Homeಅಂಕಣಗಳುಎರಡೂ ಮ್ಯಾನಿಫೆಸ್ಟೊಗಳಿಗೆ ಮನ್ನಣೆ ಸಿಗಲಿ...

ಎರಡೂ ಮ್ಯಾನಿಫೆಸ್ಟೊಗಳಿಗೆ ಮನ್ನಣೆ ಸಿಗಲಿ…

- Advertisement -
- Advertisement -

ಜಾತ್ಯಾತೀತ ಜನತಾದಳ ಮತ್ತು ಕಾಂಗ್ರೆಸ್ ಇವುಗಳ ಸಂಯುಕ್ತ ಸರ್ಕಾರ ಈಗ ಅಸ್ತಿತ್ವಕ್ಕೆ ಬಂದಿದೆ. ಜಾತ್ಯಾತಿತ ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ವಿನಂತಿಸಿಕೊಂಡಿತು. ಈ ಕರಾರಿನ ಪ್ರಕಾರವೇ ಈಗ ಸರ್ಕಾರ ನಡೆಯುತ್ತಿದೆ.
‘ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು’ ಎಂಬಂತೆ ಭಾಜಪ ಈ ಸಂಯುಕ್ತ ಸರಕಾರದ ಬಗೆಗೆ ವಿಷ ಕಾರುತ್ತಿದೆ. ಅದು ಭಾಜಪಗೆ ಸಹಜ. ಯಡಿಯುರಪ್ಪನವರು ‘ತೀನ್‍ದಿನ್‍ಕಾ ಸುಲ್ತಾನ್’ ಆಗಿ ಬಹುಮತವಿಲ್ಲದೆ, ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಹೋಗಬೇಕಾದ ದುಸ್ಥಿತಿ ಬಂದಿದ್ದರಿಂದ ಅವರಿಗೆ ಮುಖ ಭಂಗವಾಗಿದೆ. ಅದಕ್ಕಾಗಿ ಯಡಿಯುರಪ್ಪನವರೂ, ಭಾಜಪದ ಇತರ ಶಾಸಕರೂ ಹೊಸ ಸರ್ಕಾರದ ಬಗೆಗೆ ಮನಸೋ ಇಚ್ಛೆ ಮಾತಾನಾಡುತ್ತಿದ್ದಾರೆ. ಅದೂ ಅವರಿಗೆ ಸಹಜ.
ಆದರೆ ಆಡಳಿತ ಪಕ್ಷಗಳ ಶಾಸಕರೇ ಸರ್ಕಾರದ ಕಾಲು ಹಿಡಿದು ಎಳೆಯುವ ಕಾರ್ಯದಲ್ಲಿ ತೊಡಗಿರುವುದು ಅವರ ಬೇಜವಾಬ್ದಾರಿ ಪ್ರವೃತ್ತಿಯನ್ನು ತೋರಿಸುತ್ತದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಮಾದ್ಯಮಗಳು ಕೂಡ ಈ ಸರ್ಕಾರದ ವಿರುದ್ಧದ ಅನವಶ್ಯಕ ಟೀಕೆಗಳಿಗೆ ಹೆಚ್ಚಿನ ಮಹತ್ವ ನೀಡಿ ಪ್ರಚಾರ ಮಾಡುತ್ತಿರುವುದು ಅಪೇಕ್ಷಣೀಯವಲ್ಲ.
