Homeಮುಖಪುಟಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

ಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

- Advertisement -
- Advertisement -

ದೇಶದ ತುಂಬ ದ್ವೇಷ ಹರಡುವ ಶಕ್ತಿಗಳು ಹೆಚ್ಚುತ್ತಿವೆ. ಅಸಹಿಷ್ಣುತೆ ಮನೆ ಮಾಡಿದೆ. ಯುದ್ದೋನ್ಮಾದದ ವಾತಾವರಣ ಸೃಷ್ಟಿಯಾಗಿದೆ. ದೇಶದಲ್ಲಿ ಶಾಂತಿ, ಸುವ್ಯವಸ್ಥೆ,, ಜನರ ನಡುವೆ ಪ್ರೀತಿ, ಸಹಬಾಳ್ವೆಯನ್ನು ಬಿತ್ತಬೇಕಾದವರೇ ದ್ವೇಷದ ಮಾತುಗಳನ್ನಾಡುತ್ತಿದ್ದಾರೆ. ಇದಕ್ಕೆ ಅಂತ್ಯ ಹಾಡಬೇಕಾದರೆ ಮಹಾತ್ಮ ಗಾಂಧಿ ಅವರ ಅಹಿಂಸಾ ಮಾರ್ಗ ಅನುಸರಿಸುವುದು ಬಹಳ ಮುಖ್ಯವಾಗಿದೆ. ದ್ವೇಷವನ್ನು ಅಳಿಸಿ ಪ್ರೀತಿಯನ್ನು ಹಂಚುವಂತಹ ಕೆಲಸಕ್ಕೆ ಎಲ್ಲರೂ ಮುಂದಾಗಬೇಕೆಂಬ ಪಣವನ್ನು ಗಾಂಧಿ ಹುತಾತ್ಮ ದಿನವಾದ ಜನವರಿ 30ರಂದು ತೊಟ್ಟರು.

ಜನಪರ ಸಂಘಟನೆಗಳ ಒಕ್ಕೂಟದಿಂದ ತುಮಕೂರಿನ ಸ್ವಾತಂತ್ರ್ಯ ಚೌಕದಲ್ಲಿ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯನ್ನು ಮೇಣದ ಬತ್ತಿಗಳನ್ನು ಹಚ್ಚಿ ಮಾನವೀಯತೆ ಸಾಕಾರಗೊಳ್ಳಲಿ. ಶಾಂತಿ ಮತ್ತು ಅಹಿಂಸೆಯೇ ನಮ್ಮ ಧ್ಯೇಯ, ನಮ್ಮಲ್ಲಿರುವುದು ಒಂದೇ ರಕ್ತ ನಾವು ಮನುಷ್ಯರು ಎಂಬ ಘೋಷಣೆಗಳನ್ನು ಕೂಗಿದರು. ಇದು ಬೆಳಕು. ಈ ಬೆಳಕಿನಲ್ಲಿ ಮಾನವೀಯತೆ ಸಾರೋಣ. ಯಾವುದೇ ಜಾತಿ, ಮತ, ಧರ್ಮ ಮತ್ತು ಪ್ರಾದೇಶಿಕತೆ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಶಕ್ತಿಗಳ ಬಗ್ಗೆ ಎಚ್ಚರದಿಂದ ಇರೋಣ ಎಂಬ ಸಂದೇಶಗಳನ್ನು ಸಾರಲಾಯಿತು.

ಭಾಷಣಕಾರರ ಮಾತುಗಳೆಲ್ಲವೂ ಗಾಂಧೀ ಅವರ ಅಹಿಂಸೆ ಕುರಿತಾಗಿದ್ದವು.ನಮ್ಮದು ಕೊಲ್ಲುವ ಸಂಸ್ಕೃತಿಯಲ್ಲ. ದ್ವೇಷದ ಸಂಸ್ಕೃತಿಯಲ್ಲ.ಬದಲಿಗೆ ಪ್ರೀತಿ ಮತ್ತು ಸಹನೆಯ, ಧರ್ಮನಿರಪೇಕ್ಷೆಯ ಸಂವಿಧಾನ ಹೊಂದಿರುವ ದೇಶ. ನಾವು ಬಾಳ್ವೆಯಿಂದ ಬದುಕಬೇಕು. ಯುದ್ದೋನ್ಮಾದಕ್ಕೆ ಅವಕಾಶ ಕೊಡಬಾರದು. ಹಿಂಸೆ ನಮ್ಮ ಸಂಸ್ಕೃತಿಯಲ್ಲ. ಹಿಂಸೆ ಶಾಶ್ವತ ಪರಿಹಾರವನ್ನು ತಂದುಕೊಡುವುದಿಲ್ಲ. ಹಿಂಸೆಯಿಂದ ದುಃಖ ಹೆಚ್ಚುತ್ತದೆ. ಹಿಂಸೆ ನೋವನ್ನು ತರಿಸುತ್ತದೆ. ಹೀಗಾಗಿ ಗಾಂಧೀ ಅವರ ಅಹಿಂಸೆ ಮಾರ್ಗ ಸುಂದರ ಸಮಾಜವನ್ನು ನಿರ್ಮಾಣ ಮಾಡುತ್ತದೆ. ಅತ್ತ ನಾವು ಹೋಗಬೇಕು ಎಂಬುದನ್ನು ಜನಪರ ಚಿಂತಕೆ ಕೆ.ದೊರೈರಾಜ್ ಸಾರಿ ಹೇಳಿದರು.

