Homeಸಾಹಿತ್ಯ-ಸಂಸ್ಕೃತಿಕಥೆಸ್ವರ್ಗಕ್ಕೆ ಸ್ವಾಗತ.

ಸ್ವರ್ಗಕ್ಕೆ ಸ್ವಾಗತ.

- Advertisement -
- Advertisement -

ಭಾರತದ ರಾಜಕಾರಣಿಯೊಬ್ಬ ವಾಯುವಿಹಾರಕ್ಕಾಗಿ ರಸ್ತೆಯಲ್ಲಿ ನಡೆಯುತ್ತಿರುವಾಗ ಕಾರೊಂದು ಗುದ್ದಿ ಸಾವನ್ನಪ್ಪಿದರು. ಅವರ ಆತ್ಮವು ಸ್ವರ್ಗದೊಳಗೆ ಆಗಮಿಸುತ್ತದೆ. ಪ್ರವೇಶ ದ್ವಾರದ ಬಳಿ ಚಿತ್ರಗುಪ್ತ ಅವರನ್ನು ಬರಮಾಡಿಕೊಂಡರು.  “ಸ್ವರ್ಗಕ್ಕೆ ಸ್ವಾಗತ” ಎಂದು ಹೇಳಿ, “ಇಲ್ಲಿ ನೀವು ನೆಲೆಗೊಳ್ಳುವುದಕ್ಕಿಂತ ಮುಂಚೆ ಇಲ್ಲಿನ ಎಲ್ಲವೂ ಅಧಿಕೃತವಾಗಿ ಹೆಚ್ಚು ವ್ಯವಸ್ಥಿತವಾಗಿ ನಡೆಯುತ್ತಿವೆಯೇ ಎಂದು ನೀವೊಮ್ಮೆ ಪರೀಕ್ಷಿಸಿಕೊಳ್ಳಬೇಕಿದೆ, ಅದಕ್ಕಾಗಿ ಒಂದು ದಿನ ಸ್ವರ್ಗದಲ್ಲಿಯೂ, ಇನ್ನೊಂದು ನರಕದಲ್ಲಿಯೂ ಇದ್ದು ನಿಮಗೆ ಸೂಕ್ತವಾದುದ್ದನ್ನು ಆರಿಸಿಕೊಳ್ಳಬಹುದೆಂದು ಚಿತ್ರಗುಪ್ತ ಹೇಳಿದರು. ಆಗ ರಾಜಕಾರಣಿ “ಸಮಸ್ಯೆ ಇಲ್ಲ, ಇಲ್ಲಿ ಎಲ್ಲ ಚೆನ್ನಾಗಿದೆ, ನನಗೆ ಇಷ್ಟ ಆಯಿತು. ನರಕ ನೋಡುವ ಅಗತ್ಯವಿಲ್ಲ, ಸ್ವರ್ಗದಲ್ಲೇ ಇರುತ್ತೇನೆ ಒಳಗೆ ಹೋಗೋಣ” ಎಂದು ಹೇಳಿದರು.

ಆಗ ಚಿತ್ರಗುಪ್ತ “ಕ್ಷಮಿಸಿ, ನಮಗೆ ನಮ್ಮದೇ ಆದ ನಿಯಮಗಳಿವೆ, ನಾನು ಮೇಲಿನವರಿಂದ ಆದೇಶಗಳನ್ನು ಹೊಂದಿದ್ದೇನೆ, ಹಾಗಾಗಿ ನೀವು ಇದನ್ನು ಪಾಲಿಸಲೇಬೇಕೆಂದು ಮನವಿ ಮಾಡಿದನು. ಆಗ ರಾಜಕಾರಣಿ ಇರಲಿ ಒಂದು ದಿನ ತಾನೇ ನರಕ ಹೇಗಿರುತ್ತೆ ಅಂತ ನೋಡೇ ಬಿಡೋಣ ಎಂದು ಒಪ್ಪಿಕೊಂಡರು. ಆಗ ಚಿತ್ರಗುಪ್ತ ಮತ್ತೆ ಕೇಳಿದನು ಮೊದಲು ನರಕಕ್ಕೆ ಹೋಗೋಣವೋ ಅಥವಾ ಸ್ವರ್ಗಕ್ಕೆ ಹೋಗೋಣವೋ ಅಂದಾಗ, ರಾಜಕಾರಣಿ ಮೊದಲು ನರಕವೇ ಇರಲಿ ಎಂದನು.

