Homeಎಕಾನಮಿ'ಭಾರತದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ': ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ

‘ಭಾರತದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ’: ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ಭಾರತದ ಆರ್ಥಿಕ ಪರಿಸ್ಥಿತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ ಎಂಬುದು ಅರ್ಥಶಾಸ್ತ್ರಜ್ಞ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಪಡೆದಿರುವ ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿಯವರು ಹೊರಹಾಕಿರುವ ಆತಂಕ.

ಅಕ್ಟೋಬರ್ 9ರಂದು ಬ್ರೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಭಾರತದ ಆರ್ಥಿಕತೆ ಕುಸಿತ ಅಪಾಯದ ಮಟ್ಟ ತಲುಪಿದೆ. ಅಲ್ಲದೇ ಸರಕು ಮತ್ತು ಸೇವಾ ತೆರಿಗೆ, ನೋಟು ಅಮಾನ್ಯೀಕರಣ ನೀತಿಗಳು ಹೆಚ್ಚು ಸಮಸ್ಯೆ ತಂದೊಡ್ಡಿವೆ. ಬೇಡಿಕೆಯ ಮಟ್ಟ ಕುಸಿದಿದೆ. ನನ್ನ ಸಹವರ್ತಿಗಳೊಂದಿಗೆ ಹೂಡಿಕೆ ಬಗ್ಗೆ ಮಾತನಾಡಿದಾಗ ಹೂಡಿಕೆ ಮಾಡುವುದು ಅಸಾಧ್ಯ. ಇದರಿಂದ ಸಾಕಷ್ಟು ತೊಂದರೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು ಎಂದು ಹೇಳಿದ್ದಾರೆ.

ಯಾರೂ ಸಹ ಹೆಚ್ಚು ದಿನಗಳವರೆಗೆ ಕಾಯುವುದಿಲ್ಲ. ಒಂದೇ ವಿಷಯಕ್ಕೆ ಅಂಟಿಕೊಂಡು ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ. ಪಿಎಂಒ ಜತೆ ಮಾತನಾಡಿ ಎಲ್ಲವನ್ನೂ ಬಗೆಹರಿಸುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಏನೂ ಆಗುವುದಿಲ್ಲ ಎಂದು ಅಭಿಜಿತ್ ಟೀಕಿಸಿದ್ದಾರೆ. ನಾಲ್ಕು ವರ್ಷಗಳಲ್ಲಿ ಸರಾಸರಿ ಬಳಕೆ ಕಡಿಮೆಯಾಗಿದೆ. ಹಣದುಬ್ಬರ ಸಮಸ್ಯೆ ಸರಿಪಡಿಸಿದ ನಂತರವೂ ಸಮಸ್ಯೆ ಕಡಿಮೆಯಾಗಿಲ್ಲ. 70ರ ದಶಕಕ್ಕಿಂತಲೂ ಈ ಬಾರಿಯ ಆರ್ಥಿಕ ಕುಸಿತ ಹೆಚ್ಚು ಗಂಭೀರವಾಗಿದೆ ಎಂದು ಟೀಕಿಸಿದ್ದಾರೆ.

ಇನ್ನು ಶೇ.75ರಷ್ಟು ಹೂಡಿಕೆಯ ಪ್ರಮಾಣ ಸಂಪೂರ್ಣವಾಗಿ ಕುಸಿದಿದೆ. ರಫ್ತು ಪ್ರಕ್ರಿಯೆಯಲ್ಲಿ ಅಭಿವೃದ್ಧಿಯಾಗುತ್ತಿಲ್ಲ. ಇದು ದೇಶಕ್ಕೆ ಆರ್ಥಿಕ ಬಿಕ್ಕಟ್ಟು ಎಂದು ಹೇಳಬಹುದು. ಆದರೆ ನಾವೇ ಬಿಕ್ಕಟ್ಟಿನಲ್ಲಿದ್ದೇವೆ. ಚಟುವಟಿಕೆಯಿಂದಿದ್ದ ಸಂಸ್ಥೆಗಳು ಈಗ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಪ್ರಮುಖವಾಗಿ 2016ರಲ್ಲಿ ನಡೆದ ನೋಟು ನಿಷೇಧ ಮತ್ತು ಜಿಎಸ್ ಟಿ ಅನುಷ್ಠಾನ ಆರ್ಥಿಕತೆಯ ಕುಸಿತಕ್ಕೆ ಕಾರಣ. ಇದರಿಂದ ಬೇಡಿಕೆ ಮತ್ತು ಹೂಡಿಕೆ ಸಮಸ್ಯೆ ಹೆಚ್ಚಿದೆ. ಹಣದುಬ್ಬರ ತಗ್ಗಿಸಲು ಸಾಕಷ್ಟು ಪ್ರಯತ್ನಿಸಲಾಗುತ್ತಿದೆಯಾದ್ರೂ ಇದು ಋಣಾತ್ಮಕ ಪರಿಣಾಮ ಬೀರುತ್ತಿದೆ. ಹೀಗಾಗಿಯೇ ಆರ್ ಬಿಐ ಮಾಜಿ ಗವರ್ನರ್ ಕೂಡ ಭಾರತದ ಆರ್ಥಿಕತೆಯ ಅಸ್ವಸ್ಥತೆಯ ಲಕ್ಷಣಗಳ ಬಗ್ಗೆ ಹೇಳಿದ್ದರು. ಭಾರತ ತನ್ನ ಆರ್ಥಿಕ ಮಾರ್ಗವನ್ನು ಕಳೆದುಕೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...