Homeಅಂಕಣಗಳುಸ್ವಾಮೀಜಿಗಳ ಅವಾಂತರಗಳು ಇನ್ನೂ ಮುಂದಿವೆಯಂತಲ್ಲಾ!

ಸ್ವಾಮೀಜಿಗಳ ಅವಾಂತರಗಳು ಇನ್ನೂ ಮುಂದಿವೆಯಂತಲ್ಲಾ!

- Advertisement -
- Advertisement -

| ಯಾಹೂ |

ಹಿಂದೂ ಧರ್ಮಕ್ಕಂಟಿದ ಜಾತಿ ಎಂಬ ಶಾಪದ ಕಾಯಿಲೆ ಉಲ್ಬಣಿಸಿದೆಯಂತಲ್ಲಾ. ಒಂದು ಕಲಸಿದ ಪದಾರ್ಥ ಶೇಖರಗೊಂಡ ತುದಿ, ಕುತುರೆ ಎನ್ನಿಸಿಕೊಳ್ಳುತ್ತದೆ. ಜಾತಿಗಳ ಮೇಲೆ ಕುಳಿತ ಸ್ವಾಮಿಗಳೂ ಈ ಕುತುರೆಯೇ, ಅದಕ್ಕೆ ಯಾವಾಗಲೂ ಊಧ್ರ್ವ ಮುಖವಿರಬೇಕು. ಒಳ್ಳೆ ಭಾಷೆ, ನಡವಳಿಕೆ ಬಹಳ ಮುಖ್ಯ. ಅದರಲ್ಲೂ ಭಾಷೆ ಬಸವಣ್ಣ ಹೇಳಿದಂತೆ ಸ್ಪಟಿಕದ ಸಲಾಕೆಯಂತಿರಬೇಕು. ಕಬ್ಬಿಣದ ರಾಡು ಅಥವಾ ಚೂರಿಯಂತಿರಬಾರದು. ಆದರೆ, ಈ ಆಧುನಿಕ ಯುಗದ ಸ್ವಾಮಿಗಳನ್ನು ನೋಡಿದರೆ, ಬಗಲಲ್ಲಿ ಚೂರಿ ಇಟ್ಟುಕೊಂಡವರಂತೆ ಕಾಣುತ್ತಾರಲ್ಲಾ. ಈಚೆಗೆ ವಾಲ್ಮೀಕಿ ಜನಾಂಗ ಮೀಸಲಾತಿ ಬೇಡಿಕೆಗಾಗಿ ಸಂಘಟಿತಗೊಂಡು, ನೂರಾರು ಮೈಲಿ ಕಾಲ್ನಡಿಗೆ ಮಾಡಿ ಬೆಂಗಳೂರು ತಲುಪಿತು. ಸಾವಿರಾರು ಜನರ ತಲೆ ನೋಡಿದ ಪ್ರಸನ್ನಾನಂದ ಪುರಿಯವರ ತಲೆ ತಿರುಗಿತು. ನಾಲಿಗೆ ಹೊರಳಿತು, “ನಮ್ಮ ಜನಾಂಗದ 17 ಶಾಸಕರು ಕೈಕೊಟ್ಟರೆ ಕುಮಾರಸ್ವಾಮಿ ಗೊಟಕ್ ಅಂತಾರೆ, ಇಲ್ಲಿಗೆ ಕುಮಾರಸ್ವಾಮಿನೂ ಬರಬೇಕು, ಅವರಪ್ಪನೂ ಬರಬೇಕು ಎಂದರು”. ಅಲ್ಲಿಗೆ ಪಾದಯಾತ್ರೆಯ ಸಾಧನೆ ಗೊಟಕ್ ಅಂತು. ಕುಂಬಾರನಿಗೆ ನೂರು ದಿವಸ, ದೊಣ್ಣೆ ನಾಯಕನಿಗೆ ಮೂರು ನಿಮಿಷ ಎಂಬಂತೆ ಮಾಡಿದ ಪ್ರಸನ್ನಾನಂದ ಪುರಿ ಸ್ವಾಮಿಗೆ ಯಾರಾದರೂ `ಪ್ರಸನ್ನ’ ಅಂದರೇನೆಂದು ಹೇಳಿಕೊಡಬೇಕಾಗಿದೆಯಲ್ಲಾ, ಥೂತ್ತೇರಿ!

