Homeರಾಜಕೀಯಹಾಸನ: ಇಲ್ಲಿ ಜೆಡಿಎಸ್ ಭದ್ರ

ಹಾಸನ: ಇಲ್ಲಿ ಜೆಡಿಎಸ್ ಭದ್ರ

- Advertisement -
- Advertisement -
  • ಆಕಾಶ್ ಕೆರೆಕಟ್ಟೆ |

ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಹಾಸನದಲ್ಲಿ ಕಾವು ಹೆಚ್ಚುತ್ತಿವೆ. ಏಳು ಕ್ಷೇತ್ರಗಳ ಪೈಕಿ ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನೇರ ಎದುರಾಳಿಗಳಾಗಿರುವುದು ನಾಲ್ಕು ಕ್ಷೇತ್ರಗಳಲ್ಲಿ. ಇನ್ನು ಮೂರು ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ ತೀವ್ರ ಪೈಪೋಟಿ ಕೊಡುವ ಮಟ್ಟಿಗೆ ತನ್ನ ಪಡೆಯನ್ನು ಸಿದ್ಧಪಡಿಸಿಕೊಂಡಿದೆ.

ರೇವಣ್ಣ

ಮಾಜಿ ಪ್ರಧಾನಿ ದೇವೇಗೌಡರು ಆರು ಬಾರಿ ಪ್ರತಿನಿಧಿಸಿದ್ದ ಹೊಳೆನರಸೀಪುರ ಕ್ಷೇತ್ರ ಇಬ್ಬರು ಪ್ರಬಲ ಎದುರಾಳಿಗಳ ಕಾರಣದಿಂದ ರಾಜ್ಯದ ಗಮನ ಸೆಳೆದಿದೆ. ದೇವೇಗೌಡರ ಮಗ ಹಾಗೂ ಮಾಜಿ ಮಂತ್ರಿ ಎಚ್.ಡಿ.ರೇವಣ್ಣ, ಕಾಂಗ್ರೆಸ್‍ನ ಬಿ.ಪಿ.ಮಂಜೇಗೌಡರ ವಿರುದ್ಧ ಸೆಣೆಸುತ್ತಿದ್ದಾರೆ. ಕ್ಷೇತ್ರಕ್ಕೆ ಹೊಸಮುಖವಾದ ಮಂಜೇಗೌಡ ಪಕ್ಷದ ಹಿರಿಯ ನೇತಾರರ ಬೆಂಬಲದಿಂದ ಪ್ರಬಲ ಪೈಪೋಟಿ ಕೊಡುತ್ತಿದ್ದಾರೆ. ಅವರ ಸ್ಪರ್ಧೆಗೆ ಮಹತ್ವ ಸಿಕ್ಕಿದ್ದೇ ರೇವಣ್ಣನ ಪ್ರತಿಕ್ರಿಯೆಗಳಿಂದ. ಸಾರಿಗೆ ಇಲಾಖೆಯ ನೌಕರನಾಗಿದ್ದ ಮಂಜೇಗೌಡ ಕೆಲಸಕ್ಕೆ ರಾಜೀನಾಮೆ ನೀಡಿ ಚುನಾವಣಾ ಕಣ ಪ್ರವೇಶಿಸುವ ಮೊದಲೇ, ರೇವಣ್ಣ ಆತನ ವಿರುದ್ಧ ಟೀಕೆಗೆ ಇಳಿದರು. ಆತನ ರಾಜೀನಾಮೆಯನ್ನು ಸರಕಾರ ಒಪ್ಪಬಾರದು ಎಂದು ಒತ್ತಾಯಿಸಿದರು. ಕೊನೆಗೆ ಸರಕಾರ ರಾಜೀನಾಮೆ ಒಪ್ಪಿದ ಮೇಲೆ, ಚುನಾವಣಾ ಆಯೋಗಕ್ಕೆ ದೂರು ನೀಡಿದರು. ಹಾಗಾಗಿ, ಮಂಜೇಗೌಡ ಅಂಕಣ ಪ್ರವೇಶಿಸುವ ಮೊದಲೇ ರೇವಣ್ಣ ಆತನಿಗೆ ‘ಪ್ರಬಲ ಪ್ರತಿಸ್ಪರ್ಧಿ’ ಎಂಬ ಪಟ್ಟ ದಯಪಾಲಿಸಿದ್ದರು.

