Homeಫ್ಯಾಕ್ಟ್‌ಚೆಕ್Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

Fact Check : 500 ರೂ. ನೋಟಿನಲ್ಲಿ ಗಾಂಧಿ ಬದಲು ರಾಮನ ಫೋಟೋ ಮುದ್ರಿಸಲಾಗಿದೆಯಾ?

- Advertisement -
- Advertisement -

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ದಿನಾಂಕ ಸಮೀಪಿಸುತ್ತಿದೆ. ಜನವರಿ 22, 2024ರಂದು ಈ ಕಾರ್ಯಕ್ರಮ ನಡೆಯಲಿದೆ. ಈ ನಡುವೆ 500 ರೂಪಾಯಿಯ ಕರೆನ್ಸಿ ನೋಟಿನಲ್ಲಿ ರಾಮ ಮತ್ತು ರಾಮ ಮಂದಿರ ಫೋಟೋಗಳನ್ನು ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ಪ್ರಿಂಟ್ ಮಾಡಿದೆ ಎಂಬ ಸುದ್ದಿ ಹಬ್ಬಿದೆ.

ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ‘ಮಹಾತ್ಮ ಗಾಂಧಿಯ ಫೋಟೋ ಬದಲು ರಾಮನ ಫೋಟೋ ಮತ್ತು ಕೆಂಪು ಕೋಟೆಯ ಫೋಟೋ ಬದಲು ರಾಮ ಮಂದಿರ ಫೋಟೋ’ ಇರುವ 500 ರೂಪಾಯಿಯ ಕರೆನ್ಸಿ ನೋಟಿನ ಫೋಟೋ ಹಂಚಿಕೊಳ್ಳಲಾಗ್ತಿದೆ.

ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗ್ತಿರುವ ಫೋಟೋ

‘Manoj Dhareshwar’ (ಮನೋಜ್ ಧರೇಶ್ವರ್) ಎಂಬ ಫೇಸ್‌ಬುಕ್ ಬಳಕೆದಾರ ಜನವರಿ 16,2024ರಂದು ತಮ್ಮ ಖಾತೆಯಲ್ಲಿ ಈ ಫೋಟೋ ಮತ್ತು ಸುದ್ದಿ ಹಂಚಿಕೊಂಡಿದ್ದರು.

ಮತ್ತೋರ್ವ ಫೇಸ್‌ಬುಕ್ ಬಳಕೆದಾರ ‘DrxRJ Gupta’ಎಂಬವರು ಕೂಡ ಜನವರಿ 8,2024ರಂದು ಇದೇ ರೀತಿಯ ಕರೆನ್ಸಿ ನೋಟಿನ ಫೋಟೋ ಹಂಚಿಕೊಂಡು “ಮೋದಿ ಸರ್ಕಾರದ ನಿರ್ಧಾರ, ಕರೆನ್ಸಿ ನೋಟಿನಲ್ಲಿ ಕೆಂಪುಕೋಟೆಯ ಬದಲು ರಾಮ ಮಂದಿರ ಫೋಟೋ ಹಾಕಲು ನಿರ್ಧರಿಸಲಾಗಿದೆ” ಎಂದು ಬರೆದುಕೊಂಡಿದ್ದರು.

‘karatagi_troll_market’_ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜನವರಿ 10ರಂದು 500 ರೂಪಾಯಿ ಕರೆನ್ಸಿ ನೋಟಿನಲ್ಲಿ ಕೆಂಪುಕೋಟೆಯ ಬದಲು ರಾಮ ಮಂದಿರ ಫೋಟೋ ಹಾಕಲಾಗಿದೆ ಎಂದು ಫೋಟೋ ಹಂಚಿಕೊಳ್ಳಲಾಗಿತ್ತು. ಇದಕ್ಕೆ ಹಲವರು “ಸರಿಯಾದ ನಿರ್ಧಾರ, ಜೈಶ್ರೀರಾಂ” ಎಂಬ ಕಾಮೆಂಟ್‌ಗಳನ್ನು ಹಾಕಿದ್ದಾರೆ.

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ವಾಸ್ತವ : ನಾನು ಗೌರಿ.ಕಾಂ ಈ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದೆ. ಈ ವೇಳೆ ಕರೆನ್ಸಿ ನೋಟುಗಳಲ್ಲಿ ರಾಮ ಮತ್ತು ರಾಮ ಮಂದಿರ ಫೋಟೋಗಳನ್ನು ಪ್ರಿಂಟ್ ಮಾಡುವ ಕುರಿತು ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಆಗಲಿ, ಭಾರತ ಸರ್ಕಾರವಾಗಲಿ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಥವಾ ಇತರ ಅಧಿಕಾರಿಗಳು ಈ ಕುರಿತು ಯಾವುದೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಈ ಸುದ್ದಿಯ ಕುರಿತು ನಾವು ಆರ್‌ಬಿಐ ವಕ್ತಾರ ಯೋಗಿಶ್ ದಯಾಳ್ ಅವರನ್ನು ಮಾತನಾಡಿಸಿದಾಗ ಅವರು, “ಈ ಬಗ್ಗೆ ಆರ್‌ಬಿಐಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದ್ದಾಗಿ ಖ್ಯಾತ ಸುಳ್ಳು ಸುದ್ದಿ ಪತ್ತೆ ವೆಬ್‌ಸೈಟ್ Boom (ಬೂಮ್) ವರದಿ ಮಾಡಿದೆ.

ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಇದುವರೆಗೆ (ಜನವರಿ16,2024) 500 ರೂಪಾಯಿಯ ಕರೆನ್ಸಿ ನೋಟಿನಲ್ಲಿ ಮಹಾತ್ಮ ಗಾಂಧಿ ಮತ್ತು ಕೆಂಪುಕೋಟೆಯ ಫೋಟೋಗಳು ಹಾಗೆಯೇ ಇದೆ. ಯಾವುದೇ ಬದಲಾವಣೆ ಆಗಿಲ್ಲ. ಈ ಕುರಿತ ಸ್ಕ್ರೀನ್ ಶಾಟ್‌ಗಳು ಇಲ್ಲಿದೆ.

ಲಭ್ಯವಿರುವ ಖಚಿತ ಮೂಲಗಳನ್ನು ಮತ್ತು ಮಾಹಿತಿಗಳನ್ನು ನಾನು ಗೌರಿ.ಕಾಂ ಪರಿಶೀಲಿಸಿ ನೋಡಿದಾಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿರುವ ರಾಮ ಮತ್ತು ರಾಮ ಮಂದಿರ ಫೋಟೋಗಳಿರುವ ಕರೆನ್ಸಿ ನೋಟಿನ ಫೋಟೋ ಮಾರ್ಪ್‌ ಮಾಡಿರುವಂತದ್ದು, ನಕಲಿ ಎಂದು ತಿಳಿದು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...