‘ಕುಮಾರಸ್ವಾಮಿಯವರು ಸರ್ಕಾರವನ್ನು ರಚಿಸಲಿ, ಅವರಿಗೆ ನಾವು ಬೆಂಬಲ ನೀಡುತ್ತೇವೆ’ ಎಂದು ಕಾಂಗ್ರೆಸ್ ಹೇಳಿದ ಮಾತ್ರಕ್ಕೆ ಕಾಂಗ್ರೆಸ್ ಕುಮಾರಸ್ವಾಮಿ ಅವರಿಗೆ ಎಲ್ಲ ಅಧಿಕಾರ ನೀಡಬೇಕು, ಕಾಂಗ್ರೆಸ್ ನಿಷ್ಕ್ರಿಯವಾಗಬೇಕು ಎಂಬಂತೆ ಅರ್ಥೈಸಬಾರದು. ಮೈತ್ರಿ ಧರ್ಮಕ್ಕೆ ಪಾಲಿಸುತ್ತಾ ಎರಡೂ ಪಕ್ಷಗಳ ಮ್ಯಾನಿಫೆಸ್ಟೋಗಳಿಗೆ ಮನ್ನಣೆ ನೀಡಬೇಕು. ಎರಡೂ ಪಕ್ಷಗಳು ಚುನಾವಣಾ ವೇಳೆಯಲ್ಲಿ ಘೋಷಿಸಿರುವ ಮುಖ್ಯ ಭರವಸೆಗಳನ್ನು ಕಾರ್ಯರೂಪಕ್ಕಿಳಿಸುವ ಮಾರ್ಗಗಳನ್ನು ಹುಡುಕಬೇಕು. ಎರಡೂ ಪಕ್ಷಗಳೂ ಜನರ ಮನ್ನಣೆ ಪಡೆಯಬೇಕು ಎಂಬ ಧ್ಯೇಯ ಇಟ್ಟುಕೊಂಡು ಸರ್ಕಾರ ಮುನ್ನಡೆಯಬೇಕಾಗುತ್ತದೆ.
ರೈತರ ಸಾಲಮನ್ನಾ ಮಾಡುವುದಾಗಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ಭಾಷಣ ಮಾಡುವಾಗ ಘೋಷಣೆ ಮಾಡಿದ್ದಾರೆ. ಅದು ಕಷ್ಟ ಸಾಧ್ಯವಾದ ಕೆಲಸ ಎಂಬುದು ಉಭಯ ಪಕ್ಷಗಳಿಗೂ ಗೊತ್ತು. ರೈತರ ಆಗ್ರಹಕ್ಕೆ ತುತ್ತಾಗಲು ಕುಮಾರಸ್ವಾಮಿಗಳು ತಯಾರಿಲ್ಲವಾದ್ದರಿಂದ ಅವರ ಮಾತನ್ನು ಉಳಿಸಿಕೊಳ್ಳಲು ಉಭಯ ಪಕ್ಷಗಳೂ ಇದಕ್ಕೆ ಒಪ್ಪಿಕೊಂಡಿವೆ. ಅದರಂತೆಯೇ ಕಾಂಗ್ರೆಸ್ ತಾನು ಆರಂಭಿಸಿದ ಜನಪ್ರಿಯ ಕಾರ್ಯಕ್ರಮಗಳನ್ನು ಈ ಸರ್ಕಾರ ಮುಂದುವರೆಸಬೇಕು ಎಂದು ಒತ್ತಾಯ ಹಾಕುತ್ತಿದೆ. ಅದನ್ನು ಕಾರ್ಯಗತಗೊಳಿಸುವುದು ಅಷ್ಟೇ ಮುಖ್ಯ. ಈ ಹಿನ್ನೆಲೆಯಲ್ಲಿCommon Minimum Programme ಏನಿರಬೇಕು ಎಂಬುದನ್ನು ಗೊತ್ತುಮಾಡಿ ಅದರಂತೆ ನಡೆಯುವುದು ಸೂಕ್ತ.
ಕುಮಾರಸ್ವಾಮಿ ತಾವು ಹೇಗೊ ಅಧಿಕಾರಕ್ಕೆ ಬರುವುದಿಲ್ಲವೆಂದು ತಿಳಿದು ರೈತರ ಸಾಲಮನ್ನಾ ವಿಚಾರವನ್ನು ಚುನಾವಣಾ ಪ್ರಚಾರ ಕಾಲದಲ್ಲಿ ಪ್ರಸ್ತಾಪಿಸಿರಬಹುದು. ಅಕಸ್ಮಾತ್ ಅಧಿಕಾರಕ್ಕೆ ಬಂದಿರುವುದರಿಂದ ಅದನ್ನು ಕಾರ್ಯಗತ ಮಾಡಿ ತೋರಿಸಲೇಬೇಕಾದ ಅನಿವಾರ್ಯತೆ ಈಗ ಸೃಷ್ಟಿಯಾಗಿದೆ. ಇದನ್ನು ಹೇಗೆ ನಿಭಾಯಿಸುವರೆಂಬುದನ್ನು ಕುತೂಹಲದಿಂದ ಕರ್ನಾಟಕದ ಜನತೆ ಎದುರು ನೋಡುತ್ತಿದೆ.
