Homeಅಂಕಣಗಳುಸ್ವಾಮೀಜಿಗಳ ಅವಾಂತರಗಳು ಇನ್ನೂ ಮುಂದಿವೆಯಂತಲ್ಲಾ!

ಸ್ವಾಮೀಜಿಗಳ ಅವಾಂತರಗಳು ಇನ್ನೂ ಮುಂದಿವೆಯಂತಲ್ಲಾ!

- Advertisement -
- Advertisement -

| ಯಾಹೂ |

ಹಿಂದೂ ಧರ್ಮಕ್ಕಂಟಿದ ಜಾತಿ ಎಂಬ ಶಾಪದ ಕಾಯಿಲೆ ಉಲ್ಬಣಿಸಿದೆಯಂತಲ್ಲಾ. ಒಂದು ಕಲಸಿದ ಪದಾರ್ಥ ಶೇಖರಗೊಂಡ ತುದಿ, ಕುತುರೆ ಎನ್ನಿಸಿಕೊಳ್ಳುತ್ತದೆ. ಜಾತಿಗಳ ಮೇಲೆ ಕುಳಿತ ಸ್ವಾಮಿಗಳೂ ಈ ಕುತುರೆಯೇ, ಅದಕ್ಕೆ ಯಾವಾಗಲೂ ಊಧ್ರ್ವ ಮುಖವಿರಬೇಕು. ಒಳ್ಳೆ ಭಾಷೆ, ನಡವಳಿಕೆ ಬಹಳ ಮುಖ್ಯ. ಅದರಲ್ಲೂ ಭಾಷೆ ಬಸವಣ್ಣ ಹೇಳಿದಂತೆ ಸ್ಪಟಿಕದ ಸಲಾಕೆಯಂತಿರಬೇಕು. ಕಬ್ಬಿಣದ ರಾಡು ಅಥವಾ ಚೂರಿಯಂತಿರಬಾರದು. ಆದರೆ, ಈ ಆಧುನಿಕ ಯುಗದ ಸ್ವಾಮಿಗಳನ್ನು ನೋಡಿದರೆ, ಬಗಲಲ್ಲಿ ಚೂರಿ ಇಟ್ಟುಕೊಂಡವರಂತೆ ಕಾಣುತ್ತಾರಲ್ಲಾ. ಈಚೆಗೆ ವಾಲ್ಮೀಕಿ ಜನಾಂಗ ಮೀಸಲಾತಿ ಬೇಡಿಕೆಗಾಗಿ ಸಂಘಟಿತಗೊಂಡು, ನೂರಾರು ಮೈಲಿ ಕಾಲ್ನಡಿಗೆ ಮಾಡಿ ಬೆಂಗಳೂರು ತಲುಪಿತು. ಸಾವಿರಾರು ಜನರ ತಲೆ ನೋಡಿದ ಪ್ರಸನ್ನಾನಂದ ಪುರಿಯವರ ತಲೆ ತಿರುಗಿತು. ನಾಲಿಗೆ ಹೊರಳಿತು, “ನಮ್ಮ ಜನಾಂಗದ 17 ಶಾಸಕರು ಕೈಕೊಟ್ಟರೆ ಕುಮಾರಸ್ವಾಮಿ ಗೊಟಕ್ ಅಂತಾರೆ, ಇಲ್ಲಿಗೆ ಕುಮಾರಸ್ವಾಮಿನೂ ಬರಬೇಕು, ಅವರಪ್ಪನೂ ಬರಬೇಕು ಎಂದರು”. ಅಲ್ಲಿಗೆ ಪಾದಯಾತ್ರೆಯ ಸಾಧನೆ ಗೊಟಕ್ ಅಂತು. ಕುಂಬಾರನಿಗೆ ನೂರು ದಿವಸ, ದೊಣ್ಣೆ ನಾಯಕನಿಗೆ ಮೂರು ನಿಮಿಷ ಎಂಬಂತೆ ಮಾಡಿದ ಪ್ರಸನ್ನಾನಂದ ಪುರಿ ಸ್ವಾಮಿಗೆ ಯಾರಾದರೂ `ಪ್ರಸನ್ನ’ ಅಂದರೇನೆಂದು ಹೇಳಿಕೊಡಬೇಕಾಗಿದೆಯಲ್ಲಾ, ಥೂತ್ತೇರಿ!