ಗಾಂಧೀಜಿ ಸುಳ್ಳನ್ನು ಹೇಳಬೇಡಿ ಅಂದ್ರು ಆದರೆ ಸುಳ್ಳುಕೋರರು ಜಾಸ್ತಿಯಾಗಿದ್ದಾರೆ. ಹಿಂಸೆ ಮಾಡಬಾರದು ಅಂದ್ರು, ಆದರೆ ಹಿಂಸೆಯ ಮಾತುಗಳನ್ನಾಡುವವರು ಹೆಚ್ಚಾಗಿದ್ದಾರೆ. ಸತ್ಯವನ್ನು ನುಡಿಯಬೇಕು ಅಂದ್ರು, ಆದರೆ ಅಸತ್ಯವನ್ನೇ ಮನೆಮಾತಾಗಿಸಿಕೊಂಡವರು ಹೆಚ್ಚು. ಗಾಂಧೀ ಚಿಂತನೆಗಳನ್ನು ಹೇಳುತ್ತಲೇ, ಹಿಂಸೆಗೂ ಪ್ರಚೋದಿಸುವ ಶಕ್ತಿಗಳು ಸಮಾಜದಲ್ಲಿ ದ್ವೇಷವನ್ನೂ ಹರಡುತ್ತಾ ಜನರ ನೆಮ್ಮದಿಗೆ ಭಂಗ ತರುತ್ತಿವೆ. ಇದು ಶಾಶ್ವತವಲ್ಲ. ಆದರೂ ಕೋಮುವಾದಿ ಶಕ್ತಿಗಳು ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿವೆ. ನಾವು ಪ್ರೀತಿಯೊಂದನ್ನು ಹಂಚಬೇಕಾಗಿದೆ ಎಂಬಂತಹ ಮಾತುಗಳನ್ನು ಗಣ್ಯರು ಹೇಳಿದರು.

ಟೌನ್ ಹಾಲ್ ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ನೂರಾರು ಕಾರ್ಯಕರ್ತರು ಯುವ ಮುಖಂಡ ತಾಜುದ್ದೀನ್ ಶರೀಪ್ ನೇತೃತ್ವದಲ್ಲಿ ಗಾಂಧೀ ಹುತಾತ್ಮ ದಿನವನ್ನು ಆಚರಿಸಲಾಯಿತು.ಮಹಾತ್ಮ ಗಾಂಧಿ ಅವರನ್ನು ನಾಥೂರಾಮ್ ಗೋಡ್ಸೆ ಕೊಂದು ಹಾಕಿದರು. ಗೋಡ್ಸೆ ಸಂತತಿ ಇಂದಿಗೂ ತನ್ನ ಮಸಲತ್ತು ನಡೆಸಿದೆ. ಕೋಮುವಾದಿ ಶಕ್ತಿಗಳು ಆಳ್ವಿಕೆ ನಡೆಸುತ್ತಿದ್ದು ಶಾಂತಿಯುತ ಪ್ರತಿಭಟನೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಅಮಾಯಕರನ್ನು ಕೊಲ್ಲಲಾಗಿದೆ. ಇಂತಹ ಘಟನೆಗಳು ನಡೆಯಬಾರದು. ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಗಾಂಧೀಯ ವಿಚಾರಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂಬುದನ್ನು ಭಾಷಣಕಾರರು ಬೊಟ್ಟು ಮಾಡಿ ಹೇಳಿದರು.

CAA, NRC ಮತ್ತು NPR ಕಾಯ್ದೆಗಳು ಒಡೆದು ಆಳುವ ನೀತಿಗೆ ಪೂರಕವಾಗಿವೆ. ಅಲ್ಪಸಂಖ್ಯಾತ ಸಮುದಾಯ, ಬಡವರು, ದಲಿತರಲ್ಲಿ ಆತಂಕವನ್ನುಂಟು ಮಾಡಿದೆ. ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ಸಮಾಜವನ್ನು ಛಿದ್ರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಸಮಾಜವನ್ನು ಒಡೆಯುವ ಕೆಲಸವನ್ನು ಬಿಡಬೇಕು. ಸಂವಿಧಾನದ ಆಶಯಗಳಂತೆ ಸರ್ಕಾರವನ್ನು ನಡೆಸಬೇಕು ಎಂದು ಆಗ್ರಹಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶಕ್ಕಿಂದು ಒದಗಿರುವ ವಿಷಮ ಪರಿಸ್ಥಿತಿಯಿಂದ, ಮಹಾತ್ಮ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮಾತ್ರ ನಮ್ಮಂನ್ನಿಂದು ಪಾರುಮಾಡಬಲ್ಲವು.

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...