Homeಮುಖಪುಟಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

ಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

- Advertisement -
- Advertisement -

ದೇಶದ ತುಂಬ ದ್ವೇಷ ಹರಡುವ ಶಕ್ತಿಗಳು ಹೆಚ್ಚುತ್ತಿವೆ. ಅಸಹಿಷ್ಣುತೆ ಮನೆ ಮಾಡಿದೆ. ಯುದ್ದೋನ್ಮಾದದ ವಾತಾವರಣ ಸೃಷ್ಟಿಯಾಗಿದೆ. ದೇಶದಲ್ಲಿ ಶಾಂತಿ, ಸುವ್ಯವಸ್ಥೆ,, ಜನರ ನಡುವೆ ಪ್ರೀತಿ, ಸಹಬಾಳ್ವೆಯನ್ನು ಬಿತ್ತಬೇಕಾದವರೇ ದ್ವೇಷದ ಮಾತುಗಳನ್ನಾಡುತ್ತಿದ್ದಾರೆ. ಇದಕ್ಕೆ ಅಂತ್ಯ ಹಾಡಬೇಕಾದರೆ ಮಹಾತ್ಮ ಗಾಂಧಿ ಅವರ ಅಹಿಂಸಾ ಮಾರ್ಗ ಅನುಸರಿಸುವುದು ಬಹಳ ಮುಖ್ಯವಾಗಿದೆ. ದ್ವೇಷವನ್ನು ಅಳಿಸಿ ಪ್ರೀತಿಯನ್ನು ಹಂಚುವಂತಹ ಕೆಲಸಕ್ಕೆ ಎಲ್ಲರೂ ಮುಂದಾಗಬೇಕೆಂಬ ಪಣವನ್ನು ಗಾಂಧಿ ಹುತಾತ್ಮ ದಿನವಾದ ಜನವರಿ 30ರಂದು ತೊಟ್ಟರು.

ಜನಪರ ಸಂಘಟನೆಗಳ ಒಕ್ಕೂಟದಿಂದ ತುಮಕೂರಿನ ಸ್ವಾತಂತ್ರ್ಯ ಚೌಕದಲ್ಲಿ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯನ್ನು ಮೇಣದ ಬತ್ತಿಗಳನ್ನು ಹಚ್ಚಿ ಮಾನವೀಯತೆ ಸಾಕಾರಗೊಳ್ಳಲಿ. ಶಾಂತಿ ಮತ್ತು ಅಹಿಂಸೆಯೇ ನಮ್ಮ ಧ್ಯೇಯ, ನಮ್ಮಲ್ಲಿರುವುದು ಒಂದೇ ರಕ್ತ ನಾವು ಮನುಷ್ಯರು ಎಂಬ ಘೋಷಣೆಗಳನ್ನು ಕೂಗಿದರು. ಇದು ಬೆಳಕು. ಈ ಬೆಳಕಿನಲ್ಲಿ ಮಾನವೀಯತೆ ಸಾರೋಣ. ಯಾವುದೇ ಜಾತಿ, ಮತ, ಧರ್ಮ ಮತ್ತು ಪ್ರಾದೇಶಿಕತೆ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಶಕ್ತಿಗಳ ಬಗ್ಗೆ ಎಚ್ಚರದಿಂದ ಇರೋಣ ಎಂಬ ಸಂದೇಶಗಳನ್ನು ಸಾರಲಾಯಿತು.

ಭಾಷಣಕಾರರ ಮಾತುಗಳೆಲ್ಲವೂ ಗಾಂಧೀ ಅವರ ಅಹಿಂಸೆ ಕುರಿತಾಗಿದ್ದವು.ನಮ್ಮದು ಕೊಲ್ಲುವ ಸಂಸ್ಕೃತಿಯಲ್ಲ. ದ್ವೇಷದ ಸಂಸ್ಕೃತಿಯಲ್ಲ.ಬದಲಿಗೆ ಪ್ರೀತಿ ಮತ್ತು ಸಹನೆಯ, ಧರ್ಮನಿರಪೇಕ್ಷೆಯ ಸಂವಿಧಾನ ಹೊಂದಿರುವ ದೇಶ. ನಾವು ಬಾಳ್ವೆಯಿಂದ ಬದುಕಬೇಕು. ಯುದ್ದೋನ್ಮಾದಕ್ಕೆ ಅವಕಾಶ ಕೊಡಬಾರದು. ಹಿಂಸೆ ನಮ್ಮ ಸಂಸ್ಕೃತಿಯಲ್ಲ. ಹಿಂಸೆ ಶಾಶ್ವತ ಪರಿಹಾರವನ್ನು ತಂದುಕೊಡುವುದಿಲ್ಲ. ಹಿಂಸೆಯಿಂದ ದುಃಖ ಹೆಚ್ಚುತ್ತದೆ. ಹಿಂಸೆ ನೋವನ್ನು ತರಿಸುತ್ತದೆ. ಹೀಗಾಗಿ ಗಾಂಧೀ ಅವರ ಅಹಿಂಸೆ ಮಾರ್ಗ ಸುಂದರ ಸಮಾಜವನ್ನು ನಿರ್ಮಾಣ ಮಾಡುತ್ತದೆ. ಅತ್ತ ನಾವು ಹೋಗಬೇಕು ಎಂಬುದನ್ನು ಜನಪರ ಚಿಂತಕೆ ಕೆ.ದೊರೈರಾಜ್ ಸಾರಿ ಹೇಳಿದರು.

