Homeರಾಜಕೀಯಹಾಸನ: ಇಲ್ಲಿ ಜೆಡಿಎಸ್ ಭದ್ರ

ಹಾಸನ: ಇಲ್ಲಿ ಜೆಡಿಎಸ್ ಭದ್ರ

- Advertisement -
- Advertisement -
  • ಆಕಾಶ್ ಕೆರೆಕಟ್ಟೆ |

ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಹಾಸನದಲ್ಲಿ ಕಾವು ಹೆಚ್ಚುತ್ತಿವೆ. ಏಳು ಕ್ಷೇತ್ರಗಳ ಪೈಕಿ ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನೇರ ಎದುರಾಳಿಗಳಾಗಿರುವುದು ನಾಲ್ಕು ಕ್ಷೇತ್ರಗಳಲ್ಲಿ. ಇನ್ನು ಮೂರು ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ ತೀವ್ರ ಪೈಪೋಟಿ ಕೊಡುವ ಮಟ್ಟಿಗೆ ತನ್ನ ಪಡೆಯನ್ನು ಸಿದ್ಧಪಡಿಸಿಕೊಂಡಿದೆ.

ರೇವಣ್ಣ

ಮಾಜಿ ಪ್ರಧಾನಿ ದೇವೇಗೌಡರು ಆರು ಬಾರಿ ಪ್ರತಿನಿಧಿಸಿದ್ದ ಹೊಳೆನರಸೀಪುರ ಕ್ಷೇತ್ರ ಇಬ್ಬರು ಪ್ರಬಲ ಎದುರಾಳಿಗಳ ಕಾರಣದಿಂದ ರಾಜ್ಯದ ಗಮನ ಸೆಳೆದಿದೆ. ದೇವೇಗೌಡರ ಮಗ ಹಾಗೂ ಮಾಜಿ ಮಂತ್ರಿ ಎಚ್.ಡಿ.ರೇವಣ್ಣ, ಕಾಂಗ್ರೆಸ್‍ನ ಬಿ.ಪಿ.ಮಂಜೇಗೌಡರ ವಿರುದ್ಧ ಸೆಣೆಸುತ್ತಿದ್ದಾರೆ. ಕ್ಷೇತ್ರಕ್ಕೆ ಹೊಸಮುಖವಾದ ಮಂಜೇಗೌಡ ಪಕ್ಷದ ಹಿರಿಯ ನೇತಾರರ ಬೆಂಬಲದಿಂದ ಪ್ರಬಲ ಪೈಪೋಟಿ ಕೊಡುತ್ತಿದ್ದಾರೆ. ಅವರ ಸ್ಪರ್ಧೆಗೆ ಮಹತ್ವ ಸಿಕ್ಕಿದ್ದೇ ರೇವಣ್ಣನ ಪ್ರತಿಕ್ರಿಯೆಗಳಿಂದ. ಸಾರಿಗೆ ಇಲಾಖೆಯ ನೌಕರನಾಗಿದ್ದ ಮಂಜೇಗೌಡ ಕೆಲಸಕ್ಕೆ ರಾಜೀನಾಮೆ ನೀಡಿ ಚುನಾವಣಾ ಕಣ ಪ್ರವೇಶಿಸುವ ಮೊದಲೇ, ರೇವಣ್ಣ ಆತನ ವಿರುದ್ಧ ಟೀಕೆಗೆ ಇಳಿದರು. ಆತನ ರಾಜೀನಾಮೆಯನ್ನು ಸರಕಾರ ಒಪ್ಪಬಾರದು ಎಂದು ಒತ್ತಾಯಿಸಿದರು. ಕೊನೆಗೆ ಸರಕಾರ ರಾಜೀನಾಮೆ ಒಪ್ಪಿದ ಮೇಲೆ, ಚುನಾವಣಾ ಆಯೋಗಕ್ಕೆ ದೂರು ನೀಡಿದರು. ಹಾಗಾಗಿ, ಮಂಜೇಗೌಡ ಅಂಕಣ ಪ್ರವೇಶಿಸುವ ಮೊದಲೇ ರೇವಣ್ಣ ಆತನಿಗೆ ‘ಪ್ರಬಲ ಪ್ರತಿಸ್ಪರ್ಧಿ’ ಎಂಬ ಪಟ್ಟ ದಯಪಾಲಿಸಿದ್ದರು.

