Homeಸಾಹಿತ್ಯ-ಸಂಸ್ಕೃತಿಕಥೆಸ್ವರ್ಗಕ್ಕೆ ಸ್ವಾಗತ.

ಸ್ವರ್ಗಕ್ಕೆ ಸ್ವಾಗತ.

- Advertisement -
- Advertisement -

ಭಾರತದ ರಾಜಕಾರಣಿಯೊಬ್ಬ ವಾಯುವಿಹಾರಕ್ಕಾಗಿ ರಸ್ತೆಯಲ್ಲಿ ನಡೆಯುತ್ತಿರುವಾಗ ಕಾರೊಂದು ಗುದ್ದಿ ಸಾವನ್ನಪ್ಪಿದರು. ಅವರ ಆತ್ಮವು ಸ್ವರ್ಗದೊಳಗೆ ಆಗಮಿಸುತ್ತದೆ. ಪ್ರವೇಶ ದ್ವಾರದ ಬಳಿ ಚಿತ್ರಗುಪ್ತ ಅವರನ್ನು ಬರಮಾಡಿಕೊಂಡರು.  “ಸ್ವರ್ಗಕ್ಕೆ ಸ್ವಾಗತ” ಎಂದು ಹೇಳಿ, “ಇಲ್ಲಿ ನೀವು ನೆಲೆಗೊಳ್ಳುವುದಕ್ಕಿಂತ ಮುಂಚೆ ಇಲ್ಲಿನ ಎಲ್ಲವೂ ಅಧಿಕೃತವಾಗಿ ಹೆಚ್ಚು ವ್ಯವಸ್ಥಿತವಾಗಿ ನಡೆಯುತ್ತಿವೆಯೇ ಎಂದು ನೀವೊಮ್ಮೆ ಪರೀಕ್ಷಿಸಿಕೊಳ್ಳಬೇಕಿದೆ, ಅದಕ್ಕಾಗಿ ಒಂದು ದಿನ ಸ್ವರ್ಗದಲ್ಲಿಯೂ, ಇನ್ನೊಂದು ನರಕದಲ್ಲಿಯೂ ಇದ್ದು ನಿಮಗೆ ಸೂಕ್ತವಾದುದ್ದನ್ನು ಆರಿಸಿಕೊಳ್ಳಬಹುದೆಂದು ಚಿತ್ರಗುಪ್ತ ಹೇಳಿದರು. ಆಗ ರಾಜಕಾರಣಿ “ಸಮಸ್ಯೆ ಇಲ್ಲ, ಇಲ್ಲಿ ಎಲ್ಲ ಚೆನ್ನಾಗಿದೆ, ನನಗೆ ಇಷ್ಟ ಆಯಿತು. ನರಕ ನೋಡುವ ಅಗತ್ಯವಿಲ್ಲ, ಸ್ವರ್ಗದಲ್ಲೇ ಇರುತ್ತೇನೆ ಒಳಗೆ ಹೋಗೋಣ” ಎಂದು ಹೇಳಿದರು.

ಆಗ ಚಿತ್ರಗುಪ್ತ “ಕ್ಷಮಿಸಿ, ನಮಗೆ ನಮ್ಮದೇ ಆದ ನಿಯಮಗಳಿವೆ, ನಾನು ಮೇಲಿನವರಿಂದ ಆದೇಶಗಳನ್ನು ಹೊಂದಿದ್ದೇನೆ, ಹಾಗಾಗಿ ನೀವು ಇದನ್ನು ಪಾಲಿಸಲೇಬೇಕೆಂದು ಮನವಿ ಮಾಡಿದನು. ಆಗ ರಾಜಕಾರಣಿ ಇರಲಿ ಒಂದು ದಿನ ತಾನೇ ನರಕ ಹೇಗಿರುತ್ತೆ ಅಂತ ನೋಡೇ ಬಿಡೋಣ ಎಂದು ಒಪ್ಪಿಕೊಂಡರು. ಆಗ ಚಿತ್ರಗುಪ್ತ ಮತ್ತೆ ಕೇಳಿದನು ಮೊದಲು ನರಕಕ್ಕೆ ಹೋಗೋಣವೋ ಅಥವಾ ಸ್ವರ್ಗಕ್ಕೆ ಹೋಗೋಣವೋ ಅಂದಾಗ, ರಾಜಕಾರಣಿ ಮೊದಲು ನರಕವೇ ಇರಲಿ ಎಂದನು.