ಮಂಜೇಗೌಡ

ಪ್ರಚಾರದ ವೇಳೆ ಅಲ್ಲಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಮುಖಾಮುಖಿಯಾಗುತ್ತಿದ್ದಾರೆ. ಬಿರುಸಿನ ಮಾತುಕತೆ, ಕೈ ಮಿಲಾಯಿಸುವ ಮಟ್ಟಕ್ಕೆ ಘಟನೆಗಳು ನಡೆದಿವೆ. ರೇವಣ್ಣನ ಮಡದಿ ಭವಾನಿ, ಮಕ್ಕಳು ಪ್ರಜ್ವಲ್ ಹಾಗೂ ಸೂರಜ್ ಕ್ಷೇತ್ರದಲ್ಲಿ ಬಿಡುವಿಲ್ಲದೆ ಓಡಾಡುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಪ್ರಜ್ವಲ್ ಅಪ್ಪನ ಕ್ಷೇತ್ರ ಅಷ್ಟೇ ಅಲ್ಲದೆ ಬೇರೆಡೆಯೂ ಪ್ರಚಾರ ಮಾಡಿದ್ದರು. ಆದರೆ ಈಗ ಅವರು ತಮ್ಮ ಶ್ರಮವನ್ನು ಸಂಪೂರ್ಣವಾಗಿ ಅಪ್ಪನ ಕ್ಷೇತ್ರಕ್ಕೆ ಸೀಮಿತಗೊಳಿಸಿದಂತೆ ಕಾಣುತ್ತಿದೆ. ಅತ್ತ ಕಾಂಗ್ರೆಸ್ ಪಾಳಯದಲ್ಲಿ ಪಕ್ಷದ ಬೆಂಬಲದ ಜೊತೆಗೆ ಈ ಹಿಂದೆ ಎರಡು ಬಾರಿ ಸ್ಪರ್ಧಿಸಿ ಗಮನಾರ್ಹ ಮತ ಗಳಿಸಿದ್ದ ಮಾಜಿ ಮಂತ್ರಿ ಜಿ.ಪುಟ್ಟಸ್ವಾಮಿಗೌಡರ ಸೊಸೆ ಅನುಪಮ ಮಹೇಶ್ ಅವರ ಬೆಂಬಲ ಕೂಡ ಮಂಜೇಗೌಡರಿಗಿದೆ. ಆದರೂ ರೇವಣ್ಣನ ಪ್ರಾಬಲ್ಯಕ್ಕೇ ಮತದಾರರು ಜೈ ಎನ್ನುವ ಸಾಧ್ಯತೆ ಇದೆ. ಈ ಕ್ಷೇತ್ರದಲ್ಲಿ ಬಿಜೆಪಿ ಲೆಕ್ಕಕ್ಕೂ ಇಲ್ಲ, ಆಟಕ್ಕೂ ಇಲ್ಲ.

ಎ ಮಂಜು

ಜಿಲ್ಲಾ ಮಂತ್ರಿ ಎ.ಮಂಜು (ಕಾಂಗ್ರೆಸ್) ಪ್ರತಿನಿಧಿಸುವ ಅರಕಲಗೂಡು ಕ್ಷೇತ್ರದಲ್ಲಿ ಎರಡು ಬಾರಿ ಸೋಲು ಅನುಭವಿಸಿದ್ದ ಎ.ಟಿ.ರಾಮಸ್ವಾಮಿ (ಜೆಡಿಎಸ್) ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ‘ಒಳ್ಳೆಯ ಮನುಷ್ಯ’ ಎಂಬ ಮೆಚ್ಚುಗೆಯ ಮಾತುಗಳಿಗೆ ಪಾತ್ರರಾಗಿರುವ ರಾಮಸ್ವಾಮಿ ಎದುರಾಳಿಯ ತಂತ್ರಗಳಿಗೆ ಸೆಡ್ಡು ಹೊಡೆಯುತ್ತಾರಾ ಎನ್ನುವುದೇ ಪ್ರಶ್ನೆ. ಇವರಿಬ್ಬರ ಜೊತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಯೋಗಾರಮೇಶ್ ಕೂಡಾ ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ. ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂವತ್ತೆರಡು ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದರು. ಅವರು ಅಂದಿನಂತೆ ಈ ಬಾರಿಯೂ ಪ್ರಬಲ ಪೈಪೋಟಿ ನೀಡಿ ಸಾಂಪ್ರದಾಯಿಕ ಜೆಡಿಎಸ್ ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲ.

