಿಕೊಳ್ಳಬಲ್ಲವರು ಬಹಳ ಕಡಿಮೆ. ಹೇಗೂ ಮುಸ್ಲಿಮರು ತಮಗೇ ಓಟು ಹಾಕುತ್ತಾರೆಂಬ ಭಾವನೆ ಅವರದ್ದಿದ್ದರೆ, ಬಹುಶಃ ಇನ್ನು ಮುಂದೆ ಮುಸ್ಲಿಮರು ತಮಗೆ ಓಟು ಹಾಕಲಾರರು ಎಂದು ಜೆಡಿಎಸ್ ಭಾವಿಸಿದಂತಿದೆ. ಟಿಪ್ಪು ಕುರಿತು ಸಂಘಪರಿವಾರದ ಫೇಕ್ ಸ್ಟೊÃರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದಾಗ, ಬಹುಶಃ ಟಿಪ್ಪು ಸುಲ್ತಾನ್ ಆ ರೀತಿಯೂ ಇದ್ದಿರಬಹುದು ಎಂದು ಕಾಂಗ್ರೆಸ್ ನಾಯಕರಲ್ಲಿ ಹಲವರು ಭಾವಿಸಿರಲಿಕ್ಕೂ ಸಾಕು. ಇಂತಹ ಎಡಬಿಡಂಗಿತನವನ್ನು ಕಾಂಗ್ರೆಸ್ – ಜೆಡಿಎಸ್ ನಾಯಕರು ತೊರೆಯುವವರೆಗೂ ಅವರು ಬಿಜೆಪಿಗೆ ಸರಿಯಾದ ಪರ್ಯಾಯವಾಗಲು ಸಾಧ್ಯವೇ ಇಲ್ಲ.
ಇಂತಹುದೇ ಇನ್ನೊಂದು ಸುದ್ದಿ ಈ ವಾರ ಬೆಳಕಿಗೆ ಬಂದಿದೆ. ಗೌರಿ ಲಂಕೇಶರ ಹತ್ಯೆಯ ತನಿಖೆ ನಡೆಸುತ್ತಿದ್ದ ಎಸ್‌ಐಟಿಗೆ ಆದ ಖರ್ಚಿನ ಬಾಕಿಯನ್ನು ಸರ್ಕಾರವಿನ್ನೂ ಪಾವತಿ ಮಾಡಿಲ್ಲವೆಂದು ವರದಿಯಾಗಿದೆ. ಬಹುಶಃ ಹಣ ಪಾವತಿಯಾಗಿಲ್ಲವೆಂಬ ಕಾರಣಕ್ಕೆ ಪೊಲೀಸ್ ಇಲಾಖೆಯು ತನಿಖೆಯನ್ನೆÃನೂ ನಿಲ್ಲಿಸುವುದಿಲ್ಲ ಅಥವಾ ಬೇರೆ ದಿಕ್ಕಿಗೆ ಹೋಗುವುದಿಲ್ಲ. ಆದರೆ, ಪರಿಣಾಮಕಾರಿಯಾಗಿ ಕೆಲಸ ಮಾಡಲು ಅಡಚಣೆಯಾಗುವುದರಲ್ಲಂತೂ ಸಂದೇಹವಿಲ್ಲ. ಈ ಕುರಿತ ಸತ್ಯಾಸತ್ಯತೆಯನ್ನು ಸರ್ಕಾರ, ಇಲಾಖೆ ಜನರ ಮುಂದಿಡಬೇಕು. ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....