Homeಮುಖಪುಟ"ಸೈಂಟಿಫಿಕ್ ಪೆಪ್ಪರಮಿಂಟ್" ಅಂದ್ರೆ ಏನು, ಹೇಗಿರುತ್ತೆ ಗೊತ್ತಾ?

“ಸೈಂಟಿಫಿಕ್ ಪೆಪ್ಪರಮಿಂಟ್” ಅಂದ್ರೆ ಏನು, ಹೇಗಿರುತ್ತೆ ಗೊತ್ತಾ?

- Advertisement -
- Advertisement -

ಹೊಸ ಶಿಕ್ಷಣ ನೀತಿಯ ಹಿನ್ನೆಲೆಯಲ್ಲಿ ಕೇಂದ್ರದ ಸಾಂಸ್ಕೃತಿಕ ವಕ್ತಾರರನ್ನು ಸಂದರ್ಶಿಸಲಾಯಿತು. ಈ ದೇಶದ ಮುಂದಿನ ಐವತ್ತು ವರ್ಷಗಳ ಶಿಕ್ಷಣ, ಸಾಂಸ್ಕೃತಿಕ ನಡೆ ಕುರಿತ ಕಾಣ್ಕೆಯನ್ನು ವಕ್ತಾರರು ಹಂಚಿಕೊಂಡರು.

ಅದರ ಆಯ್ದ ಭಾಗವನ್ನು ಇಲ್ಲಿ ಪ್ರಕಟಿಸಲಾಗಿದೆ.

ನಾನು: ಹೊಸ ಶಿಕ್ಷಣ ನೀತಿಯ ಒತ್ತು ಏನು?

ಸಾಂಸ್ಕೃತಿಕ ವಕ್ತಾರ: ನೋಡಿ ಕಳೆದ ಎಪ್ಪತ್ತು ವರ್ಷಗಳಲ್ಲಿ ನಮ್ಮ ಸಂಸ್ಕೃತಿಯನ್ನು ನಾಶಮಾಡುವ ಕೆಲಸವನ್ನು ನೆಹರೂ ಮತ್ತು ಎಡಚರು ಮಾಡಿದ್ದಾರೆ . ನಾವು ಅದನ್ನು ತಿದ್ದಿ ಭಾರತದ ಭವ್ಯ ಸಂಸ್ಕೃತಿಯನ್ನು ಸ್ಥಾಪಿಸಬೇಕಾಗಿದೆ. ಭಾರತ ವಿಶ್ವಗುರುವಾಗಲು ಇದು ಬುನಾದಿ.

ನಾನು: ಇದನ್ನು ಹೇಗೆ ಸಾಧಿಸಲಾಗುತ್ತದೆ?

ಸಾಂವ: ಈಗ ನೋಡಿ ಮೊನ್ನೆ ಗ್ರಹಣ ಆಯಿತು. ಎಡಚರು ಇದನ್ನು ಖಗೋಳ ಶಾಸ್ತ್ರೀಯ ಘಟನೆ ಅನ್ನುತ್ತಾರೆ. ಆದರೆ ನಮ್ಮ ಹಳ್ಳಿಹಳ್ಳಿಗಳಲ್ಲೂ ಇದನ್ನು ಸಾವಿರಾರು ವರ್ಷಗಳಿಂದ ಗಮನಿಸಿದ್ದಾರೆ. ಇದರ ಪರಿಣಾಮಗಳನ್ನು ನಿವಾರಿಸಲು ಪರಿಹಾರ ಕ್ರಮ ಮಾಡುತ್ತಾರೆ. ಹಾಗಿದ್ದರೆ ಅವರು ಅಜ್ಞಾನಿಗಳೇ? ಉದಾ: ಗ್ರಹಣ ಕಾಲದಲ್ಲಿ ವಿಕಿರಣ ಪರಿಣಾಮ ಆಗುತ್ತೆ. ಅದಕ್ಕೇ ಮಕ್ಕಳನ್ನು ತಿಪ್ಪೆಯಲ್ಲಿ ಹುಗಿದಿಡುವ ಸಂಪ್ರದಾಯ ಇದೆ. ಯಾಕೆ ಹೇಳಿ? ಗೋವಿನ ಸೆಗಣಿಗೆ ವಿಕಿರಣವನ್ನು ತಡೆಯುವ ಶಕ್ತಿ ಇದೆ.

ನಾನು: ಅಂದರೆ?