ಗಾಂಧೀಜಿ ಸುಳ್ಳನ್ನು ಹೇಳಬೇಡಿ ಅಂದ್ರು ಆದರೆ ಸುಳ್ಳುಕೋರರು ಜಾಸ್ತಿಯಾಗಿದ್ದಾರೆ. ಹಿಂಸೆ ಮಾಡಬಾರದು ಅಂದ್ರು, ಆದರೆ ಹಿಂಸೆಯ ಮಾತುಗಳನ್ನಾಡುವವರು ಹೆಚ್ಚಾಗಿದ್ದಾರೆ. ಸತ್ಯವನ್ನು ನುಡಿಯಬೇಕು ಅಂದ್ರು, ಆದರೆ ಅಸತ್ಯವನ್ನೇ ಮನೆಮಾತಾಗಿಸಿಕೊಂಡವರು ಹೆಚ್ಚು. ಗಾಂಧೀ ಚಿಂತನೆಗಳನ್ನು ಹೇಳುತ್ತಲೇ, ಹಿಂಸೆಗೂ ಪ್ರಚೋದಿಸುವ ಶಕ್ತಿಗಳು ಸಮಾಜದಲ್ಲಿ ದ್ವೇಷವನ್ನೂ ಹರಡುತ್ತಾ ಜನರ ನೆಮ್ಮದಿಗೆ ಭಂಗ ತರುತ್ತಿವೆ. ಇದು ಶಾಶ್ವತವಲ್ಲ. ಆದರೂ ಕೋಮುವಾದಿ ಶಕ್ತಿಗಳು ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿವೆ. ನಾವು ಪ್ರೀತಿಯೊಂದನ್ನು ಹಂಚಬೇಕಾಗಿದೆ ಎಂಬಂತಹ ಮಾತುಗಳನ್ನು ಗಣ್ಯರು ಹೇಳಿದರು.

ಟೌನ್ ಹಾಲ್ ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ನೂರಾರು ಕಾರ್ಯಕರ್ತರು ಯುವ ಮುಖಂಡ ತಾಜುದ್ದೀನ್ ಶರೀಪ್ ನೇತೃತ್ವದಲ್ಲಿ ಗಾಂಧೀ ಹುತಾತ್ಮ ದಿನವನ್ನು ಆಚರಿಸಲಾಯಿತು.ಮಹಾತ್ಮ ಗಾಂಧಿ ಅವರನ್ನು ನಾಥೂರಾಮ್ ಗೋಡ್ಸೆ ಕೊಂದು ಹಾಕಿದರು. ಗೋಡ್ಸೆ ಸಂತತಿ ಇಂದಿಗೂ ತನ್ನ ಮಸಲತ್ತು ನಡೆಸಿದೆ. ಕೋಮುವಾದಿ ಶಕ್ತಿಗಳು ಆಳ್ವಿಕೆ ನಡೆಸುತ್ತಿದ್ದು ಶಾಂತಿಯುತ ಪ್ರತಿಭಟನೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಅಮಾಯಕರನ್ನು ಕೊಲ್ಲಲಾಗಿದೆ. ಇಂತಹ ಘಟನೆಗಳು ನಡೆಯಬಾರದು. ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಗಾಂಧೀಯ ವಿಚಾರಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂಬುದನ್ನು ಭಾಷಣಕಾರರು ಬೊಟ್ಟು ಮಾಡಿ ಹೇಳಿದರು.

CAA, NRC ಮತ್ತು NPR ಕಾಯ್ದೆಗಳು ಒಡೆದು ಆಳುವ ನೀತಿಗೆ ಪೂರಕವಾಗಿವೆ. ಅಲ್ಪಸಂಖ್ಯಾತ ಸಮುದಾಯ, ಬಡವರು, ದಲಿತರಲ್ಲಿ ಆತಂಕವನ್ನುಂಟು ಮಾಡಿದೆ. ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ಸಮಾಜವನ್ನು ಛಿದ್ರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಸಮಾಜವನ್ನು ಒಡೆಯುವ ಕೆಲಸವನ್ನು ಬಿಡಬೇಕು. ಸಂವಿಧಾನದ ಆಶಯಗಳಂತೆ ಸರ್ಕಾರವನ್ನು ನಡೆಸಬೇಕು ಎಂದು ಆಗ್ರಹಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶಕ್ಕಿಂದು ಒದಗಿರುವ ವಿಷಮ ಪರಿಸ್ಥಿತಿಯಿಂದ, ಮಹಾತ್ಮ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮಾತ್ರ ನಮ್ಮಂನ್ನಿಂದು ಪಾರುಮಾಡಬಲ್ಲವು.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...