ನಂತರ ಚಿತ್ರಗುಪ್ತ ಅವರನ್ನು ಲಿಫ್ಟಿಗೆ ಹತ್ತಿಸಿಕೊಂಡನು. ಲಿಪ್ಟು ಅವರನ್ನು ಹೊತ್ತು ಕೆಳಕ್ಕೆ ಹೋಯಿತು. ಅದು ಎಷ್ಟು ಆಳಕ್ಕೆ ಹೋಗುತ್ತಿದೆ ಎಂದು ಗಾಬರಿಗೊಳ್ಳುವಷ್ಟರಲ್ಲೇ ಅವರು ನರಕದಲ್ಲಿದ್ದರು. ಬಾಗಿಲು ತೆರೆದಾಗ ರಾಜಕಾರಣಿ ಸುತ್ತಲೂ ವಿಶಾಲವಾದ ಗಾಲ್ಫ್ ಮೈದಾನವಿತ್ತು. ದೂರದಲ್ಲಿ ಕಾಣುತ್ತಿದ್ದ ಅಂಗಳದಲ್ಲಿ ಅವನ ಸ್ನೇಹಿತರು ಮತ್ತು ಜತೆಗೆ ಕೂಡಿ ಕೆಲಸ ಮಾಡಿದ್ದ ರಾಜಕಾರಣಿಗಳು ಸಾಲಾಗಿ ನಿಂತಿದ್ದರು. ಎಲ್ಲರ ಮೊಗದಲ್ಲೂ ಮಂದಹಾಸ, ಶುಭ್ರ ಬಟ್ಟೆಗಳು ಮನ ತಣಿಸುತ್ತಿದ್ದವು. ಅವರೆಲ್ಲರೂ ಓಡಿಬಂದು ತಮ್ಮ ಗೆಳೆಯನಿಗೆ ಶುಭ ಕೋರಿ, ಕೈಕುಲುಕಿದರು. ಬದುಕಿದ್ದಾಗ ಜನರನ್ನು ತುಳಿದು ತಾವು ಹೇಗೆ ಸಿರಿವಂತರಾದೆವು ಎಂಬ ನೆನಪುಗಳನ್ನು ಮೆಲುಕು ಹಾಕಿದರು.

ಎಲ್ಲರೂ ಸೇರಿ ಒಂದು ಸುತ್ತು ಗಾಲ್ಫ್ ಆಡಿ, ಅಲ್ಲಿದ್ದ ಬಗೆಬಗೆಯ ಕಡಲ ತಿನಿಸುಗಳನ್ನು ಸವಿದರು. ಬಳಿಕ, ದ್ರಾಕ್ಷಾರಸ ಅವರೆಲ್ಲರನ್ನು ಉಲ್ಲಸಿತರನ್ನಾಗಿ ಮಾಡಿತು. ಔತಣಕೂಟದಲ್ಲಿ ವಿದೂಷಕನೊಬ್ಬನು ಥರೇವಹಾರಿ ಜೋಕ್ಸ್ ಮಾಡುತ್ತಾ ನಗುತ್ತಾ, ನಗಿಸುತ್ತಾ ಅವರೊಡನೆ ಸಂತಸದ ಕ್ಷಣಗಳಿಗೆ ಸಾಕ್ಷಿಯಾದನು. ಇವರೆಲ್ಲರೂ ಸಂತೋಷ ಕೂಟದಲ್ಲಿ ಮೈಮರೆತಿದ್ದಾಗ, ರಾಜಕಾರಣಿಗೆ ಅರಿವಾಯಿತು. “ಒಂದು ದಿನ ಮುಗೀತು ಇದು ಹೊರಡುವ ಸಮಯ”. ಪ್ರತಿಯೊಬ್ಬರು ಅವರಿಗೆ ಆತ್ಮೀಯವಾಗಿ ಬೀಳ್ಕೊಟ್ಟರು, ಲಿಫ್ಟ್ ಮೇಲಕ್ಕೆ ಹೋಯಿತು.