ನಂತರ ಚಿತ್ರಗುಪ್ತ ಅವರನ್ನು ಲಿಫ್ಟಿಗೆ ಹತ್ತಿಸಿಕೊಂಡನು. ಲಿಪ್ಟು ಅವರನ್ನು ಹೊತ್ತು ಕೆಳಕ್ಕೆ ಹೋಯಿತು. ಅದು ಎಷ್ಟು ಆಳಕ್ಕೆ ಹೋಗುತ್ತಿದೆ ಎಂದು ಗಾಬರಿಗೊಳ್ಳುವಷ್ಟರಲ್ಲೇ ಅವರು ನರಕದಲ್ಲಿದ್ದರು. ಬಾಗಿಲು ತೆರೆದಾಗ ರಾಜಕಾರಣಿ ಸುತ್ತಲೂ ವಿಶಾಲವಾದ ಗಾಲ್ಫ್ ಮೈದಾನವಿತ್ತು. ದೂರದಲ್ಲಿ ಕಾಣುತ್ತಿದ್ದ ಅಂಗಳದಲ್ಲಿ ಅವನ ಸ್ನೇಹಿತರು ಮತ್ತು ಜತೆಗೆ ಕೂಡಿ ಕೆಲಸ ಮಾಡಿದ್ದ ರಾಜಕಾರಣಿಗಳು ಸಾಲಾಗಿ ನಿಂತಿದ್ದರು. ಎಲ್ಲರ ಮೊಗದಲ್ಲೂ ಮಂದಹಾಸ, ಶುಭ್ರ ಬಟ್ಟೆಗಳು ಮನ ತಣಿಸುತ್ತಿದ್ದವು. ಅವರೆಲ್ಲರೂ ಓಡಿಬಂದು ತಮ್ಮ ಗೆಳೆಯನಿಗೆ ಶುಭ ಕೋರಿ, ಕೈಕುಲುಕಿದರು. ಬದುಕಿದ್ದಾಗ ಜನರನ್ನು ತುಳಿದು ತಾವು ಹೇಗೆ ಸಿರಿವಂತರಾದೆವು ಎಂಬ ನೆನಪುಗಳನ್ನು ಮೆಲುಕು ಹಾಕಿದರು.

ಎಲ್ಲರೂ ಸೇರಿ ಒಂದು ಸುತ್ತು ಗಾಲ್ಫ್ ಆಡಿ, ಅಲ್ಲಿದ್ದ ಬಗೆಬಗೆಯ ಕಡಲ ತಿನಿಸುಗಳನ್ನು ಸವಿದರು. ಬಳಿಕ, ದ್ರಾಕ್ಷಾರಸ ಅವರೆಲ್ಲರನ್ನು ಉಲ್ಲಸಿತರನ್ನಾಗಿ ಮಾಡಿತು. ಔತಣಕೂಟದಲ್ಲಿ ವಿದೂಷಕನೊಬ್ಬನು ಥರೇವಹಾರಿ ಜೋಕ್ಸ್ ಮಾಡುತ್ತಾ ನಗುತ್ತಾ, ನಗಿಸುತ್ತಾ ಅವರೊಡನೆ ಸಂತಸದ ಕ್ಷಣಗಳಿಗೆ ಸಾಕ್ಷಿಯಾದನು. ಇವರೆಲ್ಲರೂ ಸಂತೋಷ ಕೂಟದಲ್ಲಿ ಮೈಮರೆತಿದ್ದಾಗ, ರಾಜಕಾರಣಿಗೆ ಅರಿವಾಯಿತು. “ಒಂದು ದಿನ ಮುಗೀತು ಇದು ಹೊರಡುವ ಸಮಯ”. ಪ್ರತಿಯೊಬ್ಬರು ಅವರಿಗೆ ಆತ್ಮೀಯವಾಗಿ ಬೀಳ್ಕೊಟ್ಟರು, ಲಿಫ್ಟ್ ಮೇಲಕ್ಕೆ ಹೋಯಿತು.