‘ಎತ್ತು ಏರಿಗೆ ಎಳೆಯಿತು, ಎಮ್ಮೆ ನೀರಿಗಿಳಿಯಿತು’. ಎಂಬ ರೀತಿ ಈ ಸಂಯುಕ್ತ ಸರ್ಕಾರ ಮೂರಾಬಟ್ಟೆ ಯಾಗಬೇಕೆಂದು ವಿರೋಧಪಕ್ಷ ಆಶಿಸುತ್ತದೆ. ವಿರೋಧ ಪಕ್ಷದ ಈ ಆಶಯವನ್ನು ಸುಳ್ಳು ಮಾಡುವುದಾಗಿ ಅಧಿಕಾರಾರೂಢ ಪಕ್ಷಗಳು ಶಪಥ ತೊಡಬೇಕು. ಎಲ್ಲ ಶಾಸಕರಿಗೂ, ಮಂತ್ರಿಗಳಿಗೂ ಒಳ್ಳೆಯ ಆಡಳಿತ ನೀಡಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸಬೇಕು, ಭ್ರಷ್ಟಾಚಾರರಹಿತ ಆಡಳಿತವನ್ನು ಜಾರಿಗೆ ತರಬೇಕು ಎಂಬ ಕಾತರ ಇರಬೇಕು. ಯಾವುದೇ ಕಾರಣದಿಂದ ಈ ಉಭಯ ಪಕ್ಷಗಳು ಕಚ್ಚಾಡಿಕೊಂಡು ಬೀದಿಗೆ ಬೀಳಬಾರದು. ನಮ್ಮ ಶಾಸಕರಲ್ಲಿ, ಮಂತ್ರಿಗಳಾಗಿರುವವರಲ್ಲಿ ಅನೇಕರಿಗೆ ತಮ್ಮ ಹೊಣೆಗಾರಿಕೆ ಏನು ಎಂಬುದು ತಿಳಿದಿಲ್ಲ. ರಾಜ್ಯಾಡಳಿತ ಮಕ್ಕಳ ಆಟವಲ್ಲ ಎಂಬ ಅರಿವು ಅವರಲ್ಲಿ ಮೂಡಬೇಕು. ಅಧಿಕಾರ ಹಂಚಿಕೆಯೆಂಬುದು ಪಿತ್ರಾರ್ಜಿತ ಸ್ವತ್ತುಗಳ ಹಂಚಿಕೆಯಂತಲ್ಲ ಎಂಬುದನ್ನು ಉಭಯರೂ ಅರ್ಥಮಾಡಿಕೊಳ್ಳಬೇಕು.
