Homeಫ್ಯಾಕ್ಟ್‌ಚೆಕ್Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ದಿನಾಂಕ ಸಮೀಪಿಸುತ್ತಿದೆ. ಜನವರಿ 22, 2024ರಂದು ಈ ಕಾರ್ಯಕ್ರಮ ನಡೆಯಲಿದೆ. ಈ ನಡುವೆ 500 ರೂಪಾಯಿಯ ಕರೆನ್ಸಿ ನೋಟಿನಲ್ಲಿ ರಾಮ ಮತ್ತು ರಾಮ ಮಂದಿರ ಫೋಟೋಗಳನ್ನು ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ಪ್ರಿಂಟ್ ಮಾಡಿದೆ ಎಂಬ ಸುದ್ದಿ ಹಬ್ಬಿದೆ.

ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ‘ಮಹಾತ್ಮ ಗಾಂಧಿಯ ಫೋಟೋ ಬದಲು ರಾಮನ ಫೋಟೋ ಮತ್ತು ಕೆಂಪು ಕೋಟೆಯ ಫೋಟೋ ಬದಲು ರಾಮ ಮಂದಿರ ಫೋಟೋ’ ಇರುವ 500 ರೂಪಾಯಿಯ ಕರೆನ್ಸಿ ನೋಟಿನ ಫೋಟೋ ಹಂಚಿಕೊಳ್ಳಲಾಗ್ತಿದೆ.

ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗ್ತಿರುವ ಫೋಟೋ

‘Manoj Dhareshwar’ (ಮನೋಜ್ ಧರೇಶ್ವರ್) ಎಂಬ ಫೇಸ್‌ಬುಕ್ ಬಳಕೆದಾರ ಜನವರಿ 16,2024ರಂದು ತಮ್ಮ ಖಾತೆಯಲ್ಲಿ ಈ ಫೋಟೋ ಮತ್ತು ಸುದ್ದಿ ಹಂಚಿಕೊಂಡಿದ್ದರು.

ಮತ್ತೋರ್ವ ಫೇಸ್‌ಬುಕ್ ಬಳಕೆದಾರ ‘DrxRJ Gupta’ಎಂಬವರು ಕೂಡ ಜನವರಿ 8,2024ರಂದು ಇದೇ ರೀತಿಯ ಕರೆನ್ಸಿ ನೋಟಿನ ಫೋಟೋ ಹಂಚಿಕೊಂಡು “ಮೋದಿ ಸರ್ಕಾರದ ನಿರ್ಧಾರ, ಕರೆನ್ಸಿ ನೋಟಿನಲ್ಲಿ ಕೆಂಪುಕೋಟೆಯ ಬದಲು ರಾಮ ಮಂದಿರ ಫೋಟೋ ಹಾಕಲು ನಿರ್ಧರಿಸಲಾಗಿದೆ” ಎಂದು ಬರೆದುಕೊಂಡಿದ್ದರು.

‘karatagi_troll_market’_ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜನವರಿ 10ರಂದು 500 ರೂಪಾಯಿ ಕರೆನ್ಸಿ ನೋಟಿನಲ್ಲಿ ಕೆಂಪುಕೋಟೆಯ ಬದಲು ರಾಮ ಮಂದಿರ ಫೋಟೋ ಹಾಕಲಾಗಿದೆ ಎಂದು ಫೋಟೋ ಹಂಚಿಕೊಳ್ಳಲಾಗಿತ್ತು. ಇದಕ್ಕೆ ಹಲವರು “ಸರಿಯಾದ ನಿರ್ಧಾರ, ಜೈಶ್ರೀರಾಂ” ಎಂಬ ಕಾಮೆಂಟ್‌ಗಳನ್ನು ಹಾಕಿದ್ದಾರೆ.

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ವಾಸ್ತವ : ನಾನು ಗೌರಿ.ಕಾಂ ಈ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದೆ. ಈ ವೇಳೆ ಕರೆನ್ಸಿ ನೋಟುಗಳಲ್ಲಿ ರಾಮ ಮತ್ತು ರಾಮ ಮಂದಿರ ಫೋಟೋಗಳನ್ನು ಪ್ರಿಂಟ್ ಮಾಡುವ ಕುರಿತು ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಆಗಲಿ, ಭಾರತ ಸರ್ಕಾರವಾಗಲಿ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಥವಾ ಇತರ ಅಧಿಕಾರಿಗಳು ಈ ಕುರಿತು ಯಾವುದೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಈ ಸುದ್ದಿಯ ಕುರಿತು ನಾವು ಆರ್‌ಬಿಐ ವಕ್ತಾರ ಯೋಗಿಶ್ ದಯಾಳ್ ಅವರನ್ನು ಮಾತನಾಡಿಸಿದಾಗ ಅವರು, “ಈ ಬಗ್ಗೆ ಆರ್‌ಬಿಐಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದ್ದಾಗಿ ಖ್ಯಾತ ಸುಳ್ಳು ಸುದ್ದಿ ಪತ್ತೆ ವೆಬ್‌ಸೈಟ್ Boom (ಬೂಮ್) ವರದಿ ಮಾಡಿದೆ.

ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಇದುವರೆಗೆ (ಜನವರಿ16,2024) 500 ರೂಪಾಯಿಯ ಕರೆನ್ಸಿ ನೋಟಿನಲ್ಲಿ ಮಹಾತ್ಮ ಗಾಂಧಿ ಮತ್ತು ಕೆಂಪುಕೋಟೆಯ ಫೋಟೋಗಳು ಹಾಗೆಯೇ ಇದೆ. ಯಾವುದೇ ಬದಲಾವಣೆ ಆಗಿಲ್ಲ. ಈ ಕುರಿತ ಸ್ಕ್ರೀನ್ ಶಾಟ್‌ಗಳು ಇಲ್ಲಿದೆ.

ಲಭ್ಯವಿರುವ ಖಚಿತ ಮೂಲಗಳನ್ನು ಮತ್ತು ಮಾಹಿತಿಗಳನ್ನು ನಾನು ಗೌರಿ.ಕಾಂ ಪರಿಶೀಲಿಸಿ ನೋಡಿದಾಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿರುವ ರಾಮ ಮತ್ತು ರಾಮ ಮಂದಿರ ಫೋಟೋಗಳಿರುವ ಕರೆನ್ಸಿ ನೋಟಿನ ಫೋಟೋ ಮಾರ್ಪ್‌ ಮಾಡಿರುವಂತದ್ದು, ನಕಲಿ ಎಂದು ತಿಳಿದು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...