ಲಿಫ್ಟ್ ಮೇಲಕ್ಕೆ, ಮತ್ತಷ್ಟು ಮೇಲಕ್ಕೆ ಹೋಗಿ ಸ್ವರ್ಗದಲ್ಲಿ ಬಾಗಿಲು ತೆರೆದುಕೊಳ್ಳುತ್ತದೆ. ಅಲ್ಲಿ ಪ್ರಶಾಂತತೆ ಇರುತ್ತದೆ. ಅವರು ಮೋಡಗಳಿಂದ ಮೋಡಕ್ಕೆ ನೆಗೆಯುತ್ತಾರೆ, ತಂತಿವಾದ್ಯಗಳನ್ನು ನುಡಿಸುತ್ತಾರೆ, ಗಿಟಾರ್‍ರನ್ನು ಬಾರಿಸುತ್ತಾರೆ, ಹಾಡು ಹೇಳುತ್ತಾರೆ. ಅವರು ಬಹಳ ಸಂತೋಷದಿಂದ ಸಮಯವನ್ನು ಕಳೆಯುತ್ತಾರೆ ಮತ್ತು ಆಗಷ್ಟೇ ಅವರಿಗೆ ಹೊಳೆಯುತ್ತದೆ 24 ಗಂಟೆಗಳು ಮುಗಿದು ಹೋಗಿದೆ ಎಂದು. ಮತ್ತೆ ಚಿತ್ರಗುಪ್ತ ರಾಜಕಾರಣಿಯ ಬಳಿ ಬರುತ್ತಾರೆ, “ನೀವು ಒಂದು ದಿನ ನರಕದಲ್ಲೂ ಮತ್ತೊಂದು ದಿನ ಸ್ವರ್ಗದಲ್ಲೂ ಕಳೆದಿದ್ದೀರಾ. ಈಗ ನಿಮ್ಮ ಶಾಶ್ವತ ನೆಲೆಯನ್ನು ಆಯ್ಕೆ ಮಾಡಿ”.

ರಾಜಕಾರಣಿ ಒಂದು ನಿಮಿಷ ಯೋಚಿಸಿ ಉತ್ತರ ನೀಡುತ್ತಾರೆ: “ನಾನು ಮುಂಚೆ ಸ್ವರ್ಗ ಸುಖಕರವಾಗಿಯೂ ನರಕ ಭಯಾನಕವಾಗಿಯೂ ಇರುತ್ತದೆ ಎಂದು ತಪ್ಪು ತಿಳಿದಿದ್ದೆ. ಆದರೆ ಇಲ್ಲಿ ಬಂದು ನೋಡಿದ ನಂತರ ಸ್ವರ್ಗಕ್ಕಿಂತ ನರಕವೇ ಅದ್ಭುತವಾಗಿದೆ ಅನ್ನಿಸುತ್ತಿದೆ. ಹಾಗಾಗಿ ನಾನು ನರಕವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದನು. ಇಂದು ಅಂತಿಮ ನಿರ್ಧಾರವೇ ಎಂದು ಚಿತ್ರಗುಪ್ತ ಕೇಳಿದರೆ ರಾಜಕಾರಣಿ ಯೆಸ್ 100% ಎಂದನು. ಸರಿ ಎಂದು ಚಿತ್ರಗುಪ್ತ ರಾಜಕಾರಣಿಯನ್ನು ನರಕಕ್ಕೆ ತಂದು ಬಿಡುತ್ತಾನೆ.