ಎಚ್.ಎಸ್. ಪ್ರಕಾಶ್

ಹಾಸನದಲ್ಲಿ ಮೂವರು ಗಂಭೀರ ಅಭ್ಯರ್ಥಿಗಳಿದ್ದಾರೆ. ಜೆಡಿಎಸ್‍ನ ಎಚ್.ಎಸ್.ಪ್ರಕಾಶ್ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳಿಂದ ಪೈಪೋಟಿ ಎದುರಿಸುತ್ತಿದ್ದಾರೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ.ಮಹೇಶ್ ಮತ್ತು ಬಿಜೆಪಿಯ ಪ್ರೀತಂ ಗೌಡ ಅವರ ಪ್ರಬಲ ಪೈಪೋಟಿಯಿಂದ ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ. ಬಿಜೆಪಿ ಅಭ್ಯರ್ಥಿ ಗೆಲುವಿನ ಹಂತಕ್ಕೆ ತಲುಪುತ್ತಾರೋ ಇಲ್ಲವೋ, ಆದರೆ ಗಮನಾರ್ಹ ಮತಗಳನ್ನಂತೂ ಪಡೆಯುತ್ತಾರೆ ಎನ್ನುವುದು ಸದ್ಯದ ಲೆಕ್ಕಾಚಾರ. ಅವರ ಮತಗಳಿಕೆ ಫಲಿತಾಂಶ ನಿರ್ಧರಿಸಲಿದೆ. ಕಾಂಗ್ರೆಸ್ ತನ್ನ ರಾಜ್ಯಮಟ್ಟದ ತಂತ್ರಗಾರಿಕೆಯ ಕಾರಣಕ್ಕೆ ಮುಸ್ಲಿಂ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಸಾಧ್ಯತೆ ಇದೆ. ಆದರೆ ದೇವೇಗೌಡರು ಮತದಾನದ ಹಿಂದಿನ ಎರಡು ದಿನಗಳ ಕಾಲ ಒಂದು ಸುತ್ತು ಬಂದು ಬದಲಾವಣೆ ಮಾಡುವ ಸಾಮಥ್ರ್ಯ ಉಳ್ಳವರು. ಎಲ್ಲಾ ಅಭ್ಯರ್ಥಿಗಳು ಆ ಎರಡು ದಿನಗಳಿಗಾಗಿ ಕಾಯುತ್ತಿದ್ದಾರೆ. ಹಿಂದಿನಂತೆ ದೇವೇಗೌಡರು ಪ್ರಭಾವ ಬೀರುವಲ್ಲಿ ಯಶಸ್ವಿಯಾದರೆ ಜೆಡಿಎಸ್ ಮತ್ತೆ ಬಾವುಟ ಹಾರಿಸುವಲ್ಲಿ ಸಂಶಯವಿಲ್ಲ.