ಕುಮಾರಸ್ವಾಮಿಯವರ ಸರ್ಕಾರ ರೈತರ ಸಾಲಮನ್ನಾದಂತಹ ಕ್ಲಿಷ್ಟವಾದ ಸಮಸ್ಯೆಗಳನ್ನು ತನ್ನ ಆಡಳಿತಾವಧಿಯಲ್ಲಿ ಮತ್ತೆ ಸೃಷ್ಟಿಸಬಾರದು. ರೈತ ಸಂಘಕ್ಕೆ ರೈತರ ಸಾಲಮನ್ನಾ ಧ್ಯಾನ ಬಿಟ್ಟರೆ ಇತರೆ ವಿಚಾರಗಳ ಬಗ್ಗೆ ಅವರು ಲಕ್ಷ್ಯ ಕೊಡುವುದಿಲ್ಲ. ರೈತರ ಸಂಘಟನೆಗಳ ನಾಯಕತ್ವದಲ್ಲಿ ಬಹಳಷ್ಟು ಮಂದಿ ಜಮೀನ್ದಾರರು. ಇವರು ರೈತಸಂಘಕ್ಕೂ ಸದಸ್ಯರು, ಬೇರೆ ಬೇರೆ ರಾಜಕೀಯ ಪಾರ್ಟಿಗಳಿಗೂ ಸದಸ್ಯರು. ರೈತ ಸಂಘಟನೆಗಳಲ್ಲಿ ನುಸುಳಿರುವ ಈ ಪಟ್ಟ ಭದ್ರ ಹಿತಾಸಕ್ತಿಗಳು, ರೈತ ಸಂಘಕ್ಕೆ ಸದಸ್ಯರಾಗುವ ಏಕೈಕ ಉದ್ದೇಶ, ಸಾಲಮನ್ನಾ ಮೊದಲುಗೊಂಡು ರೈತರ ಹೆಸರಿನಲ್ಲಿ ದೊರಕಬಹುದಾದ ಎಲ್ಲ ಸೌಕರ್ಯಗಳನ್ನೂ ತಮ್ಮದಾಗಿಸಿಕೊಳ್ಳುವುದಲ್ಲದೆ ಬೇರೇನೂ ಇಲ್ಲ. ಈ ವ್ಯವಸ್ಥೆಯಲ್ಲಿ ಸರ್ಕಾರದಿಂದ ಬಡ ರೈತರಿಗೆ ಪುಡಿಕಾಸು ಸಿಕ್ಕಿದರೆ ಈ ಛದ್ಮ ವೇಷದ ಸ್ವಾರ್ಥಿ ಜಮೀನ್ದಾರರಿಗೆ ದೊಚಲು ಸಿಗುವುದು ಸಿಂಹಪಾಲು.
ಪ್ರತಿವರ್ಷ ಸ್ವಾರ್ಥಿಗಳ ಕಿಸೆತುಂಬುವ ಈ ಸಾಲಮನ್ನಾ ಪ್ರಹಸನವನ್ನು ಈ ಸರ್ಕಾರ ಕೊನೆಗಾಣಿಸಿ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕವಾಗಿ ಬೆಲೆ ನಿರ್ಧರಿಸಬೇಕು. ರೈತರು ಬೆಳೆದ ಬೆಳೆ ನೇರವಾಗಿ ಗ್ರಾಹಕನಿಗೆ ದೊರಕುವಂತೆ ಮಾಡಿ ದಳ್ಳಾಳಿಗಳ ಹಾವಳಿಯಿಂದ ರೈತರನ್ನು ಪಾರು ಮಾಡಬೇಕು.
ರೈತ ಸಂಘಕ್ಕೆ ಒಂದು ಸೂಚನೆ. ರೈತ ಸಂಘ ಒಂದು ರಾಜಕೀಯ ಪಕ್ಷವಾಗಿಯೂ ಬೆಳೆಯಬೇಕು. ಹಾಗೆಯೇ ಅದು ಒಂದು ರೈತರ ಹಿತಕಾಯುವ ಹೋರಾಟ ಸಮಿತಿಯಾಗಿಯೂ ಕೆಲಸ ಮಾಡಬೇಕು. ರೈತ ಸಂಘಕ್ಕೆ ಸೇರುವವರು ಬೇರೆ ಯಾವುದೇ ರಾಜಕೀಯ ಪಕ್ಷಕ್ಕೆ ಸದಸ್ಯರಾಗಿರಬಾರದು ಎಂಬ ನಿಯಮವನ್ನು ಜಾರಿಗೆ ತರಬೇಕು. ಹೀಗಾದಾಗ ಒಂದಲ್ಲ ಒಂದು ದಿನ ಕರ್ನಾಟಕದಲ್ಲಿ ರೈತರ ರಾಜ್ಯ ಸ್ಥಾಪನೆಯಾಗುವ ಸಾಧ್ಯತೆ ಇದೆ.
ಈ ನಿಟ್ಟಿನಲ್ಲಿ ರಾಜ್ಯದ ರೈತ ಸಂಘ ಗಂಭೀರವಾಗಿ ವಿಚಾರ ಮಾಡಿ ಕೂಡಲೇ ಒಂದು ನಿರ್ಧಾರಕ್ಕೆ ಬರಬೇಕು.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...