ಆಗ ರಾಜಕಾರಣಿ ಅವನ ಕಣ್ಣನ್ನು ಅವನೇ ನಂಬಲು ಸಿದ್ದವಿಲ್ಲ. ಏಕೆಂದರೆ ಅವನು ಬಂಜರು ಭೂಮಿಯ ಮಧ್ಯ ಭಾಗದಲ್ಲಿ ನಿಂತಿರುತ್ತಾನೆ. ಸುತ್ತಲೂ ತ್ಯಾಜ್ಯ, ಕಸ ತುಂಬಿ ಹೋಗಿರುತ್ತದೆ. ತನ್ನ ಎಲ್ಲಾ ಸ್ನೇಹಿತರು ಚಿಂದಿಬಟ್ಟೆ ತೊಟ್ಟು ಕಸ ಆಯ್ದು ಕಪ್ಪು ಚೀಲದಲ್ಲಿ ತುಂಬುತ್ತಿರುತ್ತಾರೆ. ಮೇಲಿನಿಂದ ಇನ್ನಷ್ಟು ಕಸ ಬೀಳುತ್ತಿರುತ್ತದೆ. ರೋಧನೆ, ನೋವಿನ ವಾತವರಣವಿರುತ್ತದೆ.

ಆತನ ಸ್ನೇಹಿತರು ಅವನನ್ನು ಕೂಗಿ, ಏನು ನೋಡುತ್ತಿದ್ದೀಯ ಬಾ ಕೆಲಸ ಮಾಡು ಅನ್ನುತ್ತಾರೆ. ಆಗ ರಾಜಕಾರಣಿ ಕಣ್ಣುಜ್ಜಿಕೊಂಡು “ನನಗೆ ಏನೊಂದು ಅರ್ಥವಾಗುತ್ತಿಲ್ಲ” ಎಂದು ತೊದಲುತ್ತಾ ಹೇಳುತ್ತಾನೆ.“ಮೊನ್ನೆ ದಿನ ನಾನು ಇಲ್ಲಿಗೆ ಬಂದಿದ್ದೆ. ಇಲ್ಲಿ ಗಾಲ್ಫ್ ಕೋರ್ಟ್, ಕ್ಲಬ್ ಹೌಸ್ ಇತ್ತು. ನಾವು ಕಡಲನಳ್ಳಿ, ಮೀನಿನ ಚಟ್ನಿ, ದ್ರಾಕ್ಷಿಯ ಮದ್ಯವನ್ನು ಸೇವಿಸಿದ್ದೆವು. ನಾವೆಲ್ಲಾರೂ ಒಟ್ಟಿಗೆ ಕುಣಿದು, ತುಂಬಾ ಸಂತೋಷದಿಂದ ಸಮಯವನ್ನು ಕಳೆದಿದ್ದೆವು. ಆದರೆ ಈಗ ಕೇವಲ ಪಾಳು ಭೂಮಿ ಮಾತ್ರ ಇದೆ. ಕಸದಿಂದ ತುಂಬಿ ಹೋಗಿದೆ, ನನ್ನ ಸ್ನೇಹಿತರು ಶೋಚನೀಯವಾಗಿ ಕಾಣುತ್ತಿದ್ದಾರೆ. ಏನು ಆಯಿತು?” ಎಂದು ವಿದೂಷಕನನ್ನು ಕೇಳುತ್ತಾನೆ.

ಆಗ ವಿದೂಷಕ ಅವನ ಕಡೆಗೆ ನಗೆ ಬೀರುತ್ತಾ  “ಮೊನ್ನೆ ದಿನ ನೀನು ಬಂದಾಗ ನಾವು ಚುನಾವಣಾ ಪ್ರಚಾರ ಮಾಡುತ್ತಿದ್ದೆವು. ಇವತ್ತು ನೀನು ನಮಗೆ ಓಟ್ ಮಾಡಿದೆ ಅಷ್ಟೇ” ಎಂದರು.

ನೀವೂ ಮೋಸಹೋಗಬೇಡಿ 2019ರ ಚುನಾವಣೆಯಲ್ಲಿ ಬುದ್ಧಿವಂತಿಕೆಯಿಂದ ಓಟ್ ಮಾಡಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...