Homeಮುಖಪುಟಬಿಎಸ್‌ಪಿ ಶಾಸಕಿಯ ಪತಿಯನ್ನು ಹುಡುಕಿಕೊಟ್ಟವರಿಗೆ 30 ಸಾವಿರ ಬಹುಮಾನ!

ಬಿಎಸ್‌ಪಿ ಶಾಸಕಿಯ ಪತಿಯನ್ನು ಹುಡುಕಿಕೊಟ್ಟವರಿಗೆ 30 ಸಾವಿರ ಬಹುಮಾನ!

- Advertisement -
- Advertisement -

2019 ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಬಿಎಸ್‌ಪಿ ಶಾಸಕಿ ರಾಮ್ ಬಾಯಿ ಸಿಂಗ್ ಅವರ ಪತಿಯನ್ನು ಬಂಧಿಸಲು ಮಾಹಿತಿ ನೀಡಿದವರಿಗೆ ಮಧ್ಯಪ್ರದೇಶ ಪೊಲೀಸರು 30,000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.

ಕಾಂಗ್ರೆಸ್ ನಾಯಕ ದೇವೇಂದ್ರ ಚೌರೇಶಿಯಾ ಹತ್ಯೆ ಪ್ರಕರಣದಲ್ಲಿ ಬಹುಜನ ಸಮಾಜವಾದಿ ಪಕ್ಷದ ಶಾಸಕಿ ರಾಮ್ ಬಾಯಿ ಸಿಂಗ್ ಅವರ ಪತಿ ಗೋವಿಂದ್ ಸಿಂಗ್ ಆರೋಪಿಯಾಗಿದ್ದಾರೆ. ಇವರನ್ನು ಬಂಧಿಸಲು ಸಹಾಯಕವಾಗುವ ಮಾಹಿತಿ ನೀಡಿದವರಿಗೆ 30 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ.

ಬಿಎಸ್‌ಪಿಯ ರಾಮ್ ಬಾಯಿ ಸಿಂಗ್ ಅವರು ಮಧ್ಯಪ್ರದೇಶದ ದಮೋಹ್ ಜಿಲ್ಲೆಯ ಪಥಾರಿಯಾ ಕ್ಷೇತ್ರದ ಶಾಸಕಿರಾಗಿದ್ದಾರೆ.

ಕಳೆದ ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, 2019 ರ ಮಾರ್ಚ್ 15 ರಂದು ಹತ್ಯೆ ಕುರಿತು ಎಫ್‌ಐಆರ್ ಹಾಕಲಾಗಿದೆ. ಮೃತ ದೇವೇಂದ್ರ ಚೌರೇಶಿಯಾ ಅವರ ಪುತ್ರ ಸೋಮೇಶ್ ತನ್ನ ತಂದೆಯ ಹತ್ಯೆಯಲ್ಲಿ ಗೋವಿಂದ್ ಸಿಂಗ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರೂ, ತನಿಖಾ ಅಧಿಕಾರಿಗಳು ಆರೋಪಿಯನ್ನು ಬಂಧಿಸುವಲ್ಲಿ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಅನರ್ಹಗೊಳಿಸಲು ಟಿಎಂಸಿ ಒತ್ತಾಯ: ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ವಪನ್ ದಾಸ್​ಗುಪ್ತಾ

ಸುಪ್ರೀಂಕೋರ್ಟ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಂತರ ರಾಜ್ಯ ಪೊಲೀಸ್ ಇಲಾಖೆ ಆರೋಪಿ ಗೋವಿಂದ್ ಸಿಂಗ್ ಅವರನ್ನು ಬಂಧಿಸಲು ತಮ್ಮ ಪ್ರಯತ್ನವನ್ನು ತೀವ್ರಗೊಳಿಸಿದ್ದಾರೆ. ಅದರಲ್ಲಿ ಒಂದು ಈ ಬಹುಮಾನ ಘೋಷಣೆಯಾಗಿದೆ.

“ಕಾಂಗ್ರೆಸ್ ನಾಯಕನ ಕೊಲೆ ಪ್ರಕರಣದಲ್ಲಿ ಗೋವಿಂದ್ ಸಿಂಗ್ ಬಂಧನಕ್ಕೆ ಪೊಲೀಸರು 30,000 ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ” ಎಂದು ಐಜಿಪಿ ಅನಿಲ್ ಶರ್ಮಾ ಹೇಳಿದ್ದಾರೆ.

ಅಲ್ಲದೆ, ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಹೆಚ್ಚುವರಿ ಮಹಾನಿರ್ದೇಶಕಿ ವಿಪಿನ್ ಮಹೇಶ್ವರಿ ಕೂಡ ಗೋವಿಂದ್ ಸಿಂಗ್ ಅವರನ್ನು ಬಂಧಿಸುವ ಪ್ರಯತ್ನಗಳ ಬಗ್ಗೆ ಮೇಲ್ವಿಚಾರಣೆ ನಡೆಸಲು ಕಳೆದ ಎರಡು ದಿನಗಳಿಂದ ದಾಮೋಹದಲ್ಲಿ ಇದ್ದಾರೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಹುಜನ ಸಮಾಜವಾದಿ ಪಕ್ಷದಲ್ಲಿದ್ದ ದೇವೇಂದ್ರ ಚೌರಾಸಿಯಾ ಅವರು ಕಾಂಗ್ರೆಸ್ ಸೇರ್ಪಡೆಯಾದ ನಂತರ 2019 ರ ಮಾರ್ಚ್‌ 15 ರಂದು ಹತ್ತಾ ಪಟ್ಟಣದಲ್ಲಿ ಕೊಲೆಯಾಗಿದ್ದರು. ಪೊಲೀಸರು ಬಿಎಸ್‌ಪಿ ಶಾಸಕಿಯ ಪತಿ ಗೋವಿಂದ್ ಸಿಂಗ್ ಮತ್ತು ಇತರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು.


ಇದನ್ನೂ ಓದಿ: ಮೈತ್ರಿ ತುಂಬಾ ಕೆಟ್ಟ ಮತ್ತು ಕಹಿ ಅನುಭವ ನೀಡಿದೆ- ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...