ಲಿಫ್ಟ್ ಮೇಲಕ್ಕೆ, ಮತ್ತಷ್ಟು ಮೇಲಕ್ಕೆ ಹೋಗಿ ಸ್ವರ್ಗದಲ್ಲಿ ಬಾಗಿಲು ತೆರೆದುಕೊಳ್ಳುತ್ತದೆ. ಅಲ್ಲಿ ಪ್ರಶಾಂತತೆ ಇರುತ್ತದೆ. ಅವರು ಮೋಡಗಳಿಂದ ಮೋಡಕ್ಕೆ ನೆಗೆಯುತ್ತಾರೆ, ತಂತಿವಾದ್ಯಗಳನ್ನು ನುಡಿಸುತ್ತಾರೆ, ಗಿಟಾರ್‍ರನ್ನು ಬಾರಿಸುತ್ತಾರೆ, ಹಾಡು ಹೇಳುತ್ತಾರೆ. ಅವರು ಬಹಳ ಸಂತೋಷದಿಂದ ಸಮಯವನ್ನು ಕಳೆಯುತ್ತಾರೆ ಮತ್ತು ಆಗಷ್ಟೇ ಅವರಿಗೆ ಹೊಳೆಯುತ್ತದೆ 24 ಗಂಟೆಗಳು ಮುಗಿದು ಹೋಗಿದೆ ಎಂದು. ಮತ್ತೆ ಚಿತ್ರಗುಪ್ತ ರಾಜಕಾರಣಿಯ ಬಳಿ ಬರುತ್ತಾರೆ, “ನೀವು ಒಂದು ದಿನ ನರಕದಲ್ಲೂ ಮತ್ತೊಂದು ದಿನ ಸ್ವರ್ಗದಲ್ಲೂ ಕಳೆದಿದ್ದೀರಾ. ಈಗ ನಿಮ್ಮ ಶಾಶ್ವತ ನೆಲೆಯನ್ನು ಆಯ್ಕೆ ಮಾಡಿ”.

ರಾಜಕಾರಣಿ ಒಂದು ನಿಮಿಷ ಯೋಚಿಸಿ ಉತ್ತರ ನೀಡುತ್ತಾರೆ: “ನಾನು ಮುಂಚೆ ಸ್ವರ್ಗ ಸುಖಕರವಾಗಿಯೂ ನರಕ ಭಯಾನಕವಾಗಿಯೂ ಇರುತ್ತದೆ ಎಂದು ತಪ್ಪು ತಿಳಿದಿದ್ದೆ. ಆದರೆ ಇಲ್ಲಿ ಬಂದು ನೋಡಿದ ನಂತರ ಸ್ವರ್ಗಕ್ಕಿಂತ ನರಕವೇ ಅದ್ಭುತವಾಗಿದೆ ಅನ್ನಿಸುತ್ತಿದೆ. ಹಾಗಾಗಿ ನಾನು ನರಕವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದನು. ಇಂದು ಅಂತಿಮ ನಿರ್ಧಾರವೇ ಎಂದು ಚಿತ್ರಗುಪ್ತ ಕೇಳಿದರೆ ರಾಜಕಾರಣಿ ಯೆಸ್ 100% ಎಂದನು. ಸರಿ ಎಂದು ಚಿತ್ರಗುಪ್ತ ರಾಜಕಾರಣಿಯನ್ನು ನರಕಕ್ಕೆ ತಂದು ಬಿಡುತ್ತಾನೆ.