ಈ ಸ್ವಾಮಿಗಳ ಅವಾಂತರಗಳು ಇನ್ನ ಭವಿಷ್ಯದಲ್ಲಿ ಭೀಕರವಾಗಿವೆಯಂತಲ್ಲಾ. ಹವ್ಯಕ ಜನಾಂಗದ ವಿದ್ವಾಂಸರನ್ನ ಕೇಳಿದರೆ, ನಮ್ಮ ಜನಾಂಗದ ಗುರುಗಳ ಸಾಧನೆ ಯಾರಿಂದಲೂ ಸಾಧ್ಯವಿಲ್ಲ ಬಿಡಿ. ಅವರು ಮಾಡಿದ್ದು ರೇಪಲ್ಲ ಒಪ್ಪಿತ ಸಂಭೋಗ ಎಂಬ ಕೋರ್ಟ್ ತೀರ್ಪನ್ನೇ ಮಠೋಪಜೀವಿಗಳು “ಹುರ್ರೇ ನಮ್ಮ ಸ್ವಾಮಿಗಳು ರೇಪು ಮಾಡಿಲ್ಲವಂತೆ ಬರೀ ಸಂಭೋಗವಂತೆ” ಎಂದು ಪಟಾಕಿ ಸಿಡಿಸಿ ಮಲೆನಾಡೇ ಮಾರ್ದನಿಗೊಳ್ಳುವಂತೆ ಮಾಡಿದರು. ಅದಷ್ಟೇ ಅಲ್ಲ, ಸ್ವಾಮಿಗಳಾದವರಿಗೆ ಸಂಭೋಗ ಕಡ್ಡಾಯ; ಅದರಲ್ಲಿ ಯಾವ ಅಪಮಾನವೂ ಇಲ್ಲ, ಅಂಜಿಕೆಯೂ ಇಲ್ಲ ಎಂಬಂತೆ ಕುಣಿದು ಕುಪ್ಪಳಿಸಿವೆ. ಸ್ವಾಮಿಗಳ ಹಿಂಬಾಲಕರ ಎದುರು ನೈತಿಕತೆ ಉಳಿಸಿಕೊಂಡ ಜನ ನೆಮ್ಮದಿಯಿಂದ ಬದುಕುವುದೇ ದುಸ್ತರವಾಗಿದೆ. ಅಂತೂ ನಮ್ಮ ರಘುಪತಿ ರಾಘವನ ಸಾಧನೆ ಸರಿಗಟ್ಟುವ ಸ್ವಾಮಿ ಇನ್ನು ಬರಲಾರ ಎಂದರಲ್ಲಾ. “ಸ್ವಲ್ಪ ಇರಿ ಉಡುಪಿಯ ಮಠೋಪಜೀವಿಗಳ ಬಗ್ಗೆ ಏನು ಹೇಳತ್ತೀರಿ” ಎಂದಾಗ, ಉಡುಪಿ ಬಿಡಿ ಅಲ್ಲಿ ವ್ಯಭಿಚಾರ ಕಡ್ಡಾಯ, ಮಕ್ಕಳಾದರೆ ಅಲ್ಲಿ ಇಲ್ಲಿ ಬಿಟ್ಟು ಓದಿಸಬಹುದು. ಇಂತದೊಂದು ಆಪಾದನೆಗೆ ಬಲರಾಮನ ಗೋವಿನಂತಹ ಪೇಜಾವರರೇ ಗುರಿಯಾಗಿರುವಾಗ ಉಳಿದವರ ಬಗ್ಗೆ ಮಾತನಾಡುವುದೇ ಮಹಾಪರಾಧ ಎಂದರಲ್ಲಾ, ಥೂತ್ತೇರಿ!!

ಇನ್ನ ಸಿದ್ದರಾಮಯ್ಯನ ಅಭಿಮಾನಿ ಸ್ವಾಮಿಯೊಬ್ಬರು ಆಗಾಗ್ಗೆ ಸುದ್ದಿ ಮಾಡುತ್ತಲೇ ಇರುತ್ತಾರೆ. ಅದಕ್ಕೂ ಮೊದಲು `ಆ ಸಿದ್ದರಾಮಯ್ಯ ನನಗೆ ಬರೀ ನಮಸ್ಕಾರ ಮಾಡುತ್ತಾನೆಯೇ ಹೊರತು, ಕಾಲಿಗೆ ಬೀಳುವುದಿಲ್ಲ’ ಎಂದು ಗುಟುರು ಹಾಕಿದ್ದ ಆ ಗುರುಗಳು, `ಸಿದ್ದು ಮತ್ತೆ ಮುಖ್ಯಮಂತ್ರಿಯಾಗಬೇಕು. ನನ್ನ ಆಶೀರ್ವಾದ ಸದಾ ಅವರ ಜೊತೆಯಲ್ಲಿರುತ್ತದೆ’ ಎಂದಿದ್ದರು. ಈ ಆಶೀರ್ವಾದ ಅಂದರೇನು, ಅದು ಸದಾ ಜೊತೆಯಲ್ಲಿರಬೇಕಾದರೆ ಅದರ ಆಕಾರ ಏನು ಎಂಬುದನ್ನು ಗುರುಗಳು ವಿವರಿಸಿಲ್ಲ. ಏಕೆಂದರೆ ಅವರಾಡಿದ ಮಾತನ್ನೇ ಭಕ್ತಾದಿಗಳು ತಮಗೆ ತಿಳಿದಂತೆ ಅರ್ಥೈಸಿಕೊಳ್ಳಬೇಕು. ಇದೆಲ್ಲಕ್ಕಿಂತ ಮುಖ್ಯವಾಗಿ ಸದರಿ ಗುರುಗಳು ಕುರಿ ರಾಷ್ಟ್ರೀಯ ಪ್ರಾಣಿ. ಅದರ ಹತ್ಯೆ ನಿಲ್ಲಿಸಿ ಗೌರವ ಸಲ್ಲಿಸಬೇಕೆಂದು ಕರೆಕೊಟ್ಟಿದ್ದರು. ಈ ವಿಷಯವಾಗಿ ಕುರಿಗಳ ಕಡೆಯಿಂದ ಯಾವ ಬೆಂಬಲ ಬರದಿದ್ದರೂ, ಕುರಿ ಕೂದು ಧರ್ಮ ಸುಲಿದು ದುಗ್ಗಾಣಿಗೆ ತೆಗೆದುಕೊಂಡು ಹೋಗುವ ಸಾಬರು, ಬೋಟಿಪ್ರಿಯರು, ಚಾಪೀಸ್ ಭಕ್ಷುಗಳು, ಕೈಮಾಕಾಂಕ್ಷಿಗಳು ಮತ್ತೆ ತಲೆಕಾಲು ಸೂಪಿನ ವ್ಯಸನಿಗಳು ಒಕ್ಕೊರಲಿನಿಂದ ಪ್ರತಿಭಟಿಸಿದಾಗ ಕುರಿಗಳೇ ತಲೆಯಲ್ಲಾಡಿಸಿ ಬೆಂಬಲ ಸೂಚಿಸಿದವಲ್ಲಾ, ಥೂತ್ತೇರಿ!!!