ಈ ಸ್ವಾಮಿಗಳ ಅವಾಂತರಗಳು ಇನ್ನ ಭವಿಷ್ಯದಲ್ಲಿ ಭೀಕರವಾಗಿವೆಯಂತಲ್ಲಾ. ಹವ್ಯಕ ಜನಾಂಗದ ವಿದ್ವಾಂಸರನ್ನ ಕೇಳಿದರೆ, ನಮ್ಮ ಜನಾಂಗದ ಗುರುಗಳ ಸಾಧನೆ ಯಾರಿಂದಲೂ ಸಾಧ್ಯವಿಲ್ಲ ಬಿಡಿ. ಅವರು ಮಾಡಿದ್ದು ರೇಪಲ್ಲ ಒಪ್ಪಿತ ಸಂಭೋಗ ಎಂಬ ಕೋರ್ಟ್ ತೀರ್ಪನ್ನೇ ಮಠೋಪಜೀವಿಗಳು “ಹುರ್ರೇ ನಮ್ಮ ಸ್ವಾಮಿಗಳು ರೇಪು ಮಾಡಿಲ್ಲವಂತೆ ಬರೀ ಸಂಭೋಗವಂತೆ” ಎಂದು ಪಟಾಕಿ ಸಿಡಿಸಿ ಮಲೆನಾಡೇ ಮಾರ್ದನಿಗೊಳ್ಳುವಂತೆ ಮಾಡಿದರು. ಅದಷ್ಟೇ ಅಲ್ಲ, ಸ್ವಾಮಿಗಳಾದವರಿಗೆ ಸಂಭೋಗ ಕಡ್ಡಾಯ; ಅದರಲ್ಲಿ ಯಾವ ಅಪಮಾನವೂ ಇಲ್ಲ, ಅಂಜಿಕೆಯೂ ಇಲ್ಲ ಎಂಬಂತೆ ಕುಣಿದು ಕುಪ್ಪಳಿಸಿವೆ. ಸ್ವಾಮಿಗಳ ಹಿಂಬಾಲಕರ ಎದುರು ನೈತಿಕತೆ ಉಳಿಸಿಕೊಂಡ ಜನ ನೆಮ್ಮದಿಯಿಂದ ಬದುಕುವುದೇ ದುಸ್ತರವಾಗಿದೆ. ಅಂತೂ ನಮ್ಮ ರಘುಪತಿ ರಾಘವನ ಸಾಧನೆ ಸರಿಗಟ್ಟುವ ಸ್ವಾಮಿ ಇನ್ನು ಬರಲಾರ ಎಂದರಲ್ಲಾ. “ಸ್ವಲ್ಪ ಇರಿ ಉಡುಪಿಯ ಮಠೋಪಜೀವಿಗಳ ಬಗ್ಗೆ ಏನು ಹೇಳತ್ತೀರಿ” ಎಂದಾಗ, ಉಡುಪಿ ಬಿಡಿ ಅಲ್ಲಿ ವ್ಯಭಿಚಾರ ಕಡ್ಡಾಯ, ಮಕ್ಕಳಾದರೆ ಅಲ್ಲಿ ಇಲ್ಲಿ ಬಿಟ್ಟು ಓದಿಸಬಹುದು. ಇಂತದೊಂದು ಆಪಾದನೆಗೆ ಬಲರಾಮನ ಗೋವಿನಂತಹ ಪೇಜಾವರರೇ ಗುರಿಯಾಗಿರುವಾಗ ಉಳಿದವರ ಬಗ್ಗೆ ಮಾತನಾಡುವುದೇ ಮಹಾಪರಾಧ ಎಂದರಲ್ಲಾ, ಥೂತ್ತೇರಿ!!

ಇನ್ನ ಸಿದ್ದರಾಮಯ್ಯನ ಅಭಿಮಾನಿ ಸ್ವಾಮಿಯೊಬ್ಬರು ಆಗಾಗ್ಗೆ ಸುದ್ದಿ ಮಾಡುತ್ತಲೇ ಇರುತ್ತಾರೆ. ಅದಕ್ಕೂ ಮೊದಲು `ಆ ಸಿದ್ದರಾಮಯ್ಯ ನನಗೆ ಬರೀ ನಮಸ್ಕಾರ ಮಾಡುತ್ತಾನೆಯೇ ಹೊರತು, ಕಾಲಿಗೆ ಬೀಳುವುದಿಲ್ಲ’ ಎಂದು ಗುಟುರು ಹಾಕಿದ್ದ ಆ ಗುರುಗಳು, `ಸಿದ್ದು ಮತ್ತೆ ಮುಖ್ಯಮಂತ್ರಿಯಾಗಬೇಕು. ನನ್ನ ಆಶೀರ್ವಾದ ಸದಾ ಅವರ ಜೊತೆಯಲ್ಲಿರುತ್ತದೆ’ ಎಂದಿದ್ದರು. ಈ ಆಶೀರ್ವಾದ ಅಂದರೇನು, ಅದು ಸದಾ ಜೊತೆಯಲ್ಲಿರಬೇಕಾದರೆ ಅದರ ಆಕಾರ ಏನು ಎಂಬುದನ್ನು ಗುರುಗಳು ವಿವರಿಸಿಲ್ಲ. ಏಕೆಂದರೆ ಅವರಾಡಿದ ಮಾತನ್ನೇ ಭಕ್ತಾದಿಗಳು ತಮಗೆ ತಿಳಿದಂತೆ ಅರ್ಥೈಸಿಕೊಳ್ಳಬೇಕು. ಇದೆಲ್ಲಕ್ಕಿಂತ ಮುಖ್ಯವಾಗಿ ಸದರಿ ಗುರುಗಳು ಕುರಿ ರಾಷ್ಟ್ರೀಯ ಪ್ರಾಣಿ. ಅದರ ಹತ್ಯೆ ನಿಲ್ಲಿಸಿ ಗೌರವ ಸಲ್ಲಿಸಬೇಕೆಂದು ಕರೆಕೊಟ್ಟಿದ್ದರು. ಈ ವಿಷಯವಾಗಿ ಕುರಿಗಳ ಕಡೆಯಿಂದ ಯಾವ ಬೆಂಬಲ ಬರದಿದ್ದರೂ, ಕುರಿ ಕೂದು ಧರ್ಮ ಸುಲಿದು ದುಗ್ಗಾಣಿಗೆ ತೆಗೆದುಕೊಂಡು ಹೋಗುವ ಸಾಬರು, ಬೋಟಿಪ್ರಿಯರು, ಚಾಪೀಸ್ ಭಕ್ಷುಗಳು, ಕೈಮಾಕಾಂಕ್ಷಿಗಳು ಮತ್ತೆ ತಲೆಕಾಲು ಸೂಪಿನ ವ್ಯಸನಿಗಳು ಒಕ್ಕೊರಲಿನಿಂದ ಪ್ರತಿಭಟಿಸಿದಾಗ ಕುರಿಗಳೇ ತಲೆಯಲ್ಲಾಡಿಸಿ ಬೆಂಬಲ ಸೂಚಿಸಿದವಲ್ಲಾ, ಥೂತ್ತೇರಿ!!!