ಆಗ ರಾಜಕಾರಣಿ ಅವನ ಕಣ್ಣನ್ನು ಅವನೇ ನಂಬಲು ಸಿದ್ದವಿಲ್ಲ. ಏಕೆಂದರೆ ಅವನು ಬಂಜರು ಭೂಮಿಯ ಮಧ್ಯ ಭಾಗದಲ್ಲಿ ನಿಂತಿರುತ್ತಾನೆ. ಸುತ್ತಲೂ ತ್ಯಾಜ್ಯ, ಕಸ ತುಂಬಿ ಹೋಗಿರುತ್ತದೆ. ತನ್ನ ಎಲ್ಲಾ ಸ್ನೇಹಿತರು ಚಿಂದಿಬಟ್ಟೆ ತೊಟ್ಟು ಕಸ ಆಯ್ದು ಕಪ್ಪು ಚೀಲದಲ್ಲಿ ತುಂಬುತ್ತಿರುತ್ತಾರೆ. ಮೇಲಿನಿಂದ ಇನ್ನಷ್ಟು ಕಸ ಬೀಳುತ್ತಿರುತ್ತದೆ. ರೋಧನೆ, ನೋವಿನ ವಾತವರಣವಿರುತ್ತದೆ.

ಆತನ ಸ್ನೇಹಿತರು ಅವನನ್ನು ಕೂಗಿ, ಏನು ನೋಡುತ್ತಿದ್ದೀಯ ಬಾ ಕೆಲಸ ಮಾಡು ಅನ್ನುತ್ತಾರೆ. ಆಗ ರಾಜಕಾರಣಿ ಕಣ್ಣುಜ್ಜಿಕೊಂಡು “ನನಗೆ ಏನೊಂದು ಅರ್ಥವಾಗುತ್ತಿಲ್ಲ” ಎಂದು ತೊದಲುತ್ತಾ ಹೇಳುತ್ತಾನೆ.“ಮೊನ್ನೆ ದಿನ ನಾನು ಇಲ್ಲಿಗೆ ಬಂದಿದ್ದೆ. ಇಲ್ಲಿ ಗಾಲ್ಫ್ ಕೋರ್ಟ್, ಕ್ಲಬ್ ಹೌಸ್ ಇತ್ತು. ನಾವು ಕಡಲನಳ್ಳಿ, ಮೀನಿನ ಚಟ್ನಿ, ದ್ರಾಕ್ಷಿಯ ಮದ್ಯವನ್ನು ಸೇವಿಸಿದ್ದೆವು. ನಾವೆಲ್ಲಾರೂ ಒಟ್ಟಿಗೆ ಕುಣಿದು, ತುಂಬಾ ಸಂತೋಷದಿಂದ ಸಮಯವನ್ನು ಕಳೆದಿದ್ದೆವು. ಆದರೆ ಈಗ ಕೇವಲ ಪಾಳು ಭೂಮಿ ಮಾತ್ರ ಇದೆ. ಕಸದಿಂದ ತುಂಬಿ ಹೋಗಿದೆ, ನನ್ನ ಸ್ನೇಹಿತರು ಶೋಚನೀಯವಾಗಿ ಕಾಣುತ್ತಿದ್ದಾರೆ. ಏನು ಆಯಿತು?” ಎಂದು ವಿದೂಷಕನನ್ನು ಕೇಳುತ್ತಾನೆ.

ಆಗ ವಿದೂಷಕ ಅವನ ಕಡೆಗೆ ನಗೆ ಬೀರುತ್ತಾ  “ಮೊನ್ನೆ ದಿನ ನೀನು ಬಂದಾಗ ನಾವು ಚುನಾವಣಾ ಪ್ರಚಾರ ಮಾಡುತ್ತಿದ್ದೆವು. ಇವತ್ತು ನೀನು ನಮಗೆ ಓಟ್ ಮಾಡಿದೆ ಅಷ್ಟೇ” ಎಂದರು.

ನೀವೂ ಮೋಸಹೋಗಬೇಡಿ 2019ರ ಚುನಾವಣೆಯಲ್ಲಿ ಬುದ್ಧಿವಂತಿಕೆಯಿಂದ ಓಟ್ ಮಾಡಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...