ಮಂಜೇಗೌಡ

ಪ್ರಚಾರದ ವೇಳೆ ಅಲ್ಲಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಮುಖಾಮುಖಿಯಾಗುತ್ತಿದ್ದಾರೆ. ಬಿರುಸಿನ ಮಾತುಕತೆ, ಕೈ ಮಿಲಾಯಿಸುವ ಮಟ್ಟಕ್ಕೆ ಘಟನೆಗಳು ನಡೆದಿವೆ. ರೇವಣ್ಣನ ಮಡದಿ ಭವಾನಿ, ಮಕ್ಕಳು ಪ್ರಜ್ವಲ್ ಹಾಗೂ ಸೂರಜ್ ಕ್ಷೇತ್ರದಲ್ಲಿ ಬಿಡುವಿಲ್ಲದೆ ಓಡಾಡುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಪ್ರಜ್ವಲ್ ಅಪ್ಪನ ಕ್ಷೇತ್ರ ಅಷ್ಟೇ ಅಲ್ಲದೆ ಬೇರೆಡೆಯೂ ಪ್ರಚಾರ ಮಾಡಿದ್ದರು. ಆದರೆ ಈಗ ಅವರು ತಮ್ಮ ಶ್ರಮವನ್ನು ಸಂಪೂರ್ಣವಾಗಿ ಅಪ್ಪನ ಕ್ಷೇತ್ರಕ್ಕೆ ಸೀಮಿತಗೊಳಿಸಿದಂತೆ ಕಾಣುತ್ತಿದೆ. ಅತ್ತ ಕಾಂಗ್ರೆಸ್ ಪಾಳಯದಲ್ಲಿ ಪಕ್ಷದ ಬೆಂಬಲದ ಜೊತೆಗೆ ಈ ಹಿಂದೆ ಎರಡು ಬಾರಿ ಸ್ಪರ್ಧಿಸಿ ಗಮನಾರ್ಹ ಮತ ಗಳಿಸಿದ್ದ ಮಾಜಿ ಮಂತ್ರಿ ಜಿ.ಪುಟ್ಟಸ್ವಾಮಿಗೌಡರ ಸೊಸೆ ಅನುಪಮ ಮಹೇಶ್ ಅವರ ಬೆಂಬಲ ಕೂಡ ಮಂಜೇಗೌಡರಿಗಿದೆ. ಆದರೂ ರೇವಣ್ಣನ ಪ್ರಾಬಲ್ಯಕ್ಕೇ ಮತದಾರರು ಜೈ ಎನ್ನುವ ಸಾಧ್ಯತೆ ಇದೆ. ಈ ಕ್ಷೇತ್ರದಲ್ಲಿ ಬಿಜೆಪಿ ಲೆಕ್ಕಕ್ಕೂ ಇಲ್ಲ, ಆಟಕ್ಕೂ ಇಲ್ಲ.

ಎ ಮಂಜು

ಜಿಲ್ಲಾ ಮಂತ್ರಿ ಎ.ಮಂಜು (ಕಾಂಗ್ರೆಸ್) ಪ್ರತಿನಿಧಿಸುವ ಅರಕಲಗೂಡು ಕ್ಷೇತ್ರದಲ್ಲಿ ಎರಡು ಬಾರಿ ಸೋಲು ಅನುಭವಿಸಿದ್ದ ಎ.ಟಿ.ರಾಮಸ್ವಾಮಿ (ಜೆಡಿಎಸ್) ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ‘ಒಳ್ಳೆಯ ಮನುಷ್ಯ’ ಎಂಬ ಮೆಚ್ಚುಗೆಯ ಮಾತುಗಳಿಗೆ ಪಾತ್ರರಾಗಿರುವ ರಾಮಸ್ವಾಮಿ ಎದುರಾಳಿಯ ತಂತ್ರಗಳಿಗೆ ಸೆಡ್ಡು ಹೊಡೆಯುತ್ತಾರಾ ಎನ್ನುವುದೇ ಪ್ರಶ್ನೆ. ಇವರಿಬ್ಬರ ಜೊತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಯೋಗಾರಮೇಶ್ ಕೂಡಾ ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ. ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂವತ್ತೆರಡು ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದರು. ಅವರು ಅಂದಿನಂತೆ ಈ ಬಾರಿಯೂ ಪ್ರಬಲ ಪೈಪೋಟಿ ನೀಡಿ ಸಾಂಪ್ರದಾಯಿಕ ಜೆಡಿಎಸ್ ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲ.