ಸಾಂ ವ: ಅಂದರೆ ನಾವು ಈ ಬಗ್ಗೆ ವಿಶೇಷ ಸಂಶೋಧನೆಗೆ ಅನುದಾನ ನೀಡುತ್ತೇವೆ. ಮಾತ್ರವಲ್ಲ ಮುಂದಿನ ವರ್ಷಗಳಲ್ಲಿ ಗ್ರಹಣ ಕಾಲದಲ್ಲಿ ಅಂಗನವಾಡಿ ಮತ್ತು ಶಾಲಾಮಕ್ಕಳನ್ನು ಶಾಲಾ ಆವರಣದಲ್ಲೇ ತಿಪ್ಪೆಯಲ್ಲಿ ಹೂತಿಡುವ ಬೃಹತ್ ರಾಷ್ಟ್ರೀಯ ಕಾರ್ಯಕ್ರಮವನ್ನು ಚಾಲೂ ಮಾಡಲಾಗುವುದು. ವಿದೇಶಗಳಲ್ಲೂ ಇದರ ವೈಜ್ಞಾನಿಕ ಮಹತ್ವವನ್ನು ಸಾರಲೂ ವಿದೇಶದಲ್ಲಿರುವ ಭಾರತೀಯ ಮಕ್ಕಳನ್ನು ಬಳಸಿ ಅಲ್ಲಿ ಪ್ರಾತ್ಯಕ್ಷಿಕೆ ಮಾಡಿ ವಿದೇಶಗಳಲ್ಲೂ ನಮ್ಮ ಆಚರಣೆಯ ಮಹತ್ವವನ್ನು ಪ್ರಚುರಪಡಿಸಲಾಗುವುದು.

ನಾನು : ಮತ್ತೆ ಈ ದರ್ಭೆಗೆ ವಿಶೇಷ ಮಹತ್ವ ಇದೆ ಎಂದು ಹೇಳ್ತಿದ್ರು..

ಸಾಂವ: ದರ್ಭೆ? ಅದು ಜಗತ್ತಿನಲ್ಲೇ ವಿಶೇಷ. ಅದರ ಒಂದು ತುಂಡು ಹಾಕಿದರೂ ವಿಕಿರಣ ತಾಗೋದಿಲ್ಲ. ಅಷ್ಟೇಕೆ, ನಾವೀಗ ದರ್ಭೇಯನ್ನೇ ಉಪಯೋಗಿಸಿ ಬೆನ್ನಟ್ಟುವ ಕ್ಷಿಪಣಿ ತಯಾರು ಮಾಡುವ ತಂತ್ರಜ್ಞಾನದ ಸಂಶೋಧನೆ ಆರಂಭಿಸಿದ್ದೇವೆ

ನಾನು: ಅದು ಹೇಗೆ?

ಸಾಂವ: ಅಯ್ಯೋ, ರಾಮಾಯಣದಲ್ಲಿ ಶ್ರೀರಾಮ ದೇವರು ದರ್ಭೆಗೆ ಮಂತ್ರ ಆವಾಹನೆ ಮಾಡಿ ಕಾಕಾಸುರನನ್ನು ಬೆನ್ನಟ್ಟಲಿಲ್ಲವೇ? ಹಾಗೇ ಶತ್ರು ಕ್ಷಿಪಣಿ/ ವಿಮಾನದ ಶಾಖವನ್ನೇ ಬೆನ್ನು ಹತ್ತಿ ಅದನ್ನು ನಾಶ ಮಾಡೋದು. ದರ್ಭೆ ಸಣ್ಣಕ್ಕೆ ಇರುವ ಕಾರಣ ಅದು ರಾಡಾರಿನಲ್ಲೂ ಕಾಣಿಸೋದಿಲ್ಲ. ಅದಕ್ಕೆ ಆಗ್ನೇಯಾಸ್ತ, ಬ್ರಹ್ಮಾಸ್ತ್ರದಂಥಾ ಮಂತ್ರವನ್ನು ಆವಾಹಿಸಲು ವಿಶೇಷ ವಿಪ್ರ ಪುರೋಹಿತರನ್ನು ಸೈನ್ಯ ನಿಯೋಜಿಸಲಿದೆ.

ನಾನು: ಅದ್ಭುತ. ಇದನ್ನು ಜಗತ್ತಿಗೆ ಹೇಳಬೇಕು!!