ಜಗದ್ಗುರುಗಳೇ ದಿಕ್ಕು ತಪ್ಪಿದ ಭಾಷೆ ಬಳಸಿ, ಅಸಂಬದ್ದ ಮಾತನಾಡುತ್ತಿರುವಾಗ, ಇನ್ನ ಅವರ ಕಾಲಿಗೆ ಬೀಳುತ್ತಿರುವ ರಾಜಕಾರಣಿಗಳ ಮಾತು ಕೇಳಬೇಕೆ, ಅದರಲ್ಲೂ ನಮ್ಮ ಈಶ್ವರಪ್ಪನ ನಾಲಿಗೆಯಂತೂ ಬಳ್ಳಾರಿ ಜಾಲಿ ಮುಳ್ಳಿನಂತೆ. ಎಷ್ಟೇ ಆಗಲಿ ಅಲ್ಲಿಂದಲೇ ಶಿವಮೊಗ್ಗದ ಕಡೆ ಹೋದವರಲ್ಲವೇ. ಆದರೂ ಕಲೆ, ಸಾಹಿತ್ಯ, ಸಂಗೀತ, ಸಂಸ್ಕøತಿಗಳನ್ನ ಪೋಷಿಸಿಕೊಂಡು ಬರುತ್ತಿರುವ ಆ ಶಿವಮೊಗ್ಗದ ಸಂಸ್ಕøತಿಯ ಕಿಂಚಿತ್ ಸ್ಪರ್ಶವೂ ತಮ್ಮ ಮೇಲಾಗದಂತೆ ಎಚ್ಚರಿಕೆ ವಹಿಸಿ ಮೇಲೇರಿದ ಈಶ್ವರಪ್ಪನ ಒರಿಜಿನಾಲಿಟಿಯನ್ನ ಮೆಚ್ಚಲೇಬೇಕಂತಲ್ಲಾ. ಯಾರೇ ಆಗಲಿ ತಮ್ಮ ಮೂಲ ಸಂಸ್ಕøತಿ ಬಿಟ್ಟುಕೊಟ್ಟರೆ ವ್ಯಕ್ತಿತ್ವವೇ ನಾಶವಾಗಿ ಹೋದಂತೆ, ಇದನ್ನ ಇಟ್ಟುಕೊಂಡರೆ “ಪಾಪ ಅವನೆಡ್ತಿ ಸರಿಯಿಲ್ಲ ಇನ್ನೇನು ಮಾಡ್ತನೆ” ಎನ್ನುತ್ತಾರೆ. ಯಾರಾದರೂ ಹೆಣ್ಣು ಮಗಳು ರೇಪಿಗೆ ಒಳಗಾದರೆ “ಕೇಳಿದ ಕೂಡ್ಳೆ ಕೊಟ್ಟಿದ್ರೆ ರೇಪ್ಯಾಕಾಗದು” ಎನ್ನುತ್ತಾರೆ. ಹಾಗೆಯೇ “ಮಂತ್ರಿಯಾಗಿ ಇಷ್ಟು ಆಸ್ತಿ ಮಾಡಿಕೊಂಡಿರಲ್ಲಾ” ಎಂದರೆ, ಮಿನಿಸ್ಟರಾಗಿ ಪಾರ್ಟಿ ಜನಗಳನ್ನ ಸಾಕಬೇಕಲ್ಲ ಏಣು ಮಾಡ್ಳಿ ಎಂದು ಇನ್ನ ಅಂದಿಲ್ಲವಂತಲ್ಲಾ, ಥೂತ್ತೇರಿ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...