ಎಚ್.ಎಸ್. ಪ್ರಕಾಶ್

ಹಾಸನದಲ್ಲಿ ಮೂವರು ಗಂಭೀರ ಅಭ್ಯರ್ಥಿಗಳಿದ್ದಾರೆ. ಜೆಡಿಎಸ್‍ನ ಎಚ್.ಎಸ್.ಪ್ರಕಾಶ್ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳಿಂದ ಪೈಪೋಟಿ ಎದುರಿಸುತ್ತಿದ್ದಾರೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ.ಮಹೇಶ್ ಮತ್ತು ಬಿಜೆಪಿಯ ಪ್ರೀತಂ ಗೌಡ ಅವರ ಪ್ರಬಲ ಪೈಪೋಟಿಯಿಂದ ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ. ಬಿಜೆಪಿ ಅಭ್ಯರ್ಥಿ ಗೆಲುವಿನ ಹಂತಕ್ಕೆ ತಲುಪುತ್ತಾರೋ ಇಲ್ಲವೋ, ಆದರೆ ಗಮನಾರ್ಹ ಮತಗಳನ್ನಂತೂ ಪಡೆಯುತ್ತಾರೆ ಎನ್ನುವುದು ಸದ್ಯದ ಲೆಕ್ಕಾಚಾರ. ಅವರ ಮತಗಳಿಕೆ ಫಲಿತಾಂಶ ನಿರ್ಧರಿಸಲಿದೆ. ಕಾಂಗ್ರೆಸ್ ತನ್ನ ರಾಜ್ಯಮಟ್ಟದ ತಂತ್ರಗಾರಿಕೆಯ ಕಾರಣಕ್ಕೆ ಮುಸ್ಲಿಂ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಸಾಧ್ಯತೆ ಇದೆ. ಆದರೆ ದೇವೇಗೌಡರು ಮತದಾನದ ಹಿಂದಿನ ಎರಡು ದಿನಗಳ ಕಾಲ ಒಂದು ಸುತ್ತು ಬಂದು ಬದಲಾವಣೆ ಮಾಡುವ ಸಾಮಥ್ರ್ಯ ಉಳ್ಳವರು. ಎಲ್ಲಾ ಅಭ್ಯರ್ಥಿಗಳು ಆ ಎರಡು ದಿನಗಳಿಗಾಗಿ ಕಾಯುತ್ತಿದ್ದಾರೆ. ಹಿಂದಿನಂತೆ ದೇವೇಗೌಡರು ಪ್ರಭಾವ ಬೀರುವಲ್ಲಿ ಯಶಸ್ವಿಯಾದರೆ ಜೆಡಿಎಸ್ ಮತ್ತೆ ಬಾವುಟ ಹಾರಿಸುವಲ್ಲಿ ಸಂಶಯವಿಲ್ಲ.