ಸಾಂವ: ( ನಕ್ಕು) ನೋಡಿ.. ಇದು ಡಿಫೆನ್ಸ್ ಸೀಕ್ರೆಟ್. ಇದನ್ನು ನಾವು ಯಾರಿಗೂ ಹೇಳೋದಿಲ್ಲ ಹ್ಹ.. ಹ್ಹಾ..

ನಾನು: ಅದ್ಭುತ.. ಇನ್ನು ಇಂಥಾ ಎಷ್ಟು ಯೋಜನೆಗಳಿದಾವೆ?

ಸಾಂವ: ತುಂಬಾ ಇದೆ. ಆದರೆ ಕೆಲವನ್ನು ನಾವು ಗುಪ್ತವಾಗಿ ಮಾಡಬೇಕಿದೆ. ಉದಾ: ನಾವು ಈಗಾಗಲೇ ಯಾವುದೇ ಶಸ್ತ್ರಚಿಕಿತ್ಸೆ ಇಲ್ಲದೇ ಮೆದುಳು ಮತ್ತು ಹೃದಯವನ್ನು ಬದಲಾಯಿಸುವ ಶಸ್ತ್ರಚಿಕಿತ್ಸೆಯನ್ನು ಗುಂಪು ಗುಂಪಿಗೆ ಮಾಡಿದ್ದೇವೆ. ಇದರಲ್ಲಿ ಮೆದುಳನ್ನು ಮೆತ್ತಗೆ ಮಾಡಿ ವಿಧೇಯತೆಯನ್ನು ಮುದ್ರಿಸುವುದನ್ನು ಮಾಡಲಾಗುತ್ತದೆ. ಇನ್ನು ಹೃದಯದ್ದು ಸ್ವಲ್ಪ ಬೇರೆ. ಅದು ಮೃದು ಇದ್ದರೆ ಕಷ್ಟ. ಅದಕ್ಕೇ ಕೆಲವು ಮೂಲಿಕೆ ಬಳಸಿ ಅದು ಕಲ್ಲಾಗುವ ತರ ಮಾಡುವುದು. ರಕ್ತಪರಿಚಲನೆ ಬಿಟ್ಟು ಬೇರೆ ಭಾವನೆಗಳ ಕೆಲಸ ಹೃದಯಕ್ಕೆ ಇರೋದು ವೇಸ್ಟ್ .

ನಾನು: ಅದ್ಭುತ.. ಇದು ಯಾವಾಗ ಚಾಲೂ ಆಗುತ್ತೆ?

ಸಾಂವ: ಚಾಲೂ? ಎಲ್ಲಿದ್ದೀರಿ ನೀವು..? ಈಗ ನಮ್ಮ ಪರವಾಗಿ ಮಾತಾಡಿ, ಬೀದಿಗಿಳಿದು ಗಲಾಟೆ ಮಾಡೋರು ಯಾರು ಅಂದ್ಕೊಂಡ್ರಿ? ಅದು ಈಗಾಗಲೇ ಲಕ್ಷಾಂತರ ಮಂದಿಗೆ ಮಾಡಿಯಾಗಿದೆ..

ನಾನು: ಅದ್ಭುತ: ಈ ಒಟ್ಟಾರೆ ನೀತಿಗೆ ಏನೆಂದು ಕರೆಯಲಾಗುತ್ತೆ?

ಸಾಂವ: ನೋಡಿ ನೆಹರೂ ಇದನ್ನು ಸೈಂಟಿಫಿಕ್ ಟೆಂಪರಮೆಂಟ್ ಅಂತ ಕರಿತಿದ್ರು. ಎಂಥಾ ಟೆಂಪರ್? ಅದಕ್ಕೇ ನಾವಿದನ್ನು ಪೆಪ್ಪರಮಿಂಟ್.. ಸೈಂಟಿಫಿಕ್ ಪೆಪ್ಪರಮಿಂಟ್ ಎಂದು ಕರೆಯುತ್ತೇವೆ. ಪೆಪ್ಪರಮಿಂಟ್ ಅಂದ್ರೇನು? ಗೊತ್ತಲ್ಲ. ಮಕ್ಕಳಿಗೆ ಇಷ್ಟ. ಅದಕ್ಕೇ ಈ ಯೋಜನೆಗೆ ಆ ಹೆಸರು

ನಾನು: ಸೂಪರ್ ಸಾರ್… ಅಭಿನಂದನೆಗಳು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...