ಎ.ಟಿ.ರಾಮಸ್ವಾಮಿ

ಶ್ರವಣಬೆಳಗೊಳ ಮತ್ತು ಅರಸೀಕೆರೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಪ್ರಬಲ ಪೈಪೋಟಿ ಇದ್ದಂತಿಲ್ಲ. ಅರಸೀಕೆರೆಯಲ್ಲಿ ಕುಡಿವ ನೀರು ಪೂರೈಕೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮ ಮಾಡಿ ಖ್ಯಾತಿ ಹೊಂದಿರುವ ಕೆ.ಎಂ.ಶಿವಲಿಂಗೇಗೌಡರ ಎದುರು ಕಾಂಗ್ರೆಸ್ ಅಭ್ಯರ್ಥಿ ಶಶಿಧರ್ ದುರ್ಬಲರಾಗಿ ಕಾಣುತ್ತಾರೆ. ಶ್ರವಣಬೆಳಗೊಳದಲ್ಲಿ ಕಾಂಗ್ರೆಸ್‍ನ ಸಿ.ಎಸ್.ಪುಟ್ಟೇಗೌಡರು ಕಳೆದ ಬಾರಿಯಂತೆಯೇ ಸೋಲು ಅನುಭವಿಸಬಹುದು. ಜೆಡಿಎಸ್‍ನ ಸಿ.ಎನ್.ಬಾಲಕೃಷ್ಣ ಗೆಲ್ಲುವ ಸಾಧ್ಯತೆಗಳಿವೆ.

ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ನಾರ್ವೆ ಸೋಮಶೇಖರ್ ಚುನಾವಣೆ ಘೋಷಣೆಗೆ ಮೊದಲೇ ಅಲೆ ಎಬ್ಬಿಸಿದ್ದರು. ಹೇರಳವಾಗಿ ಹಣ ಖರ್ಚು ಮಾಡಿ ಪಾರ್ಟಿ ಮಾಡಿದ್ದರು. ಅವರ ಕ್ರಿಮಿನಲ್ ಹಿನ್ನೆಲೆ ಹೊರತಾಗಿಯೂ ಈ ಮೀಸಲು ಕ್ಷೇತ್ರದ ಮೇಲ್ವರ್ಗಗಳು ಅವರನ್ನು ಬೆಂಬಲಿಸುತ್ತಿವೆ. ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಅವರು ‘ಸ್ಪೃಶ್ಯ’ ಸಮುದಾಯಕ್ಕೆ ಸೇರಿದವರು. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿರುವ ಅಸ್ಪೃಶ್ಯರು ಅವರನ್ನು ಬೆಂಬಲಿಸುವುದು ಅಷ್ಟಕಷ್ಟೆ. ಕಾಂಗ್ರೆಸ್ ಕೊನೆಕ್ಷಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯನವರನ್ನು ಕಣಕ್ಕೆ ತಂದರು. ಅವರು ಬಂದಿದ್ದು ತಡವಾಯ್ತು, ಹಾಗಾಗಿ ಕ್ಷೇತ್ರವನ್ನು ಪರಿಚಯ ಮಾಡಿಕೊಳ್ಳುವುದರಲ್ಲಿಯೇ ಅವರಿಗೆ ಸಾಕಷ್ಟು ಸಮಯ ಬೇಕಾಗಿದೆ. ಈ ಎಲ್ಲಾ ಕಾರಣಗಳಿಗೆ ಮತದಾರ ಮತ್ತೊಮ್ಮೆ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ಕುಮಾರಸ್ವಾಮಿಯವರನ್ನು ಬೆಂಬಲಿಸುವ ಸಾಧ್ಯತೆ ಇದೆ. ಹೇಗೂ ದೇವೇಗೌಡರ ಕಾರಣಕ್ಕೆ ಮೇಲ್ವರ್ಗದ ಮತಗಳಲ್ಲಿ ದೊಡ್ಡ ಮೊತ್ತ ಅವರ ಪಾಲಾಗಬಹುದು.

ಜೆಡಿಎಸ್ ಪಕ್ಷ ಬಿಎಸ್‍ಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರೂ, ಹಾಸನದ ಮಟ್ಟಿಗೆ ಅದರ ಪರಿಣಾಮ ನಗಣ್ಯ. ಮೇಲಾಗಿ ಈ ಜಿಲ್ಲೆಯಲ್ಲಿ ಬಿಎಸ್‍ಪಿ ಪ್ರತಿನಿಧಿಸುವ ದಲಿತರು ದಬ್ಬಾಳಿಕೆ ಅನುಭವಿಸುತ್ತಿರುವುದೇ ಜೆಡಿಎಸ್ ಜೊತೆ ಪ್ರಬಲವಾಗಿ ಗುರುತಿಸಿಕೊಂಡಿರುವ ಸಮುದಾಯದಿಂದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...