ಎ.ಟಿ.ರಾಮಸ್ವಾಮಿ

ಶ್ರವಣಬೆಳಗೊಳ ಮತ್ತು ಅರಸೀಕೆರೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಪ್ರಬಲ ಪೈಪೋಟಿ ಇದ್ದಂತಿಲ್ಲ. ಅರಸೀಕೆರೆಯಲ್ಲಿ ಕುಡಿವ ನೀರು ಪೂರೈಕೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮ ಮಾಡಿ ಖ್ಯಾತಿ ಹೊಂದಿರುವ ಕೆ.ಎಂ.ಶಿವಲಿಂಗೇಗೌಡರ ಎದುರು ಕಾಂಗ್ರೆಸ್ ಅಭ್ಯರ್ಥಿ ಶಶಿಧರ್ ದುರ್ಬಲರಾಗಿ ಕಾಣುತ್ತಾರೆ. ಶ್ರವಣಬೆಳಗೊಳದಲ್ಲಿ ಕಾಂಗ್ರೆಸ್‍ನ ಸಿ.ಎಸ್.ಪುಟ್ಟೇಗೌಡರು ಕಳೆದ ಬಾರಿಯಂತೆಯೇ ಸೋಲು ಅನುಭವಿಸಬಹುದು. ಜೆಡಿಎಸ್‍ನ ಸಿ.ಎನ್.ಬಾಲಕೃಷ್ಣ ಗೆಲ್ಲುವ ಸಾಧ್ಯತೆಗಳಿವೆ.

ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ನಾರ್ವೆ ಸೋಮಶೇಖರ್ ಚುನಾವಣೆ ಘೋಷಣೆಗೆ ಮೊದಲೇ ಅಲೆ ಎಬ್ಬಿಸಿದ್ದರು. ಹೇರಳವಾಗಿ ಹಣ ಖರ್ಚು ಮಾಡಿ ಪಾರ್ಟಿ ಮಾಡಿದ್ದರು. ಅವರ ಕ್ರಿಮಿನಲ್ ಹಿನ್ನೆಲೆ ಹೊರತಾಗಿಯೂ ಈ ಮೀಸಲು ಕ್ಷೇತ್ರದ ಮೇಲ್ವರ್ಗಗಳು ಅವರನ್ನು ಬೆಂಬಲಿಸುತ್ತಿವೆ. ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಅವರು ‘ಸ್ಪೃಶ್ಯ’ ಸಮುದಾಯಕ್ಕೆ ಸೇರಿದವರು. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿರುವ ಅಸ್ಪೃಶ್ಯರು ಅವರನ್ನು ಬೆಂಬಲಿಸುವುದು ಅಷ್ಟಕಷ್ಟೆ. ಕಾಂಗ್ರೆಸ್ ಕೊನೆಕ್ಷಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯನವರನ್ನು ಕಣಕ್ಕೆ ತಂದರು. ಅವರು ಬಂದಿದ್ದು ತಡವಾಯ್ತು, ಹಾಗಾಗಿ ಕ್ಷೇತ್ರವನ್ನು ಪರಿಚಯ ಮಾಡಿಕೊಳ್ಳುವುದರಲ್ಲಿಯೇ ಅವರಿಗೆ ಸಾಕಷ್ಟು ಸಮಯ ಬೇಕಾಗಿದೆ. ಈ ಎಲ್ಲಾ ಕಾರಣಗಳಿಗೆ ಮತದಾರ ಮತ್ತೊಮ್ಮೆ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ಕುಮಾರಸ್ವಾಮಿಯವರನ್ನು ಬೆಂಬಲಿಸುವ ಸಾಧ್ಯತೆ ಇದೆ. ಹೇಗೂ ದೇವೇಗೌಡರ ಕಾರಣಕ್ಕೆ ಮೇಲ್ವರ್ಗದ ಮತಗಳಲ್ಲಿ ದೊಡ್ಡ ಮೊತ್ತ ಅವರ ಪಾಲಾಗಬಹುದು.

ಜೆಡಿಎಸ್ ಪಕ್ಷ ಬಿಎಸ್‍ಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರೂ, ಹಾಸನದ ಮಟ್ಟಿಗೆ ಅದರ ಪರಿಣಾಮ ನಗಣ್ಯ. ಮೇಲಾಗಿ ಈ ಜಿಲ್ಲೆಯಲ್ಲಿ ಬಿಎಸ್‍ಪಿ ಪ್ರತಿನಿಧಿಸುವ ದಲಿತರು ದಬ್ಬಾಳಿಕೆ ಅನುಭವಿಸುತ್ತಿರುವುದೇ ಜೆಡಿಎಸ್ ಜೊತೆ ಪ್ರಬಲವಾಗಿ ಗುರುತಿಸಿಕೊಂಡಿರುವ ಸಮುದಾಯದಿಂದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...