Homeಮುಖಪುಟಆಪ್ ಸೇರಿದ ಮಾಜಿ ಮಿಸ್ ಇಂಡಿಯಾ ದೆಹಲಿ- ಮಾನ್ಸಿ ಸೆಹಗಲ್‌

ಆಪ್ ಸೇರಿದ ಮಾಜಿ ಮಿಸ್ ಇಂಡಿಯಾ ದೆಹಲಿ- ಮಾನ್ಸಿ ಸೆಹಗಲ್‌

’ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಾಮಾಣಿಕ ಆಡಳಿತ ಮತ್ತು ಶಾಸಕ ರಾಘವ್ ಚಾಡ್ಡಾ ಅವರ ಕಠಿಣ ಪರಿಶ್ರಮದಿಂದ ಪ್ರೇರಿತರಾಗಿ ನಾನು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ’

- Advertisement -
- Advertisement -

ಮಿಸ್ ಇಂಡಿಯಾ ದೆಹಲಿ- 2019ರ ವಿಜೇತೆ ಮಾನ್ಸಿ ಸೆಹಗಲ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಮುಖಂಡ ರಾಘವ್ ಚಾಡ್ಡಾ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರಿಕೊಂಡಿದ್ದಾರೆ ಎಂದು ಎಎಪಿ ಸೋಮವಾರ ಹೇಳಿಕೆ ಬಿಡುಗಡೆ ಮಾಡಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಾಮಾಣಿಕ ಆಡಳಿತ ಆಪ್ ಪಕ್ಷಕ್ಕೆ ಸೇರಲು ಪ್ರೇರಣೆ ನೀಡಿತು ಎಂದು ಮಾಜಿ ಮಿಸ್ ಇಂಡಿಯಾ ದೆಹಲಿ ಮಾನ್ಸಿ ಸೆಹಗಲ್ ಹೇಳಿದ್ದಾರೆ.

“ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಾಮಾಣಿಕ ಆಡಳಿತ ಮತ್ತು ಶಾಸಕ ರಾಘವ್ ಚಾಡ್ಡಾ ಅವರ ಕಠಿಣ ಪರಿಶ್ರಮದಿಂದ ಪ್ರೇರಿತರಾಗಿ ನಾನು ಆಮ್ ಆದ್ಮಿ ಪಕ್ಷಕ್ಕೆ ಸೇರಲು ಮನಸ್ಸು ಮಾಡಿದೆ. ಶುದ್ಧ ರಾಜಕಾರಣದ ಮೂಲಕ ನಾವು ಬದುಕುವ ಈ ಜಗತ್ತಿನಲ್ಲಿ ಗಣನೀಯ ಬದಲಾವಣೆಯನ್ನು ತರಬಹುದು ಎಂದು ನಾನು ಭಾವಿಸುತ್ತೇನೆ” ಎಂದು ಮಾನ್ಸಿ ಸೆಹಗಲ್ ಹೇಳಿದ್ದಾರೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ತಾವು ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿರುವ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಮಾನ್ಸಿ,  ದೇಶದಲ್ಲಿ ಬದಲಾವಣೆ ತರಲು ಯುವಜನರು ಮತ್ತು ಮಹಿಳೆಯರು ರಾಜಕೀಯದಲ್ಲಿ ಸಕ್ರಿಯವಾಗಿ ಭಾಗಿಯಾಗಬೇಕು ಮತ್ತು ಎಎಪಿಗೆ ಸೇರಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು, ಬದಲಾವಣೆ ತರಬೇಕು ಎಂಬ ಉದ್ದೇಶದಿಂದ ನಾನು ಎಎಪಿ ಸೇರಿದ್ದೇನೆ. ಆರೋಗ್ಯ ಮತ್ತು ಶಿಕ್ಷಣದಲ್ಲಿ ಬದಲಾವಣೆಯಾದರೇ ದೇಶದ ಬದಲಾವಣೆಯಾಗುತ್ತದೆ. ದೆಹಲಿ ನಿವಾಸಿಯಾಗಿ ಈ ವಿಷಯಗಳಲ್ಲಿ ಇಲ್ಲಿ ಆಗಿರುವ ಬದಲಾವಣೆಯನ್ನು ನಾನು ನೋಡಿದ್ದೇನೆ. ಸರ್ಕಾರದ ಕೆಲಸದಿಂದ ನಾನು ಪ್ರೇರಿತಳಾಗಿದ್ದೇನೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಾಮಾಣಿಕ ಆಡಳಿತ ಮತ್ತು ಶಾಸಕ ರಾಘವ್ ಚಾಡ್ಡಾ ಅವರ ಕಠಿಣ ಪರಿಶ್ರಮದಿಂದ ಪ್ರೇರಿತರಾಗಿ ನಾನು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ಪ್ರಾಮಾಣಿಕ ರಾಜಕೀಯಕ್ಕೆ ಸಿಕ್ಕ ಜಯ: ಗುಜರಾತ್ ಜನರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್

“ನಮ್ಮ ಯುವಜನರನ್ನು ಮತ್ತು ವಿಶೇಷವಾಗಿ ನಮ್ಮ ಮಹಿಳೆಯರನ್ನು ನಮ್ಮೊಂದಿಗೆ ಬರಲು ಮತ್ತು ಸೇರಲು ನಾನು ಒತ್ತಾಯಿಸುತ್ತೇನೆ ಜೊತೆಗೆ ನಾವೆಲ್ಲರೂ ನೋಡಲು ಬಯಸುವ ಬದಲಾವಣೆಯನ್ನು ತರಬೇಕು” ಎಂದು ಹೇಳಿದ್ದಾರೆ.

Miss Delhi 2019 Mansi Sehgal - 24x7review

“ರಾಜಕೀಯದಲ್ಲಿ ಯುವಜನತೆ ತೊಡಗಿಸಿಕೊಳ್ಳಲು ಮತ್ತು ಜನರಿಗೆ ಸೇವೆ ಸಲ್ಲಿಸಲು ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ ಅವರು ಯುವಜನರಲ್ಲಿ ವಿಶ್ವಾಸ ಮೂಡಿಸಿರುವುದಕ್ಕೆ ನನಗೆ ಖುಷಿಯಾಗಿದೆ. ಎಎಪಿ ಕುಟುಂಬವು ಪ್ರತಿ ದಿನ ದೊಡ್ಡದಾಗುತ್ತಿದೆ. ನಾನು ಮಾನ್ಸಿ ಅವರನ್ನು ಎಎಪಿ ಕುಟುಂಬಕ್ಕೆ ಸ್ವಾಗತಿಸುತ್ತೇನೆ” ಎಂದು ಶಾಸಕ ರಾಘವ್ ಚಾಡ್ಡಾ ಹೇಳಿದ್ದಾರೆ. ಮಾನ್ಸಿ ಸೆಹಗಲ್ ಎಂಜಿನಿಯರ್ ಆಗಿದ್ದು, ತನ್ನದೇ ಆದ ಉದ್ಯಮ ನಡೆಸುತ್ತಿದ್ದಾರೆ ಎಂದು ಎಎಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಗುಜರಾತ್‌ನಲ್ಲಿ 25 ವರ್ಷದಿಂದ ಬಿಜೆಪಿಯೊಂದೇ ಏಕೆ ಆಡಳಿತ ನಡೆಸುತ್ತಿದೆ..?- ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...