ಜಗದ್ಗುರುಗಳೇ ದಿಕ್ಕು ತಪ್ಪಿದ ಭಾಷೆ ಬಳಸಿ, ಅಸಂಬದ್ದ ಮಾತನಾಡುತ್ತಿರುವಾಗ, ಇನ್ನ ಅವರ ಕಾಲಿಗೆ ಬೀಳುತ್ತಿರುವ ರಾಜಕಾರಣಿಗಳ ಮಾತು ಕೇಳಬೇಕೆ, ಅದರಲ್ಲೂ ನಮ್ಮ ಈಶ್ವರಪ್ಪನ ನಾಲಿಗೆಯಂತೂ ಬಳ್ಳಾರಿ ಜಾಲಿ ಮುಳ್ಳಿನಂತೆ. ಎಷ್ಟೇ ಆಗಲಿ ಅಲ್ಲಿಂದಲೇ ಶಿವಮೊಗ್ಗದ ಕಡೆ ಹೋದವರಲ್ಲವೇ. ಆದರೂ ಕಲೆ, ಸಾಹಿತ್ಯ, ಸಂಗೀತ, ಸಂಸ್ಕøತಿಗಳನ್ನ ಪೋಷಿಸಿಕೊಂಡು ಬರುತ್ತಿರುವ ಆ ಶಿವಮೊಗ್ಗದ ಸಂಸ್ಕøತಿಯ ಕಿಂಚಿತ್ ಸ್ಪರ್ಶವೂ ತಮ್ಮ ಮೇಲಾಗದಂತೆ ಎಚ್ಚರಿಕೆ ವಹಿಸಿ ಮೇಲೇರಿದ ಈಶ್ವರಪ್ಪನ ಒರಿಜಿನಾಲಿಟಿಯನ್ನ ಮೆಚ್ಚಲೇಬೇಕಂತಲ್ಲಾ. ಯಾರೇ ಆಗಲಿ ತಮ್ಮ ಮೂಲ ಸಂಸ್ಕøತಿ ಬಿಟ್ಟುಕೊಟ್ಟರೆ ವ್ಯಕ್ತಿತ್ವವೇ ನಾಶವಾಗಿ ಹೋದಂತೆ, ಇದನ್ನ ಇಟ್ಟುಕೊಂಡರೆ “ಪಾಪ ಅವನೆಡ್ತಿ ಸರಿಯಿಲ್ಲ ಇನ್ನೇನು ಮಾಡ್ತನೆ” ಎನ್ನುತ್ತಾರೆ. ಯಾರಾದರೂ ಹೆಣ್ಣು ಮಗಳು ರೇಪಿಗೆ ಒಳಗಾದರೆ “ಕೇಳಿದ ಕೂಡ್ಳೆ ಕೊಟ್ಟಿದ್ರೆ ರೇಪ್ಯಾಕಾಗದು” ಎನ್ನುತ್ತಾರೆ. ಹಾಗೆಯೇ “ಮಂತ್ರಿಯಾಗಿ ಇಷ್ಟು ಆಸ್ತಿ ಮಾಡಿಕೊಂಡಿರಲ್ಲಾ” ಎಂದರೆ, ಮಿನಿಸ್ಟರಾಗಿ ಪಾರ್ಟಿ ಜನಗಳನ್ನ ಸಾಕಬೇಕಲ್ಲ ಏಣು ಮಾಡ್ಳಿ ಎಂದು ಇನ್ನ ಅಂದಿಲ್ಲವಂತಲ್ಲಾ, ಥೂತ್ತೇರಿ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...