Homeಚಳವಳಿ​​ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪತ್ರ ಬರೆದ 625 ಬುದ್ಧಿಜೀವಿಗಳು

​​ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪತ್ರ ಬರೆದ 625 ಬುದ್ಧಿಜೀವಿಗಳು

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆ 2019 ಅನ್ನು “ವಿಭಜಕ, ತಾರತಮ್ಯದಿಂದ ಕೂಡಿದ ಮತ್ತು ಅಸಂವಿಧಾನಿಕ” ಎಂದು ಕರೆದಿರುವ ಬರಹಗಾರರು, ಕಲಾವಿದರು, ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 600 ಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳು ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಸ್ತಾವಿತ ಕಾನೂನನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿ ಪತ್ರ ಬರೆದಿದ್ದಾರೆ.

ಮನವಿಗೆ ಸಹಿ ಹಾಕಿದವರಲ್ಲಿ ಬರಹಗಾರರಾದ ನಯನತಾರಾ ಸಾಹಗಲ್, ಅಶೋಕ್ ವಾಜಪೇಯಿ, ಅರುಂಧತಿ ರಾಯ್, ಪಾಲ್ ಜಕಾರಿಯಾ, ಅಮಿತಾವ್ ಘೋಷ್ ಮತ್ತು ಶಶಿ ದೇಶಪಾಂಡೆ ಸೇರಿದ್ದಾರೆ. ಕಲಾವಿದರಾದ ಟಿ.ಎಂ.ಕೃಷ್ಣ, ಅತುಲ್ ದೋಡಿಯಾ, ವಿವಾನ್ ಸುಂದರಂ, ಸುಧೀರ್ ಪಟ್ವರ್ಧನ್, ಗುಲಮ್ಮೊಹಮ್ಮದ್ ಶೇಖ್ ಮತ್ತು ನಿಲಿಮಾ ಶೇಖ್ ಇದ್ದಾರೆ. ಚಲನಚಿತ್ರ ನಿರ್ಮಾಪಕರಾದ ಅಪರ್ಣ ಸೇನ್, ನಂದಿತಾ ದಾಸ್ ಮತ್ತು ಆನಂದ್ ಪಟವರ್ಧನ್ ಪ್ರಮುಖರಾಗಿದ್ದಾರೆ. ವಿದ್ವಾಂಸರಾದ ರೋಮಿಲಾ ಥಾಪರ್, ಪ್ರಭಾತ್ ಪಟ್ನಾಯಕ್, ರಾಮಚಂದ್ರ ಗುಹಾ, ಗೀತಾ ಕಪೂರ್, ಅಕೀಲ್ ಬಿಲ್ಗ್ರಾಮಿ ಮತ್ತು ಜೋಯಾ ಹಸನ್ ವಿರೋಧಕ್ಕೆ ದನಿಗೂಡಿಸಿದ್ದರೆ. ಕಾರ್ಯಕರ್ತರಾದ ಟೀಸ್ತಾ ಸೆಟಲ್ವಾಡ್, ಹರ್ಷ್ ಮಂದಿರ್, ಅರುಣಾ ರಾಯ್ ಮತ್ತು ಬೆಜವಾಡ ವಿಲ್ಸನ್ ಇದ್ದಾರೆ. ನಿವೃತ್ತ ನ್ಯಾಯಮೂರ್ತಿ ಎಪಿ ಶಾ, ಯೋಗೇಂದ್ರ ಯಾದವ್, ಜಿ.ಎನ್. ದೇವಿ, ನಂದಿನಿ ಸುಂದರ್ ಮತ್ತು ವಜಾಹತ್ ಹಬೀಬುಲ್ಲಾ ಸೇರಿದಂತೆ ಇತರರು ಪ್ರಮುಖರಾಗಿದ್ದಾರೆ.

ಭಾರತದ ಸಂವಿಧಾನವು “ಲಿಂಗ, ಜಾತಿ, ಧರ್ಮ, ವರ್ಗ, ಸಮುದಾಯ ಅಥವಾ ಭಾಷೆಯ ಬೇಧವಿಲ್ಲದೆ ಸಮಾನತೆಯ ಮೂಲಭೂತ ಅಂಶಗಳನ್ನು ಒತ್ತಾಯಿಸುತ್ತದೆ” ಎಂದು ಪ್ರತಿಪಾದಿಸಿದ ಬುದ್ಧಿಜೀವಿಗಳು, ಪೌರತ್ವ ತಿದ್ದುಪಡಿ ಮಸೂದೆ ಮತ್ತು “ರಾಷ್ಟ್ರವ್ಯಾಪಿ ಎನ್‌ಆರ್‌ಸಿ (ರಾಷ್ಟ್ರೀಯ ನಾಗರಿಕ ಪೌರತ್ವ ನೋಂದಣಿ)ಯು ದೇಶಾದ್ಯಂತ ಜನರಿಗೆ ಸಂಕಷ್ಟವನ್ನು ತಂದೊಡ್ಡಲಿದೆ ಎಂದು ಆರೋಪಿಸಿದ್ದರೆ. ಇದು ಭಾರತೀಯ ಗಣರಾಜ್ಯದ ಸ್ವರೂಪವನ್ನು ಮೂಲಭೂತವಾಗಿ ಮತ್ತೆಂದೂ ಸರಿಪಡಿಸಲಾಗದಂತೆ ಹಾನಿಗೊಳಿಸುತ್ತದೆ ಎಂದು ದೂರಿದ್ದಾರೆ.

“ಇದಕ್ಕಾಗಿಯೇ ಎಲ್ಲಾ ಆತ್ಮಸಾಕ್ಷಿಯ ನಾಗರಿಕರು ಸರ್ಕಾರವು ಮಸೂದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಬೇಕೆಂದು ಕರೆ ನೀಡಿರುವ ಅವರು, ಸರ್ಕಾರವು ಸಂವಿಧಾನಕ್ಕೆ ದ್ರೋಹ ಮಾಡಬಾರದು ಎಂದು ಕಿಡಿಕಾರಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಪರಿಚಯಿಸಿದ ಪೌರತ್ವ ತಿದ್ದುಪಡಿ ಮುಸೂದೆಯನ್ನು ಸೋಮವಾರ ಮಧ್ಯರಾತ್ರಿ ಸುಮಾರು 12 ಗಂಟೆಗಳ ಚರ್ಚೆಯ ನಡುವೆ ಲೋಕಸಭೆಯು ಅಂಗೀಕರಿಸಿದೆ. ಪ್ರತಿಪಕ್ಷಗಳು ಪ್ರಸ್ತಾವಿತ ಕಾನೂನಿಗೆ ವಿರುದ್ಧವಾಗಿ ಮತಚಲಾಯಿಸಿದರು. ಅದು ಮೊದಲ ಬಾರಿಗೆ ಧರ್ಮದ ಆಧಾರದ ಮೇಲೆ ಭಾರತೀಯ ರಾಷ್ಟ್ರೀಯತೆಯನ್ನು ವಿಭಜಿಸಲು ಕಾರಣವಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

2015 ರ ಮೊದಲು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಅಕ್ರಮ ವಲಸೆ ಬಂದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಮಸೂದೆಯಲ್ಲಿ ಪ್ರಸ್ತಾಪವಿದೆ. ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ವ್ಯಕ್ತವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...